TOP STORIES:

FOLLOW US

ಪೂಜಾರಿಯವರ ಕುದ್ರೋಳಿ ಕ್ಷೇತ್ರದ ನವೀಕರಣ ಕನಸಿಗೆ ಬೆನ್ನೆಲುಬಾದವರು ಜಯ ಸಿ.ಸುವರ್ಣ


ಮಂಗಳೂರು: ಬಿಲ್ಲವರ ಮಹಾಮಂಡಲದ ಸ್ಥಾಪಕಾಧ್ಯಕ್ಷ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ, ಭಾರತ್ ಕೋ-ಅಪರೇಟಿವ್ ಬ್ಯಾಂಕ್ ನ ಮಾಜಿ ಅಧ್ಯಕ್ಷ, ಮೂಲ್ಕಿ ಜಯ ಸಿ. ಸುವರ್ಣ (82) ಬುಧವಾರ ಬೆಳಗ್ಗಿನ ಜಾವ ಮುಂಬೈಯಲ್ಲಿ ನಿಧನರಾಗಿದ್ದಾರೆ.

ಮುಂಬೈಯಲ್ಲಿ ಬಿಲ್ಲವರಿಗೆ ಸ್ಫೂರ್ತಿಯಾಗಿ, ಸಮಸ್ತ ಬಿಲ್ಲವ ಸಮಾಜವನ್ನು ಒಂದಾಗಿಸಿ, ಬಿಲ್ಲವ ಸಂಘಟನೆಗಳಿಗೆ ಶಕ್ತಿಯಾಗಿ, ಮುಂಬೈ ಬಿಲ್ಲವ ಭವನದ ರೂವಾರಿಯಾಗಿ, ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಬಿಲ್ಲವ ಸಮಾಜದ ಅಭಿವೃದ್ಧಿಗೆ ಹತ್ತು ಹಲವಾರು ಕೊಡುಗೆಗಳನ್ನು ನೀಡಿದವರು. ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರ ಕುದ್ರೋಳಿ ಕ್ಷೇತ್ರದ ನವೀಕರಣದ ಕನಸ್ಸಿಗೆ ಬೆಂಬಲವಾಗಿ ನಿಂತವರು.

ಮುಂಬೈ ಗುಜರಾತ್ ಸೇರಿದಂತೆ ದೇಶ ವಿದೇಶಗಳ ಬಿಲ್ಲವರನ್ನು ಸಂಪರ್ಕಿಸಿ ಆರ್ಥಿಕ ಸಂಪನ್ಮೂಲ ಕ್ರೋಡಿಕರಿಸಿ ಜನಾರ್ದನ ಪೂಜಾರಿಯವರ ಕನಸ್ಸಿನ ಯೋಜನೆ ಶ್ರೀ ಕ್ಷೇತ್ರದ ನವೀಕರಣ ಹಾಗೂ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದರು. ಮುಂಬೈ ಬಿಲ್ಲವರ ಅಸೋಸಿಯೇಶನ್ ಹಿರಿಯರಿಂದ ಸ್ಪಾಪಿತವಾದ ಭಾರತ್ ಕೋ- ಅಪರೇಟಿವ್ ಬ್ಯಾಂಕಿನ ಚುಕ್ಕಾಣಿ ಹಿಡಿದು ಆಗ ಕೇವಲ 5 ಶಾಖೆಗಳಿದ್ದ ಅದನ್ನು ಜನಾರ್ದನ ಪೂಜಾರಿಯವರ ಬೆಂಬಲದೊಂದಿಗೆ ಇಂದು 100ಕ್ಕೂ ಅಧಿಕ ಶಾಖೆಗಳ ವಿಸ್ತರಣೆಯೊಂದಿಗೆ ಸಮಾಜದ ಸಾವಿರಾರು ಮಂದಿಗೆ ಉದ್ಯೋಗ, ಲಕ್ಷಾಂತರ ಮಂದಿಗೆ ಸಾಲದ ಮೂಲಕ ಆರ್ಥಕ ಶಕ್ತಿ ನೀಡಿ ಅವರ ವ್ಯವಹಾರಕ್ಕೆ ನೆರವಾದ ಜಯ ಸಿ ಸುವರ್ಣರ ಇಚ್ಛಾಶಕ್ತಿಯಿಂದಾಗಿ ಇಂದು ಭಾರತ್ ಕೋ-ಅಪರೇಟಿವ್ ಬ್ಯಾಂಕ್ ದೇಶದ ಪ್ರತಿಷ್ಠಿತ ಬ್ಯಾಂಕ್ ಎಂಬ ಹೆಗ್ಗಳಿಕೆಯೊಂದಿಗೆ ಹಲವಾರು ಪ್ರಶಸ್ತಿ ಗೌರವಗಳಿಗೆ ಪಾತ್ರವಾಗಿದೆ.

ತಿಳಿದು ಬರೋದು ಜನನ.ತಿಳಿಯದೆ ಬರೋದು ಮರಣ.ತಿಳಿದು ಬದುಕುವುದೇ ಜೀವನ..ಇವರೇ ಸಾರ್ಥಕ ಬದುಕಿನ ನಮ್ಮ ಜಯ ಸಿ ಸುವರ್ಣ. ಬದುಕಿನುದ್ದಕ್ಕೂ ಜಗತ್ತಿನಲ್ಲಿ ಸ್ರಷ್ಟಿಯಾದ ಎಲ್ಲರನ್ನೂ, ಎಲ್ಲವನ್ನೂ ಪ್ರೀತಿಸುತ್ತಾ, ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಸಂದೇಶ ಗಳನ್ನು ಪಾಲಿಸುತ್ತಾ, ಕೂಡಿ ಬಾಳಿ, ದಾನ ಮಾಡಿ ಮಾಡಿ, ಕೊಟ್ಟು ಕೊಟ್ಟು ಹಿಗ್ಗದೇ ಸರ್ವ ಸಮಾಜದ ಒಬ್ಬ ಮಹಾನ್ ಜನನಾಯಕರಾಗಿದ್ದರು.

ಗೋರೆಗಾವ್‌‌ನ ಜಯಪ್ರಕಾಶ್ ಹೋಟೆಲ್ ಮಾಲೀಕ, ಭಾರತ್ ಬ್ಯಾಂಕ್ ನ ಅಭಿವೃದ್ಧಿ ರೂವಾರಿ, ಮಾಜಿ ಕಾರ್ಯಾಧ್ಯಕ್ಷರು, ಬಿಲ್ಲವರ ಅಸೋಸಿಯೇಷನ್ ಮುಂಬೈ ಇದರ ಮಾಜಿ ಅಧ್ಯಕ್ಷರು, ಮಾರ್ಗ ದರ್ಶಕರು,ಬಿಲ್ಲವರ ಮಹಾ ಮಂಡಲದ ಮಾಜಿ ಅಧ್ಯಕ್ಷರು, ಕುದ್ರೋಳಿ ಗೋಕರ್ಣ ಕ್ಷೇತ್ರದ ಅಭಿವೃದ್ಧಿಯ ಹರಿಕಾರ ಹಾಗೇನೇ ಸಾಯಿ ವೆಜ್ ಹೋಟೆಲ್ ಗ್ರೂಪ್ನ ಸ್ಥಾಪಕರು ಆದ ಸಂಘಟಕರಾಗಿದ್ದ ಅವರು ನಮ್ಮ ನಿಮ್ಮ ಜನನಾಯಕರಾಗಿದ್ದರು. ಮೃತರ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ ಎಂದು ಈ ಮೂಲಕ ಪ್ರಾರ್ಥಿಸುವ.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »