TOP STORIES:

ಬಿಲ್ಲವ ಜನಾಂಗದ ಮೂರ್ತೆದಾರರು, ಗರಡಿ ಅರ್ಚಕರು, ಸ್ವ-ಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ಪರಿಹಾರ ನೀಡುವಂತೆ ಬಿ.ಎನ್.ಶಂಕರಪೂಜಾರಿ ಮನವಿ.


ಪ್ರಸಾರ ಮತ್ತು ಪ್ರಕಟಣೆಯ ಕೃಪೆಗಾಗಿ.

ಬಿಲ್ಲವ ಜನಾಂಗದ ಮೂರ್ತೆದಾರರು, ಗರಡಿ ಅರ್ಚಕರು, ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ಪರಿಹಾರ ನೀಡುವಂತೆ  ಬಿ.ಎನ್.ಶಂಕರಪೂಜಾರಿ ಮನವಿ.

ಶೇಂದಿ ತೆಗೆದು ಬದುಕುವ ಬಿಲ್ಲವ/ಈಡಿಗ ಜನಾಂಗದ ಮೂರ್ತೆದಾರಿಕೆ ಕಸುಬು ಲಾಕ್ ಡೌನ್ ನಿಂದಾಗಿ ಸಂಪೂರ್ಣ ನಿಂತುಹೋಗಿದ್ದು, ಮೂರ್ತೆದಾರರ ಕುಟುಂಬಗಳು ಅನಾಥವಾಗಿವೆ. ಬಿಲ್ಲವ ಜನಾಂಗದ ಆರಾಧ್ಯ ದೇವರುಗಳಾದ ಕೋಟಿಚೆನ್ನಯ್ಯಗರಡಿಗಳಲ್ಲಿ ಪೂಜೆ ಮಾಡುವ ಗರಡಿ ಅರ್ಚಕರು, ದರ್ಶನ ಪಾತ್ರಿಗಳು ಇನ್ನಿತರ ಸಿಬ್ಬಂದಿಗಳು ಇತರ ದೇವಸ್ಥಾನಗಳ ಸಿಬ್ಬಂದಿಗಳಂತೆಸಂಕಷ್ಟದಲ್ಲಿದ್ದು, ರಾಜ್ಯ ಸರಕಾರ ಇವರ ನೆರವಿಗೆ ಬರಬೇಕಾಗಿದೆ. ಮೂರ್ತೆದಾರರ ಸಹಕಾರಿ ಸಂಘಗಳಲ್ಲಿ ಸ್ವಸಹಾಯ ಸಂಘವನ್ನುರಚನೆ ಮಾಡಿಕೊಂಡಿರುವ  40 ಸಾವಿರಕ್ಕೂ ಮಿಕ್ಕಿದ ಸದಸ್ಯೆಯರು ನಿರುದ್ಯೋಗಿಗಳಾಗಿದ್ದರೆ, ಈಡಿಗ/ಬಿಲ್ಲವರ ಕುಲಕಸುಬುಸ್ಥಬ್ದವಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಸಕರು, ಸಂಸದರು, ಸಚಿವರ ಸಹಿತ ಸರ್ವರು ಬಿಲ್ಲವ ಜನಾಂಗದ ಬಗ್ಗೆಗಮನ ಹರಿಸಿ, ಮುಖ್ಯ ಮಂತ್ರಿಗಳ ಮೇಲೆ ಒತ್ತಡ ತಂದು, ಬಿಲ್ಲವ ಜನಾಂಗಕ್ಕೆ ನ್ಯಾಯ ಒದಗಿಸಿ ಕೂಡಲೇ ಪರಿಹಾರಘೋಷಿಸಬೇಕೆಂದು ಬಿಲ್ಲವ ಸಮಾಜದ ಮುಖಂಡ ಮಾಜಿ ಜಿ.ಪಂ.ಅಧ್ಯಕ್ಷರು, ಕಟಪಾಡಿ ವಿಶ್ವನಾಥ ಕ್ಷೇತ್ರದ ಅಧ್ಯಕ್ಷರು ಆಗಿರುವಬಿ.ಎನ್.ಶಂಕರ ಪೂಜಾರಿಯವರು ಎಲ್ಲಾ ಶಾಸಕರಿಗೆ, ಸಂಸದರಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ. ಎಲ್ಲರಿಗೂ ಪರಿಹಾರನೀಡುವಾಗ ನಮ್ಮ ಜನಾಂಗವನ್ನು ಕೈ ಬಿಟ್ಟಿರುವುದು ನೋವುಂಟು ಮಾಡಿದೆ ಎಂದು ಬಿ.ಎನ್.ಶಂಕರ ಪೂಜಾರಿಯವರು ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »