TOP STORIES:

ಪೆಟ್ರೋಲೂ ಬೇಡ. ಚಾರ್ಜ್‌ ಮಾಡೋ ಅಗತ್ಯನೂ ಇಲ್ಲ- ಓಡ್ತಾ ಓಡ್ತಾ ಚಾರ್ಜ್‌ ಆಗತ್ತೆ ಈ ಇ- ಬೈಕ್‌!


ನವದೆಹಲಿ: ವಾಯುಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೆಟ್ರೋಲ್‌ ಬಳಕೆ ಕಡಿಮೆ ಮಾಡುವ ಉದ್ದೇಶದಿಂದ ಇಲೆಕ್ಟ್ರಿಕಲ್‌ ಗಾಡಿಗಳು ಬೀದಿಗಿಳಿದಿವೆ. ಬೈಕ್‌, ಸ್ಕೂಟರ್‌ ಅಷ್ಟೇ ಏಕೆ ಬಸ್ಸುಗಳು ಕೂಡ ಎಲೆಕ್ಟ್ರಿಕ್‌ ಆಗಿ ಪರಿವರ್ತನೆಗೊಂಡಿವೆ.

ಇದಾಗಲೇ ಇಲೆಕ್ಟ್ರಿಕ್‌ ಬೈಕ್‌ಗಳು ಭರ್ಜರಿ ಮಾರಾಟ ಕೂಡ ಆಗುತ್ತಿವೆ.

ಇಲೆಕ್ಟ್ರಿಕ್‌ ಚಾರ್ಜಿಂಗ್‌ ಬೈಕ್‌ಗಳು ನೂರಾರು ಕಿಲೋ ಮೀಟರ್‌ ಓಡುವುದು ನಿಜವಾದರೂ, ಕೆಲವು ಕಡೆಗಳಲ್ಲಿ ಚಾರ್ಜಿಂಗ್‌ ಪಾಯಿಂಟ್‌ ಇಲ್ಲದೇ ಪರದಾಡುವ ಸ್ಥಿತಿ ಇದೆ. ಅಂಥವರಿಗೆ ಇನ್ನೊಂದು ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ ಪುದುಚೇರಿ ಮೂಲದ ವಿಜಯನ್ ಪ್ರೇಮಾನಂದ್.

ಇದರ ಬೆನ್ನಲ್ಲೇ ಯಾರೂ ಊಹಿಸದ ಹೊಸದೊಂದು ತಂತ್ರಜ್ಞಾನವನ್ನು ಇವರು ಕಂಡುಹಿಡಿದಿದ್ದಾರೆ. ಅದೇನೆಂದರೆ ಇವರು ಕಂಡುಹಿಡಿದಿರುವ ಬೈಕ್‌ ಅನ್ನು ಚಾರ್ಜ್‌ ಮಾಡುವ ಅಗತ್ಯ ಕೂಡ ಇಲ್ಲ, ಹಾಗೆಂದು ಪೆಟ್ರೋಲ್‌ ಬೇಡ್ವವೇ ಬೇಡ. ಹಾಗಿದ್ದರೆ ಅದೆಂಥ ತಂತ್ರಜ್ಞಾನ ಅಂದಿರಾ?

ವಿಜಯನ್ ಅವರು ಕಂಡುಹಿಡಿದಿರುವ ಈ ಬೈಕ್‌ನಲ್ಲಿ ಇರುವ ಎರಡು ಬ್ಯಾಟರಿಗಳು ತಂತಾನೇ ಚಾರ್ಜ್‌ ಆಗುತ್ತವೆ, ಅದೂ ಗಾಡಿ ಓಡ್ತಾ ಓಡ್ತಾನೆ ಇದು ಚಾರ್ಜ್‌ ಆಗುತ್ತದೆ. ನೀವು ಚಾರ್ಜಿಂಗ್ ಸ್ಟೇಷನ್‌ಗೆ ಹೋಗಬೇಕಾಗಿಲ್ಲ. ಚಲಿಸುವಾಗ ಬೈಕ್‌ ತಂತಾನೇಯಾಗಿ ಚಾರ್ಜ್ ಆಗುತ್ತದೆ, ಇದರಿಂದ ವಿದ್ಯುತ್ ಉಳಿತಾಯ ಕೂಡ ಆಗುತ್ತದೆ ಎನ್ನುತ್ತಾರೆ ವಿಜಯನ್‌. ಇದಕ್ಕಾಗಿ ಇವರು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಕೈಗಾರಿಕಾ ನೀತಿ ಮತ್ತು ಪ್ರಚಾರ ಇಲಾಖೆಯಿಂದ ಪೇಟೆಂಟ್‌ ಕೂಡ ಪಡೆದುಕೊಂಡಿದ್ದಾರೆ.

‘ವಿದ್ಯುತ್‌ ಚಾರ್ಜಿಂಗ್‌ ಪಾಯಿಂಟ್‌ಗಳು ಬೇಕೆಂದ ಕಡೆಗಳಲ್ಲಿ ಸಿಗುವುದಿಲ್ಲ. ನಾನು ಕಂಡುಹಿಡಿದಿರುವ ಈ ಬೈಕ್‌ ಈ ಸಮಸ್ಯೆಯನ್ನು ನಿವಾರಿಸುತ್ತದೆ. ಚಾರ್ಜಿಂಗ್ ಸ್ಟೇಷನ್‌ನಲ್ಲಿ ಸಮಯವನ್ನು ವ್ಯರ್ಥ ಮಾಡುವ ಅಗತ್ಯವಿಲ್ಲ. ಇದರಲ್ಲಿ ಇರುವ ಬ್ಯಾಟರಿಗಳು ಪರಸ್ಪರ ಚಾರ್ಜ್ ಆಗುವಂತೆ ವಿನ್ಯಾಸ ಮಾಡಲಾಗಿದೆ. ಈ ಎರಡೂ ಬ್ಯಾಟರಿಗಳು ಚಾರ್ಜ್ ಆಗುವುದರಿಂದ ಶಕ್ತಿಯ ಬಳಕೆ ತುಂಬಾ ಕಡಿಮೆಯಾಗುತ್ತದೆ. ಇದರ ಅರ್ಥ ಬೇರೆ ಬ್ಯಾಟರಿಗಳಂತೆ ಬೇಗನೆ ಚಾರ್ಜ್‌ ಖಾಲಿಯಾಗುವುದಿಲ್ಲ’ ಎನ್ನುತ್ತಾರೆ ವಿಜಯನ್‌.

ಈ ತಂತ್ರಜ್ಞಾನವನ್ನು ಬಳಸಲು, ಹಲವು ವಾಹನ ತಯಾರಕರನ್ನು ಕೋರಲಾಗಿದೆ. ಕಂಪನಿಗಳ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇನೆ. ಇದೆಲ್ಲಾ ಓಕೆಯಾದರೆ ಇನ್ನು ಯಾವುದೇ ಸಮಸ್ಯೆ ಇರದ ಬೈಕ್‌ಗಳು ಶೀಘ್ರದಲ್ಲಿ ಮಾರುಕಟ್ಟೆಗೆ ಬರಲಿವೆ ಎನ್ನುವುದು ಅವರ ವಿಶ್ವಾಸ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »