TOP STORIES:

FOLLOW US

ಬಿರುವೆರ್ ಕುಡ್ಲ(ರಿ) ಬಜಪೆ ಘಟಕ ಸ್ಪಂದನ 55 ನೇ ಸೇವಾ ಯೋಜನೆ


ಬಿರುವೆರ್ ಕುಡ್ಲ(ರಿ) ಬಜಪೆ ಘಟಕ
ಸ್ಪಂದನ 55 ನೇ ಸೇವಾ ಯೋಜನೆ

ಬ್ರಹಶ್ರೀ ನಾರಾಯಣಗುರು ಸ್ವಾಮಿಗಳ ವೇದವಾಕ್ಯವಾದ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತತ್ವದಡಿಯಲ್ಲಿ ಅಶಕ್ತರ ಪಾಲಿನ ನಂದಾದೀಪವಾಗಿ ಸಮಾಜವನ್ನು ಸುಸ್ಥಿತಿಗೆ ತರುವ ಪಣವನ್ನು ತೊಟ್ಟಿರುವ ಶ್ರೀ ಉದಯ ಪೂಜಾರಿ ನೇತ್ರತ್ವದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ 13ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ ಮಂಗಳೂರು ಕರ್ನಾಟಕ ಇದರ ಹೃದಯವಂತರು-2020 ಪ್ರಶಸ್ತಿ ಪುರಸ್ಕೃತ ಫ್ರೆಂಡ್ಸ್ ಬಳ್ಳಾಲ್ ಭಾಗ್ ಬಿರುವೆರ್ ಕುಡ್ಲ(ರಿ) ಇದರ ಅಂಗ ಸಂಸ್ಥೆಯಾದ ಬಿರುವೆರ್ ಕುಡ್ಲ ಬಜಪೆ ಘಟಕದ ಸ್ಪಂದನ ತಂಡದ 55ನೇ ಸೇವಾಯೋಜನೆಯಡಿಯಲ್ಲಿ ಎಕ್ಕಾರು ನಿವಾಸಿ ಪ್ರೇಮ ಇವರಿಗೆ wheelchair ಹಸ್ತಾಂತರ ಮಾಡಲಾಯಿತು.
ಎಕ್ಕಾರು ಕೆಂಚಗುಡ್ಡೆ ನಿವಾಸಿಯಾಗಿರುವ ಪ್ರೇಮ ಇವರು ಕಳೆದ ಕೆಲವು ದಿನಗಳಿಂದ ತಲೆಯಲ್ಲಿ ರಕ್ತ ಹೆಪ್ಪು ಗಟ್ಟಿ ಆಸ್ಪತ್ರೆಯಲ್ಲಿ ಕೆಲವು ದಿನಗಳ ಕಾಲ ಚಿಕಿತ್ಸೆ ಪಡೆದು ಮನೆಗೆ ಬಂದಿರುತ್ತಾರೆ. ಇವರು ಈಗ ನಡೆದುಕೊಂಡು ಹೋಗುವ ಪರಿಸ್ಥಿತಿಯಲ್ಲಿ ಇಲ್ಲ. ಇವರಿಗೆ wheelchair ನ ಅಗತ್ಯವಿತ್ತು. ಇದನ್ನು ಗಮನಿಸಿದ ಎಕ್ಕಾರು ಗ್ರಾಮ ಪಂಚಾಯತ್ ನ ಸದಸ್ಯರಾದ ಶ್ರೀ ಅನಿಲ್ ಕುಲಾಲ್ ಎಕ್ಕಾರು ಇವರು ಬಿರುವೆರ್ ಕುಡ್ಲ ಬಜಪೆ ಘಟಕಕ್ಕೆ ಇವರಿಗೆ ಸಹಾಯಮಾಡುವಂತೆ ಮನವಿಯನ್ನು ಮಾಡಿದರು. ಇವರ ಮನವಿಗೆ ತಕ್ಷಣವೇ ಸ್ಪಂದಿಸುವ ಭರವಸೆ ಕೊಟ್ಟು, ತಾ: 17.02.2021ರಂದು ಬಿರುವೆರ್ ಕುಡ್ಲ ಬಜಪೆ ಘಟಕದ ಸ್ಪಂದನ ತಂಡದ ಸದಸ್ಯರು ಪ್ರೇಮ ಇವರ ಮನೆಗೆ ತೆರಳಿ WHEELCHAIR ಅವರಿಗೆ ನೀಡಲಾಯಿತು.
ಈ ಸಂದರ್ಭದಲ್ಲಿ ಬಿರುವೆರ್ ಕುಡ್ಲ ಬಜಪೆ ಘಟಕದ ಪೆರ್ಮುದೆ ವಲಯದ ಸಂಚಾಲಕರು ಶ್ರೀ ಕೀರ್ತನ್ ಅಮಿನ್ ಪೆರ್ಮುದೆ, ಸಹಸಂಚಾಲಕರು ಜೀವರಾಜ್ ಕೋಟ್ಯಾನ್ ಪೆರ್ಮುದೆ, ಶ್ರೀ ಸಂದೇಶ್ ಶೆಟ್ಟಿ ಜೋಕಟ್ಟೆ, ಎಕ್ಕಾರು ಗ್ರಾಮ ಪಂಚಾಯತ್ ಸದಸ್ಯರು ಶ್ರೀ ಅನಿಲ್ ಕುಲಾಲ್ ಎಕ್ಕಾರು, ಘಟಕದ ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀ ರಮಾನಂದ ಪೂಜಾರಿ ಕಟೀಲು, ಬಿರುವೆರ್ ಕುಡ್ಲ ಬಜಪೆ ಘಟಕದ ಎಕ್ಕಾರು ವಲಯದ ಪ್ರಮುಖರಾದ ಶ್ರೀ ಕಿರಣ್ ಪೂಜಾರಿ ಎಕ್ಕಾರು, Auto ಬೋಜ ಪೂಜಾರಿ ಸುದರ್ಶನ್ ಪೂಜಾರಿ, ಶಂಕರ್ ಪೂಜಾರಿ, ನಾಗೇಶ್ ಪೂಜಾರಿ ಉಪಸ್ಥಿತರಿದ್ದರು.

ತುರ್ತು ಸೇವಾಯೋಜನೆಯ WHEELCHAIR ಸಿದ್ಧ ಪಡಿಸಿದ ಪರಿ:
ಬಿರುವೆರ್ ಕುಡ್ಲ ಬಜಪೆ ಘಟಕಕ್ಕೆ ಮನವಿ ಬಂದ ಕೂಡಲೇ ನಮ್ಮ ಘಟಕದ ಅಧ್ಯಕ್ಷರು ಶ್ರೀ ಪ್ರಶಾಂತ್ ಕುಮಾರ್ ಕೆಂಜಾರು ಕಾನ ಇವರು ತಕ್ಷಣವೇ ಒಂದು WHEELCHAIRನ್ನು ಗುರುತಿಸಿ, ಅದನ್ನು ಹೊಸ ರೂಪಕ್ಕೆ ತರುವಲ್ಲಿ ಬಿರುವೆರ್ ಕುಡ್ಲ ಬಜಪೆ ಘಟಕದ ಉಪಾಧ್ಯಕ್ಷರು ಶ್ರೀ ಚಂದ್ರ ಪೂಜಾರಿ ಪೆರಾರ ಮತ್ತು ಬಿರುವೆರ್ ಕುಡ್ಲ ಬಜಪೆ ಘಟಕದ ಸಕ್ರಿಯ ಸದಸ್ಯರು ಶ್ರೀ ಸಂದೇಶ್ ಶೆಟ್ಟಿ ಜೋಕಟ್ಟೆ ಇವರು ಸೇರಿ ಖುದ್ದಾಗಿ ಕೆಲಸ ಮಾಡಿ WHEELCHAIR ಕೊಡುವಲ್ಲಿ ನೆರವಾಗಿರುತ್ತಾರೆ. ಇವರಿಗೆ ಧನ್ಯವಾದಗಳು.

ಪ್ರಕಟಣೆ: ಬಿರುವೆರ್ ಕುಡ್ಲ ಬಜಪೆ ಘಟಕ


Share:

More Posts

Category

Send Us A Message

Related Posts

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »

“ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ” ಪ್ರತಿಭಾ ಕುಳಾಯಿ ಆಯ್ಕೆ 


Share       ಮಂಗಳೂರು: ಸಮಾಜ ಸೇವೆಗಾಗಿ ಕುಳಾಯಿ ಫೌಂಡೇಶನ್ ರಚಿಸಿ ೫೦೦ಕ್ಕೂ ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಬದುಕು ಕಟ್ಟಿಕೊಡುತ್ತಿರುವ, ಯುವ ರಾಜಕಾರಣಿ ಪ್ರತಿಭಾ ಕುಳಾಯಿ, ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ಸ್ ಗೆ ಆಯ್ಕೆಯಾಗಿದ್ದಾರೆ. ರಷ್ಯಾದ


Read More »

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ


Share       ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ. ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ


Read More »

ಬಿಲ್ಲವ ಸಮಾಜಕ್ಕಾಗಿ ಪಂದ್ಯಾಟದ ಜೊತೆಗೆ ಆರ್ಥಿಕ ಯೋಜನೆಯನ್ನು ರೂಪಿಸಿದ ರುವಾರಿ ವಿಶ್ವನಾಥ ಪೂಜಾರಿ ಕಡ್ತಲ


Share       ಆದರಣೀಯ ಕ್ಷಣಗಳನ್ನು ‌ಮತ್ತೊಮ್ಮೆ ಮರಳಿಸಿ ವಿದೇಶದ  ಮಣ್ಣಲ್ಲೂ ಬಿಲ್ಲವರನ್ನು ಒಗ್ಗೂಡಿಸಿಕೊಂಡು ಒಂದು ಪಂದ್ಯಾಟ ನಡೆಸುವುದು ಕಷ್ಟ ಎಂಬ ಸನ್ನಿವೇಶದಲ್ಲಿ ಮಾಡಿಯೇ ಸಿದ್ಧ ಎಂಬ ಸ್ಪಷ್ಟ ನಿಲುವಿನೊಂದಿಗೆ ಎಲ್ಲರಿಗೂ ಇಷ್ಟವಾಗಿಸಿದ ಕ್ರಿಕೆಟ್ ಪಂದ್ಯಾಟ ಮಾಡಿ


Read More »