TOP STORIES:

ಫ್ರೆಂಡ್ಸ್ ಬಲ್ಲಾಳ್ ಬಾಗ್ “ಬಿರುವೆರ್ ಕುಡ್ಲದ ” ಉದಯಣ್ಣ ಓರ್ವ ವ್ಯಕ್ತಿಯಲ್ಲ ಸಮಾಜದ ಶಕ್ತಿ..


ಒಂದೇ ಜಾತಿ ಒಂದೇ ಮತ ಒಂದೇ ದೇವರುಎಂಬ ನೀತಿ ಸಂದೇಶವನ್ನು ವಿಶ್ವಕ್ಕೆ ಸಾರಿದ ಜಗದ್ಗುರು ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶವನ್ನು ಪಾಲಿಸಿಕೊಂಡು ಜನ ಸಾಮಾನ್ಯರ ಕಷ್ಟ ಕಾರ್ಪಣ್ಯಗಳಿಗೆ ಕರುಣೆ ಮಮತೆಯ ದೀವಿಗೆಯಾಗಿ ಸಮಾಜಸೇವೆಯನ್ನೇ ತನ್ನ ಉಸಿರಾಗಿಸಿಕೊಂಡು ಪರರ ನೋವು ನಲಿವುಗಳಿಗೆ ಧ್ವನಿಯಾಗಿ ಕಷ್ಟ ಎಂದು ಕಂಬನಿ ಮಿಡಿಯುವ ಮನಗಳಿಗೆಅವರ ಕಣ್ಣೀರೋರೆಸಿ ಮನ  ಮನೆಯಲ್ಲಿ ನಂದಾದೀಪ ಬೆಳಗಿಸಿದವೇ ನಮ್ಮ ಪ್ರೀತಿಯ ಬಿರುವೆರ್ ಕುಡ್ಲ ಸಂಘಟನೆಯ ರೂವಾರಿಉದಯ ಪೂಜಾರಿ ಬಲ್ಲಾಳ್ ಬಾಗ್.

ಆಡಡೆಲೆ ಮಾಡುವವನು ರೂಢಿಯೊಳಗುತ್ತಮಎನ್ನುವ ಸರ್ವಜ್ಞನ ಸಾರದಂತೆ ಯಾವುದೇ ಸದ್ದುಗದ್ದಲವಿಲ್ಲದೆ ಸಮಾಜದಸೇವೆಗಾಗಿ ತನ್ನ ಜೀವನವನ್ನು ಮುಡಿಪಾಗಿಟ್ಟವರು. ಮಾತ್ರವಲ್ಲದೆ ಸಮಾಜ ಒದಗಿಸಿರೋ ಅವಕಾಶವನ್ನು ಸಮಾಜದ ಸೇವೆಗಾಗಿಮೀಸಲಾಗಿಟ್ಟವರು.

ಬಿರುವೆರ್ ಕುಡ್ಲ ಸ್ಥಾಪನೆಯಾಗಿ 7ವರ್ಷ ಕಳೆದಿಲ್ಲ ಆದರೆ ಕಡಿಮೆ ಅವಧಿಯಲ್ಲಿ ಮಹತ್ತರವಾದ ಸೇವೆಯ ಮುಖೇನ ಸುಮಾರು20 ಘಟಕಗಳನ್ನು ಸ್ಥಾಪಿಸಿ  ಕೋಟ್ಯಾತರ ರೂಪಾಯಿ ಮೊತ್ತದ  ಸಹಾಯಹಸ್ತವನ್ನು ಸಮಾಜದ ಬಡ ಜನರಿಗಾಗಿ ನೀಡಿರುವುದುಮಾತ್ರವಲ್ಲದೆ ಕೊರೊನಾ ಮಹಾಮಾರಿಯಿಂದ ಜನತೆ ತತ್ತರಿಸುತ್ತಿರುವ ಸಂಧರ್ಭದಲ್ಲಿ ಲಕ್ಷಾಂತರ ರೂಪಾಯಿ ಮೊತ್ತದ ಆಂಬುಲೆನ್ಸ್ನ್ನು ಜನರ ಸೇವೆಗಾಗಿ ನೀಡಿದ್ದು ಒಂದು ದಾಖಲೆಯೇ ಸರಿ. ಇಂತಹ ಸಮಾಜಮುಖಿ ಚಿಂತನೆಯ ಫ್ರೆಂಡ್ಸ್ ಬಲ್ಲಾಳ್ ಬಾಗ್ಬಿರುವೆರ್ ಕುಡ್ಲ ಸಂಘಟನೆಯ  ಕೀರ್ತಿ,  ಶ್ರೇಯಸ್ಸನ್ನು ಕಂಡು ಕೆಲವರಿಗೆ ಸಹಿಸಲಾಗಲಿಲ್ಲವೋ ಏನೋ, ಅದಕ್ಕಾಗಿಯೇ ಸಂಚುರೂಪಿಸಿ ಸಂಘಟನೆಯ ಹೆಸರಿಗೆ ಕಪ್ಪು ಚುಕ್ಕಿ ತರುವ ಪ್ರಯತ್ನ ಮಾಡುತ್ತಿರುವುದು ಅವರ ಕೀಳು ಮನಸ್ಥಿತಿಯನ್ನು ಎತ್ತಿತೋರಿಸುತ್ತದೆ.

ನಿಟ್ಟಿನಲ್ಲಿ ಶರಣ್ ಪಂಪ್ ವೆಲ್ ಅವರು ಬಿರುವೆರ್ ಕುಡ್ಲದ ಸಾಧನೆ  ಸೇವೆ ಕಣ್ಣಿಗೆ ಬಿದ್ದರೂ ಅರಗಿಸಿಕೊಳ್ಳಲಾಗಲ್ಲಿವೇನೋಅನಿಸುತ್ತಿದೆ. ಶರಣ್ ಅಣ್ಣ ನಿಮ್ಮ ಹಿಂದೂಪರ ಹೋರಾಟದ ಬಗ್ಗೆ ನಮಗೆ ತುಂಬಾ ಅಭಿಮಾನ ಹೆಮ್ಮೆ ಇತ್ತು.. ಗೌರವ ಇತ್ತು.. ಆದರೆಈಗ ನೀವು ಬಿರುವೆರ್ ಕುಡ್ಲ ಸಂಘಟನೆಯ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿ ಪ್ರತಿಭಟಿಸುದನ್ನು ಕಂಡು ಅದೆಲ್ಲವನ್ನೂಕಳೆದಕೊಂಡಿರಿ..

ಒಂದು ಜಾತಿ ಧರ್ಮ, ಸಮುದಾಯವನ್ನು ಮೀರಿ ಬೆಳೆದು ನಿಂತು ಎಲ್ಲಾ ಸಮಾಜದ ಪ್ರೀತಿಗೆ ಪಾತ್ರರಾದ ಬಿರುವೆರ್ ಕುಡ್ಲಸಂಘಟನೆಯ ಬಗ್ಗೆ ಅನವಶ್ಯಕವಾಗಿ ಆರೋಪ ಮಾಡಿದ ಹಿನ್ನಲೆಯಲ್ಲಿ  ಅದರ ಹಿಂದಿರುವ ಕಾಣದ ಕೈಗಳ ಕೈವಾಡಖಂಡಿತವಾಗಿಯೂ ಒಂದಲ್ಲ ಒಂದು ದಿನ ಜನರ ಮುಂದೆ ಬರುತ್ತದೆ.

ಪಂಪ್ ವೆಲ್ ರವರೆ ಒಮ್ಮೆ ಯೋಚಿಸಿ ಶುಭ ಮಂಗಳ ಕಾರ್ಯದ ಸಮಯದಲ್ಲಿಉದಯಣ್ಣ ಸ್ಥಾನದಲ್ಲಿ ನೀವಿರುತ್ತಿದ್ದರೆಹೇಗಾಗುತ್ತಿತ್ತು!!!!!!!! ಎಂದು. ಕನಿಷ್ಠ ಮಾನವೀಯತೆಯನ್ನೂ ಮರೆತು ನೀವು ರೀತಿ ಮಾಡುತ್ತಿರುವುದು ಬಿರುವೆರ್ ಕುಡ್ಲಸಂಘಟನೆ ಮಾತ್ರವಲ್ಲ ಲಕ್ಷಾಂತರ ತುಳು ಕನ್ನಡಿಗ ಉದಯಣ್ಣನ ಅಭಿಮಾನಿ ಬಳಗಕ್ಕೆ ಅತೀವ ನೋವಾಗಿದೆ.

ಶರಣ್ ರವರೆ,…. ಹಣ ಅಧಿಕಾರ ಅಂತಸ್ತು ಯಾವುದೂ ಶಾಶ್ವತವಲ್ಲ ಆದರೇ ಎಲ್ಲಕ್ಕಿಂತ ಮಿಗಿಲಾದುದು ಮಾನವೀಯತೆ, ಮಾನವೀಯ ಮೌಲ್ಯಗಳುಅದನ್ನು ತುಳಿದು ನಡೆಯಬೇಡಿ….

ನಮ್ಮಂತಹ ನೂರಾರು ಜನರಿಗೆ ನಿಮ್ಮ ಮೇಲೆ ಗೌರವ ಅಭಿಮಾನ ವಿತ್ತು ಆದರೆ ಅರ್ಹತೆಯನ್ನು ನಿಮ್ಮ ಕೀಳುಮಟ್ಟದರಾಜಕಾರಣದಿಂದ ಮಣ್ಣುಪಾಲು ಮಾಡಿದಿರಿ.. ಎಲ್ಲದಕ್ಕೂ ಭಗವಂತ ಹಾಗೂ ತುಳುನಾಡಿನ ಸತ್ಯಗಳು ನಿಮಗೆ ಒಳ್ಳೆಯ ಬುದ್ದಿನೀಡಲಿ ಎಂದು ಆಶಿಸುತ್ತೇವೆ.

ಉದಯಣ್ಣ ಸತ್ಯಕ್ಕೆ ಜಯವಿದೆ.

ನಿಮ್ಮೊಂದಿಗೆ ನಾವಿದ್ದೇವೆ

ಪ್ರೀತಿ ಅಭಿಮಾನ ಗೌರವ ಅನವರತ….

ಜೈ ಬಿರುವೆರ್ ಕುಡ್ಲ ಜೈ ಉದಯಣ್ಣ..

✒️ಪ್ರಭಾಕರ ಬೆಳುವಾಯಿ

(ನಮನ ಫ್ರೆಂಡ್ಸ್ ಮುಂಬಯಿ)


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »