TOP STORIES:

ಬಿಲ್ಲವ, ಈಡಿಗ, ನಾಮಧಾರಿ, ನಾಯ್ಕ ಸೇರಿದಂತೆ ಸುಮಾರು 26 ಪಂಗಡಗಳಿಗೆ ರಾಜ್ಯ ಸರ್ಕಾರ ಎಂದು ಭಾವಿಸಿದೆ: ಬಿಲ್ಲವ ಮುಖಂಡ ಪದ್ಮರಾಜ್ ಆರ್‌‌.


ಬಿಲ್ಲವ, ಈಡಿಗ, ನಾಮಧಾರಿ, ನಾಯ್ಕ ಸೇರಿದಂತೆ ಸುಮಾರು 26 ಪಂಗಡಗಳಿಗೆ ರಾಜ್ಯ ಸರ್ಕಾರ ಹೊಸತಾಗಿ ಸ್ಥಾಪಿಸಲು ಆದೇಶನೀಡಿರುವ, ‘ಬ್ರಹ್ಮಶ್ರೀ ನಾರಾಯಣಗುರು ಕೋಶವನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಅವರು ವಿರೋಧಿಸಿದ್ದು,‘ರಾಜ್ಯದ ಬಿಜೆಪಿ ಸರ್ಕಾರ ಬಿಲ್ಲವ ಸಮುದಾಯವನ್ನು ಮೂರ್ಖರು ಎಂದು ಭಾವಿಸಿದಂತಿದೆಎಂದುಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಅವರು, “ರಾಜ್ಯದ ನಾಲ್ಕನೇ ಅತೀ ದೊಡ್ಡ ಸಮುದಾಯವಾದ, ಸುಮಾರು 70 ಲಕ್ಷಜನಸಂಖ್ಯೆ ಇರುವ ಬಿಲ್ಲವಈಡಿಗ ಸಮುದಾಯಕ್ಕೆ ಒಂದು ನಿಗಮ ಸ್ಥಾಪಿಸಲು ಸರ್ಕಾರಕ್ಕೆ ಇರುವ ಸಮಸ್ಯೆ ಏನು? ಇದು ಸರ್ಕಾರಕ್ಕೆಬಿಲ್ಲವ ಸಮುದಾಯದ ಮೇಲೆ ಇರುವ ತಾತ್ಸಾರ ಭಾವನೆ ಅಲ್ಲದೆ ಮತ್ತೇನು?” ಎಂದು ಕೇಳಿದರು.

ಬಿಲ್ಲವ ಸಮುದಾಯಕ್ಕೆ ನಿಗಮ ಸ್ಥಾಪಿಸಬೇಕು ಎಂದು ಆರು ವರ್ಷದಿಂದ ಹೋರಟ ಮಾಡುತ್ತಿದ್ದೇವೆ. ತೀರಾ ಕಡಿಮೆ ಜನಸಂಖ್ಯೆಇರುವ ಹಲವು ಹಿಂದುಳಿದ ಸಮುದಾಯಕ್ಕೆ ನಿಗಮಗಳನ್ನು ಸ್ಥಾಪಿಸಲಾಗಿದೆ, ಬಗ್ಗೆ ನಮಗೆ ತಕರಾರು ಏನಿಲ್ಲ. ಅದರ ಜೊತೆಗೆಆರ್ಥಿಕವಾಗಿ ಬಲಿಷ್ಠರಾಗಿರುವ ಒಕ್ಕಲಿಗ, ಬ್ರಾಹ್ಮಣ ಮತ್ತು ಮರಾಠ ಸಮುದಾಯಗಳಿಗೆ ನಿಗಮಗಳಿವೆ. ಆದರೆ ಬಿಲ್ಲವಈಡಿಗಸಮುದಾಯಕ್ಕೆ ಒಂದು ನಿಗಮ ಸ್ಥಾಪಿಸಲು ಸರ್ಕಾರಕ್ಕೆ ಸಮಸ್ಯೆಯೇನಿದೆಎಂದು ಪ್ರಶ್ನಿಸಿದರು.

ಸರ್ಕಾರ ಹೊಸದಾಗಿ ನೀಡಿರುವಕೋಶವನ್ನು ಸ್ಥಾಪನೆ ಮಾಡದೆ ಇದ್ದರೆ ಒಳ್ಳೆಯದಿತ್ತು. ‘ಕೋಶಸ್ಥಾಪನೆ ಎಂಬುವುದು ಚುನಾವಣೆಹತ್ತಿರ ಇರಬೇಕಾದರೆ ಜನರನ್ನು ದಾರಿ ತಪ್ಪಿಸುವ ಒಂದು ದಾರಿಯಷ್ಟೆ. ನಿಗಮಕ್ಕೂ ಕೋಶಕ್ಕು ಬಹಳಷ್ಟು ವ್ಯತ್ಯಾಸವಿದೆ, ಇದರಿಂದಸಮುದಾಯಕ್ಕೆ ಒಂದಿಷ್ಟು ಲಾಭವಿಲ್ಲ ಎಂದು ಪದ್ಮರಾಜ್ ಹೇಳಿದರು.

ನಿಗಮ ಎಂದರೆ ಒಂದು ಸ್ವತಂತ್ರ ಸಂಸ್ಥೆಯಾಗಿದ್ದು, ಅದಕ್ಕೆ ಒಂದು ಸ್ವಾಯತ್ತತೆ ಇರುತ್ತದೆ. ಅದಕ್ಕೆ ತನ್ನದೇ ಆದ ಕಾನೂನು, ಸಂವಿಧಾನ ಇರುತ್ತದೆ. ನಿಗಮಕ್ಕೆ ಒಬ್ಬ ಅಧ್ಯಕ್ಷರು ಇರುತ್ತಾರೆ, ಸದಸ್ಯರು ಇರುತ್ತಾರೆ, ನಿದೇಶಕರು ಇರುತ್ತಾರೆ. ಇಲ್ಲೆಲ್ಲಾ ಸಮುದಾಯದಪ್ರತಿನಿಧಿಗಳಿದ್ದು, ಇವರೆಲ್ಲಾ ತಮ್ಮ ಪರಿಧಿಯಲ್ಲಿ ಸಮುದಾಯದ ಅಭಿವೃದ್ಧಿಗಾಗಿ ಕೆಲಸ ಮಾಡುವ ಅಧಿಕಾರ ಇರುತ್ತದೆ. ಕೋಶಎಂದರೆ, ನಿರ್ದೇಶನಾಲಯ ಅಡಿಯಲ್ಲಿ ಬರುವ ಒಂದು ಸಣ್ಣ ಅಂಗ ಸಂಸ್ಥೆ ಮಾತ್ರವಾಗಿದೆಎಂದು ಅವರು ತಿಳಿಸಿದರು.

ಕೋಶಕ್ಕೆ ಸರ್ಕಾರದ ಕಡೆಯಿಂದ ಒಬ್ಬ ಅಧಿಕಾರಿ ಇರುತ್ತಾರೆ ಎಂಬುವುದನ್ನು ಬಿಟ್ಟು, ಅಧಿಕಾರಿಗೆ ಕೂಡಾ ಯಾವುದೇ ಅಧಿಕಾರಇರುವುದಿಲ್ಲ. ಎಲ್ಲವನ್ನೂ ತನ್ನ ಮೇಲಾಧಿಕಾರಿಯ ಅಡಿಯಲ್ಲೆ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಸಮುದಾಯವನ್ನುಪ್ರತಿನಿಧಿಸುವ ಒಬ್ಬನೇ ಒಬ್ಬ ಸದಸ್ಯ ಕೋಶದಲ್ಲಿ ಇರುವುದಿಲ್ಲ. ಇದೊಂದು ಹಲ್ಲಿಲ್ಲದ ಹಾವು ಎಂದೇ ಹೇಳಬಹುದುಎಂದುಅವರು ಅಭಿಪ್ರಾಯಪಟ್ಟರು.

ಚುನಾವಣೆ ಹೊತ್ತಿಗೆ ನಾವು ಹಿಂದುಳಿದ ವರ್ಗಗಳಿಗೆಏನೋನೀಡಿದ್ದೇವೆ ಎಂದು ಜನರನ್ನು ದಾರಿ ತಪ್ಪಿಸಲಾಗುತ್ತಿದೆ. ಕೇವಲ ಬಿಲ್ಲವಸಮಾಜಕ್ಕೆ ಮಾತ್ರವಲ್ಲ, ಸಮಸ್ತ ಹಿಂದುಳಿದ ವರ್ಗಗಳನ್ನು ಮತ್ತೇ ಹಿಂದುಳಿಯುವಂತೆ ಮಾಡುವ ಎಲ್ಲಾ ಪ್ರಯತ್ನಗಳು ನಡೆಯುತ್ತಲೆಇವೆ. ಸರ್ಕಾರ ಹೊಸದಾಗಿ ರಚಿಸಲಿರುವ ಕೋಶವು ನಿಗಮಗಳು ಮಾಡುವ 2% ಕೆಲಸಗಳನ್ನು ಮಾಡುವುದಿಲ್ಲಎಂದು ಅವರುಅಸಮಾಧಾನ ವ್ಯಕ್ತಪಡಿಸಿದರು.

ಕೋಶಕ್ಕೆ ಅನುದಾನ ನೀಡುತ್ತೇವೆ ಎಂದು ಸರ್ಕಾರ ಹೇಳಿದೆ, ಆದರೆ ಎಷ್ಟು ನೀಡುತ್ತೇವೆ ಎಂದು ಇನ್ನೂ ಹೇಳಿಲ್ಲ ಎಂದು ಹೇಳಿದಪದ್ಮರಾಜ್, “ನನ್ನ ಪ್ರಕಾರ ಹೆಚ್ಚೆಂದರೆ 10 ರಿಂದ 15 ಕೋಟಿ ನೀಡಬಹುದು. ಆದರೆ ನಿಗಮಗಳಿಗೆ ಕಡಿಮೆಯೆಂದರೂ 100-200 ಕೋಟಿ ನೀಡಬೇಕಾಗುತ್ತದೆ. ಒಂದು ವೇಳೆ ಕೋಶಕ್ಕೆ 100 ಕೋಟಿ ಕೊಡುತ್ತೇವೆ ಎಂದರೂ ಅದನ್ನು ಸಮುದಾಯದ ಅಭಿವೃದ್ಧಿಗೆಸುಲಭದಲ್ಲಿ ಖರ್ಚು ಮಾಡಲು ಸಾಧ್ಯವಿಲ್ಲ

ಹಿಂದೆ ಶೇಂದಿ ಇಳಿಸುವವರಿಗೆ ಪರ್ಯಾಯ ಉದ್ಯೋಗಕ್ಕೆ ಸಹಾಯ ಎಂದು ಸಿದ್ದರಾಮಯ್ಯ ಸರ್ಕಾರ 12 ಕೋಟಿ ರೂ. ಅನುದಾನ ಮೀಸಲು ಇಡಲಾಗಿತ್ತು. ಆದರೆ ಅದರಲ್ಲಿ ಖರ್ಚಾಗಿದ್ದು, 2-3 ಕೋಟಿ ಮಾತ್ರ. ಉಳಿದ ಹಣ ಈಗಲೂ ಇದೆ. ಇದೇ ರೀತಿಕೋಶದಲ್ಲೂ ನಡೆಯುತ್ತದೆಎಂದು ತಿಳಿಸಿದರು.

ಒಂದು ವೇಳೆ ಹತ್ತು ಕೋಟಿ ನೀಡುತ್ತೇವೆ ಎಂದು ಹೇಳಿದರೂ, ಕೋಶದಲ್ಲಿ ಸಮುದಾಯದ ಯಾವೊಬ್ಬ ಪ್ರತಿನಿಧಿಯು ಇರದೆಇದ್ದುದರಿಂದ ಅದನ್ನು ಕೂಡಾ ಹಲವು ಕಾರಣಗಳನ್ನು ನೀಡಿ ಹಾಗೆಯೆ ಇಡುತ್ತಾರೆಯೆ ಹೊರತು ಬಳಸುವುದಿಲ್ಲ. ಬ್ರಾಹ್ಮಣ ಮತ್ತುಲಿಂಗಾಯತ ನಿಗಮವನ್ನು ನೀಡಿದ್ದು ತೀರಾ ಇತ್ತೀಚೆಗೆ ಹೀಗಿರುವಾಗ ಬಿಲ್ಲವರಿಗೆ ನಿಮಗವನ್ನು ಯಾಕೆ ನೀಡಬಾರದುಎಂದುಪದ್ಮರಾಜ್ ಆರ್‌‌. ಹೇಳಿದರು.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »