TOP STORIES:

ಬಿರುವೆರ್ ಕುಡ್ಲ(ರಿ) ಬೆದ್ರ ಘಟಕದ ಮೂಲಕ 1325Kg ಅಕ್ಕಿಯನ್ನು ಅಸಹಾಯಕ ಕುಟುಂಬಗಳಿಗೆ ವಿತರಣೆ..


ಬಿರುವೆರ್ ಕುಡ್ಲ(ರಿ) ಬೆದ್ರ ಘಟಕದ ಮೂಲಕ 1325Kg ಅಕ್ಕಿಯನ್ನು ಅಸಹಾಯಕ ಕುಟುಂಬಗಳಿಗೆ ವಿತರಣೆ..
ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶವನ್ನು ಮುಂದಿಟ್ಟುಕೊಂಡು ಯುವ ಸಮುದಾಯವನ್ನು ಜಾತಿ ಮತಬೇಧ ಮರೆತು ಸಂಘಟನೆಯಲ್ಲಿ ತೊಡಗಿಸಿಕೊಂಡು ಅಸಹಾಯಕರ ಸೇವೆ ಮಾಡುವಂತೆ ಸಂಘಟಿತರನ್ನಾಗಿ ಮಾಡುತ್ತಿರುವ ರಾಕೇಶ್ ಪೂಜಾರಿ ಅಧ್ಯಕ್ಷೆತೆಯ “ಬಿರುವೆರ್ ಕುಡ್ಲ(ರಿ)” ಸಂಘಟನೆಯ ಸ್ಥಾಪಕಾಧ್ಯಕ್ಷರಾದ, ಯುವ ನಾಯಕ “ಉದಯ್ ಪೂಜಾರಿ”ಯವರ ಜನುಮ ದಿನದಂದು(01/06/2020) “ಬೆದ್ರ ಘಟಕ”ದ ಸಂಕಲ್ಪದಂತೆ ಅಸಹಾಯಕರ ಹಸಿವನ್ನು ನೀಗಿಸುವ ಉದ್ದೇಶದಂತೆ ಮರೋಡಿಯ ಚಂದಪ್ಪ ಪೂಜಾರಿಯವರ ಹಡಿಲು ಇದ್ದ ಸುಮಾರು 4 ಎಕ್ರೆಯಷ್ಟು ಗದ್ದೆಯನ್ನು ಘಟಕದ ಉಪಾಧ್ಯಕ್ಷರಾದ “ಕೃಷ್ಣಪ್ಪ ಪೂಜಾರಿ”ಯವರ ನೇತೃತ್ವದಲ್ಲಿ ಘಟಕದ ಸದಸ್ಯರೆಲ್ಲರ ಸಹಕಾರದೊಂದಿಗೆ ಎರಡು ಹಂತಗಳಲ್ಲಿ ಸಾಗುವಳಿ ಮಾಡಿ, ಅದರಲ್ಲಿ ದೊರೆತಂತಹ ಅಕ್ಕಿಯನ್ನು ಇಂದು 53 ಫಲಾನುಭವಿಗಳನ್ನು ಗುರುತಿಸಿ ತಲಾ 25 kg ಯಂತೆ ಒಟ್ಟು 1325 KG ಅಕ್ಕಿಯನ್ನು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದಂತೆ ಜಾತಿ ಮತಭೇದ ಮರೆತು ಈ ದಿನ ಸರಳವಾಗಿ ಮೂಡಬಿದ್ರೆಯ ಸಮಾಜಮಂದಿರದಲ್ಲಿ ವಿತರಿಸಲಾಯಿತು..
ಈ ನಮ್ಮ ಕಾರ್ಯವನ್ನು ಕಂಡು ಸಮಾಜಮಂದಿರದ ಆಡಳಿತ ಮಂಡಲಿಯವರು ಉಚಿತವಾಗಿ ಸಭಾಂಗಣವನ್ನು ನೀಡುವ ಮೂಲಕ ಸಹಕರಿಸಿದರು..
ನಮ್ಮ ಆಶಯದಂತೆ ಈ ಗದ್ದೆಯಲ್ಲಿ ಸಾಗುವಳಿ ಮಾಡಿ ದೊರೆತಿರುವಂತಹ ಅಕ್ಕಿಯನ್ನು ಅಸಹಾಯಕ ಕುಟುಂಬಗಳಿಗಷ್ಟೇ ಅಲ್ಲದೇ ಮೂಕ ಪ್ರಾಣಿಗಳಾದ “ಬೀದಿ ನಾಯಿಗಳಿ”ಗೆ ಪ್ರತಿನಿತ್ಯ ಅನ್ನ ನೀಡುತ್ತಿರುವ ಮಂಗಳೂರಿನ ಶ್ರೀಮತಿ “ರಜನಿ ಶೆಟ್ಟಿ” ಯವರಿಗೂ 50kg ಅಕ್ಕಿಯನ್ನು ಇತ್ತೀಚೆಗೆ ಘಟಕದ ಪರವಾಗಿ ನೀಡಿರುತ್ತೇವೆ..
ಜೊತೆಗೆ ಈ ಸಾಗುವಳಿ ಕಾರ್ಯದಲ್ಲಿ ದೊರೆತಂತಹ ಬೈ ಹುಲ್ಲನ್ನು ವೇಣೂರಿನ ಗೋಶಾಲೆ ಹಾಗೂ ಕೆಂಜಾರುವಿನ ಕಪಿಲಾ ಗೋಶಾಲೆಗಳ ಗೋವುಗಳ ಮೇವಿಗಾಗಿ ಉಚಿತವಾಗಿ ಈ ಮೊದಲೇ ನೀಡಿರುತ್ತೇವೆ..

ಈ ಕೃಷಿಕಾರ್ಯಕ್ಕೆ ಮುಂದಾದ ದಿನದಿಂದ ಇವತ್ತಿನವೆರೆಗೂ ನಮ್ಮೊಂದಿಗೆ ಕೈಜೋಡಿಸಿ ವಿವಿಧ ರೀತಿಯಲ್ಲಿ ನೆರವಾದವರೆಲ್ಲರಿಗೂ ಬಿರುವೆರ್ ಕುಡ್ಲ(ರಿ) ಬೆದ್ರ ಘಟಕದ ಪರವಾಗಿ ಮನದಾಳದ ಕೃತಜ್ಞತೆಗಳು..
ಬಿರುವೆರ್ ಕುಡ್ಲ(ರಿ) ಬೆದ್ರ ಘಟಕ

 

www.billavaswarriors.com


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »