TOP STORIES:

ಬಿರುವೆರ್‌ ಕುಡ್ಲ ಸಂಘಟನೆ ವಿರುದ್ಧದ ಆರೋಪಕ್ಕೆ ಶರಣ್‌ ಪಂಪ್‌ವೆಲ್‌ ಕ್ಷಮೆಯಾಚಿಸದಿದ್ದರೆ ಪ್ರತಿಭಟನೆಯ ಎಚ್ಚರಿಕೆ


ಉಡುಪಿ: ನಾಳೆಯೊಳಗಾಗಿ ಸಂಘಟನೆ ವಿರುದ್ದದ ಆರೋಪಕ್ಕೆ ಶರಣ್‌ ಪಂಪ್‌ವೆಲ್‌ ಕ್ಷಮೆಯಾಚಿಸದಿದ್ದರೆ ಬಳ್ಳಾಲ್‌ಬಾಗ್‌ನಲ್ಲಿ ಬಹಿರಂಗ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಬಿರುವೆರ್‌ ಕುಡ್ಲ ಸಂಘಟನೆ ಎಚ್ಚರಿಕೆ ನೀಡಿದೆ.

ಬಿರುವೆರ್ ಕುಡ್ಲ ಉಡುಪಿ ಘಟಕದಿಂದ ಉಡುಪಿ ಪ್ರೆಸ್ ಕ್ಲಬ್ಬಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು.ಬಿರುವೆರ್‌ ಕುಡ್ಲ ಸಂಘಟನೆಯ ಹೆಸರನ್ನು ಕೆಡಿಸಲು ವ್ಯವಸ್ಥಿತವಾದ ಷಡ್ಯಂತ್ರ ನಡೆಯುತ್ತಿದೆ. ಸಂಘಟನೆ ಮಾಡುವ ಉತ್ತಮ ಸಮಾಜ ಸೇವೆಯನ್ನು ಕಂಡು ಸಹಿಸಲಾಗದ ಕೆಲವೊಂದು ವ್ಯಕ್ತಿಗಳು ನಮ್ಮ ಸಂಘಟನೆಗೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ಶರಣ್‌ ಪಂಪ್‌ವೆಲ್‌ ಅವರು ಪೂರ್ಣ ಮಾಹಿತಿಯನ್ನು ತಿಳಿಯದೇ ಸಂಘಟನೆಯ ಮೇಲೆ ಆರೋಪ ಮಾಡಿ ನೋವುಂಟು ಮಾಡಿದ್ದಾರೆ. ಇದಕ್ಕಾಗಿ ಅವರು ಸಂಘಟನೆಯ ಕ್ಷಮೆಯಾಚಿಸಬೇಕು. ನಾಳೆಯ ಒಳಗೆ ಕ್ಷಮೆ ಕೇಳದೇ ಇದ್ದಲ್ಲಿ ಬಳ್ಳಾಲ್‌ಬಾಗ್‌ನಲ್ಲಿ ಬಹಿರಂಗ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದೆ.

ಕೌಟುಂಬಿಕ ಸಂಬಂಧಗಳ ಆಧಾರದಲ್ಲಿ ಮೆಚ್ಚಿಸಲು ಏಕಾಏಕಿ ಬಿರುವೆರ್‌ ಕುಡ್ಲದ ಮೇಲೆ ಆರೋಪ ಮಾಡುವುದು ಸಲ್ಲದು. ಗುರ್ಜಿ ದೀಪೋತ್ಸವ ಮಾಡುವ ಜವಾಬ್ದಾರಿಯನ್ನು ಹೊತ್ತ ಸಮಿತಿಯ ಪವಿತ್ರ ಜಾಗದಲ್ಲಿ ಕುಡಿದು ಕುಪ್ಪಳಿಸಿ ದಾರಿಯಲ್ಲಿ ಹೋಗುವವರಿಗೆ ಗುರಾಯಿಸಿ ನೋಡುವ, ತಮಾಷೆ ಮಾಡುವ ಮೂಲಕ ಪ್ರಚೋದನೆ ನೀಡಿ ಹೊರಗಿನಿಂದ ಬಂದ ಜನ ಪಾರ್ಟಿಯ ಹೆಸರಿನಲ್ಲಿ ಗಲಾಟೆಗೆ ಕಾರಣರಾಗುತ್ತಿದ್ದಾರೆ. ಶರಣ್ ಪಂಪ್‌‌ವೆಲ್ ಅವರು ಮೊದಲು ಇದನ್ನು ತಡೆಯುವ ಕೆಲಸವನ್ನು ಮಾಡಬೇಕಿದೆ. ಬಳ್ಳಾಲ್‌ ಬಾಗ್‌ನಲ್ಲಿ ಬಂದು ಯಾರು ಗಲಾಟೆ ಮಾಡುತ್ತಿದ್ದಾರೆ ಎನ್ನುವುದನ್ನು ಶರಣ್‌ ಪಂಪ್‌ವೆ‌ಲ್‌‌ ಅವರು ಮೊದಲು ತಿಳಿದುಕೊಳ್ಳಬೇಕು ಎಂದು ಬಿರುವೆರ್ ಕುಡ್ಲ ಸಂಘಟನೆ ಹೇಳಿದೆ

ಪೊಲೀಸ್‌ ಇಲಾಖೆ ಕೂಡಾ ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣದ ತನಿಖೆ ಮಾಡುತ್ತಿದ್ದು, ಎಲ್ಲಿಯೂ ಬಿರುವೆರ್‌ ಕುಡ್ಲದ ಹೆಸರು ಪ್ರಸ್ತಾಪಿಸಿಲ್ಲ. ಒಂದೆರಡು ವ್ಯಕ್ತಿಗಳು ಬಂದು ನಮ್ಮ ಸಂಘಟನೆಯ ಮೇಲೆ ವಿನಾಕಾರಣ ಆರೋಪ ಮಾಡಿದರೆ ಜನತೆ ನಂಬುವುದಿಲ್ಲ. ಬಿರುವೆರ್‌‌ ಕುಡ್ಲದ ವತಿಯಿಂದ ಸಮಾಜ ಸೇವೆ ಮುಂದುವರಿಯಲಿದೆ. ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣದಲ್ಲಿ ಬಿರುವೆರ್‌ ಕುಡ್ಲ ಸಂಘಟನೆಯ ಪಾತ್ರವಿಲ್ಲ. ಹಲ್ಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಕಾನೂನು ಕ್ರಮ ಕೈಗೊಂಡಿದ್ದಾರೆ. ಹಾಗಾಗಿ ಶರಣ್‌ ಪಂಪ್‌‌ವೆಲ್‌ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು‌ ಸಂಘಟನೆ ಒತ್ತಾಯಿಸಿದೆ.

ಬಿರುವೆರ್‌ ಕುಡ್ಲ ಉಡುಪಿ ಘಟಕದ ಸಂಘಟನೆಯ ಉಡುಪಿ ಘಟಕ ಅಧ್ಯಕ್ಷ ಕಿಶೋರ್ ಪೂಜಾರಿ, ಉಪಾಧ್ಯಕ್ಷರಾದ ದಿನೇಶ್ ಅಮಿನ್, ಖಜಾಂಚಿ ರಾಜೇಶ್ ಕೊಪ್ಪ, ಕಾರ್ಯದರ್ಶಿ ಯೋಗಿಶ್ ಅಮಿನ್, ಮಾಧ್ಯಮ ಸಲಹೆಗಾರ ತೇಜಸ್ ಬಂಗೇರಾ ಉಪಸ್ಥಿತರಿದ್ದರು.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »