TOP STORIES:

ನಿಸ್ವಾರ್ಥ ಸೇವಾ ಚತುರ ಅಮಿತ್ ರಾಜ್


ನಿಸ್ವಾರ್ಥ ಸೇವಾ ಚತುರ ಅಮಿತ್ ರಾಜ್  ಹಿಂದೂ ಸಂಘಟನೆಯಲ್ಲಿ ನಾನಾ ಜವಾಬ್ದಾರಿ ನಿರ್ವಹಿಸಿದ್ದು, ಈ ಮೊದಲು ಉರ್ವಾಸ್ಟೋರ್ ವಾರ್ಡಿನ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ, ನಂತರ ಬಿಜೆಪಿ ಯುವಮೋರ್ಚಾ ಮಂಡಲ ಉಪಾಧ್ಯಕ್ಷರಾಗಿ, ಇದೀಗ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿರುತ್ತಾರೆ.
ಸಾಕಷ್ಟು ಕಡೆ ಅಮಿತ್ ರಾಜ್ ಅನ್ನೋ ಹೆಸರನ್ನ ನೀವು ಕೇಳಿರುವಿರಿ. ಅದೆಷ್ಟೋ ಜನ ಅಮಿತ್ ರಾಜ್ ರವರ ಬಗ್ಗೆ ಹೇಳುವ ಮಾತು… ಅವರೊಂದು ಶಕ್ತಿ!!ಹಿಂದುತ್ವಗೋಸ್ಕರ ದುಡಿಯುವಂತಹ ಪ್ರಾಮಾಣಿಕ ನಾಯಕ, ಹಾಗೆ ಬಡವರ ಸೇವೆ ಮಾಡುವಂತಹ ಸಮಾಜಸೇವಕ..
ತನ್ನ ಬಾಲ್ಯಜೀವನದಿಂದಲೇ “ರಾಷ್ಟ್ರೀಯ ಸ್ವಯಂ ಸೇವಕ ಸಂಘದ ” ಸಂಘ ಶಿಕ್ಷಣ ಪಡೆದು ಸ್ವಯಂ ಸೇವಕರಾಗಿದ್ದು, ಸಂಘದ ವಿವಿಧ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡವರು.
ಬಾಲ್ಯದಿಂದಲೇ ಒಂದು ಆಸೆಯನ್ನ ತನ್ನೊಳಗೆ ಬಚ್ಚಿಟ್ಟುಕೊಂಡಿದ್ದರು. ಸಮಾಜದಲ್ಲಿ ನಾನು ಮತ್ತೊಬ್ಬರಿಗೆ ಒಳ್ಳೆಯದನ್ನ ಮಾಡಬೇಕು, ಸಮಾಜಕ್ಕೆ ಒಳಿತಿನ ಹಸ್ತವಾಗಿ ದುಡಿಯಬೇಕು ಎಂಬ ಮನಸ್ಥಿತಿಯಲ್ಲಿ ಬೆಳೆದು ತಾನು ಅಂದುಕೊಂಡ ಹಾಗೆ ಬದುಕುತ್ತಿದ್ದಾರೆ.
ಅಮಿತ್ ಅಣ್ಣ ನಂತರದ ದಿನಗಳಲ್ಲಿ ಬಡವರ ಸೇವೆಯನ್ನ ಮಾಡಲು ಮುಂದಾದರು. ಇವತ್ತಿಗೂ ಅದೆಷ್ಟೋ ಬಡವರ ಕಷ್ಟಕ್ಕೆ ಮರುಗಿ, ಅವರ ಕಣ್ಣೀರ ನೋವಿಗೆ ಆಸರೆಯಾಗಿರೋದು ನಿಜಕ್ಕೂ ಶ್ಲಾಘನೀಯ ವಿಚಾರ. ಪ್ರಾಮಾಣಿಕತೆಗೆ ಮತ್ತೊಂದು ಪ್ರತೀಕವೆನ್ನಬಹುದು.
“ಅಮಿತ್ ಅಣ್ಣ”ನಿಗೆ ಅದೆಷ್ಟೇ ಹೆಸರಿದ್ದರೂ ಯಾವತ್ತು ತನ್ನ ಕಾರ್ಯಕರ್ತರ ಜೊತೆ ನಾಯಕನಂತೆ ಮೆರೆಯದೆ, ಅಹಂಕಾರವನ್ನ ತೋರದೆ ಸಾಮಾನ್ಯವಾಗಿ ಅವರೊಂದಿಗೆ ಕೆಲಸ ಮಾಡೋ ಆ ಕಾರಣಕ್ಕಾಗಿ ಅಭಿಮಾನಗಳು ಹುಟ್ಟಿಕೊಂಡಿವೆ. ನಿಜಕ್ಕೂ ಎಂತಹ ಸಾರ್ಥಕ ಜೀವನ…ಅವರ ನಿಲುವು ಹಾಗೆ!! ಅವರ ಮಾರ್ಗದರ್ಶನದ ಪ್ರತಿಯೊಂದು ಹೆಜ್ಜೆಯಲ್ಲೂ ಅರ್ಥವಿದೆ..

ಸಮಾಜಕ್ಕಾಗಿ ಅಮಿತ್ ಅಣ್ಣ  ಎಂದರೆ ಏನು?

ಅವರ ನೇತೃತ್ವದಲ್ಲಿ ಬಡಮಕ್ಕಳ ಶಾಲೆಗೆ ಭೇಟಿ ನೀಡಿ ಹಾಗೂ ಹಲವಾರು ಅಶಕ್ತ ಕುಟುಂಬದ ಮನೆಗೆ ಭೇಟಿ ನೀಡಿ ಅವರಿಗೆ ಸಹಾಯ ಮಾಡುವುದರೊಂದಿಗೆ ಅನೇಕ ಸಮಾಜಮುಖಿ ‌ಕೆಲಸ ಮಾಡಿರುತ್ತಾರೆ.

ಅಲ್ಲದೆ 26-01-2018 ಮಂಗಳೂರಿನಲ್ಲಿ ಸುಮಾರು ನೂರು ಜನರ ನೇತ್ರದಾನ ಸಂಕಲ್ಪ ಮಾಡಿಸುವ ಮೂಲಕ #ನೇತ್ರದಾನ_ಶಿಬಿರ ನಡೆಸಿರುತ್ತಾರೆ..
ಇದಕ್ಕಿಂತ ಪುಣ್ಯದ ಕೆಲಸ ಬೇರೇನಿದೆ..ಇವೆಲ್ಲ ಸಮಾಜಕ್ಕೆ ಪ್ರಾಮುಖ್ಯತೆ ನೀಡೋ ಕೆಲಸವಾದರೆ ಇನ್ನು ಪರದೆಯ ಹಿಂದೆ ಅದೆಷ್ಟೋ ಒಳಿತಿನ ಸಹಾಯವನ್ನ ಇವರು ಮಾಡುತ್ತಲೇ ಬರುತ್ತಿದ್ದಾರೆ..ಕಾರಣವಿಷ್ಟೇ… ತಾನು ಮಾಡೋ ಕೆಲಸ ದೇವರಿಗೆ ಗೊತ್ತಾದರೆ ಸಾಕು ಸಮಾಜಕ್ಕೆ ಬೇಡ ಎಂಬ ಅರ್ಥದೊಳು ಕೆಲಸ ಮಾಡೋ ಸರಳತೆಯ ನಾಯಕನೇ ಇವರು.

ಹೆಚ್ಚು ಹೇಳಬೇಕೆಂದರೆ

ಅತ್ತಾಗ ಕಣ್ಣೀರು ಒರೆಸೋ ನಾಯಕ
ಸೋತಾಗ ಹೆಗಲು ಕೊಡೊ ನಾಯಕ
ಬಡವರ ನೋವಿಗೆ ಶಕ್ತಿ ತುಂಬೋ ನಾಯಕ
ಕಾರ್ಯಕರ್ತರಿಗೆ ಧೈರ್ಯ ತುಂಬೋ ನಾಯಕ ಎಲ್ಲೇ ಯಾರಿಗೂ ತೊಂದರೆಯಾದರೂ ಕ್ಷಣ ಮಾತ್ರದಲ್ಲಿ ಸ್ಪಂದಿಸೋ ನಾಯಕ
ಅನ್ಯಾಯದ ವಿರುದ್ಧ ಗರ್ಜಿಸೋ ನಾಯಕ
ನೊಂದ ಜೀವಕ್ಕೆ ಆಸರೆಯಾಗೋ ನಾಯಕ
ಪ್ರಾಮಾಣಿಕ ಸಿದ್ದಾಂತಕ್ಕೆ ಸೈ ಎನ್ನೋ ನಾಯಕ
ಸರಳತೆಯಲ್ಲಿ ಬದುಕೋ ನಾಯಕ
ಒಟ್ಟಿನಲ್ಲಿ ನಾಯಕ ಅನ್ನೋ ಪದಗಳಿಗೆ ಅರ್ಹತೆಯ ಮಡಿಲು ತುಂಬೋ ನಿಸ್ವಾರ್ಥ ವ್ಯಕ್ತಿ
ಅನ್ಯಾಯ ಮಾಡುವರನ್ನ ಹತ್ತಿರವೂ ಸೇರಿಸದೆ ನ್ಯಾಯದ ಪರ ಕೆಲಸ ಮಾಡೋ ಜನರ ಜೊತೆ ಬೆರೆತು ನಾನಿದ್ದೇನೆ ಎಂಬ ಭರವಸೆಯ ಶಕ್ತಿಯಾಗಿ ದುಷ್ಟರಿಗೆ ಅಂಜದೆ, #ದೈವ_ದೇವರುಗಳ ಆಶೀರ್ವಾದ ಪಡೆದು ಹಿಂದೂ ಧರ್ಮದ ತತ್ವಗಳನ್ನ ಪಾಲಿಸುತ್ತ,
ಹಿಂದೂಭದ್ರಕೋಟೆಗೆ ಕಾವಲಿರೋ ಈ ನಾಯಕನ ಬಗ್ಗೆ ಅದೆಷ್ಟೇ ಮಾತುಗಳ ವರ್ಣನೆ ನೀಡಿದರು ಅದು ಕಡಿಮೆಯೇ..
ಇಲ್ಲಿಯವರೆಗೆ ನಾ ಇವರನ್ನ ಭೇಟಿಯಾಗಿಲ್ಲ..ಆ ಕ್ಷಣಕ್ಕಾಗಿ ಕಾಯುತ್ತಿದ್ದೇನೆ #ನಿಜ!! ಆದರೆ ಭೇಟಿಯಾಗದಿದ್ದರು ಹತ್ತಿರದಿಂದ ನೋಡಿದ್ದೇನೆ ಎಂಬ ಅರಿವು ಅಭಿಮಾನಿಗಳ ಮಾತುಗಳಿಂದ ಹಾಗು ಅವರ ಕೆಲಸದಿಂದ ಗೊತ್ತಾಗುತ್ತದೆ..
ಸ್ವಾರ್ಥ ತುಂಬಿರೋ ಈ ಪ್ರಪಂಚದಲ್ಲಿ ಇಂತಹ ನಾಯಕರು ಹಲವರಿಗೆ ಮಾದರಿಯಾಗಬೇಕು..”#ಅಮಿತ್_ಅಣ್ಣ” ವೇದಿಕೆಯ ಮುಂಭಾಗ ನಿಂತು ಕೆಲಸ ಮಾಡುವರಲ್ಲ, ಪರದೆಯ ಹಿಂದೆ ದುಡಿಯುವಂತಹ ಕಾಯಕ..
ಹಾಗೆ “ಅಮಿತ್ ಅಣ್ಣ” “ರಾಷ್ಟ್ರೀಯ ಸ್ವಯಂಸೇವಕ ಸಂಘದ” ಸಂಘ ಶಿಕ್ಷಣ ಪಡೆದು RSS ನಲ್ಲಿ ಬಹಳ ಒಲವನ್ನು ಇಟ್ಟುಕೊಂಡವರು..ಆರ್ ಎಸ್ ಎಸ್ ಪ್ರಮುಖ ಅಂಶಗಳನ್ನ ತನ್ನೊಳಗೆ ಅಳವಡಿಸಿ ಹಿಂದೂರಾಷ್ಟ್ರದ ಭಗವಧ್ವಜ ಪತಾಕೆ ಬಹಳ ಎತ್ತರಕ್ಕೆ ಹಾರಲಿ ಎಂಬ ಕನಸು ಕಂಡವರು..
ಅಣ್ಣ ನೀವು ಹಿಂದೂ ಸಮಾಜಗೋಸ್ಕರ ಕೊಟ್ಟಿರೋ ಕೊಡುಗೆಗೆ ಬೆಲೆಕಟ್ಟಲಾಗದು..ನಿಮ್ಮಿಂದ ಇನ್ನು ಅನೇಕ ಒಳಿತಿನ ವಿಚಾರಗಳು ಮೂಡಿ ಬರೆಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ..ನಿಮ್ಮ ಹೊಸ ಪಯಣದ ಆರಂಭ ಅದೆಷ್ಟೋ ಜನರಿಗೆ ಪ್ರೇರಣೆಯಾಗಲಿ..ಸದಾ ನಿಮ್ಮ ವ್ಯಕ್ತಿತ್ವದ ಅಭಿಮಾನಿ ನಾ

ಬರಹ-ಪ್ರವೀಣ್ ಪೂಜಾರಿ


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »