TOP STORIES:

FOLLOW US

ಬಂಟ್ವಾಳ : ಬಿರುವೆರ್ ಕುಡ್ಲ ಮಹಾ ಸೇವಾ ಯೋಜನೆಯ ಅಡಿಯಲ್ಲಿ ನಿರ್ಮಿಸಲಾದ ನೂತನ ಸುಸಜ್ಜಿತ ಮನೆಯ ಹಸ್ತಾಂತರ


ಬಂಟ್ವಾಳ:   ಬಿರುವೆರ್ ಕುಡ್ಲ ಇದರ ಮಹಾ ಸೇವಾ ಯೋಜನೆಯ ಅಂಗವಾಗಿ ಬಂಟ್ವಾಳದ ಭಂಡಾರಿ ಬೆಟ್ಟುವಿನಲ್ಲಿ ಬಡಕುಟುಂಬದ ಲಿಂಗಪ್ಪ ದಂಪತಿಗಳಿಗೆ ಸುಸಜ್ಜಿತ ಮನೆ ನಿರ್ಮಿಸಿದ್ದು ಬುಧವಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಕಷ್ಟ ಕಣ್ಣೀರಿನಲ್ಲಿರುವವರಿಗೆ ನೆರವು ನೀಡುವುದೇ ಭಗವಂತನ ಪೂಜೆಯಾಗಿದ್ದು, ಬ್ರಹ್ಮಶ್ರೀ ನಾರಾಯಣ ಗುರುಗಳು ಕೂಡ ಇದನ್ನೇ ಪ್ರತಿಪಾದಿಸಿದ್ದರು‌. ಒಂದು ಸರಕಾರ ಮಾಡುವ ಕಾರ್ಯವನ್ನು ಬಿರುವೆರ್ ಕುಡ್ಲ ಮಾಡುತ್ತಿದೆ ಎಂದು ದ.ಕ.ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.

 

ಬಂಟ್ವಾಳ:   ಬಿರುವೆರ್ ಕುಡ್ಲ ಇದರ ಮಹಾ ಸೇವಾ ಯೋಜನೆಯ ಅಂಗವಾಗಿ ಬಂಟ್ವಾಳದ ಭಂಡಾರಿ ಬೆಟ್ಟುವಿನಲ್ಲಿ ಬಡಕುಟುಂಬದ ಲಿಂಗಪ್ಪ ದಂಪತಿಗಳಿಗೆ ಸುಸಜ್ಜಿತ ಮನೆ ನಿರ್ಮಿಸಿದ್ದು ಬುಧವಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಬಿಜೆಪಿ ರಾಜ್ಯಾಧ್ಯಕ್ಷ  ನಳಿನ್ ಕುಮಾರ್ ಕಟೀಲ್ ಅವರು ಮನೆ ಹಸ್ತಾಂತರಿಸಿದರು.ಬಳಿಕ ಮಾತನಾಡಿದ ಅವರು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯಪೂಜಾರಿ ನೇತೃತ್ವದಲ್ಲಿ ಸಂಘಟನೆಯ ಯುವಕರು ಮಾದರಿ ಕೆಲಸ ಮಾಡುತ್ತಿದ್ದಾರೆ.

ಯಾವುದೇ ಒಳ್ಳೆಯ ಕೆಲಸ ಮಾಡುವಾಗ ಟೀಕೆ ಸಹಜ.ಅದನ್ನು ಎದುರಿಸಿಕೊಂಡೇ ಇಂದು ಈ ಸಂಘಟನೆ ಈ ಮಟ್ಟಕ್ಕೆ ಬೆಳೆದಿದೆ.ಬಡವರಿಗೆ ಸೇವೆ ಮಾಡುವುದೂ ಕೂಡ ದೇವರ ಪೂಜಾ ಕಾರ್ಯ ಎನಿಸಿಕೊಳ್ಳುತ್ತದೆ.ಸರಕಾರ ಮಾಡಬೇಕಾದ ಕೆಲಸ ಬಿರುವೆರ್ ಕುಡ್ಲದಿಂದ ನಡೆದಿದೆ.ಈ ಸಂಘಟನೆ ರಾಜ್ಯ ಮಟ್ಟದಲ್ಲಿ ಬೆಳೆಯಲಿ ಎಂದು ಹಾರೈಸಿದರು.

ಬಿಜೆಪಿ ದ.ಕ ಜಿಲ್ಲಾಧ್ಯಕ್ಷ  ಸುದರ್ಶನ್ , ಬಂಟ್ವಾಳ ಶಾಸಕ ರಾಜೇಶ್ ನೈ್ಕ್ ,ನ್ಯಾಯವಾದಿ ಪ್ರಸಾದ್ ,ಮತ್ತಿತರರು ಶುಭ ಹಾರೈಸಿದರು. ಬಿರುವೆರ್ ಕುಡ್ಲದ ಮಹಿಳಾ ಘಟಕ ಸಹಿತ  22 ಘಟಕಗಳು ಸಂಯುಕ್ತವಾಗಿ ಸೇರಿ ಈ ಮಹಾ ಸೇವಾ ಯೋಜನೆ ಕಾರ್ಯ ಹಮ್ಮಿಕೊಂಡಿದೆ.ಬಂಟ್ವಾಳದಲ್ಲಿ  ನಿರ್ಮಿಸಿದ ಮನೆ 5ನೇಯದ್ದಾಗಿದೆ.ಇದರ ಜತೆಗೆ ಇತೃ 500ಕ್ಕೂ ಅಧಿಕ ಸಮಾಜಮುಖೀ ಸೇವಾ ಯೋಜನೆ ಮಾಡಿದೆ.ಉದಯ ಪೂಜಾರಿ ನೇತೃತ್ವದಲ್ಲಿ ಪ್ರಧಾನ ಸಂಘಟನೆ ಈಗಾಗಲೇ ಅಂದಾಜು 2 ಕೋಟಿಗೂ ಮಿಕ್ಕಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕುಟುಂಬದ ಆರೋಗ್ಯ ಚಿಕಿತ್ಸೆಗೆ,ವಿಕಲ ಚೇತನರಿಗೆ  ಗಾಲಿ ಕುರ್ಚಿ,ಶಿಕ್ಷಣಕ್ಕೆ  ಮತ್ತಿತರ ಯೋಜನೆಗೆ ವಿತರಿಸಿದೆ.ಸಂಘಟನೆಯ ಸದಸ್ಯರ,ದಾನಿಗಳ ನೆರವಿನಿಂದ  ನಿರಂತರವಾಗಿ ಸಮಾಜದಲ್ಲಿ ಕಳೆದ 7 ವರ್ಷಗಳಲ್ಲಿ  ಸೇವಾ ನಿರತವಾಗಿದೆ.ಕಾರ್ಯಕ್ರಮದಲ್ಲಿ ವಸಂತಪೂಜಾರಿ,ಬುಡಾ ಅಧ್ಯಕ್ಷರು,ಬಿರುವೆರ್ ಕುಡ್ಲ ಸ್ಥಾಪಕ ಉದಯಪೂಜಾರಿ,ಸಂಘಟಕ ಚಂದ್ರಕುಮಾರ್, ಮತ್ತಿತರರು ಉಪಸ್ಥಿತರಿದ್ದರು


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »