TOP STORIES:

FOLLOW US

ಬಿರುವೆರ್ ಕುಡ್ಲ ಬಜಪೆ ಘಟಕ ದ ಮಹಾಸೇವಾ ಯೋಜನೆಯ ಅಡಿಯಲ್ಲಿ ಸುಸಜ್ಜಿತ ಮನೆ ನಿರ್ಮಾಣದ ಉದ್ಘಾಟನೆ ಹಾಗೂ ಹಸ್ತಾಂತರ ಕಾರ್ಯಕ್ರಮ


ಬಿರುವೆರ್ ಕುಡ್ಲ ಬಜಪೆ ಘಟಕ ಮಹಾಸೇವಾ ಯೋಜನೆಯ ಅಡಿಯಲ್ಲಿ ಸುಸಜ್ಜಿತ ಮನೆ ನಿರ್ಮಾಣದ ಉದ್ಘಾಟನೆ ಹಾಗೂಹಸ್ತಾಂತರ ಕಾರ್ಯಕ್ರಮ ದಿನಾಂಕ 25.6.2023ನೇ ಭಾನುವಾರ ಬೆಳಿಗ್ಗೆ 10 ಗಂಟೆಗೆ ನೆರವೇರಿತು.
  ಬಜಪೆ ಸಮೀಪದ ಮುಂಡಬೆಟ್ಟು, ಮೂಡುಪೆರಾರ ನಿವಾಸಿ ದಯಾನಂದ ಬಂಗೇರ ಮತ್ತು ಅವರ ಮೂರು ಮಕ್ಕಳು, ಒಂದುಗಂಡು ಮತ್ತು ಎರಡು ಹೆಣ್ಣು ಮಕ್ಕಳು. ಇವರ ಕುಟುಂಬವು ಕಡು ಬಡತನದಲ್ಲಿ ಜೀವನ ಸಾಗುತ್ತಿದ್ದರು. ಇವರಿಗೆ ವಾಸಿಸಲುಯೋಗ್ಯವಾದ ಮನೆ ಇರಲಿಲ್ಲ ಒಂದು ಗುಡಿಸಿಲಿನಲ್ಲಿ ವಾಸಿಸುತ್ತಿದ್ದು, ತನ್ನ ಕಷ್ಟವನ್ನು ತಾಳಲಾರದೆ ಇವರು ಬಿರುವೆರ್ ಕುಡ್ಲ ಬಜಪೆಘಟಕಕ್ಕೆ ಮನವಿಯನ್ನು ನೀಡಿರುತ್ತಾರೆ. ಇದನ್ನು ಗಮನಿಸಿದ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಇವರಿಗೆ ಮನೆನಿರ್ಮಿಸಿ ಕೊಡುವ ಭರವಸೆಯನ್ನು ನೀಡಿ ತಕ್ಷಣವೇ ಮನೆ ನಿರ್ಮಾಣದ ಕೆಲಸವನ್ನು ಆರಂಭಿಸಿ ಕೆಲವೇ ದಿನಗಳಲ್ಲಿ ಬಿರುವೆರ್ ಕುಡ್ಲಬಜಪೆ ಘಟಕದ ಮಹಾ ಸೇವಾ ಯೋಜನೆಯ ಅಡಿಯಲ್ಲಿ ಸುಸಜ್ಜಿತವಾದ ಸುಮರು 12 ಲಕ್ಷ ವೆಚ್ಚದ ಮನೆಯನ್ನು ನಿರ್ಮಿಸಿಕೊಟ್ಟಿದೆ. ಇದು ಅನೇಕ ದಾನಿಗಳ ಸಹಕಾರದಿಂದ ಮನೆ ನಿರ್ಮಾಣದ ಮಹಾ ಸೇವಾ ಯೋಜನೆ ಅತಿ ಯಶಸ್ವಿಯಾಗಿ ನೆರವೇರಿದೆಎಂದು ಬಿರುವೆರ್ ಕುಡ್ಲ ಬಜಪೆ ಘಟಕದ ಅಧ್ಯಕ್ಷರಾದ ಶ್ರೀ ಪ್ರಶಾಂತ್ ಕುಮಾರ್ ಕೆಂಜಾರು ಕಾನ ಹೇಳಿದ್ದಾರೆ.

  ಮನೆಯ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಕುದ್ರೋಳಿಯ ಅಧ್ಯಕ್ಷರಾದ ಶ್ರೀ ಸಾಯಿ ರಾಮ್ ರವರು ನೆರವೇರಿಸಿದ್ದು,  ಮನೆಯಹಸ್ತಾಂತರವನ್ನು ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯದ್ಯಕ್ಷರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸದರು ಶ್ರೀ ನಳಿನ್ಕುಮಾರ್ ಕಟೀಲು ರವರು ದಯಾನಂದ ಬಂಗೇರರವರ ಕುಟುಂಬಕ್ಕೆ ಮನೆಯನ್ನು ಹಸ್ತಾಂತರಿಸಿದರು. ಗುರುಪುರದ ವಜ್ರದೇಹಿಮಠದ ಶ್ರೀ ಶ್ರೀ ಶ್ರೀ ರಾಜಶೇಖರನಂದ ಸ್ವಾಮೀಜಿಗಳು ಬಿರುವೆರ್ ಕುಡ್ಲ ಸಂಘಟನೆಯ ಸಾಧನೆಯನ್ನು ಹಾಗೂ ಶ್ರದ್ಧೆಯನ್ನು ಮೆಚ್ಚಿ , ಕೊಂಡಾಡಿ ಘಟಕದ ಎಲ್ಲಾ ಸದಸ್ಯರನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು. ಸಂಸದರಾದ ನಳಿನ್ ಕುಮಾರ್ ಕಟೀಲು ಮಾತನಾಡಿಬಿರುವೆರ್ ಕುಡ್ಲ ಸಂಘಟನೆಯ ಬಗ್ಗೆ ಸಮಾಜಮುಖಿ ಸೇವೆ ನಾನು ಕಳೆದ ಆರು ವರ್ಷಗಳಿಂದ ನೋಡುತ್ತಾ ಬಂದಿದ್ದೇನೆ. ನನ್ನಆತ್ಮೀಯ ಮಿತ್ರರಾದ ಉದಯ ಪೂಜಾರಿ ರವರ ನೇತೃತ್ವದಲ್ಲಿ ಅತಿ ಯಶಸ್ವಿಯಾಗಿ ಸಂಘಟನೆ ಸಮಾಜದ ಕಾಳಜಿ, ಅಶಕ್ತರ ಪಾಲಿಗೆದಾರಿದೀಪವಾಗಿ ಸಮಾಜದ ಜೊತೆ ಸಾಗುತ್ತಿದೆ ಎಂದರು. ಶ್ರೀ ಕ್ಷೇತ್ರ ಕುದ್ರೋಳಿಯ ಅಧ್ಯಕ್ಷರಾದ ಸಾಯಿ ರಾಮ್ ರವರು ಘಟಕಕ್ಕೆಶುಭ ಕೋರಿದರು.  ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ವೈ ಭರತ್ ಶೆಟ್ಟಿಯವರು ಬಿರುವೆರ್ ಕುಡ್ಲ  ಸಂಘಟನೆ ಮತ್ತು ತಮ್ಮಆತ್ಮೀಯತೆಯನ್ನು ಬಣ್ಣಿಸಿದರು. ಹಾಗೂ ಸಂಘಟನೆಯ ಕಾರ್ಯವೈಕರಿಗೆ ಶುಭ ಹಾರೈಸಿದರು. ಮಂಗಳೂರು ದಕ್ಷಿಣ ಕ್ಷೇತ್ರದಶಾಸಕರಾದ ಶ್ರೀ ವೇದವ್ಯಾಸ ಕಾಮತ್ ರವರು ಮಾತನಾಡಿ ಬಿರುವೆರ್ ಕುಡ್ಲ ಬಜಪೆ ಘಟಕವು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಆಧಾರಿತವಾಗಿ ಸಮಾಜದ ಎಲ್ಲಾ ವರ್ಗದ ಜನರನ್ನು ಒಟ್ಟಿಗೆ ಸೇರಿಸಿಕೊಂಡು ಸಮಾಜಮುಖಿ ಸೇವೆಗಳನ್ನು ಮಾಡುತ್ತಾ ಸಮಾಜದದಾರಿದೀಪವಾಗಿದೆ ಎಂದರು.

ಸಂದರ್ಭದಲ್ಲಿ ಮನೆ ನಿರ್ಮಾಣದ ಕಾರ್ಯಕ್ಕೆ ಸಹಕರಿಸಿದ ಎಲ್ಲರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಮುಲ್ಕಿಮೂಡಬಿದ್ರೆ ಕ್ಷೇತ್ರದ ಶಾಸಕರಾದ ಶ್ರೀ ಉಮನಾಥ ಕೋಟ್ಯಾನ್, ಶ್ರೀ ಕ್ಷೇತ್ರ ಕುದ್ರೋಳಿ ಇದರ ಉಪಾಧ್ಯಕ್ಷರಾದ ಶ್ರೀ ಊರ್ಮಿಳರಮೇಶ್ ಕುಮಾರ್, ಶ್ರೀ ಕಟೀಲ್ ಕನ್ಸ್ಟ್ರಕ್ಷನ್ ಶ್ರೀ ಶಿವರಾಮ ಕೋಟ್ಯಾನ್, ಸಂಘಟನೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯಪೂಜಾರಿ ಬಳ್ಳಾಲ್ ಬಾಗ್, ಉದ್ಯಮಿ ಶ್ರೀ ವಿವೇಕ್ ರಾಜ್ ಪೂಜಾರಿ, ಶ್ರೀ ಚಂದ್ರಶೇಖರ್ ಎಂ ಅಮಿನ್ ವಕೀಲರು , ಘಟಕದಅಧ್ಯಕ್ಷರಾದ ಶ್ರೀ ಪ್ರಶಾಂತ್ ಕುಮಾರ್ ಕೆಂಜಾರು ಕಾನ, ಪಡುಪೆರಾರ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಅಮಿತಾಶೆಟ್ಟಿ ಹಾಗೂಆನೇಕ ಗಣ್ಯಾಧಿಗಣ್ಯರು ಉಪಸ್ಥಿತರಿದ್ದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.


Share:

More Posts

Category

Send Us A Message

Related Posts

ಹೃದಯ ಹೃದಯಗಳಲ್ಲಿ ಬೆಸೆದ ಹೃದಯ ಶ್ರೀಮಂತ ಜಯ ಸುವರ್ಣರ ಜನ್ಮದಿನದ ನೆನಪಿನ ಸಲುವಾಗಿ ನುಡಿನಮನ


Share       ಹೃದಯ ಹೃದಯಗಳಲ್ಲಿ ಬೆಸೆದ ಹೃದಯ ಶ್ರೀಮಂತ ಜಯ ಸುವರ್ಣರ ಜನ್ಮದಿನದ ನೆನಪಿನ ಸಲುವಾಗಿ ನುಡಿನಮನ ಮುಂಬೈ ವಿಶ್ವವಿದ್ಯಾಲಯದಲ್ಲಿ ಪಿ ಎಚ್. ಡಿ ಕೋರ್ಸ್ ವರ್ಕ್ ನ ಸಲುವಾಗಿ ಜಯ ಸುವರ್ಣರ ಕುರಿತು ಶೋಧ ಪ್ರಬಂಧವನ್ನು


Read More »

ಬೆಳ್ತಂಗಡಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ವಸಂತ ಬಂಗೇರರ ಹೆಸರಿಡಲು ಮನವಿ


Share       ಬೆಳ್ತಂಗಡಿ: 5 ಬಾರಿ ಬೆಳ್ತಂಗಡಿ ಕ್ಷೇತ್ರದ ಶಾಸಕರಾಗಿ, ಕಳೆದ 50 ವರ್ಷದಲ್ಲಿ ಕ್ಷೇತ್ರದ ಬಡ ಜನತೆಯ ಧ್ವನಿಯಾಗಿ ಕೆಲಸ ಮಾಡಿ ಇಹಲೋಕ ತ್ಯಜಿಸಿದ ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸ್ಥಾಪನೆಗೆ ಕಾರಣಕರ್ತರು ಹಾಗೂ


Read More »

ಚಿರನಿದ್ರೆಗೆ ಜಾರಿದ ಮಾಜಿ ಶಾಸಕ ಕೆ. ವಸಂತ ಬಂಗೇರ ಮೇ9 ರಂದು (ನಾಳೆ) ಬೆಳಿಗ್ಗೆ ಹಳೆಕೋಟೆ ನಿವಾಸದಲ್ಲಿ ಸಾರ್ವಜನಿಕ ಅಂತಿಮ ದರ್ಶನ


Share       ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ ನೇರ ನಡೆನುಡಿಯ, ದಿಟ್ಟ ಹೋರಾಟಗಾರ, ಭ್ರಷ್ಟಾಚಾರಿಗಳಿಗೆ ದುಃಸ್ವಪ್ನರಾಗಿದ್ದ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು


Read More »

ಬಿಲ್ಲವ ಸಮಾಜದ ಭರವಸೆಯ ಸೂರ್ಯ ಜನ್ಮದಿನದ ಸಲುವಾಗಿ ನುಡಿ ಬರಹ


Share       ಎರಡು ವರ್ಷಗಳ ಹಿಂದೆ ಜಯ ಸುವರ್ಣರ ಕುರಿತು ಮಾಹಿತಿಯನ್ನು ಸಂಗ್ರಹಿಸುವ ಸಲುವಾಗಿ ಅವರ ಮಗ ಸೂರ್ಯಕಾಂತ್ ಸುವರ್ಣರನ್ನು ಸಂದರ್ಶನ ಮಾಡಲು ಗೊರೆಗಾವ್‍ನಲ್ಲಿರುವ ಜಯ ಸುವರ್ಣರ ಕಚೇರಿಗೆ ಮೊದಲ ಬಾರಿ ಭೇಟಿ ನೀಡಿದ್ದೆ. ಜಯ ಸುವರ್ಣರನ್ನೇ


Read More »

ಕಿನ್ನಿಗೋಳಿ: ಬುಡಸಹಿತ ಧರೆಗುರುಳಿದ ಅವಳಿ ವೀರರನ್ನು ತೊಟ್ಟಿಲು ಕಟ್ಟಿ ತೂಗಿದ್ದ ತಾಕೊಡೆ ಮರ ಇನ್ನು ನೆನಪು ಮಾತ್ರ


Share       ಕಾಂತಬಾರೆ – ಬೂದಬಾರೆ ಆಡಿ ಬೆಳೆದುದಕ್ಕೆ ಸಾಕ್ಷಿಯಾಗಿದ್ದ ಮರ ಇನ್ನು ನೆನಪು ಮಾತ್ರ ಮೂಲ್ಕಿ ತಾಲೂಕು ಕೊಲ್ಲೂರಿನ ಶ್ರೀ ಕಾಂತಬಾರೆ- ಬೂದ ಬಾರೆ ಜನ್ಮಕ್ಷೇತ್ರ ಕಾಂತಬಾರೆ – ಬೂದಬಾರೆ ಆಡಿ ಬೆಳೆದುದಕ್ಕೆ ಸಾಕ್ಷಿಯಾಗಿದ್ದ ಮರ


Read More »

ಶಾಂತಿ-ಸೌಹಾರ್ದತೆಯ ಸಂದೇಶ ಸಾರುವ ‘ಅಡ್ಡಣ ಪೆಟ್ಟು’: ಬಲು ವಿಶಿಷ್ಠ ಮಂಡೆಕೋಲಿನ ಈ ಅಡ್ಡಣಪೆಟ್ಟು ಆಚರಣೆ..!


Share       ಸುಳ್ಯ: ದೈವವೇ ಬಂದು ಜಗಳ ಬಿಡಿಸಿ ಸೌಹಾರ್ದತೆಯಿಂದ ಬಾಳಿ ಎಂಬ ಗತ ಕಾಲದ ದೈವ ಸಂದೇಶವನ್ನು ಇಂದಿಗೂ ಜನ ಮಾನಸಕ್ಕೆ ಮುಟ್ಟಿಸುವ ವಿಶಿಷ್ಟ ಆಚರಣೆ ಅಡ್ಡಣಪೆಟ್ಟು ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ಪ್ರತಿ ವರ್ಷವೂ ನಡೆಯುತಿದೆ.


Read More »