TOP STORIES:

ಬಂಟ್ವಾಳ : ಬಿರುವೆರ್ ಕುಡ್ಲ ಮಹಾ ಸೇವಾ ಯೋಜನೆಯ ಅಡಿಯಲ್ಲಿ ನಿರ್ಮಿಸಲಾದ ನೂತನ ಸುಸಜ್ಜಿತ ಮನೆಯ ಹಸ್ತಾಂತರ


ಬಂಟ್ವಾಳ:   ಬಿರುವೆರ್ ಕುಡ್ಲ ಇದರ ಮಹಾ ಸೇವಾ ಯೋಜನೆಯ ಅಂಗವಾಗಿ ಬಂಟ್ವಾಳದ ಭಂಡಾರಿ ಬೆಟ್ಟುವಿನಲ್ಲಿ ಬಡಕುಟುಂಬದ ಲಿಂಗಪ್ಪ ದಂಪತಿಗಳಿಗೆ ಸುಸಜ್ಜಿತ ಮನೆ ನಿರ್ಮಿಸಿದ್ದು ಬುಧವಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಕಷ್ಟ ಕಣ್ಣೀರಿನಲ್ಲಿರುವವರಿಗೆ ನೆರವು ನೀಡುವುದೇ ಭಗವಂತನ ಪೂಜೆಯಾಗಿದ್ದು, ಬ್ರಹ್ಮಶ್ರೀ ನಾರಾಯಣ ಗುರುಗಳು ಕೂಡ ಇದನ್ನೇ ಪ್ರತಿಪಾದಿಸಿದ್ದರು‌. ಒಂದು ಸರಕಾರ ಮಾಡುವ ಕಾರ್ಯವನ್ನು ಬಿರುವೆರ್ ಕುಡ್ಲ ಮಾಡುತ್ತಿದೆ ಎಂದು ದ.ಕ.ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.

 

ಬಂಟ್ವಾಳ:   ಬಿರುವೆರ್ ಕುಡ್ಲ ಇದರ ಮಹಾ ಸೇವಾ ಯೋಜನೆಯ ಅಂಗವಾಗಿ ಬಂಟ್ವಾಳದ ಭಂಡಾರಿ ಬೆಟ್ಟುವಿನಲ್ಲಿ ಬಡಕುಟುಂಬದ ಲಿಂಗಪ್ಪ ದಂಪತಿಗಳಿಗೆ ಸುಸಜ್ಜಿತ ಮನೆ ನಿರ್ಮಿಸಿದ್ದು ಬುಧವಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಬಿಜೆಪಿ ರಾಜ್ಯಾಧ್ಯಕ್ಷ  ನಳಿನ್ ಕುಮಾರ್ ಕಟೀಲ್ ಅವರು ಮನೆ ಹಸ್ತಾಂತರಿಸಿದರು.ಬಳಿಕ ಮಾತನಾಡಿದ ಅವರು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯಪೂಜಾರಿ ನೇತೃತ್ವದಲ್ಲಿ ಸಂಘಟನೆಯ ಯುವಕರು ಮಾದರಿ ಕೆಲಸ ಮಾಡುತ್ತಿದ್ದಾರೆ.

ಯಾವುದೇ ಒಳ್ಳೆಯ ಕೆಲಸ ಮಾಡುವಾಗ ಟೀಕೆ ಸಹಜ.ಅದನ್ನು ಎದುರಿಸಿಕೊಂಡೇ ಇಂದು ಈ ಸಂಘಟನೆ ಈ ಮಟ್ಟಕ್ಕೆ ಬೆಳೆದಿದೆ.ಬಡವರಿಗೆ ಸೇವೆ ಮಾಡುವುದೂ ಕೂಡ ದೇವರ ಪೂಜಾ ಕಾರ್ಯ ಎನಿಸಿಕೊಳ್ಳುತ್ತದೆ.ಸರಕಾರ ಮಾಡಬೇಕಾದ ಕೆಲಸ ಬಿರುವೆರ್ ಕುಡ್ಲದಿಂದ ನಡೆದಿದೆ.ಈ ಸಂಘಟನೆ ರಾಜ್ಯ ಮಟ್ಟದಲ್ಲಿ ಬೆಳೆಯಲಿ ಎಂದು ಹಾರೈಸಿದರು.

ಬಿಜೆಪಿ ದ.ಕ ಜಿಲ್ಲಾಧ್ಯಕ್ಷ  ಸುದರ್ಶನ್ , ಬಂಟ್ವಾಳ ಶಾಸಕ ರಾಜೇಶ್ ನೈ್ಕ್ ,ನ್ಯಾಯವಾದಿ ಪ್ರಸಾದ್ ,ಮತ್ತಿತರರು ಶುಭ ಹಾರೈಸಿದರು. ಬಿರುವೆರ್ ಕುಡ್ಲದ ಮಹಿಳಾ ಘಟಕ ಸಹಿತ  22 ಘಟಕಗಳು ಸಂಯುಕ್ತವಾಗಿ ಸೇರಿ ಈ ಮಹಾ ಸೇವಾ ಯೋಜನೆ ಕಾರ್ಯ ಹಮ್ಮಿಕೊಂಡಿದೆ.ಬಂಟ್ವಾಳದಲ್ಲಿ  ನಿರ್ಮಿಸಿದ ಮನೆ 5ನೇಯದ್ದಾಗಿದೆ.ಇದರ ಜತೆಗೆ ಇತೃ 500ಕ್ಕೂ ಅಧಿಕ ಸಮಾಜಮುಖೀ ಸೇವಾ ಯೋಜನೆ ಮಾಡಿದೆ.ಉದಯ ಪೂಜಾರಿ ನೇತೃತ್ವದಲ್ಲಿ ಪ್ರಧಾನ ಸಂಘಟನೆ ಈಗಾಗಲೇ ಅಂದಾಜು 2 ಕೋಟಿಗೂ ಮಿಕ್ಕಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕುಟುಂಬದ ಆರೋಗ್ಯ ಚಿಕಿತ್ಸೆಗೆ,ವಿಕಲ ಚೇತನರಿಗೆ  ಗಾಲಿ ಕುರ್ಚಿ,ಶಿಕ್ಷಣಕ್ಕೆ  ಮತ್ತಿತರ ಯೋಜನೆಗೆ ವಿತರಿಸಿದೆ.ಸಂಘಟನೆಯ ಸದಸ್ಯರ,ದಾನಿಗಳ ನೆರವಿನಿಂದ  ನಿರಂತರವಾಗಿ ಸಮಾಜದಲ್ಲಿ ಕಳೆದ 7 ವರ್ಷಗಳಲ್ಲಿ  ಸೇವಾ ನಿರತವಾಗಿದೆ.ಕಾರ್ಯಕ್ರಮದಲ್ಲಿ ವಸಂತಪೂಜಾರಿ,ಬುಡಾ ಅಧ್ಯಕ್ಷರು,ಬಿರುವೆರ್ ಕುಡ್ಲ ಸ್ಥಾಪಕ ಉದಯಪೂಜಾರಿ,ಸಂಘಟಕ ಚಂದ್ರಕುಮಾರ್, ಮತ್ತಿತರರು ಉಪಸ್ಥಿತರಿದ್ದರು


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »