TOP STORIES:

ಪಾರ್ಲೆ ಜಿ ಪ್ಯಾಕೆಟ್​ನಲ್ಲಿರುವ ಮಗು ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ


ಜೀವನದಲ್ಲಿ ಒಮ್ಮೆಯಾದರೂ ನೀವು ಪಾರ್ಲೆ ಜಿ ಬಿಸ್ಕತ್ತನ್ನು ತಿಂದೇ ಇರ್ತೀರಾ..! ಆದರೆ ಈ ಬಿಸ್ಕತ್ತಿಗೆ ಪಾರ್ಲೆ ಜಿ ಎಂಬ ಹೆಸರು ಹೇಗೆ ಬಂತು ಅಂತಾ ಎಂದಾದರೂ ಯೋಚನೆ ಮಾಡಿದ್ದೀರಾ..?‌ ಈ ಬಿಸ್ಕತ್ತು ತಯಾರಿಕೆಯ ಕಾರ್ಯವನ್ನು ಮುಂಬೈನ ವಿಲೇ ಪಾರ್ಲೆಯಲ್ಲಿ ಆರಂಭಿಸಲಾಯ್ತು.

ಇದೇ ಕಾರಣಕ್ಕೆ ಪಾರ್ಲೆ ಎಂಬ ಪದವನ್ನು ಬಳಕೆ ಮಾಡಲಾಯ್ತು. ಆದರೆ ಪಾರ್ಲೆ ಜಿ ಯಲ್ಲಿರುವ ‘ಜಿ’ ಅಂದರೆ ಏನು..? ಆ ಪ್ಯಾಕೆಟ್​ನಲ್ಲಿರುವ ಮಗು ಯಾರು..? ಎಂಬ ಪ್ರಶ್ನೆ ಯಕ್ಷಪ್ರಶ್ನೆಯಾಗಿಯೇ ಉಳಿದಿದೆ.

ಪಾರ್ಲೆ ಉತ್ಪನ್ನಗಳು 1929ರಿಂದ ಆರಂಭವಾದವು. ಮೊದಲು ಈ ಕಾರ್ಖಾನೆಯಲ್ಲಿ ಕೆಲಸ ಮಾಡ್ತಾ ಇದ್ದದ್ದು ಕೇವಲ 12 ಮಂದಿ ಮಾತ್ರ. ಆಗ ಈ ಬಿಸ್ಕತ್ತಿನ ಹೆಸರು ಪಾರ್ಲೆ – ಗ್ಲುಕೋ ಎಂದಾಗಿತ್ತು. 80 ದಶಕದ ಆರಂಭದವರೆಗೂ ಅದೇ ಹೆಸರನ್ನು ಮುಂದುವರಿಸಲಾಗಿತ್ತು. ಆದರೆ 1981ರಲ್ಲಿ ಕಂಪನಿಯು ಗ್ಲುಕೋ ಎಂಬ ಪದವನ್ನು ಶಾರ್ಟ್ ಮಾಡಿ ಪಾರ್ಲೆ ಜಿ ಎಂದು ಬದಲಾಯಿಸಿದೆ. 80 ದಶಕದಲ್ಲಿ ಈ ಬಿಸ್ಕತ್ತು ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಎಲ್ಲರ ಫೇವರಿಟ್​ ಆಗಿ ಬದಲಾಗಿತ್ತು. ಮಕ್ಕಳಿಗೆ ಈ ಬಿಸ್ಕತ್ತು ಇಷ್ಟವಾದ ಬಳಿಕ ಪಾರ್ಲೆ ಜಿ ಯಲ್ಲಿದ್ದ ಜಿಯನ್ನು ಜೀನಿಯಸ್​ ಎಂದು ಬದಲಾಯಿಸಲಾಯ್ತು. ಆದರೂ ಪ್ಯಾಕೆಟ್​ ಮೇಲೆ ಜಿ ಎಂದೇ ಬರೆಯಲಾಗಿತ್ತು.

 

ಪಾರ್ಲೆ ಜಿ ಬಿಸ್ಕತ್ತಿನ ಪ್ಯಾಕೆಟ್​ನಲ್ಲಿರುವ ಮಗು ಯಾರು..?

 

ಪಾರ್ಲೆ ಜಿ ಬಿಸ್ಕತ್ತಿನ ಪ್ಯಾಕೆಟ್​ನಲ್ಲಿರುವ ಮಗು ಯಾರು ಎಂಬದು ಒಂದು ಮಿಲಿಯನ್​ ಡಾಲರ್ ಪ್ರಶ್ನೆಯಾಗಿದೆ. ಹಲವು ದಶಕಗಳೇ ಕಳೆದರೂ ಸಹ ಈ ಮಗು ಯಾರು ಎಂಬ ಪ್ರಶ್ನೆಗೆ ಸ್ಪಷ್ಟ ಉತ್ತರವಿಲ್ಲ.

ಆದರೆ ಮೂರು ಹೆಸರುಗಳನ್ನು ಸಾಮಾನ್ಯವಾಗಿ ಹೇಳಲಾಗುತ್ತೆ. ನೀರು ದೇಶಪಾಂಡೆ, ಸುಧಾ ಮೂರ್ತಿ ಹಾಗೂ ಗುಂಜನ್​ ಗುಂಡಾನಿಯಾ ಹೆಸರು ಹೆಚ್ಚು ಪ್ರಚಲಿತದಲ್ಲಿದೆ. ಈ ಮೂವರಲ್ಲಿ ಒಬ್ಬರ ಬಾಲ್ಯದ ಪೋಟೋ ಇದು ಎಂದು ಅನೇಕರು ಹೇಳುತ್ತಾರೆ.ಅದರಲ್ಲೂ ನೀರೂ ದೇಶಪಾಂಡೆ ಹೆಸರು ಹೆಚ್ಚಾಗಿ ಕೇಳಲಾಗುತ್ತಿದೆ.

ಹಲವು ಪತ್ರಿಕೆಗಳಲ್ಲಿ ನೀರು ದೇಶಪಾಂಡೆ ಅವರ ಫೋಟೋ ಸಹಿತ ಸುದ್ದಿ ಪ್ರಕಟವಾಗಿತ್ತು. ಈ ಚಿತ್ರವು ನಾಗ್ಪುರದ ನಿವಾಸಿ 65 ವರ್ಷದ ನೀರು ಅವರ ಬಾಲ್ಯದ ಚಿತ್ರ ಎಂದು ಹಲವಾರು ಮಾಧ್ಯಮ ವರದಿಗಳು ಹೇಳಿವೆ. ನೀರೂ ಅವರ ಈ ಚಿತ್ರವನ್ನು ಆಕೆ 4 ವರ್ಷದವಳಿದ್ದಾಗ ತೆಗೆದದ್ದು ಎಂದು ಸುದ್ದಿಯಲ್ಲಿ ಹೇಳಲಾಗಿತ್ತು. ಅವರ ತಂದೆ ವೃತ್ತಿಪರ ಛಾಯಾಗ್ರಾಹಕ ಅಲ್ಲ, ಆದ್ದರಿಂದ ಅವರು ಸುಮ್ಮನೇ ಒಂದು ಫೋಟೋ ತೆಗೆದಿದ್ದರು. ಆ ಫೋಟೊ ಎಷ್ಟು ಚೆನ್ನಾಗಿ ಬಂದಿತ್ತು ಅಂದರೆ ಅದೇ ಫೋಟೋವನ್ನು ಪಾರ್ಲೆ ಜಿ ಪ್ಯಾಕಿಂಗ್​​ಗೆ ಆಯ್ಕೆ ಮಾಡಿಕೊಂಡಿತು ಎಂದು ಹೇಳಲಾಗುತ್ತದೆ.

ಈ ಸುದ್ದಿ ವೈರಲ್​ ಆಗುತ್ತಿದ್ದಂತೆಯೇ ಪಾರ್ಲೆ ಪ್ರಾಡಕ್ಟ್​ನಿಂದ ಸ್ಪಷ್ಟನೆ ನೀಡಲಾಗಿದೆ. ಎಲ್ಲಾ ವದಂತಿಗಳಿಗೆ ಪೂರ್ಣವಿರಾಮ ಹಾಕಿದ ಗ್ರೂಪ್​​ನ ಪ್ರಾಡಕ್ಟ್​ ಮ್ಯಾನೇಜರ್​ ಮಯಂಕ್​ ಷಾ, ಪ್ಯಾಕೆಟ್​ನಲ್ಲಿ ಕಂಡುಬರುವ ಮಗು ಒಂದು ಇಲ್ಯೂಸ್ಟ್ರೇಷನ್​ ಆಗಿದೆ. ಇದನ್ನು 60ರ ದಶಕದಲ್ಲಿ ಮಾಡಲಾಗಿದೆ. ಇಲ್ಲಿ ಯಾವುದೇ ಮಗುವಿನ ಫೋಟೋವನ್ನು ಕಂಪನಿ ಬಳಕೆ ಮಾಡಿಲ್ಲ. ಈ ಚಿತ್ರವನ್ನು ಎವರೆಸ್ಟ್​​ ಕ್ರಿಯೇಟಿವ್​ ಏಜೆನ್ಸಿ ಸಿದ್ದಪಡಿಸಿದೆ ಎಂದು ಹೇಳಿದ್ದಾರೆ.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »