TOP STORIES:

ಬಂಟ್ವಾಳ : ಬಿರುವೆರ್ ಕುಡ್ಲ ಮಹಾ ಸೇವಾ ಯೋಜನೆಯ ಅಡಿಯಲ್ಲಿ ನಿರ್ಮಿಸಲಾದ ನೂತನ ಸುಸಜ್ಜಿತ ಮನೆಯ ಹಸ್ತಾಂತರ


ಬಂಟ್ವಾಳ:   ಬಿರುವೆರ್ ಕುಡ್ಲ ಇದರ ಮಹಾ ಸೇವಾ ಯೋಜನೆಯ ಅಂಗವಾಗಿ ಬಂಟ್ವಾಳದ ಭಂಡಾರಿ ಬೆಟ್ಟುವಿನಲ್ಲಿ ಬಡಕುಟುಂಬದ ಲಿಂಗಪ್ಪ ದಂಪತಿಗಳಿಗೆ ಸುಸಜ್ಜಿತ ಮನೆ ನಿರ್ಮಿಸಿದ್ದು ಬುಧವಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಕಷ್ಟ ಕಣ್ಣೀರಿನಲ್ಲಿರುವವರಿಗೆ ನೆರವು ನೀಡುವುದೇ ಭಗವಂತನ ಪೂಜೆಯಾಗಿದ್ದು, ಬ್ರಹ್ಮಶ್ರೀ ನಾರಾಯಣ ಗುರುಗಳು ಕೂಡ ಇದನ್ನೇ ಪ್ರತಿಪಾದಿಸಿದ್ದರು‌. ಒಂದು ಸರಕಾರ ಮಾಡುವ ಕಾರ್ಯವನ್ನು ಬಿರುವೆರ್ ಕುಡ್ಲ ಮಾಡುತ್ತಿದೆ ಎಂದು ದ.ಕ.ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.

 

ಬಂಟ್ವಾಳ:   ಬಿರುವೆರ್ ಕುಡ್ಲ ಇದರ ಮಹಾ ಸೇವಾ ಯೋಜನೆಯ ಅಂಗವಾಗಿ ಬಂಟ್ವಾಳದ ಭಂಡಾರಿ ಬೆಟ್ಟುವಿನಲ್ಲಿ ಬಡಕುಟುಂಬದ ಲಿಂಗಪ್ಪ ದಂಪತಿಗಳಿಗೆ ಸುಸಜ್ಜಿತ ಮನೆ ನಿರ್ಮಿಸಿದ್ದು ಬುಧವಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಬಿಜೆಪಿ ರಾಜ್ಯಾಧ್ಯಕ್ಷ  ನಳಿನ್ ಕುಮಾರ್ ಕಟೀಲ್ ಅವರು ಮನೆ ಹಸ್ತಾಂತರಿಸಿದರು.ಬಳಿಕ ಮಾತನಾಡಿದ ಅವರು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯಪೂಜಾರಿ ನೇತೃತ್ವದಲ್ಲಿ ಸಂಘಟನೆಯ ಯುವಕರು ಮಾದರಿ ಕೆಲಸ ಮಾಡುತ್ತಿದ್ದಾರೆ.

ಯಾವುದೇ ಒಳ್ಳೆಯ ಕೆಲಸ ಮಾಡುವಾಗ ಟೀಕೆ ಸಹಜ.ಅದನ್ನು ಎದುರಿಸಿಕೊಂಡೇ ಇಂದು ಈ ಸಂಘಟನೆ ಈ ಮಟ್ಟಕ್ಕೆ ಬೆಳೆದಿದೆ.ಬಡವರಿಗೆ ಸೇವೆ ಮಾಡುವುದೂ ಕೂಡ ದೇವರ ಪೂಜಾ ಕಾರ್ಯ ಎನಿಸಿಕೊಳ್ಳುತ್ತದೆ.ಸರಕಾರ ಮಾಡಬೇಕಾದ ಕೆಲಸ ಬಿರುವೆರ್ ಕುಡ್ಲದಿಂದ ನಡೆದಿದೆ.ಈ ಸಂಘಟನೆ ರಾಜ್ಯ ಮಟ್ಟದಲ್ಲಿ ಬೆಳೆಯಲಿ ಎಂದು ಹಾರೈಸಿದರು.

ಬಿಜೆಪಿ ದ.ಕ ಜಿಲ್ಲಾಧ್ಯಕ್ಷ  ಸುದರ್ಶನ್ , ಬಂಟ್ವಾಳ ಶಾಸಕ ರಾಜೇಶ್ ನೈ್ಕ್ ,ನ್ಯಾಯವಾದಿ ಪ್ರಸಾದ್ ,ಮತ್ತಿತರರು ಶುಭ ಹಾರೈಸಿದರು. ಬಿರುವೆರ್ ಕುಡ್ಲದ ಮಹಿಳಾ ಘಟಕ ಸಹಿತ  22 ಘಟಕಗಳು ಸಂಯುಕ್ತವಾಗಿ ಸೇರಿ ಈ ಮಹಾ ಸೇವಾ ಯೋಜನೆ ಕಾರ್ಯ ಹಮ್ಮಿಕೊಂಡಿದೆ.ಬಂಟ್ವಾಳದಲ್ಲಿ  ನಿರ್ಮಿಸಿದ ಮನೆ 5ನೇಯದ್ದಾಗಿದೆ.ಇದರ ಜತೆಗೆ ಇತೃ 500ಕ್ಕೂ ಅಧಿಕ ಸಮಾಜಮುಖೀ ಸೇವಾ ಯೋಜನೆ ಮಾಡಿದೆ.ಉದಯ ಪೂಜಾರಿ ನೇತೃತ್ವದಲ್ಲಿ ಪ್ರಧಾನ ಸಂಘಟನೆ ಈಗಾಗಲೇ ಅಂದಾಜು 2 ಕೋಟಿಗೂ ಮಿಕ್ಕಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕುಟುಂಬದ ಆರೋಗ್ಯ ಚಿಕಿತ್ಸೆಗೆ,ವಿಕಲ ಚೇತನರಿಗೆ  ಗಾಲಿ ಕುರ್ಚಿ,ಶಿಕ್ಷಣಕ್ಕೆ  ಮತ್ತಿತರ ಯೋಜನೆಗೆ ವಿತರಿಸಿದೆ.ಸಂಘಟನೆಯ ಸದಸ್ಯರ,ದಾನಿಗಳ ನೆರವಿನಿಂದ  ನಿರಂತರವಾಗಿ ಸಮಾಜದಲ್ಲಿ ಕಳೆದ 7 ವರ್ಷಗಳಲ್ಲಿ  ಸೇವಾ ನಿರತವಾಗಿದೆ.ಕಾರ್ಯಕ್ರಮದಲ್ಲಿ ವಸಂತಪೂಜಾರಿ,ಬುಡಾ ಅಧ್ಯಕ್ಷರು,ಬಿರುವೆರ್ ಕುಡ್ಲ ಸ್ಥಾಪಕ ಉದಯಪೂಜಾರಿ,ಸಂಘಟಕ ಚಂದ್ರಕುಮಾರ್, ಮತ್ತಿತರರು ಉಪಸ್ಥಿತರಿದ್ದರು


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »