TOP STORIES:

ನಿಸ್ವಾರ್ಥ ಸೇವಾ ಚತುರ ಅಮಿತ್ ರಾಜ್


ನಿಸ್ವಾರ್ಥ ಸೇವಾ ಚತುರ ಅಮಿತ್ ರಾಜ್  ಹಿಂದೂ ಸಂಘಟನೆಯಲ್ಲಿ ನಾನಾ ಜವಾಬ್ದಾರಿ ನಿರ್ವಹಿಸಿದ್ದು, ಈ ಮೊದಲು ಉರ್ವಾಸ್ಟೋರ್ ವಾರ್ಡಿನ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ, ನಂತರ ಬಿಜೆಪಿ ಯುವಮೋರ್ಚಾ ಮಂಡಲ ಉಪಾಧ್ಯಕ್ಷರಾಗಿ, ಇದೀಗ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿರುತ್ತಾರೆ.
ಸಾಕಷ್ಟು ಕಡೆ ಅಮಿತ್ ರಾಜ್ ಅನ್ನೋ ಹೆಸರನ್ನ ನೀವು ಕೇಳಿರುವಿರಿ. ಅದೆಷ್ಟೋ ಜನ ಅಮಿತ್ ರಾಜ್ ರವರ ಬಗ್ಗೆ ಹೇಳುವ ಮಾತು… ಅವರೊಂದು ಶಕ್ತಿ!!ಹಿಂದುತ್ವಗೋಸ್ಕರ ದುಡಿಯುವಂತಹ ಪ್ರಾಮಾಣಿಕ ನಾಯಕ, ಹಾಗೆ ಬಡವರ ಸೇವೆ ಮಾಡುವಂತಹ ಸಮಾಜಸೇವಕ..
ತನ್ನ ಬಾಲ್ಯಜೀವನದಿಂದಲೇ “ರಾಷ್ಟ್ರೀಯ ಸ್ವಯಂ ಸೇವಕ ಸಂಘದ ” ಸಂಘ ಶಿಕ್ಷಣ ಪಡೆದು ಸ್ವಯಂ ಸೇವಕರಾಗಿದ್ದು, ಸಂಘದ ವಿವಿಧ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡವರು.
ಬಾಲ್ಯದಿಂದಲೇ ಒಂದು ಆಸೆಯನ್ನ ತನ್ನೊಳಗೆ ಬಚ್ಚಿಟ್ಟುಕೊಂಡಿದ್ದರು. ಸಮಾಜದಲ್ಲಿ ನಾನು ಮತ್ತೊಬ್ಬರಿಗೆ ಒಳ್ಳೆಯದನ್ನ ಮಾಡಬೇಕು, ಸಮಾಜಕ್ಕೆ ಒಳಿತಿನ ಹಸ್ತವಾಗಿ ದುಡಿಯಬೇಕು ಎಂಬ ಮನಸ್ಥಿತಿಯಲ್ಲಿ ಬೆಳೆದು ತಾನು ಅಂದುಕೊಂಡ ಹಾಗೆ ಬದುಕುತ್ತಿದ್ದಾರೆ.
ಅಮಿತ್ ಅಣ್ಣ ನಂತರದ ದಿನಗಳಲ್ಲಿ ಬಡವರ ಸೇವೆಯನ್ನ ಮಾಡಲು ಮುಂದಾದರು. ಇವತ್ತಿಗೂ ಅದೆಷ್ಟೋ ಬಡವರ ಕಷ್ಟಕ್ಕೆ ಮರುಗಿ, ಅವರ ಕಣ್ಣೀರ ನೋವಿಗೆ ಆಸರೆಯಾಗಿರೋದು ನಿಜಕ್ಕೂ ಶ್ಲಾಘನೀಯ ವಿಚಾರ. ಪ್ರಾಮಾಣಿಕತೆಗೆ ಮತ್ತೊಂದು ಪ್ರತೀಕವೆನ್ನಬಹುದು.
“ಅಮಿತ್ ಅಣ್ಣ”ನಿಗೆ ಅದೆಷ್ಟೇ ಹೆಸರಿದ್ದರೂ ಯಾವತ್ತು ತನ್ನ ಕಾರ್ಯಕರ್ತರ ಜೊತೆ ನಾಯಕನಂತೆ ಮೆರೆಯದೆ, ಅಹಂಕಾರವನ್ನ ತೋರದೆ ಸಾಮಾನ್ಯವಾಗಿ ಅವರೊಂದಿಗೆ ಕೆಲಸ ಮಾಡೋ ಆ ಕಾರಣಕ್ಕಾಗಿ ಅಭಿಮಾನಗಳು ಹುಟ್ಟಿಕೊಂಡಿವೆ. ನಿಜಕ್ಕೂ ಎಂತಹ ಸಾರ್ಥಕ ಜೀವನ…ಅವರ ನಿಲುವು ಹಾಗೆ!! ಅವರ ಮಾರ್ಗದರ್ಶನದ ಪ್ರತಿಯೊಂದು ಹೆಜ್ಜೆಯಲ್ಲೂ ಅರ್ಥವಿದೆ..

ಸಮಾಜಕ್ಕಾಗಿ ಅಮಿತ್ ಅಣ್ಣ  ಎಂದರೆ ಏನು?

ಅವರ ನೇತೃತ್ವದಲ್ಲಿ ಬಡಮಕ್ಕಳ ಶಾಲೆಗೆ ಭೇಟಿ ನೀಡಿ ಹಾಗೂ ಹಲವಾರು ಅಶಕ್ತ ಕುಟುಂಬದ ಮನೆಗೆ ಭೇಟಿ ನೀಡಿ ಅವರಿಗೆ ಸಹಾಯ ಮಾಡುವುದರೊಂದಿಗೆ ಅನೇಕ ಸಮಾಜಮುಖಿ ‌ಕೆಲಸ ಮಾಡಿರುತ್ತಾರೆ.

ಅಲ್ಲದೆ 26-01-2018 ಮಂಗಳೂರಿನಲ್ಲಿ ಸುಮಾರು ನೂರು ಜನರ ನೇತ್ರದಾನ ಸಂಕಲ್ಪ ಮಾಡಿಸುವ ಮೂಲಕ #ನೇತ್ರದಾನ_ಶಿಬಿರ ನಡೆಸಿರುತ್ತಾರೆ..
ಇದಕ್ಕಿಂತ ಪುಣ್ಯದ ಕೆಲಸ ಬೇರೇನಿದೆ..ಇವೆಲ್ಲ ಸಮಾಜಕ್ಕೆ ಪ್ರಾಮುಖ್ಯತೆ ನೀಡೋ ಕೆಲಸವಾದರೆ ಇನ್ನು ಪರದೆಯ ಹಿಂದೆ ಅದೆಷ್ಟೋ ಒಳಿತಿನ ಸಹಾಯವನ್ನ ಇವರು ಮಾಡುತ್ತಲೇ ಬರುತ್ತಿದ್ದಾರೆ..ಕಾರಣವಿಷ್ಟೇ… ತಾನು ಮಾಡೋ ಕೆಲಸ ದೇವರಿಗೆ ಗೊತ್ತಾದರೆ ಸಾಕು ಸಮಾಜಕ್ಕೆ ಬೇಡ ಎಂಬ ಅರ್ಥದೊಳು ಕೆಲಸ ಮಾಡೋ ಸರಳತೆಯ ನಾಯಕನೇ ಇವರು.

ಹೆಚ್ಚು ಹೇಳಬೇಕೆಂದರೆ

ಅತ್ತಾಗ ಕಣ್ಣೀರು ಒರೆಸೋ ನಾಯಕ
ಸೋತಾಗ ಹೆಗಲು ಕೊಡೊ ನಾಯಕ
ಬಡವರ ನೋವಿಗೆ ಶಕ್ತಿ ತುಂಬೋ ನಾಯಕ
ಕಾರ್ಯಕರ್ತರಿಗೆ ಧೈರ್ಯ ತುಂಬೋ ನಾಯಕ ಎಲ್ಲೇ ಯಾರಿಗೂ ತೊಂದರೆಯಾದರೂ ಕ್ಷಣ ಮಾತ್ರದಲ್ಲಿ ಸ್ಪಂದಿಸೋ ನಾಯಕ
ಅನ್ಯಾಯದ ವಿರುದ್ಧ ಗರ್ಜಿಸೋ ನಾಯಕ
ನೊಂದ ಜೀವಕ್ಕೆ ಆಸರೆಯಾಗೋ ನಾಯಕ
ಪ್ರಾಮಾಣಿಕ ಸಿದ್ದಾಂತಕ್ಕೆ ಸೈ ಎನ್ನೋ ನಾಯಕ
ಸರಳತೆಯಲ್ಲಿ ಬದುಕೋ ನಾಯಕ
ಒಟ್ಟಿನಲ್ಲಿ ನಾಯಕ ಅನ್ನೋ ಪದಗಳಿಗೆ ಅರ್ಹತೆಯ ಮಡಿಲು ತುಂಬೋ ನಿಸ್ವಾರ್ಥ ವ್ಯಕ್ತಿ
ಅನ್ಯಾಯ ಮಾಡುವರನ್ನ ಹತ್ತಿರವೂ ಸೇರಿಸದೆ ನ್ಯಾಯದ ಪರ ಕೆಲಸ ಮಾಡೋ ಜನರ ಜೊತೆ ಬೆರೆತು ನಾನಿದ್ದೇನೆ ಎಂಬ ಭರವಸೆಯ ಶಕ್ತಿಯಾಗಿ ದುಷ್ಟರಿಗೆ ಅಂಜದೆ, #ದೈವ_ದೇವರುಗಳ ಆಶೀರ್ವಾದ ಪಡೆದು ಹಿಂದೂ ಧರ್ಮದ ತತ್ವಗಳನ್ನ ಪಾಲಿಸುತ್ತ,
ಹಿಂದೂಭದ್ರಕೋಟೆಗೆ ಕಾವಲಿರೋ ಈ ನಾಯಕನ ಬಗ್ಗೆ ಅದೆಷ್ಟೇ ಮಾತುಗಳ ವರ್ಣನೆ ನೀಡಿದರು ಅದು ಕಡಿಮೆಯೇ..
ಇಲ್ಲಿಯವರೆಗೆ ನಾ ಇವರನ್ನ ಭೇಟಿಯಾಗಿಲ್ಲ..ಆ ಕ್ಷಣಕ್ಕಾಗಿ ಕಾಯುತ್ತಿದ್ದೇನೆ #ನಿಜ!! ಆದರೆ ಭೇಟಿಯಾಗದಿದ್ದರು ಹತ್ತಿರದಿಂದ ನೋಡಿದ್ದೇನೆ ಎಂಬ ಅರಿವು ಅಭಿಮಾನಿಗಳ ಮಾತುಗಳಿಂದ ಹಾಗು ಅವರ ಕೆಲಸದಿಂದ ಗೊತ್ತಾಗುತ್ತದೆ..
ಸ್ವಾರ್ಥ ತುಂಬಿರೋ ಈ ಪ್ರಪಂಚದಲ್ಲಿ ಇಂತಹ ನಾಯಕರು ಹಲವರಿಗೆ ಮಾದರಿಯಾಗಬೇಕು..”#ಅಮಿತ್_ಅಣ್ಣ” ವೇದಿಕೆಯ ಮುಂಭಾಗ ನಿಂತು ಕೆಲಸ ಮಾಡುವರಲ್ಲ, ಪರದೆಯ ಹಿಂದೆ ದುಡಿಯುವಂತಹ ಕಾಯಕ..
ಹಾಗೆ “ಅಮಿತ್ ಅಣ್ಣ” “ರಾಷ್ಟ್ರೀಯ ಸ್ವಯಂಸೇವಕ ಸಂಘದ” ಸಂಘ ಶಿಕ್ಷಣ ಪಡೆದು RSS ನಲ್ಲಿ ಬಹಳ ಒಲವನ್ನು ಇಟ್ಟುಕೊಂಡವರು..ಆರ್ ಎಸ್ ಎಸ್ ಪ್ರಮುಖ ಅಂಶಗಳನ್ನ ತನ್ನೊಳಗೆ ಅಳವಡಿಸಿ ಹಿಂದೂರಾಷ್ಟ್ರದ ಭಗವಧ್ವಜ ಪತಾಕೆ ಬಹಳ ಎತ್ತರಕ್ಕೆ ಹಾರಲಿ ಎಂಬ ಕನಸು ಕಂಡವರು..
ಅಣ್ಣ ನೀವು ಹಿಂದೂ ಸಮಾಜಗೋಸ್ಕರ ಕೊಟ್ಟಿರೋ ಕೊಡುಗೆಗೆ ಬೆಲೆಕಟ್ಟಲಾಗದು..ನಿಮ್ಮಿಂದ ಇನ್ನು ಅನೇಕ ಒಳಿತಿನ ವಿಚಾರಗಳು ಮೂಡಿ ಬರೆಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ..ನಿಮ್ಮ ಹೊಸ ಪಯಣದ ಆರಂಭ ಅದೆಷ್ಟೋ ಜನರಿಗೆ ಪ್ರೇರಣೆಯಾಗಲಿ..ಸದಾ ನಿಮ್ಮ ವ್ಯಕ್ತಿತ್ವದ ಅಭಿಮಾನಿ ನಾ

ಬರಹ-ಪ್ರವೀಣ್ ಪೂಜಾರಿ


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »