TOP STORIES:

FOLLOW US

ಬಿರುವೆರ್ ಕುಡ್ಲ ಬಜಪೆ ಘಟಕ ದ ಮಹಾಸೇವಾ ಯೋಜನೆಯ ಅಡಿಯಲ್ಲಿ ಸುಸಜ್ಜಿತ ಮನೆ ನಿರ್ಮಾಣದ ಉದ್ಘಾಟನೆ ಹಾಗೂ ಹಸ್ತಾಂತರ ಕಾರ್ಯಕ್ರಮ


ಬಿರುವೆರ್ ಕುಡ್ಲ ಬಜಪೆ ಘಟಕ ಮಹಾಸೇವಾ ಯೋಜನೆಯ ಅಡಿಯಲ್ಲಿ ಸುಸಜ್ಜಿತ ಮನೆ ನಿರ್ಮಾಣದ ಉದ್ಘಾಟನೆ ಹಾಗೂಹಸ್ತಾಂತರ ಕಾರ್ಯಕ್ರಮ ದಿನಾಂಕ 25.6.2023ನೇ ಭಾನುವಾರ ಬೆಳಿಗ್ಗೆ 10 ಗಂಟೆಗೆ ನೆರವೇರಿತು.
  ಬಜಪೆ ಸಮೀಪದ ಮುಂಡಬೆಟ್ಟು, ಮೂಡುಪೆರಾರ ನಿವಾಸಿ ದಯಾನಂದ ಬಂಗೇರ ಮತ್ತು ಅವರ ಮೂರು ಮಕ್ಕಳು, ಒಂದುಗಂಡು ಮತ್ತು ಎರಡು ಹೆಣ್ಣು ಮಕ್ಕಳು. ಇವರ ಕುಟುಂಬವು ಕಡು ಬಡತನದಲ್ಲಿ ಜೀವನ ಸಾಗುತ್ತಿದ್ದರು. ಇವರಿಗೆ ವಾಸಿಸಲುಯೋಗ್ಯವಾದ ಮನೆ ಇರಲಿಲ್ಲ ಒಂದು ಗುಡಿಸಿಲಿನಲ್ಲಿ ವಾಸಿಸುತ್ತಿದ್ದು, ತನ್ನ ಕಷ್ಟವನ್ನು ತಾಳಲಾರದೆ ಇವರು ಬಿರುವೆರ್ ಕುಡ್ಲ ಬಜಪೆಘಟಕಕ್ಕೆ ಮನವಿಯನ್ನು ನೀಡಿರುತ್ತಾರೆ. ಇದನ್ನು ಗಮನಿಸಿದ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಇವರಿಗೆ ಮನೆನಿರ್ಮಿಸಿ ಕೊಡುವ ಭರವಸೆಯನ್ನು ನೀಡಿ ತಕ್ಷಣವೇ ಮನೆ ನಿರ್ಮಾಣದ ಕೆಲಸವನ್ನು ಆರಂಭಿಸಿ ಕೆಲವೇ ದಿನಗಳಲ್ಲಿ ಬಿರುವೆರ್ ಕುಡ್ಲಬಜಪೆ ಘಟಕದ ಮಹಾ ಸೇವಾ ಯೋಜನೆಯ ಅಡಿಯಲ್ಲಿ ಸುಸಜ್ಜಿತವಾದ ಸುಮರು 12 ಲಕ್ಷ ವೆಚ್ಚದ ಮನೆಯನ್ನು ನಿರ್ಮಿಸಿಕೊಟ್ಟಿದೆ. ಇದು ಅನೇಕ ದಾನಿಗಳ ಸಹಕಾರದಿಂದ ಮನೆ ನಿರ್ಮಾಣದ ಮಹಾ ಸೇವಾ ಯೋಜನೆ ಅತಿ ಯಶಸ್ವಿಯಾಗಿ ನೆರವೇರಿದೆಎಂದು ಬಿರುವೆರ್ ಕುಡ್ಲ ಬಜಪೆ ಘಟಕದ ಅಧ್ಯಕ್ಷರಾದ ಶ್ರೀ ಪ್ರಶಾಂತ್ ಕುಮಾರ್ ಕೆಂಜಾರು ಕಾನ ಹೇಳಿದ್ದಾರೆ.

  ಮನೆಯ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಕುದ್ರೋಳಿಯ ಅಧ್ಯಕ್ಷರಾದ ಶ್ರೀ ಸಾಯಿ ರಾಮ್ ರವರು ನೆರವೇರಿಸಿದ್ದು,  ಮನೆಯಹಸ್ತಾಂತರವನ್ನು ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯದ್ಯಕ್ಷರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸದರು ಶ್ರೀ ನಳಿನ್ಕುಮಾರ್ ಕಟೀಲು ರವರು ದಯಾನಂದ ಬಂಗೇರರವರ ಕುಟುಂಬಕ್ಕೆ ಮನೆಯನ್ನು ಹಸ್ತಾಂತರಿಸಿದರು. ಗುರುಪುರದ ವಜ್ರದೇಹಿಮಠದ ಶ್ರೀ ಶ್ರೀ ಶ್ರೀ ರಾಜಶೇಖರನಂದ ಸ್ವಾಮೀಜಿಗಳು ಬಿರುವೆರ್ ಕುಡ್ಲ ಸಂಘಟನೆಯ ಸಾಧನೆಯನ್ನು ಹಾಗೂ ಶ್ರದ್ಧೆಯನ್ನು ಮೆಚ್ಚಿ , ಕೊಂಡಾಡಿ ಘಟಕದ ಎಲ್ಲಾ ಸದಸ್ಯರನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು. ಸಂಸದರಾದ ನಳಿನ್ ಕುಮಾರ್ ಕಟೀಲು ಮಾತನಾಡಿಬಿರುವೆರ್ ಕುಡ್ಲ ಸಂಘಟನೆಯ ಬಗ್ಗೆ ಸಮಾಜಮುಖಿ ಸೇವೆ ನಾನು ಕಳೆದ ಆರು ವರ್ಷಗಳಿಂದ ನೋಡುತ್ತಾ ಬಂದಿದ್ದೇನೆ. ನನ್ನಆತ್ಮೀಯ ಮಿತ್ರರಾದ ಉದಯ ಪೂಜಾರಿ ರವರ ನೇತೃತ್ವದಲ್ಲಿ ಅತಿ ಯಶಸ್ವಿಯಾಗಿ ಸಂಘಟನೆ ಸಮಾಜದ ಕಾಳಜಿ, ಅಶಕ್ತರ ಪಾಲಿಗೆದಾರಿದೀಪವಾಗಿ ಸಮಾಜದ ಜೊತೆ ಸಾಗುತ್ತಿದೆ ಎಂದರು. ಶ್ರೀ ಕ್ಷೇತ್ರ ಕುದ್ರೋಳಿಯ ಅಧ್ಯಕ್ಷರಾದ ಸಾಯಿ ರಾಮ್ ರವರು ಘಟಕಕ್ಕೆಶುಭ ಕೋರಿದರು.  ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ವೈ ಭರತ್ ಶೆಟ್ಟಿಯವರು ಬಿರುವೆರ್ ಕುಡ್ಲ  ಸಂಘಟನೆ ಮತ್ತು ತಮ್ಮಆತ್ಮೀಯತೆಯನ್ನು ಬಣ್ಣಿಸಿದರು. ಹಾಗೂ ಸಂಘಟನೆಯ ಕಾರ್ಯವೈಕರಿಗೆ ಶುಭ ಹಾರೈಸಿದರು. ಮಂಗಳೂರು ದಕ್ಷಿಣ ಕ್ಷೇತ್ರದಶಾಸಕರಾದ ಶ್ರೀ ವೇದವ್ಯಾಸ ಕಾಮತ್ ರವರು ಮಾತನಾಡಿ ಬಿರುವೆರ್ ಕುಡ್ಲ ಬಜಪೆ ಘಟಕವು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಆಧಾರಿತವಾಗಿ ಸಮಾಜದ ಎಲ್ಲಾ ವರ್ಗದ ಜನರನ್ನು ಒಟ್ಟಿಗೆ ಸೇರಿಸಿಕೊಂಡು ಸಮಾಜಮುಖಿ ಸೇವೆಗಳನ್ನು ಮಾಡುತ್ತಾ ಸಮಾಜದದಾರಿದೀಪವಾಗಿದೆ ಎಂದರು.

ಸಂದರ್ಭದಲ್ಲಿ ಮನೆ ನಿರ್ಮಾಣದ ಕಾರ್ಯಕ್ಕೆ ಸಹಕರಿಸಿದ ಎಲ್ಲರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಮುಲ್ಕಿಮೂಡಬಿದ್ರೆ ಕ್ಷೇತ್ರದ ಶಾಸಕರಾದ ಶ್ರೀ ಉಮನಾಥ ಕೋಟ್ಯಾನ್, ಶ್ರೀ ಕ್ಷೇತ್ರ ಕುದ್ರೋಳಿ ಇದರ ಉಪಾಧ್ಯಕ್ಷರಾದ ಶ್ರೀ ಊರ್ಮಿಳರಮೇಶ್ ಕುಮಾರ್, ಶ್ರೀ ಕಟೀಲ್ ಕನ್ಸ್ಟ್ರಕ್ಷನ್ ಶ್ರೀ ಶಿವರಾಮ ಕೋಟ್ಯಾನ್, ಸಂಘಟನೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯಪೂಜಾರಿ ಬಳ್ಳಾಲ್ ಬಾಗ್, ಉದ್ಯಮಿ ಶ್ರೀ ವಿವೇಕ್ ರಾಜ್ ಪೂಜಾರಿ, ಶ್ರೀ ಚಂದ್ರಶೇಖರ್ ಎಂ ಅಮಿನ್ ವಕೀಲರು , ಘಟಕದಅಧ್ಯಕ್ಷರಾದ ಶ್ರೀ ಪ್ರಶಾಂತ್ ಕುಮಾರ್ ಕೆಂಜಾರು ಕಾನ, ಪಡುಪೆರಾರ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಅಮಿತಾಶೆಟ್ಟಿ ಹಾಗೂಆನೇಕ ಗಣ್ಯಾಧಿಗಣ್ಯರು ಉಪಸ್ಥಿತರಿದ್ದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.


Share:

More Posts

Category

Send Us A Message

Related Posts

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share       ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »