TOP STORIES:

FOLLOW US

ಬಂಬ್ರಾಣ ಕೊಟ್ಯದ ಮನೆ ”ಆನೆ ಬೈದ್”ಯ ಬಿರುದಾಂಕಿತ ನಾರಾಯಣ ಪೂಜಾರಿಯವರ 70 ನೇ ಹುಟ್ಟುಹಬ್ಬ ಆಚರಣೆ


ಕಾಸರಗೋಡು ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ಧಾರ್ಮಿಕ ಕ್ಷೇತ್ರಗಳಲ್ಲಿ ಕಳೆದ 30 ವರ್ಷಗಳಿಂದ ಸಕ್ರಿಯವಾಗಿ ಪಾಲ್ಗೊಂಡು ಮಾರ್ಗದರ್ಶನ ನೀಡುತ್ತಾ ಸಮಾಜ ಸೇವೆಯನ್ನು ಮಾಡುತ್ತಿರುವ ಕುಂಬಳೆ ಸಮೀಪದ ಬಂಬ್ರಾಣ ಕೊಟ್ಯದ ಮನೆ “ಆನೆ ವೈದ್ಯ ” ಬಿರುದಾಂಕಿತ ಶ್ರೀ ನಾರಾಯಣ ಪೂಜಾರಿ ಯವರ 70ನೇ ಹುಟ್ಟುಹಬ್ಬದ ಅಂಗವಾಗಿ 20-02-2022 ಭಾನುವಾರ ಬಂಬ್ರಾಣ ಕೊಟ್ಯದ ಮನೆಯಲ್ಲಿ ಭೀಮರಥ ಶಾಂತಿ, ಸತ್ಯನಾರಾಯಣ ಪೂಜೆ, ನಾಗತಂಬಿಲ.. ಹೀಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ,ಅಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ವರ್ಕಳ ಶಿವಗಿರಿ ಮಠದ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಿದರು.

ಕ್ಷೇತ್ರದ ತಂತ್ರಿ ವರ್ಯರಾದ ಬ್ರಹ್ಮ ಶ್ರೀ ಚಕ್ರಪಾಣಿ ದೇವಪೂಜಿತ್ತಾಯರ ಮಾರ್ಗದರ್ಶನದಂತೆ ಜರಗಿದ ಈ ಕಾರ್ಯಕ್ರಮದಲ್ಲಿ, ಕುದ್ರೋಳಿ ಗೋಕರ್ಣನಾಥೆಶ್ವರ ಕ್ಷೇತ್ರದ ಕೋಶಾಧಿಕಾರಿ ಹಾಗೂ ಗುರುಬೆಳದಿಂಗಳು(ರಿ) ಅಧ್ಯಕ್ಷರಾದ ಶ್ರೀ ಪದ್ಮರಾಜ್. ಆರ್. ರವರು ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ನೂತನ ವಿಧ್ಯಾನಿಧಿ ಟ್ರಸ್ಟ್ ಗೆ ಚಾಲನೆ ನೀಡಿದರು.

ವೇದಿಕೆಯಲ್ಲಿ ಖ್ಯಾತ ರಂಗ ಭೂಮಿ ಹಾಗೂ ಚಲನ ಚಿತ್ರ ನಟರಾದ ಶ್ರೀ ಅರವಿಂದ ಬೋಳಾರ್, ಶ್ರೀ ಸಂಜೀವ ಪೂಜಾರಿ ಕೂರೇಲು, ಶ್ರೀ ಪಿ ಮುರಲೀಧರನ್ ನ್ಯಾಯವಾದಿ , ವಾರ್ಡ್ ಸದಸ್ಯ ಶ್ರೀ ಮೋಹನ್ ಬಂಬ್ರಾಣ , ಡಾl ರವೀಶ್ ಪಡುಮಲೆ, ಶ್ರೀ ವಿಶ್ವನಾಥ್ ಕೆಮ್ಮಣ್ಣು ರವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ 70 ರ “ಸಪ್ತತಿ ಸಂಭ್ರಮ “ದ ಸವಿ ನೆನಪಿಗಾಗಿ 70 ಔಷಧೀಯ ಗುಣವುಳ್ಳ ಸಸ್ಯವನ್ನು ವಿತರಣೆ ಮಾಡಲಾಯಿತು.

ಸಮಾಜದ ಪ್ರಮುಖ ಸಾಧಕರಾದ ಕುಟುಂಬದ ಸದಸ್ಯರಾಗಿರುವ ಪೊಲೀಸ್ ಇಲಾಖೆಯಲ್ಲಿ ದಕ್ಷ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಮಂಗಳೂರಿನ
ಸಹಾಯಕ ಪೊಲೀಸ್ ನಿರ್ದೇಶಕರಾದ ಶ್ರೀ ಕುಮಾರ ಚಂದ್ರ ರವರನ್ನು, ಲಕ್ಷಾಂತರ ಗಿಡಗಳನ್ನು ನೆಟ್ಟು ಪರಿಸರವನ್ನು ಹಸಿರಾಗಿರುವಲ್ಲಿ ತೆರೆ ಮರೆಯಲ್ಲಿ ಶ್ರಮಿಸುತ್ತಿರುವ ಪರಿಸರ ಪ್ರೇಮಿ ಶ್ರೀ ಮಾಧವ ಉಳ್ಳಾಲ, ಯಕ್ಷರಂಗದ ಯಕ್ಷಗಾನ ಕಲಾವಿದರಾಗಿ ಕಟೀಲು 1ನೇ ಮೇಳದಲ್ಲಿ ದೇವಿಯ ಪಾತ್ರವನ್ನು ನಿರ್ವಹಿಸುತ್ತಿರುವ ಶ್ರೀ ರಾಜೇಶ್ ಬೆಳ್ಳಾರೆ, ಕಂಬಳದಲ್ಲಿ ಅಪ್ರತಿಮ ಸಾಧನೆ ಗೈದು ಸತತವಾಗಿ 3 ಬಾರಿ ಬಹುಮಾನ ಗಳನ್ನು ಬಾಚಿ ಕೊಳ್ಳುವಲ್ಲಿ ಯಶಸ್ವಿಯಾದ ವಂದಿತ್ ಶೆಟ್ಟಿ ಬಂಬ್ರಾಣ,
ಭಾರತ ಮಾತೆಯ ವೀರ ಸೇನಾನಿಯಾಗಿ ಕಾರ್ತಿಕ್ ಬೆಳ್ಳೂರು ರವರನ್ನು ಸೇರಿ 5 ಸಾಧಕರನ್ನು ಗೌರವಿಸಲಾಯಿತು. ಕಾರ್ಯಕ್ರಮವನ್ನು ರಾಮ್ ಕುಮಾರ್ ಮುಂಡಿತಡ್ಕ, ಹಾಗೂ ರಮೇಶ್ ಬಾಳ್ಯ್ ರು ರವರು ನಿರೂಪಿಸಿ, ಹೇಮಾನಾಥ್ ಮೈತಡ್ಕ ರವರು ವಂದಿಸಿದರು.

 


Share:

More Posts

Category

Send Us A Message

Related Posts

ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಸಂಘದ ನೂತನ ಅಧ್ಯಕ್ಷರಾದ ಶ್ರೀಮತಿ ಅಪರ್ಣ ಶರತ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 26.02.2025 ರಂದು ಕತಾರ್ ನ ಐ. ಸಿ. ಸಿ. ಮುಂಬೈ ಹಾಲ್ ನಲ್ಲಿ  ಶ್ರೀ


Read More »

ಸೌದಿ ಬಿಲ್ಲವಾಸ್ ದಮ್ಮಾಮ್ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ದಮ್ಮಾಮ್: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್ 1ರಿಂದ ಮಾರ್ಚ್ 5 ರವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಸೌದಿ ಬಿಲ್ಲವಾಸ್ ದಮ್ಮಾಮ್ ವತಿಯಿಂದ ಸೌದಿಯ


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಹಾ ಶಿವರಾತ್ರಿ ಮಹೋತ್ಸವಕ್ಕೆ ಚಾಲನೆ


Share       ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಫೆ.21ರಿಂದ 28ರವರೆಗೆ ಜರುಗುವ ವಾರ್ಷಿಕ ಮಹೋತ್ಸವ ಮತ್ತು ಮಹಾ ಶಿವರಾತ್ರಿ ಮಹೋತ್ಸವಕ್ಕೆ ಶುಕ್ರವಾರ ಧ್ವಜಾರೋಹಣ ನೆರವೇರುವ ಮೂಲಕ ಚಾಲನೆ ನೀಡಲಾಯಿತು. ಶುಕ್ರವಾರ ಗುರು ಪ್ರಾರ್ಥನೆ, ಪುಣ್ಯಾಹ ಹೋಮ,


Read More »

ಬಿಲ್ಲವ ಸಮಾಜ ಸೇವಾ ಸಂಘ ಪುಣೆ  ಆಶ್ರಯದಲ್ಲಿ ಏಪ್ರಿಲ್ ತಿಂಗಳಲ್ಲಿ ನಡೆಯಲಿದೆ “ವಿಶ್ವ ಬಿಲ್ಲವ ಕ್ರಿಕೆಟ್” ಪಂದ್ಯಾಟದ


Share       ಪುಣೆ : ಫೆ.19,ಬಿಲ್ಲವ ಸಮಾಜ ಸೇವಾ ಸಂಘ (ರಿ) ಪುಣೆ ಇದರ  ಆಶ್ರಯದಲ್ಲಿ ಮುಂಬರುವ ಎಪ್ರಿಲ್ ತಿಂಗಳಲ್ಲಿ ನಡೆಯಲಿರುವವಿಶ್ವ ಬಿಲ್ಲವ ಕ್ರಿಕೆಟ್ಪಂದ್ಯಾಟದ  ತಯಾರಿಯ ಬಗ್ಗೆ  ಎರಡನೇ ಪೂರ್ವಭಾವಿ ಸಭೆಯು ಇಂದು ಫೆ. 19ನೇ


Read More »

ಬಿಲ್ಲವಾಸ್ ಕತಾರ್ ನ ಅಧ್ಯಕ್ಷ ಶ್ರೀ ಸಂದೀಪ್ ಸಾಲಿಯಾನ್ ರವರಿಗೆ ವಿನಯಪೂರ್ವಕ ಬೀಳ್ಕೊಡುಗೆ


Share       ಬಿಲ್ಲವಾಸ್ ಕತಾರ್ ನ ನೇತೃತ್ವದಲ್ಲಿ ದಿನಾಂಕ ೮.೨.೨೦೨೫ ರಂದು ಎಂ. ಆರ್. ಎ, ಸಲ್ವ ರೋಡ್, ಕತಾರ್, ಔತಣಕೂಟ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಬಿಲ್ಲವಾಸ್ ಕತಾರ್ ನ ಅಧ್ಯಕ್ಷರಾದ ಶ್ರೀ ಸಂದೀಪ್


Read More »

ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ


Share       ಮಂಗಳೂರು: ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ. MRPL ಸಂಸ್ಥೆಯ ಉದ್ಯೋಗಿ ಆಗಿರುವ ಪ್ರಮೀಳ ದೀಪಕ್ ಪೆರ್ಮುದೆ ಇವರಿಗೆ ಸಾರ್ವಜನಿಕ ವಲಯದಲ್ಲಿ ಮಹಿಳೆಯರು ಪರಿಕಲ್ಪನೆಯಡಿ “ Woman


Read More »