TOP STORIES:

ಬಿರುವೆರ್ ಕುಡ್ಲ (ರಿ)ಬೆಳ್ತಂಗಡಿ ಘಟಕದ ಬ್ರಹ್ಮಶ್ರೀ ಸೇವಾ ನಿಧಿಯಿಂದ 25ನೇ ಸೇವಾ ಯೋಜನೆಯಿಂದ ಚಿಕಿತ್ಸೆಗೆ ನೆರವು


ಉದಯ ಪೂಜಾರಿ ಬಳ್ಳಾಲ್ ಬಾಗ್ ಇವರ‌ ಸ್ಥಾಪಕ ಅಧ್ಯಕ್ಷತೆಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿರುವೆರ್ ಕುಡ್ಲ (ರಿ)ಬೆಳ್ತಂಗಡಿ ಘಟಕದ ಬ್ರಹ್ಮಶ್ರೀ ಸೇವಾ ನಿಧಿಯಿಂದ 25ನೇ ಸೇವಾ ಯೋಜನೆಯನ್ನು ಮಡಂತ್ಯಾರು ನಿವಾಸಿಯಾದ ರವಿಶಂಕರ್ ಪೂಜಾರಿ ಪೂರ್ಣಿಮಾ ದಂಪತಿಗಳ ಮನೆಗೆ ನೀಡಲಾಯಿತು.

ರವಿಶಂಕರ್ ಪೂಜಾರಿ ಪೂರ್ಣಿಮಾ ದಂಪತಿಗಳ ಮೂರುವರೆ ವರ್ಷದ ಮುಗ್ಧ ಮಗಳಾದ ಆರಾಧ್ಯಳು ಮಾತನಾಲಾಗದ ಹಾಗೂ ಕಿವಿ ಕೇಳಿಸದ ಸಮಸ್ಯೆಯಿಂದ ಬಳಲುತ್ತಿದ್ದು ಬೆಂಗಳೂರಿನ ಮಾನಸ ಇಎನ್ ಟಿ ಕೇಂದ್ರದಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಸಂದರ್ಭದಲ್ಲಿ ವೈದ್ಯರು ತಕ್ಷಣವೇ ಚಿಕಿತ್ಸೆ ನೀಡಿದರೆ ಆರಾಧ್ಯಳು ಎಲ್ಲರಂತೆ ಮಾತನಾಡಲು ಹಾಗೂ ಶ್ರವಣ ದೋಷದಿಂದ ಹೊರಬರುವ ಎಲ್ಲ ಸೂಚನೆಗಳಿವೆ ಎಂದು ಹಾಗೂ ಈ ಚಿಕಿತ್ಸೆಗೆ ಸರಿ ಸುಮಾರು 14 ಲಕ್ಷದ ಅಗತ್ಯವಿದೆ ಎಂದು ತಿಳಿಸುತ್ತಾರೆ.

ರವಿ ಪೂಜಾರಿ ಮಂಗಳೂರಿನ ಹೋಟೆಲ್ ಒಂದರಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದು ಈಗಾಗಲೇ ಕೆಲವೊಂದು ತೆರಪಿ ಚಿಕಿತ್ಸೆ ಯನ್ನು ನೀಡುತ್ತಿದ್ದು ದೊಡ್ಡ ಮೊತ್ತದ ಚಿಕಿತ್ಸಾ ವೆಚ್ಚ ಭರಿಸುವುದು ಕಷ್ಟದ ಕೆಲಸ.
ರವಿ ಪೂಜಾರಿಯವರ ಸಮಸ್ಯೆಯನ್ನು ಮನಗಂಡ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕವೂ ಸರ್ವ ಸದಸ್ಯರ ಒಮ್ಮತದಿಂದ ಮಹಾನ್ ಧಾನಿಗಳ ಸಹಕಾರದಿಂದ ರವಿ ಪೂಜಾರಿಯವರಿಗೆ ತನ್ನ 25 ನೇ ತುರ್ತು ಸೇವಾ ಯೋಜನೆ ಯಾಗಿ‌ 40000/-ರೂ.ಗಳ ಚೆಕ್ ನೀಡಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ರಾಜೇಶ್ ಕೋಟ್ಯಾನ್, ಪಧಾನ ಕಾರ್ಯದರ್ಶಿ ಅರುಣ್ ಕುಮಾರ್, ಕೋಶಾಧಿಕಾರಿ ಹರ್ಷ ಕೋಟ್ಯಾನ್, ಬೆಳ್ತಂಗಡಿ ವಲಯ ಸಂಚಾಲಕರಾದ ಸುರೇಂದ್ರ ಕೋಟ್ಯಾನ್, ಮಧುಕರ್ ಪುಂಜಾಲಕಟ್ಟೆ,ಸುಧೀರ್ ಪೆರ್ಲ,ಅಶೋಕ್ ಸ್ನೇಕ್,ವಿಜಿತ್ ಪೂಜಾರಿ ಮುಂಡಾಜೆ,ವಿಶ್ವನಾಥ್ ಬುಡೆಂಗೊಟ್ಟು,ಸುಜೀತ್ ಮಾಲಾಡಿ,ಪ್ರಶಾಂತ್ ದಾನ,ಪುಷ್ಪರಾಜ್ ಪುರಿಯ,ಹರಿಪ್ರಸಾದ್ ಪುರಿಯ,ರಾಜ್ ಕೋಟ್ಯಾನ್ ಮದ್ದಡ್ಕ,ಲಕ್ಷಣ್ ಮೆಸ್ಕಾಂ ಮಡಂತ್ಯಾರ್ ,ಸುನೀಲ್ ಉಪಸ್ಥಿತಿತರಿದ್ದರು.

ಇನ್ನು ಹೆಚ್ಚಿನ ಧನಸಹಾಯದ ಅಗತ್ಯ ವಿದ್ದು ನೀಡುವವರು ನೇರವಾಗಿ ಪೂರ್ಣಿಮಾ ಅವರ ಖಾತೆಗೆ ನೀಡಬಹುದು.

ಪೂರ್ಣಿಮಾ
ಖಾತೆ ಸಂಖ್ಯೆ. 520291028831611
ಕಾರ್ಪೊರೇಷನ್ ಬ್ಯಾಂಕ್ ಮಡಂತ್ಯಾರ್ ಬ್ರಾಂಚ್
IFSC COD-CORP0000145
INR-014500101017343
Google Play-9742621757


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »