TOP STORIES:

ಬಿರುವೆರ್ ಕುಡ್ಲ ಬಜಪೆ ಘಟಕ ಸ್ಪಂದನ ತಂಡದ 61ನೇ ಸೇವಾ ಯೋಜನೆ


ದಿನಾಂಕ: 25.07.2021 ನೇ ಭಾನುವಾರ ಬಿರುವೆರ್ ಕುಡ್ಲ ಬಜಪೆ ಘಟಕ ಸ್ಪಂದನ ತಂಡದ ವತಿಯಿಂದ ಸುಂಕದಕಟ್ಟೆ ನಿವಾಸಿಜಗದೀಶ್ ಆಚಾರ್ಯ ಇವರಿಗೆ ವೈದ್ಯಕೀಯ ನೆರವಿಗಾಗಿ ಸಹಾಯಧನ ನೀಡಲಾಯಿತು

ಕಂದಾವರ ಪಂಚಾಯತ್ ಕೊಳಂಬೆ ಗ್ರಾಮದ ಸುಂಕದಕಟ್ಟೆ ದೇವಸ್ಥಾನದ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಕುಟುಂಬದಯಜಮಾನರಾದ ಜಗದೀಶ ಆಚಾರ್ಯ ಅವರು ಸುಮಾರು ಒಂದು ತಿಂಗಳ ಮುಂಚೆ ಮರದ ಕೆಲಸ ಮಾಡುತ್ತಿರುವಾಗ ಆಯ ತಪ್ಪಿಕೆಳಗೆ ಬಿದ್ದು ಕಾಲಿಗೆ ಗಾಯ ಆಗಿದ್ದು, ಕಾಲಿಗೆ ರಾಡ್ ಅಳವಡಿಸಲಾಗಿದೆ. ಇಡೀ ಕುಟುಂಬವು ಕೆಲಸವಿಲ್ಲದೆ ಆರ್ಥಿಕ ಸಂಕಷ್ಟದಲ್ಲಿದ್ದಾರೆಹಾಗೂ ಸ್ಟೀಲ್ ರಾಡ್ ತೆಗೆದು ಶಸ್ತ್ರ ಚಿಕಿತ್ಸೆ ಅಗತ್ಯವಿದ್ದು ಮತ್ತು ರಾಡ್ ಇದ್ದ ಜಾಗದಲ್ಲಿ ಇನ್ಪೆಕ್ಷನ್ ಆಗಿರುತ್ತದೆ ಮತ್ತಷ್ಟು ದಿನ ಕಳೆದರೆಜಾಸ್ತಿ ಆಗುವ ಸಂಭವವಿದೆ. ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಇವರು ಬಿರುವೆರ್ ಕುಡ್ಲ ಬಜಪೆ ಘಟಕಕ್ಕೆ ಮನವಿಯನ್ನುನೀಡಿರುತ್ತಾರೆ. ಇವರ ಮನವಿಯನ್ನು ಗಂಭೀರವಾಗಿ ಪರಿಗಣಿಸಿದ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಇವರಿಗೆ ದಿನಾಂಕ25/07/2021 ರಂದು ಬಿರುವೆರ್ ಕುಡ್ಲ ಬಜಪೆ ಘಟಕ ಸ್ಪಂದನ ತಂಡದಿಂದ ಧನಸಹಾಯ ನೀಡಲಾಯಿತು. ಲಾಕ್ ಡೌನ್ಸಮಯದಲ್ಲಿ ಇವರಿಗೆ ದಿನನಿತ್ಯದ ಆಹಾರ ಸಾಮಗ್ರಿ ಕಿಟ್ಟನ್ನು ಇವರಿಗೆ ಎರಡು ತಿಂಗಳ ಹಿಂದೆ ಘಟಕದಿಂದ ನೀಡಲಾಗಿತ್ತು. ತುಂಬಾಕಷ್ಟದಲ್ಲಿರುವ ಇವರ ಕುಟುಂಬ ದಾನಿಗಳ ನಿರೀಕ್ಷೆಯಲ್ಲಿದೆ.

ಸಂದರ್ಭದಲ್ಲಿ ಬಿರುವೆರ್ ಕುಡ್ಲ ಬಜಪೆ ಘಟಕದ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ಕೆಂಜಾರು ಕಾನ, ಪ್ರಸಾದ್ ಆಚಾರ್ಯಪಡುಪೆರಾರ, ಉಪಾಧ್ಯಕ್ಷರಾದ ಚಂದ್ರ ಪೂಜಾರಿ, ದಿನೇಶ್ ಕೆ ಬಂಗೇರ, ಕಾರ್ಯಾಧ್ಯಕ್ಷರಾದ ಗಣೇಶ್ ಪೂಜಾರಿ ಬಜಪೆ, ಸಂಘಟನಾಕಾರ್ಯದರ್ಶಿ ಶಿವಾನಂದ್ ಕಟೀಲು, ಸದಸ್ಯರಾದ ಮಹೇಂದ್ರ ಪೂಜಾರಿ ಶಾಂತಿಗುಡ್ಡೆ ಉಪಸ್ಥಿತರಿದ್ದರು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »