TOP STORIES:

ನಾವು ಇವತ್ತು ಪರಿಚಯ ಮಾಡುವ ಯುವ ಪ್ರತಿಭೆ ಜಪ್ಪಿನ ಮೊಗರಿನ ಲಕ್ಷ್ಮೀಶ್ ಸುವರ್ಣ.


ನಾವು ಇವತ್ತು ಪರಿಚಯ ಮಾಡುವ ಯುವ ಪ್ರತಿಭೆ ಜಪ್ಪಿನ ಮೊಗರಿನ ತಿಮ್ಮಪ್ಪ ಪೂಜಾರಿ ಮತ್ತು ಶಶಿಕಲಾ ಟಿ ಸುವರ್ಣ ಇವರ ಮುದ್ದಿನ ಮಗ ಲಕ್ಷ್ಮೀಶ್ ಸುವರ್ಣ

ಬಾಲ್ಯದಿಂದಲೂ ನಟನೆಯಲ್ಲಿ ಆಸಕ್ತಿ ಇತ್ತು ಆದರೆ ಇವರಿಗೆ ಶಾಲಾ ದಿನಗಳಲ್ಲಿ ಯಾವುದೇ ರೀತಿಯ ಬೆಂಬಲ ಅಥವಾ ತಾವೇ ಮುಂದೆ ಹೋಗುವಷ್ಟು ಧೈರ್ಯ ಇರಲಿಲ್ಲ. ಹಾಡುಗಾರನಾಗಿ ಬೆಳೆಯಬೇಕು ಎಂಬ ಆಸೆಯೂ ನೆರವೇರಲಿಲ್ಲ . ಆದರೆ ನಿರೂಪಕನಾಗಿ ಜನರ ಮೆಚ್ಚುಗೆ ಗಳಿಸುವಲ್ಲಿ ಯಶಸ್ವಿಯಾದರು ಇವರ ಕಂಚಿನ ಕಂಠದ ಧ್ವನಿಯಿಂದ ಎಂಟು ವರ್ಷದಿಂದ ನಿರೂಪಣೆಯ ಹಾದಿಯಲ್ಲಿ ಮುಂದುವರಿದರು ಕರ್ನಾಟಕದ ಅನೇಕ ಕಡೆ ಮೈಸೂರ್, ಚಿಕ್ಕಮಂಗಳೂರು, ಶೃಂಗೇರಿ,ಕೊಪ್ಪ,ಉಡುಪಿ, ಮಂಗಳೂರು, ಜೈಪುರ್, ಬಾಳೆಹೊನ್ನೂರು, ಕಾಸರಗೋಡು, ಪುತ್ತೂರು, ಸುಳ್ಯ, ಮುಂಬೈಗಳಲ್ಲಿ ಕಾರ್ಯಕ್ರಮ ನೀಡಿ ತಮ್ಮ ವಾಕ್ ಚಾತುರ್ಯದಿಂದಲೇ ಜನ ಮನ ಗೆದ್ದಿದ್ದಾರೆ. ಓಮನ್ ಬಿಲ್ಲವಾಸ್ ಅವರು ಆಯೋಜಿಸಿದ ಬಲೇ ತೆಲಿಪಲೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿತ್ತು ಆದರೆ ಕೋರೋನ ದ ಲಾಕ್ ಡೌನ್ ಕಾರಣ ಅವಕಾಶ ಕಳೆದುಕೊಂಡರು

ತನ್ನ ಪ್ರಾಥಮಿಕ ಶಿಕ್ಷಣವನ್ನು ಜೆಪ್ಪಿನಮೊಗರು ಗವರ್ನಮೆಂಟ್ ಸ್ಕೂಲ್ ಮತ್ತು ಪ್ರೌಢ ಶಿಕ್ಷಣವನ್ನು ಕ್ಯಾಸಿಯಾ ಹೈ ಸ್ಕೂಲ್ ನಲ್ಲಿ ಮಾಡಿ ಮುಗಿಸಿದರು.

ಜೀವನದಲ್ಲಿ ಏನಾದರೂ ಸಾಧಿಸಬೇಕು ತನ್ನನ್ನು ಎಲ್ಲರೂ ಗುರುತಿಸಬೇಕು ಎಂದು ಕೊಂಡಾಗ ಇವರ ಕೈ ಹಿಡಿದದ್ದು ಕಲಾ ಮಾತೆ ಇವರು ಕೇವಲ ನಿರೂಪಕರಾಗಿರದೆ ಅನೇಕ ತುಳು ಚಿತ್ರಗಳಲ್ಲಿ ನಟಿಸಿ ನಟನೆಯಲ್ಲೂ ಸೈ ಎನಿಸಿಕೊಂಡಿದ್ದಾರೆ. ಇವರು ನಟಿಸಿದ ಸಿನಿಮಾ, (ತಂಬಿಲ, ಭೋಜರಾಜ್ ಎಮ್ ಬಿ ಬಿ ಎಸ್, ಭಟ್ಕಳ,)ಧಾರಾವಾಹಿ (ಅಜನೆ) ಮತ್ತು ಕಿರು ಚಿತ್ರ (ಪ್ಲಾನ್ –ಸಿ, ಆ ಒಂದು ಕೆರೆ) ಹೀಗೆ ತನ್ನಲ್ಲೂ ಒಬ್ಬ ಕಲಾವಿದ ಇದ್ದಾನೆ ಎಂದು ತೋರಿಸಿಕೊಟ್ಟಿದ್ದಾರೆ. ಜೀವನದಲ್ಲಿ ದೊಡ್ಡ ಕಲಾವಿದ ಆಗಬೇಕು, ಕನ್ನಡ ಚಿತ್ರಗಳಲ್ಲಿ ನಟಿಸಬೇಕೆಂಬ ಆಸೆ ಇದೆಯಂತೆ. ಹಾಗೆಯೇ ನಿರೂಪಣೆ ಯಲ್ಲಿಯೂ ಒಳ್ಳೆಯ ಹೆಸರು ಮಾಡಬೇಕು ಮತ್ತು ಹೊರ ದೇಶದಲ್ಲಿಯೂ ವಾಕ್ ಚಾತುರ್ಯ ತೋರಿಸಬೇಕು ಎನ್ನುವ ಕನಸು ನನಸಾಗಲಿ ಇವರ ಈ ಎಲ್ಲಾ ಆಸೆಗೆ ಮನೆಯವರು ಪ್ರೋತ್ಸಾಹ ಮತ್ತು ಮಡದಿ ಶ್ರೀಮತಿ ಶುಭ ಲಕ್ಷ್ಮಿ ಯವರ ಸಂಪೂರ್ಣ ಪ್ರೋತ್ಸಾಹ, ಬೆಂಬಲ ಇದೆ.

ಪ್ರಸ್ತುತ ಈಗ ಇವರು ದಕ್ಷಿಣ ಕನ್ನಡ ಜಿಲ್ಲಾ ಜಾನಪದ ಪರಿಷತ್ ಪ್ರಧಾನ ಕಾರ್ಯದರ್ಶಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ನಾಮಫಲಕ ಕಲಾಗಾರರ ಸಂಘದ ಅಧ್ಯಕ್ಷರಾಗಿ ಬಿರ್ವೆರ್ ಕುಡ್ಲ ವಕ್ತಾರೆ ಆಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

ತನ್ನ ಜೀವನಕ್ಕಾಗಿ ತನ್ನದೇ ಆದ ಸುವರ್ಣ ಗ್ರಾಫಿಕ್ಸ್ ಸ್ಟುಡಿಯೋ ನಡೆಸಿಕೊಂಡು ಹೋಗುತ್ತಿದ್ದಾರೆ.(ಕಾರ್, ಬೈಕ್ ಇದರ ಗ್ರಾಫಿಕ್ಸ್, ಸ್ಟಿಕರ್ ಕಟ್ಟಿಂಗ್, ನೇಮ್ ಪ್ಲೇಟ್ )

ತಾನು ಚಿತ್ರರಂಗದಲ್ಲಿ ಹೆಸರು ಮಾಡಬೇಕು ಎಂಬ ಇವರ ಕನಸು ಆದಷ್ಟು ಬೇಗ ಈಡೇರಲಿ.

ಕನ್ನಡ ತುಳು ಚಿತ್ರ ರಂಗದಲ್ಲಿ ಒಳ್ಳೆಯ ಅವಕಾಶ ಸಿಗಲಿ, ಕನ್ನಡದಲ್ಲಿ ಅಭಿನಯಿಸುವ ಆಸೆಯು ಬೇಗ ಫಲಿಸಲಿ, ಕಲಾಮಾತೆ ಮತ್ತು ತುಳುನಾಡಿನ ದೈವ ದೇವರುಗಳ ಅನುಗ್ರಹ ಸದಾ ಇರಲಿ ಒಳ್ಳೆಯದಾಗಲಿ ನಿಮಗೆ

 

ಬರಹ:✍ಪ್ರಶಾಂತ್ ಅಂಚನ್ ಮಸ್ಕತ್


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »