TOP STORIES:

ಬಿಲ್ಲವ ಅಸೋಸಿಯೇಷನ್ ಸೌದಿ ಅರೇಬಿಯಾ ಇದರ ವತಿಯಿಂದ ರಿಯಾದ್ ನಲ್ಲಿ ಬಹ್ಮಶೀ ನಾರಾಯಣ ಗುರುಗಳ 167ನೇ ಗುರು ಜಯಂತಿ ಆಚರಣೆ


ಬಿಲ್ಲವ ಅಸೋಸಿಯೇಷನ್ ಸೌದಿ ಅರೇಬಿಯಾ ಇದರ ವತಿಯಿಂದ ರಿಯಾದ್ ನಲ್ಲಿ ಬಹ್ಮಶೀ ನಾರಾಯಣ ಗುರುಗಳ 167 ನೇ ಗುರುಜಯಂತಿಯನ್ನು ಬಹಳ ವಿಜ್ರಂಭಣೆಯಿಂದ ಆಚರಿಸಲಾಯಿತು. ಇದರ ಅಂಗವಾಗಿ ಸಭಾ ಹಾಗೂ ಸಾಂಸೃತಿಕ ಕಾರ್ಯಕ್ರಮಗಳನ್ನುಆಯೋಜಿಸಲಾಗಿತ್ತು.


ಕಾರ್ಯಕ್ರಮದ ಪ್ರಾರಂಭದಲ್ಲಿಕುಶಾಲ್ ಕರ್ಕೇರ ಅವರು ಪ್ರಾಸ್ತಾವಿಕ ಭಾಷಣಗೈದರು. ಶ್ರೀಮತಿ ಶೀಬಾ ಸುಧೀರ್ ಉಳ್ಳಾಲ್, ಕೋರ್ ಸಮಿತಿ ಸದಸ್ಯರಾದಭಾಸ್ಕರ್ ಕೊಟ್ಯಾನ್, ಲೀಲಾದರ್ ಗುಜರನ್, ಸತೀಶ್ ಕುಮಾರ್ ಬಜಾಲ್, ಭಾಸ್ಕರ್ ಪೂಜಾರಿ, ಪ್ರಕಾಶ್ ಅಮೀನ್, ಸುಂದರ್ದಾಸ್ ಪೂಜಾರಿ, ಸತೀಶ್ ಅಮೀನ್ ,ಚಂದ್ರಶೇಕರ್ ಪೂಜಾರಿ , ಚೇತನ ಸದಾಶಿವ ಪೂಜಾರಿ,ರಕ್ಷಿತಾ ಜಗದೀಶ್, ಸುಮಿತ್ರಾ ಭಾಸ್ಕರ್ಇವರನ್ನು ಹಾಗೂ ಮುಖ್ಯ ಅತಿಥಿಗಳಾದ ಶ್ರೀಯುತ ಸದಾಶಿವ ಪೂಜಾರಿ, ಶೇಖರ್ ಕೋಟ್ಯಾನ್, ಉದಯ ಸನಿಲ್, ಚಂದ್ರಕಾಂತ್ಅಮೀನ್, ವಿಶ್ವನಾಥ್ ಸುವರ್ಣ , ಇವರುಗಳನ್ನು ವೇದಿಕೆಗೆ ಆಹ್ವಾನಿಸಿದರು.

ಅತಿಥಿಗಳು ದೀಪ ಬೆಳಗಿಸುವ ಮೂಲಕ ಹಾಗೂ ರಂಜಿತ್ ಕಕ್ಕಿಂಜಿ (ರಂಜು ತುಳು ರಂಗ ಪ್ರೇಮಿ) ವಿಘ್ನವಿನಾಶಕ ಶ್ಲೋಕದೂಂದಿಗೆಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತದಾನಂತರ ದಮ್ಮಾಮ್ಅಲ್ಖೋಬರ್ , ಜುಬೈಲ್ , ರಿಯಾದ್, ಅಭಾ. ಕಲಾವಿದರಿಂದ ನೃತ್ಯ, ಹಾಡುಗಳಲ್ಲದೆ. ವಿಭಿನ್ನ ರೀತಿಯ ಮನೋರಂಜನಾ 

ಕಾರ್ಯಕ್ರಮಗಳು ಪ್ರೇಕ್ಷಕರಮನಸೂರೆಗೊಂಡವು. ಹಾಗೂ

2021-2022 ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಮಂಗಳೂರು ಅಸೋಸಿಯೇಷನ್ ಸೌದಿ ಅರೇಬಿಯಾ, ದಮ್ಮಾಮ್(MASA) ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಅವರು ಪ್ರಕಟಿಸಿದರು.ಅಧ್ಯಕ್ಷರು ಶ್ರೀಯುತಲೀಲಾದರ್ ಗುಜರನ್ , ಹಾಗೂ ಗೌರವ ಅಧ್ಯಕ್ಷರು , ಕೆ.ಸಿ.ಭಾಸ್ಕರ್ , ಉಪಾಧ್ಯಕ್ಷರುಗಳುಚೇತನಾ ಸದಾಶಿವ ಪೂಜಾರಿ, ರಕ್ಷಿತಾಜಗದೀಶ್, ಪ್ರಧಾನ ಕಾರ್ಯದರ್ಶೀ ಪ್ರಕಾಶ್ ಅಮೀನ್ , ಜೊತೆ ಸಹಕಾರ್ಯ ದರ್ಶಿ ಸುಂದರ್ ದಾಸ್  ಪೂಜಾರಿ, ಖಜಾಂಚಿ  : ಚಂದ್ರಶೇಖರ್ ಹಾಗೂ ಉಪ ಖಜಾಂಚಿ ಸುಮಿತ್ರ ಭಾಸ್ಕರ್ ಇವರೆಲ್ಲರು ಅವಿರೋಧವಾಗಿ ಆಯ್ಕೆಯಾದರು.

ಕೊರೋನದ ಕಷ್ಟ ಸಮಯದಲ್ಲಿ ರೋಗಿಗಳಿಗೆ ಹಾಗೂ ಆರ್ಥಿಕವಾಗಿ ಸಮಸ್ಯೆ ಇದ್ದವರಿಗೆ ರಾತ್ತಿ ಹಗಲು ಎನ್ನದೆ, ಅಶಕ್ತರಿಗೆ ಸಹಾಯಮಾಡಿದ ಹಾಗೂ ಸೌದಿಯಲ್ಲಿ ಕೊರೋನ ಸಮಯದಲ್ಲಿ ಮತ್ತು ಇನ್ನಿತರ ಸಮಯದಲ್ಲಿ ಮೃತ ಪಟ್ಟವರ ಮೃತ ದೇಹವನ್ನು ಎಲ್ಲಾಸರಿಯಾದ ದಾಖಲೆ ಪತ್ರ ಗಳೊಂದಿಗೆ ಅವರ ಕುಟುಂಬಕ್ಕೆ ತಲುಪಿಸುವ ಮೂಲಕ ಮಾನವೀಯತೆ ಮೆರೆದ ನಾಲ್ವರುಮಹಾನೀಯರಾದ ಶ್ರೀ ಸತೀಶ್ ಕುಮಾರ್ ಬಜಾಲ್ , ಸತೀಶ್ ಅಮೀನ್ , ಸುಂದರ್ ದಾಸ್ ಪೂಜಾರಿ, ಸುದೀರ್ ಕೊಟ್ಯಾನ್ , ಇವರೆಲ್ಲರಿಗೆಆಪತ್ಭಾಂದವರುಎಂಬ ಪುರಸ್ಕಾರ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಪ್ರಕಾಶ್ ಅಮೀನ್ , ಅವರನ್ನುರೀಯಾದ್ ಬಿಲ್ಲವಾಸ್ ನಲ್ಲಿ ಹಲವು ವರ್ಷಗಳಿಂದ ಸಕ್ರೀಯವಾಗಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಅವರಿಗೆ ಶಾಲು ಹೊದಿಸಿಸನ್ಮಾನಿಸಲಾಯಿತು ಮತ್ತು 60 ವರ್ಷ ಸಂಪೂರ್ಣ ಗೊಂಡ ಸಂಘದ ಕ್ರೀಯಾಶೀಲಾ ಹಿರಿಯರಾದ ಶ್ರೀಕಾಂತ್ ಅಮೀನ್, ಹೆಜಮಾಡಿರರಿಗೆ

ಇವರಿಗೂ. ಸಂಘದ ವತಿಯಿದ ಸನ್ಮಾನಿಸಿ ಗೌರವಿಸಲಾಯಿತು.ಸಂಪೂರ್ಣ  ಕಾರ್ಯಕ್ರಮವನ್ನು ಪ್ರವೀಣ್ ಪೂಜಾರಿ, ಕುಂಜತಬೈಲ್ಅವರು ನಿರ್ವಹಿಸಿದರು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »