TOP STORIES:

FOLLOW US

ಪ್ರಾತಃಸ್ಮರಣೀಯ ದೇಯಿಬೈದೆತಿ,ಕೋಟಿಚೆನ್ನಯರ ಕಾರ್ಣಿಕಕ್ಕೆ ಶರಣಾಗಿ .


ಅಗಣಿತ ಮಹಿಮಾನ್ವಿತರಾದ ಕೋಟಿ ಚೆನ್ನಯರು ಹಾಗೂ ಮಾತೆ ದೇಯಿ ಬೈದೆತಿಯ ಪುಣ್ಯ ನೆಲೆಯಾದ ಶ್ರೀ ಕ್ಷೇತ್ರ ಗೆಜ್ಜೆಗಿರಿಯು ಸಮಸ್ತ ಆಸ್ತಿಕ ಬಂಧುಗಳ ಭಕ್ತಿ,ಶ್ರದ್ದೆ,ಇಚ್ಚಾಶಕ್ತಿಯ ಕ್ಷೇತ್ರವೆನಿಸಿ ಅಭೂತಪೂರ್ವ ಜೀರ್ಣೊದ್ದಾರದೊಂದಿಗೆ ಕಂಗೊಳಿಸುತ್ತಿರುವುದು ಧನ್ಯ ಸಂಗತಿ.ವಿಶ್ವ ಬಿಲ್ಲವರ ಸ್ವಾಭಿಮಾನದ ಪ್ರತೀಕವೆಂಬಂತೆ ಈ ಸ್ಥಾನ ಬಿಂಬಿತಗೊಂಡಿದ್ದೂ ಹೆಮ್ಮೆಯ ಅಂಶ.ಸಮಸ್ತ ಭಕ್ತರ ಪವಿತ್ರ ತಾಣವಾಗಿ ದಿನದಿಂದ ದಿನಕ್ಕೆ ಉತ್ತುಂಗ ಸ್ಥಿತಿಯಲ್ಲಿದ್ದ ಇಲ್ಲಿ ಪ್ರಸಕ್ತ ಆಡಳಿತಾತ್ಮಕ ವಿಚಾರದಲ್ಲಿ ನ್ಯಾಯಾಲಯದವರೆಗೆ ಹೋಗಿರುವಂತದ್ದು ಖೇಧಕರ.
ಅಭಿಪ್ರಾಯ ವ್ಯತ್ಯಾಸ ಸಾಮಾನ್ಯವಾಗಿ ಎಲ್ಲಾ ಕಡೆಗಳಲ್ಲಿ ಮತ್ತು ಎಲ್ಲರಲ್ಲಿ ಇರುವಂತದ್ದೆ.ಆದರೆ ಅದನ್ನೆ ಮುಖ್ಯವಾಗಿಸಿಕೊಂಡು ಹಠವಾದಿತನದ ಧೋರಣೆಯು ಸಮಸ್ತ ಭಕ್ತರಿಗೆ ಹಾಗೂ ಸಮಾಜಬಾಂಧವರಿಗೆ ನೋವಿನ ಸಂಗತಿ.ಇಡೀ ಸಮಾಜ ಹಲವಾರು ಒಳಿತಿನ ನಿರೀಕ್ಷೆಗಳನ್ನಿಟ್ಟುಕೊಂಡು ಮತ್ತು ಭಕ್ತಿಯ ನೆಲೆಯಲ್ಲಿ ತನುಮನಧನ ಸಹಕಾರ ನೀಡಿದ ಐತಿಹಾಸಿಕ ಸಂದರ್ಭಗಳನ್ನು ಮತ್ತು ಭವ್ಯ ಸಮಾರಂಭಗಳನ್ನು ಮರೆತು ಇದೀಗ ಪ್ರತಿಷ್ಠೆ ಮೆರೆಯಲು ಪ್ರಯತ್ನಿಸುತ್ತಿರುವುದು ಉತ್ತಮ ಬೆಳವಣಿಗೆಯಲ್ಲ.ನ್ಯಾಯಾಲಯ ಎಂದಾಕ್ಷಣ ಅಲ್ಲಿ ನಿಯಮಾನುಸಾರವಾಗಿ ವಾದ ಪ್ರತಿವಾದದ ಬೆಳವಣಿಗೆಗಳು ಯಾವ ದಿನ ಕೊನೆಯಾಗುತ್ತದೆ ಎಂಬುದು ಸ್ಪಷ್ಟವಿಲ್ಲದ ವಿಚಾರ.ಆದುದರಿಂದ ನಮ್ಮ ಮುಖಂಡರುಗಳಾಗಲಿ,ಸ್ಥಳಕ್ಕೆ ಸಂಬಂಧ ಪಟ್ಟವರಾಗಲಿ ಎಲ್ಲಾ ಆತುರ, ಆಕ್ರೋಶಗಳನ್ನು ಕರಗಿಸಿಕೊಂಡು ಪ್ರಾತಃಸ್ಮರಣೀಯ ದೇಯಿಬೈದೆತಿ,ಕೋಟಿಚೆನ್ನಯರ ಕಾರ್ಣಿಕಕ್ಕೆ ಶರಣಾಗಿ ಎಲ್ಲ ಭಿನ್ನಮತಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುವುದು ಸಮಂಜಸವಾಗಿದೆ.ಒಂದಷ್ಟು ಗೊಂದಲ ಹಾಗೂ ತಪ್ಪು ಸಂದೇಶಗಳು ಸಾರ್ವತ್ರಿಕಗೊಳ್ಳುವ ಮುಂಚೆಯೆ ನಮ್ಮ ನಡುವಿನ,ಸಹಮತ, ಸಹೋದರತ್ವ ಸಾಬೀತಾಗಲಿ.ನಾವೆಲ್ಲರೂ ಒಗ್ಗೂಡಿಕೊಂಡು ಒಳ್ಳೆಯ ಬೆಳವಣಿಗೆಗೆ ಸಾಕ್ಷಿಯಾಗೋಣ

ಪ್ರವೀಣ್ ಎಂ ಪೂಜಾರಿ
ಅಧ್ಯಕ್ಷರು
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ(ರಿ).


Share:

More Posts

Category

Send Us A Message

Related Posts

ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ


Share       ಉಡುಪಿ: ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇನ್ನು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈ ಲೋನಾವಾಲದ ಉದ್ಯಮಿ ಲೋಹಿತ್ ಪೂಜಾರಿ ಅವರೊಂದಿಗೆ 


Read More »

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ


Share       ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ


Read More »

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »