TOP STORIES:

FOLLOW US

ನಾವು ಇವತ್ತು ಪರಿಚಯ ಮಾಡುವ ಯುವ ಪ್ರತಿಭೆ ಜಪ್ಪಿನ ಮೊಗರಿನ ಲಕ್ಷ್ಮೀಶ್ ಸುವರ್ಣ.


ನಾವು ಇವತ್ತು ಪರಿಚಯ ಮಾಡುವ ಯುವ ಪ್ರತಿಭೆ ಜಪ್ಪಿನ ಮೊಗರಿನ ತಿಮ್ಮಪ್ಪ ಪೂಜಾರಿ ಮತ್ತು ಶಶಿಕಲಾ ಟಿ ಸುವರ್ಣ ಇವರ ಮುದ್ದಿನ ಮಗ ಲಕ್ಷ್ಮೀಶ್ ಸುವರ್ಣ

ಬಾಲ್ಯದಿಂದಲೂ ನಟನೆಯಲ್ಲಿ ಆಸಕ್ತಿ ಇತ್ತು ಆದರೆ ಇವರಿಗೆ ಶಾಲಾ ದಿನಗಳಲ್ಲಿ ಯಾವುದೇ ರೀತಿಯ ಬೆಂಬಲ ಅಥವಾ ತಾವೇ ಮುಂದೆ ಹೋಗುವಷ್ಟು ಧೈರ್ಯ ಇರಲಿಲ್ಲ. ಹಾಡುಗಾರನಾಗಿ ಬೆಳೆಯಬೇಕು ಎಂಬ ಆಸೆಯೂ ನೆರವೇರಲಿಲ್ಲ . ಆದರೆ ನಿರೂಪಕನಾಗಿ ಜನರ ಮೆಚ್ಚುಗೆ ಗಳಿಸುವಲ್ಲಿ ಯಶಸ್ವಿಯಾದರು ಇವರ ಕಂಚಿನ ಕಂಠದ ಧ್ವನಿಯಿಂದ ಎಂಟು ವರ್ಷದಿಂದ ನಿರೂಪಣೆಯ ಹಾದಿಯಲ್ಲಿ ಮುಂದುವರಿದರು ಕರ್ನಾಟಕದ ಅನೇಕ ಕಡೆ ಮೈಸೂರ್, ಚಿಕ್ಕಮಂಗಳೂರು, ಶೃಂಗೇರಿ,ಕೊಪ್ಪ,ಉಡುಪಿ, ಮಂಗಳೂರು, ಜೈಪುರ್, ಬಾಳೆಹೊನ್ನೂರು, ಕಾಸರಗೋಡು, ಪುತ್ತೂರು, ಸುಳ್ಯ, ಮುಂಬೈಗಳಲ್ಲಿ ಕಾರ್ಯಕ್ರಮ ನೀಡಿ ತಮ್ಮ ವಾಕ್ ಚಾತುರ್ಯದಿಂದಲೇ ಜನ ಮನ ಗೆದ್ದಿದ್ದಾರೆ. ಓಮನ್ ಬಿಲ್ಲವಾಸ್ ಅವರು ಆಯೋಜಿಸಿದ ಬಲೇ ತೆಲಿಪಲೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿತ್ತು ಆದರೆ ಕೋರೋನ ದ ಲಾಕ್ ಡೌನ್ ಕಾರಣ ಅವಕಾಶ ಕಳೆದುಕೊಂಡರು

ತನ್ನ ಪ್ರಾಥಮಿಕ ಶಿಕ್ಷಣವನ್ನು ಜೆಪ್ಪಿನಮೊಗರು ಗವರ್ನಮೆಂಟ್ ಸ್ಕೂಲ್ ಮತ್ತು ಪ್ರೌಢ ಶಿಕ್ಷಣವನ್ನು ಕ್ಯಾಸಿಯಾ ಹೈ ಸ್ಕೂಲ್ ನಲ್ಲಿ ಮಾಡಿ ಮುಗಿಸಿದರು.

ಜೀವನದಲ್ಲಿ ಏನಾದರೂ ಸಾಧಿಸಬೇಕು ತನ್ನನ್ನು ಎಲ್ಲರೂ ಗುರುತಿಸಬೇಕು ಎಂದು ಕೊಂಡಾಗ ಇವರ ಕೈ ಹಿಡಿದದ್ದು ಕಲಾ ಮಾತೆ ಇವರು ಕೇವಲ ನಿರೂಪಕರಾಗಿರದೆ ಅನೇಕ ತುಳು ಚಿತ್ರಗಳಲ್ಲಿ ನಟಿಸಿ ನಟನೆಯಲ್ಲೂ ಸೈ ಎನಿಸಿಕೊಂಡಿದ್ದಾರೆ. ಇವರು ನಟಿಸಿದ ಸಿನಿಮಾ, (ತಂಬಿಲ, ಭೋಜರಾಜ್ ಎಮ್ ಬಿ ಬಿ ಎಸ್, ಭಟ್ಕಳ,)ಧಾರಾವಾಹಿ (ಅಜನೆ) ಮತ್ತು ಕಿರು ಚಿತ್ರ (ಪ್ಲಾನ್ –ಸಿ, ಆ ಒಂದು ಕೆರೆ) ಹೀಗೆ ತನ್ನಲ್ಲೂ ಒಬ್ಬ ಕಲಾವಿದ ಇದ್ದಾನೆ ಎಂದು ತೋರಿಸಿಕೊಟ್ಟಿದ್ದಾರೆ. ಜೀವನದಲ್ಲಿ ದೊಡ್ಡ ಕಲಾವಿದ ಆಗಬೇಕು, ಕನ್ನಡ ಚಿತ್ರಗಳಲ್ಲಿ ನಟಿಸಬೇಕೆಂಬ ಆಸೆ ಇದೆಯಂತೆ. ಹಾಗೆಯೇ ನಿರೂಪಣೆ ಯಲ್ಲಿಯೂ ಒಳ್ಳೆಯ ಹೆಸರು ಮಾಡಬೇಕು ಮತ್ತು ಹೊರ ದೇಶದಲ್ಲಿಯೂ ವಾಕ್ ಚಾತುರ್ಯ ತೋರಿಸಬೇಕು ಎನ್ನುವ ಕನಸು ನನಸಾಗಲಿ ಇವರ ಈ ಎಲ್ಲಾ ಆಸೆಗೆ ಮನೆಯವರು ಪ್ರೋತ್ಸಾಹ ಮತ್ತು ಮಡದಿ ಶ್ರೀಮತಿ ಶುಭ ಲಕ್ಷ್ಮಿ ಯವರ ಸಂಪೂರ್ಣ ಪ್ರೋತ್ಸಾಹ, ಬೆಂಬಲ ಇದೆ.

ಪ್ರಸ್ತುತ ಈಗ ಇವರು ದಕ್ಷಿಣ ಕನ್ನಡ ಜಿಲ್ಲಾ ಜಾನಪದ ಪರಿಷತ್ ಪ್ರಧಾನ ಕಾರ್ಯದರ್ಶಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ನಾಮಫಲಕ ಕಲಾಗಾರರ ಸಂಘದ ಅಧ್ಯಕ್ಷರಾಗಿ ಬಿರ್ವೆರ್ ಕುಡ್ಲ ವಕ್ತಾರೆ ಆಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

ತನ್ನ ಜೀವನಕ್ಕಾಗಿ ತನ್ನದೇ ಆದ ಸುವರ್ಣ ಗ್ರಾಫಿಕ್ಸ್ ಸ್ಟುಡಿಯೋ ನಡೆಸಿಕೊಂಡು ಹೋಗುತ್ತಿದ್ದಾರೆ.(ಕಾರ್, ಬೈಕ್ ಇದರ ಗ್ರಾಫಿಕ್ಸ್, ಸ್ಟಿಕರ್ ಕಟ್ಟಿಂಗ್, ನೇಮ್ ಪ್ಲೇಟ್ )

ತಾನು ಚಿತ್ರರಂಗದಲ್ಲಿ ಹೆಸರು ಮಾಡಬೇಕು ಎಂಬ ಇವರ ಕನಸು ಆದಷ್ಟು ಬೇಗ ಈಡೇರಲಿ.

ಕನ್ನಡ ತುಳು ಚಿತ್ರ ರಂಗದಲ್ಲಿ ಒಳ್ಳೆಯ ಅವಕಾಶ ಸಿಗಲಿ, ಕನ್ನಡದಲ್ಲಿ ಅಭಿನಯಿಸುವ ಆಸೆಯು ಬೇಗ ಫಲಿಸಲಿ, ಕಲಾಮಾತೆ ಮತ್ತು ತುಳುನಾಡಿನ ದೈವ ದೇವರುಗಳ ಅನುಗ್ರಹ ಸದಾ ಇರಲಿ ಒಳ್ಳೆಯದಾಗಲಿ ನಿಮಗೆ

 

ಬರಹ:✍ಪ್ರಶಾಂತ್ ಅಂಚನ್ ಮಸ್ಕತ್


Share:

More Posts

Category

Send Us A Message

Related Posts

ಹೃದಯ ಹೃದಯಗಳಲ್ಲಿ ಬೆಸೆದ ಹೃದಯ ಶ್ರೀಮಂತ ಜಯ ಸುವರ್ಣರ ಜನ್ಮದಿನದ ನೆನಪಿನ ಸಲುವಾಗಿ ನುಡಿನಮನ


Share       ಹೃದಯ ಹೃದಯಗಳಲ್ಲಿ ಬೆಸೆದ ಹೃದಯ ಶ್ರೀಮಂತ ಜಯ ಸುವರ್ಣರ ಜನ್ಮದಿನದ ನೆನಪಿನ ಸಲುವಾಗಿ ನುಡಿನಮನ ಮುಂಬೈ ವಿಶ್ವವಿದ್ಯಾಲಯದಲ್ಲಿ ಪಿ ಎಚ್. ಡಿ ಕೋರ್ಸ್ ವರ್ಕ್ ನ ಸಲುವಾಗಿ ಜಯ ಸುವರ್ಣರ ಕುರಿತು ಶೋಧ ಪ್ರಬಂಧವನ್ನು


Read More »

ಬೆಳ್ತಂಗಡಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ವಸಂತ ಬಂಗೇರರ ಹೆಸರಿಡಲು ಮನವಿ


Share       ಬೆಳ್ತಂಗಡಿ: 5 ಬಾರಿ ಬೆಳ್ತಂಗಡಿ ಕ್ಷೇತ್ರದ ಶಾಸಕರಾಗಿ, ಕಳೆದ 50 ವರ್ಷದಲ್ಲಿ ಕ್ಷೇತ್ರದ ಬಡ ಜನತೆಯ ಧ್ವನಿಯಾಗಿ ಕೆಲಸ ಮಾಡಿ ಇಹಲೋಕ ತ್ಯಜಿಸಿದ ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸ್ಥಾಪನೆಗೆ ಕಾರಣಕರ್ತರು ಹಾಗೂ


Read More »

ಚಿರನಿದ್ರೆಗೆ ಜಾರಿದ ಮಾಜಿ ಶಾಸಕ ಕೆ. ವಸಂತ ಬಂಗೇರ ಮೇ9 ರಂದು (ನಾಳೆ) ಬೆಳಿಗ್ಗೆ ಹಳೆಕೋಟೆ ನಿವಾಸದಲ್ಲಿ ಸಾರ್ವಜನಿಕ ಅಂತಿಮ ದರ್ಶನ


Share       ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ ನೇರ ನಡೆನುಡಿಯ, ದಿಟ್ಟ ಹೋರಾಟಗಾರ, ಭ್ರಷ್ಟಾಚಾರಿಗಳಿಗೆ ದುಃಸ್ವಪ್ನರಾಗಿದ್ದ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು


Read More »

ಬಿಲ್ಲವ ಸಮಾಜದ ಭರವಸೆಯ ಸೂರ್ಯ ಜನ್ಮದಿನದ ಸಲುವಾಗಿ ನುಡಿ ಬರಹ


Share       ಎರಡು ವರ್ಷಗಳ ಹಿಂದೆ ಜಯ ಸುವರ್ಣರ ಕುರಿತು ಮಾಹಿತಿಯನ್ನು ಸಂಗ್ರಹಿಸುವ ಸಲುವಾಗಿ ಅವರ ಮಗ ಸೂರ್ಯಕಾಂತ್ ಸುವರ್ಣರನ್ನು ಸಂದರ್ಶನ ಮಾಡಲು ಗೊರೆಗಾವ್‍ನಲ್ಲಿರುವ ಜಯ ಸುವರ್ಣರ ಕಚೇರಿಗೆ ಮೊದಲ ಬಾರಿ ಭೇಟಿ ನೀಡಿದ್ದೆ. ಜಯ ಸುವರ್ಣರನ್ನೇ


Read More »

ಕಿನ್ನಿಗೋಳಿ: ಬುಡಸಹಿತ ಧರೆಗುರುಳಿದ ಅವಳಿ ವೀರರನ್ನು ತೊಟ್ಟಿಲು ಕಟ್ಟಿ ತೂಗಿದ್ದ ತಾಕೊಡೆ ಮರ ಇನ್ನು ನೆನಪು ಮಾತ್ರ


Share       ಕಾಂತಬಾರೆ – ಬೂದಬಾರೆ ಆಡಿ ಬೆಳೆದುದಕ್ಕೆ ಸಾಕ್ಷಿಯಾಗಿದ್ದ ಮರ ಇನ್ನು ನೆನಪು ಮಾತ್ರ ಮೂಲ್ಕಿ ತಾಲೂಕು ಕೊಲ್ಲೂರಿನ ಶ್ರೀ ಕಾಂತಬಾರೆ- ಬೂದ ಬಾರೆ ಜನ್ಮಕ್ಷೇತ್ರ ಕಾಂತಬಾರೆ – ಬೂದಬಾರೆ ಆಡಿ ಬೆಳೆದುದಕ್ಕೆ ಸಾಕ್ಷಿಯಾಗಿದ್ದ ಮರ


Read More »

ಶಾಂತಿ-ಸೌಹಾರ್ದತೆಯ ಸಂದೇಶ ಸಾರುವ ‘ಅಡ್ಡಣ ಪೆಟ್ಟು’: ಬಲು ವಿಶಿಷ್ಠ ಮಂಡೆಕೋಲಿನ ಈ ಅಡ್ಡಣಪೆಟ್ಟು ಆಚರಣೆ..!


Share       ಸುಳ್ಯ: ದೈವವೇ ಬಂದು ಜಗಳ ಬಿಡಿಸಿ ಸೌಹಾರ್ದತೆಯಿಂದ ಬಾಳಿ ಎಂಬ ಗತ ಕಾಲದ ದೈವ ಸಂದೇಶವನ್ನು ಇಂದಿಗೂ ಜನ ಮಾನಸಕ್ಕೆ ಮುಟ್ಟಿಸುವ ವಿಶಿಷ್ಟ ಆಚರಣೆ ಅಡ್ಡಣಪೆಟ್ಟು ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ಪ್ರತಿ ವರ್ಷವೂ ನಡೆಯುತಿದೆ.


Read More »