TOP STORIES:

ಪ್ರತಿಭೆಗಳ ಪರಿಚಯದಲ್ಲಿಂದು ಹೇಳ ಹೊರಟಿರುವುದು ಒಂದೇ ಕುಟುಂಬದ ಇಬ್ಬರು ಕಲಾ ಪ್ರತಿಭೆಗಳ ಕುರಿತು.


ನೆಟ್ಟಣಿಗೆ ,ಮುಳ್ಳೇರಿಯಾದ ರತ್ನಾಕರ್ , ನಿಶಾ ದಂಪತಿಗಳ ಮಕ್ಕಳಾದಂತಹಪ್ರತೀತಿ ಹಾಗೂ ಈಕೆಯ ಅಣ್ಣ ಪ್ರಥಮ್ ಇಬ್ಬರು ಕೂಡ ಬಹುಮುಖ ಪ್ರತಿಭೆಗಳಾಗಿದ್ದು ಕೊಂಡು ಹಲವಾರು ಸಂಘ-ಸಂಸ್ಧೆಗಳಲ್ಲಿ ತಮ್ಮ‌ಕಲಾ ಪ್ರತಿಭೆಯನ್ನು ಪ್ರದರ್ಶಿಸಿರುತ್ತಾರೆ.

ಹೆಸರು: ಪ್ರತೀತಿ ಪೂಜಾರಿ ನೆಟ್ಟಣಿಗೆ ಇವಳು ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆ ಈಶ್ವರಮಂಗಳ , ಇಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿದ್ದಾಳೆ..
ಮೊದಲೇ ಹೇಳಿದಂತೆ ಇವಳು ಬಹುಮುಖ ಪ್ರತಿಭೆಯಾಗಿದ್ದುಕೊಂಡು ತಮ್ಮ ಸಣ್ಣ ವಯಸ್ಸಿನಲ್ಲಿಯೇ ನೃತ್ಯ , ಭರತನಾಟ್ಯ , ಯಕ್ಷಗಾನ , ಸಂಗೀತ ದಲ್ಲಿ ಆಸಕ್ತಿ ವಹಿಸಿಕೊಂಡು ಹಲವಾರು ವೇದಿಕೆಯಲ್ಲಿ , ನೃತ್ಯ ಪ್ರದರ್ಶನ ಮಾಡಿದ್ದಾಳೆ.

ಭರತನಾಟ್ಯ ವನ್ನು ವಿದುಷಿ ವಿದ್ಯಾಲಕ್ಷ್ಮಿ ಕುಂಬ್ಲೆ ಇವರಿಂದ ಕಲಿಯುತ್ತಿದ್ದಾಳೆ. ಯಕ್ಷಗಾನವನ್ನು ಗುರುಗಳಾದ ಶಶಿಧರ ಬಜಾಕೆರೆ ಇವರಿಂದ ಅಭ್ಯಾಸಿಸುತ್ತಿದ್ದಾಳೆ. ಈಗಾಗಲೇ “ಗಿರಿಜಾ ಕಲಾಣ್ಯ” ಯಕ್ಷಗಾನದಲ್ಲಿ ಷಣ್ಮುಖ ನಾಗಿಯೂ, “ಮೆದಿನಿ ನಿರ್ಮಾಣ ಮಹಿಷಮರ್ದಿನೀ” ಯಕ್ಷಗಾನದಲ್ಲಿ ಯಕ್ಷನಾಗಿಯೂ ಅದ್ಬುತ ಪ್ರದರ್ಶನವನ್ನು ನೀಡಿರುವುದರ ಮುಖೇನವಾಗಿ ಇವಳ ಈ ಪಾತ್ರವನ್ನು ಮೆಚ್ಚಿ ಸಂಘಸಂಸ್ಥೆಯವರು ಅಭನಂದಿಸಿದ್ದಾರೆ.

ಇದಿಷ್ಟೇ ಅಲ್ಲದೇ ಶಾಲೆಯಲ್ಲಿ ನಡೆಯುವ ಪ್ರತಿಯೊಂದು ಸ್ಬರ್ಧೆಯಲ್ಲಿ ಸ್ವರ್ಧಿಸಿ , ಪ್ರತಿಯೊಂದು ಚಟುವಟಿಕೆಯಲ್ಲಿ ಭಾಗವಹಿಸಿ ಪ್ರಥಮ ಬಹುಮಾನ ಪಡೆದುಕೊಳ್ಳುತ್ತಾಳೆ. ಅಲ್ಲದೇ ಕಲಿಕೆಯಲ್ಲಿಯೂ ಮುಂದಿರುವ ಇವಳು ಆಟೋಟ ದಲ್ಲಿ ಭಾಗವಹಿಸಿ ಬಹುಮಾನ ತನ್ನದಾಗಿಸಿಕೊಂಡಿದ್ದಾಳೆ. Lock down ಸಮಯದಲ್ಲಿ ಒಂದು ವರ್ಷದಿಂದ online ನ ಸ್ಬರ್ಧೆಯಲ್ಲಿಯೂ ಭಾಗವಹಿಸಿರುತ್ತಾಳೆ. ಹೀಗೆ ಗಡಿನಾಡಿನ ಪ್ರತಿಭೆ ಪ್ರತೀತಿಯೂ ಇನ್ನು ಹೆಚ್ಚು ಹೆಚ್ಚು ಸಾಧನೆಯನ್ನು ಮಾಡುವಂತಾಗಲಿ ಶುಭವಾಗಲಿ.

ಹೆಸರು:ಪ್ರಥಮ್ ಪೂಜಾರಿ ನೆಟ್ಟಣಿಗೆ ಇವನು ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಂಟನೇ ತರಗತಿಯಲ್ಲಿ ಕಲಿಯುತ್ತಿದ್ದಾನೆ. ಇವನಿಗೆ ದೊಡ್ಡವನಾದ ಮೇಲೆ ಸೇನೆಗೆ ಸೇರಬೇಕೆಂಬ ಕನಸಿದೆ. ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿರುವ ಪ್ರಥಮ್ ಹಲವಾರು ವೇದಿಕೆಗಳಲ್ಲಿ, ನೃತ್ಯ, ಯಕ್ಷಗಾನ, ಕರಾಟೆ ಕಾರ್ಯಕ್ರಮ ಕೊಟ್ಟಿದ್ದಾನೆ.

ಆಟೋಟದಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದು.. ತಾಲೂಕು ಮಟ್ಟದಲ್ಲಿ ಭಾಗವಹಿಸಿದ್ದಾನೆ..7ನೇ ತರಗತಿಯಲ್ಲಿ ಶಾಲೆಯಲ್ಲಿ ಚಾಂಪಿಯನ್ ಶಿಪ್ ಪಡೆದು ಕೊಂಡಿದ್ದಾನೆ.. ಇನ್ನೂ ಹಲವಾರು ಚಟುವಟಿಕೆ ಯಲ್ಲೂ ಭಾಗವಹಿಸಿ ಬಹುಮಾನ ಪಡೆದುಕೊಂಡಿದ್ದಾನೆ. Online ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ದಲ್ಲಿ ಭಾಗವಹಿಸಿದ್ದಾನೆ. ಇನ್ನು ಮುಂದೆಯು ಕೂಡ ಹೆಚ್ಚು ಹೆಚ್ಚು ಸಾಧನೆಯನ್ನು ಮಾಡುವಂತಾಗಲಿ.

ಕಲೆಯನ್ನು ಯಾರು ಪ್ರೀತಿಸುವರೋ , ಕಲೆ ಅವರಿಗೆ ತಾನಾಗಿಯೇ ‌ಒಲಿದು ಬರುತ್ತದೆ.. ಅಂತೆಯೇ ಇಂದು ಈ ಇಬ್ಬರು ಕಲಾ ಪ್ರತಿಭೆಗಳನ್ನು ಪರಿಚಯಿಸುದರ ಜೊತೆಗೆ ಈ ಲೇಖನದ ಮೂಲಕ ಇವರ ಪ್ರತಿಭೆಗೆ ಪ್ರೋತ್ಸಾಹದ ಬೆಳಕಾಗುವ ಉದ್ದೇಶ ವಾಗಿದೆ.


Related Posts

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »