TOP STORIES:

ಬಂಬ್ರಾಣ ಕೊಟ್ಯದ ಮನೆ ”ಆನೆ ಬೈದ್”ಯ ಬಿರುದಾಂಕಿತ ನಾರಾಯಣ ಪೂಜಾರಿಯವರ 70 ನೇ ಹುಟ್ಟುಹಬ್ಬ ಆಚರಣೆ


ಕಾಸರಗೋಡು ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ಧಾರ್ಮಿಕ ಕ್ಷೇತ್ರಗಳಲ್ಲಿ ಕಳೆದ 30 ವರ್ಷಗಳಿಂದ ಸಕ್ರಿಯವಾಗಿ ಪಾಲ್ಗೊಂಡು ಮಾರ್ಗದರ್ಶನ ನೀಡುತ್ತಾ ಸಮಾಜ ಸೇವೆಯನ್ನು ಮಾಡುತ್ತಿರುವ ಕುಂಬಳೆ ಸಮೀಪದ ಬಂಬ್ರಾಣ ಕೊಟ್ಯದ ಮನೆ “ಆನೆ ವೈದ್ಯ ” ಬಿರುದಾಂಕಿತ ಶ್ರೀ ನಾರಾಯಣ ಪೂಜಾರಿ ಯವರ 70ನೇ ಹುಟ್ಟುಹಬ್ಬದ ಅಂಗವಾಗಿ 20-02-2022 ಭಾನುವಾರ ಬಂಬ್ರಾಣ ಕೊಟ್ಯದ ಮನೆಯಲ್ಲಿ ಭೀಮರಥ ಶಾಂತಿ, ಸತ್ಯನಾರಾಯಣ ಪೂಜೆ, ನಾಗತಂಬಿಲ.. ಹೀಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ,ಅಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ವರ್ಕಳ ಶಿವಗಿರಿ ಮಠದ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಿದರು.

ಕ್ಷೇತ್ರದ ತಂತ್ರಿ ವರ್ಯರಾದ ಬ್ರಹ್ಮ ಶ್ರೀ ಚಕ್ರಪಾಣಿ ದೇವಪೂಜಿತ್ತಾಯರ ಮಾರ್ಗದರ್ಶನದಂತೆ ಜರಗಿದ ಈ ಕಾರ್ಯಕ್ರಮದಲ್ಲಿ, ಕುದ್ರೋಳಿ ಗೋಕರ್ಣನಾಥೆಶ್ವರ ಕ್ಷೇತ್ರದ ಕೋಶಾಧಿಕಾರಿ ಹಾಗೂ ಗುರುಬೆಳದಿಂಗಳು(ರಿ) ಅಧ್ಯಕ್ಷರಾದ ಶ್ರೀ ಪದ್ಮರಾಜ್. ಆರ್. ರವರು ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ನೂತನ ವಿಧ್ಯಾನಿಧಿ ಟ್ರಸ್ಟ್ ಗೆ ಚಾಲನೆ ನೀಡಿದರು.

ವೇದಿಕೆಯಲ್ಲಿ ಖ್ಯಾತ ರಂಗ ಭೂಮಿ ಹಾಗೂ ಚಲನ ಚಿತ್ರ ನಟರಾದ ಶ್ರೀ ಅರವಿಂದ ಬೋಳಾರ್, ಶ್ರೀ ಸಂಜೀವ ಪೂಜಾರಿ ಕೂರೇಲು, ಶ್ರೀ ಪಿ ಮುರಲೀಧರನ್ ನ್ಯಾಯವಾದಿ , ವಾರ್ಡ್ ಸದಸ್ಯ ಶ್ರೀ ಮೋಹನ್ ಬಂಬ್ರಾಣ , ಡಾl ರವೀಶ್ ಪಡುಮಲೆ, ಶ್ರೀ ವಿಶ್ವನಾಥ್ ಕೆಮ್ಮಣ್ಣು ರವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ 70 ರ “ಸಪ್ತತಿ ಸಂಭ್ರಮ “ದ ಸವಿ ನೆನಪಿಗಾಗಿ 70 ಔಷಧೀಯ ಗುಣವುಳ್ಳ ಸಸ್ಯವನ್ನು ವಿತರಣೆ ಮಾಡಲಾಯಿತು.

ಸಮಾಜದ ಪ್ರಮುಖ ಸಾಧಕರಾದ ಕುಟುಂಬದ ಸದಸ್ಯರಾಗಿರುವ ಪೊಲೀಸ್ ಇಲಾಖೆಯಲ್ಲಿ ದಕ್ಷ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಮಂಗಳೂರಿನ
ಸಹಾಯಕ ಪೊಲೀಸ್ ನಿರ್ದೇಶಕರಾದ ಶ್ರೀ ಕುಮಾರ ಚಂದ್ರ ರವರನ್ನು, ಲಕ್ಷಾಂತರ ಗಿಡಗಳನ್ನು ನೆಟ್ಟು ಪರಿಸರವನ್ನು ಹಸಿರಾಗಿರುವಲ್ಲಿ ತೆರೆ ಮರೆಯಲ್ಲಿ ಶ್ರಮಿಸುತ್ತಿರುವ ಪರಿಸರ ಪ್ರೇಮಿ ಶ್ರೀ ಮಾಧವ ಉಳ್ಳಾಲ, ಯಕ್ಷರಂಗದ ಯಕ್ಷಗಾನ ಕಲಾವಿದರಾಗಿ ಕಟೀಲು 1ನೇ ಮೇಳದಲ್ಲಿ ದೇವಿಯ ಪಾತ್ರವನ್ನು ನಿರ್ವಹಿಸುತ್ತಿರುವ ಶ್ರೀ ರಾಜೇಶ್ ಬೆಳ್ಳಾರೆ, ಕಂಬಳದಲ್ಲಿ ಅಪ್ರತಿಮ ಸಾಧನೆ ಗೈದು ಸತತವಾಗಿ 3 ಬಾರಿ ಬಹುಮಾನ ಗಳನ್ನು ಬಾಚಿ ಕೊಳ್ಳುವಲ್ಲಿ ಯಶಸ್ವಿಯಾದ ವಂದಿತ್ ಶೆಟ್ಟಿ ಬಂಬ್ರಾಣ,
ಭಾರತ ಮಾತೆಯ ವೀರ ಸೇನಾನಿಯಾಗಿ ಕಾರ್ತಿಕ್ ಬೆಳ್ಳೂರು ರವರನ್ನು ಸೇರಿ 5 ಸಾಧಕರನ್ನು ಗೌರವಿಸಲಾಯಿತು. ಕಾರ್ಯಕ್ರಮವನ್ನು ರಾಮ್ ಕುಮಾರ್ ಮುಂಡಿತಡ್ಕ, ಹಾಗೂ ರಮೇಶ್ ಬಾಳ್ಯ್ ರು ರವರು ನಿರೂಪಿಸಿ, ಹೇಮಾನಾಥ್ ಮೈತಡ್ಕ ರವರು ವಂದಿಸಿದರು.

 


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »