TOP STORIES:

ನೆಲದ ಮೇಲೆ ಕುಳಿತು ಆಹಾರ ಸೇವಿಸುವುದರ ಪ್ರಯೋಜನ ತಿಳಿಯಿರಿ


ಡೈನಿಂಗ್ ಟೇಬಲ್ ಮೇಲೆ ಕೂತು ಊಟ ಮಾಡುತ್ತಿದ್ದೀರಾ? ನೆಲದ ಮೇಲೆ ಕುಳಿತು ಆಹಾರ ಸೇವಿಸುವುದರ ಪ್ರಯೋಜನ ತಿಳಿಯಿರಿ

ಈಗ ಡೈನಿಂಗ್ ಟೇಬಲ್ ಮೇಲೆ ಕುಳಿತು ಊಟ ಮಾಡುತ್ತಾರೆ. ಇದೇ ಪರಿಸ್ಥಿತಿ ಈಗ ಹೆಚ್ಚಿನ ಮನೆಗಳಲ್ಲಿ ಕಾಣಿಸಿಕೊಳ್ಳುತ್ತಿದೆ. ಆದರೆ ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಹಲವಾರು ಪ್ರಯೋಜನಗಳಿವೆ. ಹಾಗಿದ್ದರೆ ಅದ್ಯಾವುದು ಎಂದು ತಿಳಿದುಕೊಳ್ಳೊಣ.

ಬದಲಾದ ಕಾಲಕ್ಕೆ ತಕ್ಕಂತೆ ಮನುಷ್ಯನ ಜೀವನಶೈಲಿಯಲ್ಲಿಯೂ ಬದಲಾವಣೆಯಾಗಿದೆ. ಒಂದು ಕಾಲದಲ್ಲಿ ಹೆಚ್ಚು ದೈಹಿಕ ಚಟುವಟಿಕೆ, ಕಡಿಮೆ ಮಾನಸಿಕ ಚಟುವಟಿಕೆ ಇತ್ತು. ಆದರೆ ಈಗ ಪರಿಸ್ಥಿತಿಗಳು ಸಂಪೂರ್ಣವಾಗಿ ಬದಲಾಗಿವೆ. ಜೀವನಶೈಲಿಯಲ್ಲಿನ ಬದಲಾವಣೆಗಳು ಮಾನವನ ಆಹಾರ ಪದ್ಧತಿ ಮತ್ತು ಆಹಾರ ಸೇವನೆಯಲ್ಲಿಯೂ ಕೂಡ ಬದಲಾವಣೆಗಳನ್ನು ತಂದಿದೆ. ಹಿಂದೆ ನೆಲದ ಮೇಲೆ ಎಲ್ಲರೂ ಒಟ್ಟಾಗಿ ಕುಳಿತು ಊಟ ಮಾಡುತ್ತಿದ್ದರು. ಆದರೆ ಈಗ ಡೈನಿಂಗ್ ಟೇಬಲ್ ಮೇಲೆ ಕುಳಿತು ಊಟ ಮಾಡುತ್ತಾರೆ. ಇದೇ ಪರಿಸ್ಥಿತಿ ಈಗ ಹೆಚ್ಚಿನ ಮನೆಗಳಲ್ಲಿ ಕಾಣಿಸಿಕೊಳ್ಳುತ್ತಿದೆ. ಆದರೆ ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಹಲವಾರು ಪ್ರಯೋಜನಗಳಿವೆ. ಹಾಗಿದ್ದರೆ ಅದ್ಯಾವುದು ಎಂದು ತಿಳಿದುಕೊಳ್ಳೊಣ.

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದಾಗುವ ಪ್ರಯೋಜನಗಳು

ಸುಲಭವಾಗಿ ಜೀರ್ಣವಾಗುತ್ತದೆ
ನೆಲದ ಮೇಲೆ ಕುಳಿತು ಆಹಾರವನ್ನು ಸೇವಿಸುವುದರಿಂದ ಆಹಾರ ಸುಲಭವಾಗಿ ಜೀರ್ಣವಾಗುತ್ತದೆ. ತಟ್ಟೆ ಕೆಳಗೆ ಇರುವುದರಿಂದ ಪ್ರತಿ ಬಾರಿಯೂ ಹಿಂದಕ್ಕೆ ಮತ್ತು ಮುಂದಕ್ಕೆ ಚಲಿಸುವಂತೆ ಮಾಡುತ್ತದೆ. ಹೀಗೆ ಮಾಡುವುದರಿಂದ ಹೊಟ್ಟೆಯ ಸ್ನಾಯುಗಳು ಕ್ರಿಯಾಶೀಲವಾಗುತ್ತವೆ. ಇದರೊಂದಿಗೆ ತೆಗೆದುಕೊಂಡ ಆಹಾರ ಸುಲಭವಾಗಿ ಜೀರ್ಣವಾಗುತ್ತದೆ.

ತೂಕ ನಷ್ಟ
ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಕಶೇರುಖಂಡಗಳು ನೆಟ್ಟಗಾಗುತ್ತವೆ. ಅಲ್ಲದೇ ಮಾಹಿತಿಯು ಮೆದುಳಿಗೆ ಸುಲಭವಾಗಿ ತಲುಪುತ್ತದೆ. ಇದರೊಂದಿಗೆ, ಮೆದುಳು ಹೊಟ್ಟೆ ತುಂಬಿದೆ ಎಂದು ತ್ವರಿತವಾಗಿ ಗುರುತಿಸುತ್ತದೆ ಮತ್ತು ಅದು ಎಂದು ಹೇಳುತ್ತದೆ. ಆ ಮೂಲಕ ತೂಕ ನಷ್ಟಕ್ಕೂ ಸಹಾಯ ಮಾಡುತ್ತದೆ.

ಸ್ನಾಯು ನೋವು ಕಡಿಮೆಯಾಗುತ್ತದೆ
ಇತ್ತೀಚಿನ ದಿನಗಳಲ್ಲಿ ಚಕ್ಕರಮಟ್ಟೆ ಹಾಕಿ ನೆಲದ ಮೇಲೆ ಕುಳಿತುಕೊಳ್ಳುವುದು ಸಂಪೂರ್ಣವಾಗಿ ಕಡಿಮೆಯಾಗಿದೆ. ಹೆಚ್ಚುತ್ತಿರುವ ಕುರ್ಚಿ, ಸೋಫಾಗಳ ಬಳಕೆಯಿಂದ ಎಲ್ಲರೂ ಮೇಲೆ ಕುಳಿತುಕೊಳ್ಳುವಂತಾಗಿದೆ. ಆದರೆ ನೆಲದ ಮೇಲೆ ಕುಳಿತುಕೊಳ್ಳುವುದರಿಂದ ಸ್ನಾಯುಗಳು ಮತ್ತು ಕೀಲುಗಳ ಮೇಲಿನ ಒತ್ತಡ ಕಡಿಮೆಯಾಗುತ್ತದೆ. ಹಾಗೆಯೇ ಬೆನ್ನು ನೋವು ಮತ್ತು ಇನ್ನಿತರ ಸ್ನಾಯು ಸಮಸ್ಯೆ ದೂರವಾಗುತ್ತದೆ.

ರಕ್ತ ಸಂಚಾರ ಉತ್ತಮಗೊಳ್ಳುತ್ತದೆ
ನೆಲದ ಮೇಲೆ ಕುಳಿತುಕೊಳ್ಳುವುದರಿಂದ ರಕ್ತ ಸಂಚಾರ ಉತ್ತಮಗೊಳ್ಳುತ್ತದೆ. ಕುರ್ಚಿಗಳ ಮೇಲೆ ಕುಳಿತುಕೊಳ್ಳುವುದರಿಂದ ಹೃದಯಕ್ಕೆ ಸರಿಯಾಗಿ ರಕ್ತ ಪರಿಚಲನೆಯಾಗುವುದಿಲ್ಲ. ಅಂದರೆ ರಕ್ತ ಸಂಚಾರವನ್ನು ಇದು ತಡೆಯುತ್ತದೆ. ಹಾಗಾಗಿ ಊಟ ಮಾಡುವಾಗ ನೆಲದ ಮೇಲೆ ಕುಳಿತು ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »