TOP STORIES:

ಪ್ರತಿಷ್ಠಿತ ಬಿಲ್ಲವ ಸಾಧಕರಿಗೆ “ಗುರು ಶ್ರೀ“ ಪ್ರಶಸ್ತಿ ಪ್ರಧಾನ ಮತ್ತು ಗುರು ಜಯಂತಿ


 

ಬ್ರಹ್ಮ ಶ್ರೀ ನಾರಾಯಣ ಗುರುಗಳ 168 ಜಯಂತಿ ಪ್ರಯುಕ್ತ ಗುರು ಪೂಜೆಯನ್ನು ದಿನಾಂಕ 9-9-2022 ರಂದು ಮಂಗಳಾದೇವಿ ಪ್ರಾಂಗಣ ದಲ್ಲಿ ನಡೆಸಲು ನಿರ್ಧರಿಸಿದ್ದೇವೆ. ಕಾರ್ಯಕ್ರಮವು ಭಜನೆಯೊಂದಿಗೆ ಪ್ರಾರಂಭಗೊಂಡು, ಸಭಾ ಕಾರ್ಯಕ್ರಮ ಮತ್ತು ಮಹಾಪೂಜೇಯೊಂದಿಗೆ ಸಂಪನ್ನಗೊಳ್ಳಲಿದೆ.

ನಮ್ಮ ಸಂಘವು ಪ್ರಪ್ರಥಮ ಬಾರಿಗೆ ಪ್ರತಿಷ್ಠಿತ ಬಿಲ್ಲವ ಸಮಾಜದಲ್ಲಿ, ವಿವಿಧ ಕ್ಷೇತ್ರದಲ್ಲಿ ತನ್ನದೇ ಆದ ಸೇವೆ ಸಲ್ಲಿಸುತ್ತಿರುವ ಗಣ್ಯ ವ್ಯಕ್ತಿಗಳನ್ನು ಗುರುತಿಸಿ ನೀಡುವ ಸನ್ಮಾನದ ಪ್ರಶಸ್ತಿಯೇ “ಗುರು ಶ್ರೀ ‘.. ಪ್ರಸಕ್ತ ಸಾಲಿನಲ್ಲಿ ಐದು ಕ್ಷೇತ್ರವನ್ನು ಆಯ್ಕೆ ಮಾಡಿದ್ದೇವೆ. 1) ಸಹಕಾರ ಕ್ಷೇತ್ರ,2) ಆಧ್ಯಾತ್ಮಿಕ ಕ್ಷೇತ್ರ 3)ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರ 4) ಯುವಜನ ಮತ್ತು ಕ್ರೀಡಾ ಕ್ಷೇತ್ರ,5)ವೈದ್ಯಕೀಯ ಕ್ಷೇತ್ರ (ಮಹಿಳೆ ).

“ ಗುರು ಶ್ರೀ “ ಪ್ರಶಸ್ತಿ ಗೆ ಆಯ್ಕೆ ಯಾದ ಗಣ್ಯರು.

1) ಸಹಕಾರ ಕ್ಷೇತ್ರ : ಶ್ರೀಯುತ ಚಿತ್ತರಂಜನ್ ಬೋಳಾರ್.. ಸ್ಥಾಪಕರು ಆತ್ಮಶಕ್ತಿ ವಿವಿದೊದ್ದೇಶ ಸಹಕಾರಿ ಸಂಘ.

2) ಆಧ್ಯಾತ್ಮಿಕ ಕ್ಷೇತ್ರ: ಶ್ರೀಯುತ ಎ ವಿದ್ಯಾಧರ್..ಅನುವಂಶಿಕ ಆಡಳಿತ ಮೊಕ್ತೆಸರರು, ಶ್ರೀ ಅರಸುಮುಂಡಿತ್ತಾಯ ದೈವಸ್ಥಾನ ಅತ್ತಾವರ.

3) ಕಲೆ ಮತ್ತು ಸಂಸ್ಕೃತಿಕ ಕ್ಷೇತ್ರ.. ಶ್ರೀಯುತ ಅರವಿಂದ್ ಬೋಳಾರ್.. ಭಾರತೀಯ ಚಲನಚಿತ್ರ ನಟ.

 

4) ಯುವಜನ ಮತ್ತು ಕ್ರೀಡಾ ಕ್ಷೇತ್ರ.ಶ್ರೀಯುತ ದೀಪಕ್ ಅಂಚನ್.. ರಾಜ್ಯ ಮಟ್ಟದ ಕುಸ್ತಿ ಪಟು.

 

5) ವೈದ್ಯಕೀಯ ಕ್ಷೇತ್ರ…ಡಾ. ಮನಿಷಾ. ಏನ್. ಅಸೋಸಿಯೇಟ್ ಪ್ರೊಫೆಸರ್ ENT ಡಿಪಾರ್ಟ್ಮೆಂಟ್ ಕೆಎಂಸಿ ಮಂಗಳೂರು.

ಈ ಐವರು ಸಾಧಕರಿಗೆ ಪ್ರಶಸ್ತಿ ನೀಡಲಾಗುವುದು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ವೇದವ್ಯಾಸ ಕಾಮತ್, ಶಾಸಕರು ಮಂಗಳೂರು ದಕ್ಷಿಣ ವಿಧಾನ ಸಭಾ, ಶ್ರೀ ಉಮಾನಾಥ್ ಕೋಟ್ಯಾನ್ ಶಾಸಕರು ಮೂಲ್ಕಿ ಮೂಡಬಿದ್ರಿ,ಶ್ರೀ ಪ್ರೇಮಾನಂದ ಶೆಟ್ಟಿ, ಮೇಯರ್ ಮಂಗಳೂರು ಮಹಾನಗರ ಪಾಲಿಕೆ.ಶ್ರೀ ಪಿ. ರಮಾನಾಥ್ ಹೆಗ್ಡೆ ಆಡಳಿತ ಮೊಕ್ತೇಸರರು ಶ್ರೀ ಮಹೋತೋಭಾರ ಮಂಗಾದೇವಿ.ಶ್ರೀ ಬಿ ಅಶೋಕ್ ಕುಮಾರ್ ಮೊಕ್ತೇಸರರು ಬೋಳಾರ ಮಾರಿಗುಡಿ, ಶ್ರೀ ಆರ್ ಪದ್ಮರಾಜ್ ಕೋಶಾಧಿಕಾರಿ ಶ್ರೀ ಗೋಕರ್ಣನಾಥ ದೇವಸ್ಥಾನ ಕುದ್ರೋಳಿ ಮಂಗಳೂರು ಇವರು ಭಾಗಾವಹಿಸಲಿದ್ದಾರೆ.ಬಿಲ್ಲವ ಸಂಘ ಮಂಗಳಾದೇವಿ ವತಿಯಿಂದ ಇದೇ ಕಾರ್ಯಕ್ರಮ ದಲ್ಲಿ ಅಶಕ್ತರಿಗೆ ಸಹಾಯಧನವನ್ನು ನೀಡಲಿದ್ದೇವೆ ಎಂದು ಕಾರ್ಯಕ್ರಮ ಸಂಚಾಲಕರಾದ ಶ್ರೀ ರಾಜರತ್ನ ಸನಿಲ್ ತಿಳಿಸಿದರು. ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಕೃಷ್ಣಪ್ಪ ಪೂಜಾರಿ, ಕಾರ್ಯದರ್ಶಿ ಶ್ರೀ ರಮಾನಂದ ಪೂಜಾರಿ, ಸದಸ್ಯರಾದ ಶ್ರೀ ಕೀರ್ತಿರಾಜ್, ಶ್ರೀ ಮೋನಪ್ಪ ಹಾಜರಿದ್ದರು. ಕಾರ್ಯದರ್ಶಿ ಶ್ರೀ ರಮಾನಂದ ಪೂಜಾರಿ ಸ್ವಾಗತಿಸಿದರು.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »