TOP STORIES:

ಬಿರುವೆರ್‌ ಕುಡ್ಲ ಸಂಘಟನೆ ವಿರುದ್ಧದ ಆರೋಪಕ್ಕೆ ಶರಣ್‌ ಪಂಪ್‌ವೆಲ್‌ ಕ್ಷಮೆಯಾಚಿಸದಿದ್ದರೆ ಪ್ರತಿಭಟನೆಯ ಎಚ್ಚರಿಕೆ


ಉಡುಪಿ: ನಾಳೆಯೊಳಗಾಗಿ ಸಂಘಟನೆ ವಿರುದ್ದದ ಆರೋಪಕ್ಕೆ ಶರಣ್‌ ಪಂಪ್‌ವೆಲ್‌ ಕ್ಷಮೆಯಾಚಿಸದಿದ್ದರೆ ಬಳ್ಳಾಲ್‌ಬಾಗ್‌ನಲ್ಲಿ ಬಹಿರಂಗ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಬಿರುವೆರ್‌ ಕುಡ್ಲ ಸಂಘಟನೆ ಎಚ್ಚರಿಕೆ ನೀಡಿದೆ.

ಬಿರುವೆರ್ ಕುಡ್ಲ ಉಡುಪಿ ಘಟಕದಿಂದ ಉಡುಪಿ ಪ್ರೆಸ್ ಕ್ಲಬ್ಬಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು.ಬಿರುವೆರ್‌ ಕುಡ್ಲ ಸಂಘಟನೆಯ ಹೆಸರನ್ನು ಕೆಡಿಸಲು ವ್ಯವಸ್ಥಿತವಾದ ಷಡ್ಯಂತ್ರ ನಡೆಯುತ್ತಿದೆ. ಸಂಘಟನೆ ಮಾಡುವ ಉತ್ತಮ ಸಮಾಜ ಸೇವೆಯನ್ನು ಕಂಡು ಸಹಿಸಲಾಗದ ಕೆಲವೊಂದು ವ್ಯಕ್ತಿಗಳು ನಮ್ಮ ಸಂಘಟನೆಗೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ಶರಣ್‌ ಪಂಪ್‌ವೆಲ್‌ ಅವರು ಪೂರ್ಣ ಮಾಹಿತಿಯನ್ನು ತಿಳಿಯದೇ ಸಂಘಟನೆಯ ಮೇಲೆ ಆರೋಪ ಮಾಡಿ ನೋವುಂಟು ಮಾಡಿದ್ದಾರೆ. ಇದಕ್ಕಾಗಿ ಅವರು ಸಂಘಟನೆಯ ಕ್ಷಮೆಯಾಚಿಸಬೇಕು. ನಾಳೆಯ ಒಳಗೆ ಕ್ಷಮೆ ಕೇಳದೇ ಇದ್ದಲ್ಲಿ ಬಳ್ಳಾಲ್‌ಬಾಗ್‌ನಲ್ಲಿ ಬಹಿರಂಗ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದೆ.

ಕೌಟುಂಬಿಕ ಸಂಬಂಧಗಳ ಆಧಾರದಲ್ಲಿ ಮೆಚ್ಚಿಸಲು ಏಕಾಏಕಿ ಬಿರುವೆರ್‌ ಕುಡ್ಲದ ಮೇಲೆ ಆರೋಪ ಮಾಡುವುದು ಸಲ್ಲದು. ಗುರ್ಜಿ ದೀಪೋತ್ಸವ ಮಾಡುವ ಜವಾಬ್ದಾರಿಯನ್ನು ಹೊತ್ತ ಸಮಿತಿಯ ಪವಿತ್ರ ಜಾಗದಲ್ಲಿ ಕುಡಿದು ಕುಪ್ಪಳಿಸಿ ದಾರಿಯಲ್ಲಿ ಹೋಗುವವರಿಗೆ ಗುರಾಯಿಸಿ ನೋಡುವ, ತಮಾಷೆ ಮಾಡುವ ಮೂಲಕ ಪ್ರಚೋದನೆ ನೀಡಿ ಹೊರಗಿನಿಂದ ಬಂದ ಜನ ಪಾರ್ಟಿಯ ಹೆಸರಿನಲ್ಲಿ ಗಲಾಟೆಗೆ ಕಾರಣರಾಗುತ್ತಿದ್ದಾರೆ. ಶರಣ್ ಪಂಪ್‌‌ವೆಲ್ ಅವರು ಮೊದಲು ಇದನ್ನು ತಡೆಯುವ ಕೆಲಸವನ್ನು ಮಾಡಬೇಕಿದೆ. ಬಳ್ಳಾಲ್‌ ಬಾಗ್‌ನಲ್ಲಿ ಬಂದು ಯಾರು ಗಲಾಟೆ ಮಾಡುತ್ತಿದ್ದಾರೆ ಎನ್ನುವುದನ್ನು ಶರಣ್‌ ಪಂಪ್‌ವೆ‌ಲ್‌‌ ಅವರು ಮೊದಲು ತಿಳಿದುಕೊಳ್ಳಬೇಕು ಎಂದು ಬಿರುವೆರ್ ಕುಡ್ಲ ಸಂಘಟನೆ ಹೇಳಿದೆ

ಪೊಲೀಸ್‌ ಇಲಾಖೆ ಕೂಡಾ ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣದ ತನಿಖೆ ಮಾಡುತ್ತಿದ್ದು, ಎಲ್ಲಿಯೂ ಬಿರುವೆರ್‌ ಕುಡ್ಲದ ಹೆಸರು ಪ್ರಸ್ತಾಪಿಸಿಲ್ಲ. ಒಂದೆರಡು ವ್ಯಕ್ತಿಗಳು ಬಂದು ನಮ್ಮ ಸಂಘಟನೆಯ ಮೇಲೆ ವಿನಾಕಾರಣ ಆರೋಪ ಮಾಡಿದರೆ ಜನತೆ ನಂಬುವುದಿಲ್ಲ. ಬಿರುವೆರ್‌‌ ಕುಡ್ಲದ ವತಿಯಿಂದ ಸಮಾಜ ಸೇವೆ ಮುಂದುವರಿಯಲಿದೆ. ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣದಲ್ಲಿ ಬಿರುವೆರ್‌ ಕುಡ್ಲ ಸಂಘಟನೆಯ ಪಾತ್ರವಿಲ್ಲ. ಹಲ್ಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಕಾನೂನು ಕ್ರಮ ಕೈಗೊಂಡಿದ್ದಾರೆ. ಹಾಗಾಗಿ ಶರಣ್‌ ಪಂಪ್‌‌ವೆಲ್‌ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು‌ ಸಂಘಟನೆ ಒತ್ತಾಯಿಸಿದೆ.

ಬಿರುವೆರ್‌ ಕುಡ್ಲ ಉಡುಪಿ ಘಟಕದ ಸಂಘಟನೆಯ ಉಡುಪಿ ಘಟಕ ಅಧ್ಯಕ್ಷ ಕಿಶೋರ್ ಪೂಜಾರಿ, ಉಪಾಧ್ಯಕ್ಷರಾದ ದಿನೇಶ್ ಅಮಿನ್, ಖಜಾಂಚಿ ರಾಜೇಶ್ ಕೊಪ್ಪ, ಕಾರ್ಯದರ್ಶಿ ಯೋಗಿಶ್ ಅಮಿನ್, ಮಾಧ್ಯಮ ಸಲಹೆಗಾರ ತೇಜಸ್ ಬಂಗೇರಾ ಉಪಸ್ಥಿತರಿದ್ದರು.


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »