TOP STORIES:

ನಾರಾಯಣ ಗುರು ಸ್ತಬ್ಧ ಚಿತ್ರದ ನಿರಾಕರಣೆ: ಬಿಲ್ಲವ ಸಂಘ (ರಿ.) ಉರ್ವ- ಅಶೋಕನಗರ ಜಿಲ್ಲಾಧಿಕಾರಿಗೆ ಮನವಿ


ಬಿಲ್ಲವ ಸಂಘ (ರಿ.) ಉರ್ವ- ಅಶೋಕನಗರ ರಿಂದ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ನಾರಾಯಣಗುರುಗಳ ಸ್ತಬ್ಧ ಚಿತ್ರದ ನಿರಾಕರಣೆಯ ಬಗ್ಗೆ ಮಾನ್ಯ ಜಿಲ್ಲಾಧಿಕಾರಿಗೆ ಮನವಿ ನೀಡಿದರು.

ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಮಹಾ ಸಂದೇಶವನ್ನು ವಿಶ್ವಕ್ಕೆ ಸಾರಿದ ವಿಶ್ವಮಾನದ, ಜಗದ್ಗುರು, ಬ್ರಹ್ಮಶ್ರೀ ನಾರಾಯಣಗುರು, ಕೇರಳದಲ್ಲಿ ಅಮಾನುವ ಸ್ಥಿತಿಯಲ್ಲಿ ಜನಸಾಮಾನ್ಯರು ಪ್ರಾಣಿ ಸದೃಶ್ಯ ಜೀವನವನ್ನು ನಡೆಸುತ್ತು, ಕಷ್ಟ ಸಂಕಷ್ಟಗಳಲ್ಲಿ ದಿಕ್ಕು ಕಾಣದೆ ತೊಳಲಾಡುತ್ತಿರುವಾಗ ಅವರ ಬಾಳಿಗೆ ದಾರಿ ದೀಪವಾದವರು ವಿದೇಶವುಳ್ಳ, ಸುಸಂಸ್ಕೃತ ಕೌಟುಂಬಿಕ ಹಿನ್ನೆಲೆಯುಳ್ಳ ಉತ್ತಮ ಸಮಾಜದ ನಿರ್ಮಾಣಕ್ಕೆ ಉತ್ತಮ ಆಗತ್ಯ ಎಂಬುದನ್ನು ಮನಗಂಡು ‘ಶಿಕ್ಷಣದಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಯುತರಾಗಿ’ ಎಂಬ ಸಂದೇಶವನ್ನು ಶಿಕ್ಷಣ ಲೋಕಕ್ಕೆ ಸಾರಿದ ನಾರಾಯಣ ಗುರುಗಳು ಶಿಕ್ಷಣ ಕ್ರಾಂತಿಗೆ ಮುನ್ನುಡಿ ಬರೆದವರು.

ಸಕಲ ಮತಗಳ ಪರಮ ಉದ್ದೇಶವು ಒಂದೇ ಎನ್ನುವ ಸತ್ಯವನ್ನು ಅರಿತು, ಎಲ್ಲ ಧರ್ಮಗಳ ತಿರುಳು ಒಂದೇ ಸಾಧನೆಯ ಮಾರ್ಗಗಳು ಭಿನ್ನವಾದುವುಗಳನ್ನೇ, ಸರ್ವಧರ್ಮಗಳವರು ಅನ್ನೋನ್ಯವಾಗಿ ಸಹೋದರತ್ವದಿಂದ ಬಾಳಬೇಕೆ ಆಶಯವನ್ನು – ಮೊತ್ತವರು ಬ್ರಹ್ಮಶ್ರೀ ನಾರಾಯಣ ಗುರುಗಳು, ಇಂತಹ ಮಹಾನ್ ಯುಗಪುರುಷ ಮಂಗಳೂರಿನ ಕುದ್ರೋಳಿಯಲ್ಲಿ ಶ್ರೀ ಗೋಕರ್ಣನಾಥ ದೇವಾಲಯವನ್ನು ಸ್ಥಾಪಿಸಿ, ದೀನದಲಿತರಿಗೆ ದೇವರನ್ನು ಆರಾಧಿಸುವ ಭಾಗ್ಯವನ್ನು ಕರುಣಿಸಿದ ದೇವಪುರುಷ ಜನವರಿ 21, 2022ರಂದು ನವದೆಹಲಿಯಲ್ಲಿ ಜರಗುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕೇರಳ ರಾಜ್ಯ ಕಳುಹಿಸಿರುವ ಸ್ತಬ್ಧ ಚಿತ್ರದಲ್ಲಿ ಮಹಿಳೆಯರ ಸುರಕ್ಷತೆಯ ವಿಷಯದೊಂದಿಗೆ ಜಟಾಯು ಪಕ್ಷಿಯ ಪ್ರತಿಮೆ ಮತ್ತು ನಾರಾಯಣಗುರುಗಳ ಪ್ರತಿಮೆ ಒಳಗೊಂಡಿದ್ದು.

ಇದರಲ್ಲಿ ಮಹಾನ್ ಮರುಷ ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರತಿಮೆಯನ್ನು ತಿರಸ್ಕರಿಸಿರುವುದು ವಿಷಾದನೀಯ. ಇದನ್ನು ಪುನರ್ ಪರಿಶೀಲಿಸಿ, ಸಂಬಂಧಪಟ್ಟ ಆಯ್ಕೆ ಸಮಿತಿಗೆ ಒತ್ತಡ ಹೇರಿ ಗಣರಾಜ್ಯೋತ್ಸವದಂದು ಬಹಶ್ರೀ ನಾರಾಯಗುರುಗಳ ಸಚಿತ್ರವನ್ನು ಪ್ರದರ್ಶಿಸಲು ಕೇಂದ್ರ ಸರಕಾರವು ಆದೇಶ ನೀಡುವಂತೆ ತಾವು ಪ್ರಯತ್ನಿಸಬೇಕೆಂದು ಈ ಮೂಲಕ ಮಾನ್ಯ ಜಿಲ್ಲಾಧಿಕಾರಿಗೆ ಮನವಿ ನೀಡಿದರು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »