TOP STORIES:

ಪ್ರತಿಷ್ಠಿತ ಬಿಲ್ಲವ ಸಾಧಕರಿಗೆ “ಗುರು ಶ್ರೀ“ ಪ್ರಶಸ್ತಿ ಪ್ರಧಾನ ಮತ್ತು ಗುರು ಜಯಂತಿ


 

ಬ್ರಹ್ಮ ಶ್ರೀ ನಾರಾಯಣ ಗುರುಗಳ 168 ಜಯಂತಿ ಪ್ರಯುಕ್ತ ಗುರು ಪೂಜೆಯನ್ನು ದಿನಾಂಕ 9-9-2022 ರಂದು ಮಂಗಳಾದೇವಿ ಪ್ರಾಂಗಣ ದಲ್ಲಿ ನಡೆಸಲು ನಿರ್ಧರಿಸಿದ್ದೇವೆ. ಕಾರ್ಯಕ್ರಮವು ಭಜನೆಯೊಂದಿಗೆ ಪ್ರಾರಂಭಗೊಂಡು, ಸಭಾ ಕಾರ್ಯಕ್ರಮ ಮತ್ತು ಮಹಾಪೂಜೇಯೊಂದಿಗೆ ಸಂಪನ್ನಗೊಳ್ಳಲಿದೆ.

ನಮ್ಮ ಸಂಘವು ಪ್ರಪ್ರಥಮ ಬಾರಿಗೆ ಪ್ರತಿಷ್ಠಿತ ಬಿಲ್ಲವ ಸಮಾಜದಲ್ಲಿ, ವಿವಿಧ ಕ್ಷೇತ್ರದಲ್ಲಿ ತನ್ನದೇ ಆದ ಸೇವೆ ಸಲ್ಲಿಸುತ್ತಿರುವ ಗಣ್ಯ ವ್ಯಕ್ತಿಗಳನ್ನು ಗುರುತಿಸಿ ನೀಡುವ ಸನ್ಮಾನದ ಪ್ರಶಸ್ತಿಯೇ “ಗುರು ಶ್ರೀ ‘.. ಪ್ರಸಕ್ತ ಸಾಲಿನಲ್ಲಿ ಐದು ಕ್ಷೇತ್ರವನ್ನು ಆಯ್ಕೆ ಮಾಡಿದ್ದೇವೆ. 1) ಸಹಕಾರ ಕ್ಷೇತ್ರ,2) ಆಧ್ಯಾತ್ಮಿಕ ಕ್ಷೇತ್ರ 3)ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರ 4) ಯುವಜನ ಮತ್ತು ಕ್ರೀಡಾ ಕ್ಷೇತ್ರ,5)ವೈದ್ಯಕೀಯ ಕ್ಷೇತ್ರ (ಮಹಿಳೆ ).

“ ಗುರು ಶ್ರೀ “ ಪ್ರಶಸ್ತಿ ಗೆ ಆಯ್ಕೆ ಯಾದ ಗಣ್ಯರು.

1) ಸಹಕಾರ ಕ್ಷೇತ್ರ : ಶ್ರೀಯುತ ಚಿತ್ತರಂಜನ್ ಬೋಳಾರ್.. ಸ್ಥಾಪಕರು ಆತ್ಮಶಕ್ತಿ ವಿವಿದೊದ್ದೇಶ ಸಹಕಾರಿ ಸಂಘ.

2) ಆಧ್ಯಾತ್ಮಿಕ ಕ್ಷೇತ್ರ: ಶ್ರೀಯುತ ಎ ವಿದ್ಯಾಧರ್..ಅನುವಂಶಿಕ ಆಡಳಿತ ಮೊಕ್ತೆಸರರು, ಶ್ರೀ ಅರಸುಮುಂಡಿತ್ತಾಯ ದೈವಸ್ಥಾನ ಅತ್ತಾವರ.

3) ಕಲೆ ಮತ್ತು ಸಂಸ್ಕೃತಿಕ ಕ್ಷೇತ್ರ.. ಶ್ರೀಯುತ ಅರವಿಂದ್ ಬೋಳಾರ್.. ಭಾರತೀಯ ಚಲನಚಿತ್ರ ನಟ.

 

4) ಯುವಜನ ಮತ್ತು ಕ್ರೀಡಾ ಕ್ಷೇತ್ರ.ಶ್ರೀಯುತ ದೀಪಕ್ ಅಂಚನ್.. ರಾಜ್ಯ ಮಟ್ಟದ ಕುಸ್ತಿ ಪಟು.

 

5) ವೈದ್ಯಕೀಯ ಕ್ಷೇತ್ರ…ಡಾ. ಮನಿಷಾ. ಏನ್. ಅಸೋಸಿಯೇಟ್ ಪ್ರೊಫೆಸರ್ ENT ಡಿಪಾರ್ಟ್ಮೆಂಟ್ ಕೆಎಂಸಿ ಮಂಗಳೂರು.

ಈ ಐವರು ಸಾಧಕರಿಗೆ ಪ್ರಶಸ್ತಿ ನೀಡಲಾಗುವುದು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ವೇದವ್ಯಾಸ ಕಾಮತ್, ಶಾಸಕರು ಮಂಗಳೂರು ದಕ್ಷಿಣ ವಿಧಾನ ಸಭಾ, ಶ್ರೀ ಉಮಾನಾಥ್ ಕೋಟ್ಯಾನ್ ಶಾಸಕರು ಮೂಲ್ಕಿ ಮೂಡಬಿದ್ರಿ,ಶ್ರೀ ಪ್ರೇಮಾನಂದ ಶೆಟ್ಟಿ, ಮೇಯರ್ ಮಂಗಳೂರು ಮಹಾನಗರ ಪಾಲಿಕೆ.ಶ್ರೀ ಪಿ. ರಮಾನಾಥ್ ಹೆಗ್ಡೆ ಆಡಳಿತ ಮೊಕ್ತೇಸರರು ಶ್ರೀ ಮಹೋತೋಭಾರ ಮಂಗಾದೇವಿ.ಶ್ರೀ ಬಿ ಅಶೋಕ್ ಕುಮಾರ್ ಮೊಕ್ತೇಸರರು ಬೋಳಾರ ಮಾರಿಗುಡಿ, ಶ್ರೀ ಆರ್ ಪದ್ಮರಾಜ್ ಕೋಶಾಧಿಕಾರಿ ಶ್ರೀ ಗೋಕರ್ಣನಾಥ ದೇವಸ್ಥಾನ ಕುದ್ರೋಳಿ ಮಂಗಳೂರು ಇವರು ಭಾಗಾವಹಿಸಲಿದ್ದಾರೆ.ಬಿಲ್ಲವ ಸಂಘ ಮಂಗಳಾದೇವಿ ವತಿಯಿಂದ ಇದೇ ಕಾರ್ಯಕ್ರಮ ದಲ್ಲಿ ಅಶಕ್ತರಿಗೆ ಸಹಾಯಧನವನ್ನು ನೀಡಲಿದ್ದೇವೆ ಎಂದು ಕಾರ್ಯಕ್ರಮ ಸಂಚಾಲಕರಾದ ಶ್ರೀ ರಾಜರತ್ನ ಸನಿಲ್ ತಿಳಿಸಿದರು. ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಕೃಷ್ಣಪ್ಪ ಪೂಜಾರಿ, ಕಾರ್ಯದರ್ಶಿ ಶ್ರೀ ರಮಾನಂದ ಪೂಜಾರಿ, ಸದಸ್ಯರಾದ ಶ್ರೀ ಕೀರ್ತಿರಾಜ್, ಶ್ರೀ ಮೋನಪ್ಪ ಹಾಜರಿದ್ದರು. ಕಾರ್ಯದರ್ಶಿ ಶ್ರೀ ರಮಾನಂದ ಪೂಜಾರಿ ಸ್ವಾಗತಿಸಿದರು.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »