TOP STORIES:

FOLLOW US

ನಾನು ನನ್ನದೆನ್ನುವ ಸ್ವಾರ್ಥ ಸಮಾಜದಲ್ಲಿ, ಇತರ ಪ್ರತಿಭೆಗೆ ಪ್ರೋತ್ಸಹ ಕೊಡುವ ಪ್ರದೀಪ್ ಪೂಜಾರಿ ಕುಕ್ಕಿಪಾಡಿ


ತುಳುನಾಡಿನ ಹೆಮ್ಮೆಯ ಹಾಗೂ ಬಿಲ್ಲವ ಸಮಾಜದ ಯುವ ಪ್ರತಿಭೆ ಕುಕ್ಕಿಪಾಡಿಯ ಕೊರಗಪ್ಪ ಪೂಜಾರಿ ಮತ್ತು ಯಮುನಾ ದಂಪತಿಗಳ ಮಗ ಪ್ರದೀಪ್ ಪೂಜಾರಿ ಕುಕ್ಕಿಪಾಡಿ.ಇವರು ಪ್ರಾಥಮಿಕ ಶಿಕ್ಷಣ-ಕುಕ್ಕಿಪಾಡಿ ಸಂತ ಬಾರ್ತಲೋಮಿಯರ ಸ್ಕೂಲ್, ಪ್ರೌಢ -ಸರಕಾರಿ ಪದವಿ ಪೂರ್ವ ಕಾಲೇಜು ವಾಮದಪದವು , ಕಾಲೇಜ್ -ಹೋಲಿ ರೋಸರಿ ಕಾಲೇಜು ಮೂಡಬಿದ್ರಿ ಯಲ್ಲಿ ತನ್ನ ವಿದ್ಯಾಭ್ಯಾಸ ಮುಗಿಸಿದರು.

ನಾನು ನನ್ನದೆನ್ನುವ ಸ್ವಾರ್ಥ ಸಮಾಜದಲ್ಲಿ ತನ್ನ ಪ್ರತಿಭೆಯ ಜೊತೆಗೆ ಇತರ ಪ್ರತಿಭೆಗೆ ಪ್ರೋತ್ಸಹ ಕೊಟ್ಟು ಅವರಿಗೂ ವೇದಿಕೆ ಕಲ್ಪಿಸಿಕೊಟ್ಟ ಸಾಧನೆಯ ಹಾದಿಯಲ್ಲಿ ನಡೆಯುವಂತೆ ಮಾಡಿದ ಮಹಾನ್ ಸಾಧಕ. ತಾನು ಪಟ್ಟ ಕಷ್ಟ ಇನ್ನೊಬ್ಬರು ಅನುಭವಿಸಬಾರದು ಎಂದು ಅವರ ಜೀವನದಲ್ಲಿ ಬೆಳಕಾದವರು.

ಬಾಲ್ಯದಿಂದಲೇ ನಟನೆಯಲ್ಲಿ ಆಸಕ್ತಿ ಇರುವ ಇವರಿಗೆ ನಾಯಕ ನಟನಾಗಿ ನಟಿಸುವ ಅವಕಾಶ ಸಿಕ್ಕಿತ್ತು. ಕಲಾ ಕ್ಷೇತ್ರದ ಗುರುಗಳಾದ ಅಶೋಕ್ ಹಲಾಯಿ ಇವರ ನಿರ್ದೇಶನದ ಪೂರಾ ಪೊಕ್ಕಡೆ ಚಿತ್ರದಲ್ಲಿ ನಟಿಸಿ ಸೈ ಎಣಿಸಿಕೊಂಡರು.

ಹೀಗೆ ಅನೇಕ ಪ್ರತಿಭೆಗಳಿಗೆ ಅವಕಾಶ ನೀಡುವ ಉದ್ದೇಶದಿಂದ ತಾನು ಬಣ್ಣ ಅಚ್ಚುವ ಬದಲು ಇತರ ಪ್ರತಿಭೆಗೆ ಅವಕಾಶ ಕೊಡಲು ಅಪ್ಪು ಎನ್ನುವ ನೃತ್ಯ ತಂಡ ರಚಿಸಿ ಉಚಿತ ನೃತ್ಯ ತರಬೇತಿ ನೀಡುತ್ತಿದ್ದರು.ಇವರು ಅನೇಕ ಕಿರು ಚಿತ್ರ ನಿರ್ದೇಶನ ಮಾಡಿ ಯಶಸ್ವೀ ನಿರ್ದೇಶಕರು ಎನಿಸಿಕೊಂಡಿದ್ದಾರೆ. ಮನಸ್ದ ಪೊರ್ಲು, ಸಸ್ಪೆನ್ಸ್ ಮೂವಿ, ನಂಬುಗೆ, ಅಂಗಲಪು, ಆಪರೇಷನ್ ತುಳುನಾಡ ಹೀಗೆ ಅನೇಕ ಕಿರುಚಿತ್ರ ಮಾಡಿದ್ದಾರೆ. ನಿರ್ದೇಶಕ ಮಾತ್ರ ಅಲ್ಲ ಗ್ಲಾಮರ್ ಡಿಸೈನ್ ಆಗಿಯೂ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

ಗ್ಲಾಮರ್ ಶಾಟ್ಸ್ ನಲ್ಲಿ ಹಲವಾರು ಕಿರುಚಿತ್ರ ನಿರ್ಮಾಣ ಮಾಡಿ ಹೊಸ ಪ್ರತಿಭೆ ಅವಕಾಶ ಮಾಡಿಕೊಟ್ಟ ಕಲಾ ಪೋಷಕರು ಹೌದು, ಇವರ ಈ ಸಾಧನೆಗೆ ಫ್ಯಾಮಿಲಿ, ಫ್ರೆಂಡ್ಸ್ ಜೊತೆಗೆ ತ್ರಿಶಾಲ್ ಶೆಟ್ಟಿ, ಶಶಿಂದ್ರ ಜಂಕಳ, ನಾವೆಲ್, ತಿಲಕ್, ವಿದ್ಯಾ ಹೀಗೆ ಅನೇಕರ ಸಂಪೂರ್ಣ ಸಹಕಾರ ಸಿಕ್ಕಿತ್ತು.

ಬಂಟ್ವಾಳ ತಾಲ್ಲೂಕಿನ ಜನರಿಗೆ ಮಾಹಿತಿ ನೀಡಲು ಸೂಕ್ತ ನ್ಯೂಸ್ ಚಾನಲ್ ಅನ್ನು ಯು ಟ್ಯೂಬ್ ನಲ್ಲಿ ಆರಂಭಿಸಿ ಜನರಿಗೆ ಸೂಕ್ತ ಮಾಹಿತಿ ತಲುಪುವಂತೆ ಮಾಡಿದರು ಮತ್ತು ನೊಂದ ಬಡ ಜನರ ನೋವಿನ ವರದಿಯನ್ನು ಈ ಚಾನಲ್ ಮೂಲಕ ಸಂಘ ಸಂಸ್ಥೆಗಳಿಗೆ ತಲುಪುವಂತೆ ಮಾಡಿ ಬಡವರ ಪಾಲಿಗೆ ಆಶಾ ಕಿರಣವಾದರು.

ತಮ್ಮ ನಿಸ್ವಾರ್ಥ ಸೇವೆಯಿಂದ ಸೇವೆ ಮಾಡುವ ಇವರ ಬಾಳು ಬೆಳಕಾಗಲಿ ಮತ್ತು ಕಲಾ ಮಾತೆಯ ಅನುಗ್ರಹದಿಂದ ಇನ್ನಷ್ಟು ಒಳ್ಳೆಯ ಕಿರು ಚಿತ್ರ , ಸಿನಿಮಾ ಮಾಡಿ ಪ್ರಶಸ್ತಿ ಪುರಸ್ಕಾರ ಇವರ ಮುಡಿಗೇರುವಂತೆ ಮಾಡಲಿ.

ಬರಹ: ಪ್ರಶಾಂತ್ ಅಂಚನ್ – ಮಸ್ಕತ್ತ್


Share:

More Posts

Category

Send Us A Message

Related Posts

ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ


Share       ಉಡುಪಿ: ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇನ್ನು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈ ಲೋನಾವಾಲದ ಉದ್ಯಮಿ ಲೋಹಿತ್ ಪೂಜಾರಿ ಅವರೊಂದಿಗೆ 


Read More »

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ


Share       ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ


Read More »

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »