TOP STORIES:

ಬಿಲ್ಲವ ಯುವಹಬ್ಬ, ಬೆಂಗಳೂರು ಬಿಲ್ಲವ ಅಸೋಸಿಯೇಶನ್ 45ನೇ ವಾರ್ಷಿಕೋತ್ಸವ


ಹಿಂದುಳಿದವರು ರಾಜಕೀಯವಾಗಿ ಪ್ರಬಲವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಆಶಯ

ಬಿಲ್ಲವ ಯುವಹಬ್ಬ, ಬೆಂಗಳೂರು ಬಿಲ್ಲವ ಅಸೋಸಿಯೇಶನ್ 45ನೇ ವಾರ್ಷಿಕೋತ್ಸವ

ಬೆಂಗಳೂರು: ಇಲ್ಲಿನ ಬಿಲ್ಲವ ಅಸೋಸಿಯೇಶನ್ 45ನೇ ವಾರ್ಷಿಕೋತ್ಸವ ಮತ್ತು ಬಿಲ್ಲವ ಯುವಹಬ್ಬ ಭಾನುವಾರ ಬನ್ನೇರುಘಟ್ಟರಸ್ತೆಯಲ್ಲಿರುವ ಬಿಲ್ಲವ ಭವನದಲ್ಲಿ ನಡೆಯಿತು.

ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಸುಲಭವಾಗಿಮೇಲೆ ಬರಲು ಸಾಧ್ಯವಿಲ್ಲ. ರಾಜಕೀಯವಾಗಿ ಪ್ರಬಲರಾದರೆ ಮಾತ್ರ ಸಾಧ್ಯ ಎಂದರು.

ಎಲ್ಲರಲ್ಲೂ ಪ್ರತಿಭೆ ಇರುತ್ತದೆ. ಅದನ್ನು ಸರಿಯಾದ ರೀತಿಯಲ್ಲಿ ಬೆಳೆಸಬೇಕು. ಇಂತಹ ಪ್ರತಿಭೆಗಳನ್ನು ಗುರುತಿಸುವಲ್ಲಿ ಬೆಂಗಳೂರುಬಿಲ್ಲವ ಅಸೋಸಿಯೇಶನ್ ಉತ್ತಮ ಕೆಲಸ ಮಾಡುತ್ತಿದೆ ಎಂದರು.

ಅಸೋಸಿಯೇಶನ್ ಅಧ್ಯಕ್ಷ ಎಂ.ವೇದಕುಮಾರ್ ಮಾತನಾಡಿ, ಈಗಾಗಲೇ ಬಿಲ್ಲವ ಹುಡುಗರಿಗೆ ಉಚಿತ ವಿದ್ಯಾರ್ಥಿನಿಲಯ ಇದ್ದು, ಹುಡುಗಿಯರಿಗೆ ಹಾಸ್ಟೆಲ್ ಪ್ರಾರಂಭಿಸಿರುವ ಯೋಜನೆ ಇದೆ ಎಂದರು.

ವೈದ್ಯ ಡಾ.ಸ್ನೇಹಲ್ ಸುಧಾಕರ್ ಬಿ. ಅಧ್ಯಕ್ಷತೆ ವಹಿಸಿದ್ದರು. ಹೈಕೋರ್ಟ್ ವಕೀಲ ತಾರಾನಾಥ ಪೂಜಾರಿ, ಉಡುಪಿ ಜಿಲ್ಲಾರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗೋಪಾಲ್ ಸಿ.ಬಂಗೇರ ಅವರನ್ನು ಗೌರವಿಸಲಾಯಿತು.

ಅಸೋಸಿಯೇಶನ್ ಗೌರವಾಧ್ಯಕ್ಷ ಭಾಸ್ಕರ ಸಿ.ಅಮೀನ್, ಹಿರಿಯ ಉಪಾಧ್ಯಕ್ಷ ಕೇಶವ ಪೂಜಾರಿ, ಉಪಾಧ್ಯಕ್ಷಬಿ.ಎಂ.ಉದಯಕುಮಾರ್, ಪ್ರಧಾನ ಕಾರ್ಯದರ್ಶಿ ಭಾಸ್ಕರ ಪೂಜಾರಿ, ಜಂಟಿ ಕಾರ್ಯದರ್ಶಿ ರಾಜೇಶ್ ಕುಮಾರ್, ಕೋಶಾಧಿಕಾರಿವಿ.ಗೋಪಾಲ್, ಸಂಘಟನಾ ಕಾರ್ಯದರ್ಶಿ ಜೆ.ನಾರಾಯಣ ಪೂಜಾರಿ, ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ರಜಾ ಜಯರಾಂ, ಸಹ ಅಧ್ಯಕ್ಷೆಜಯಂತಿ ವಿಜಯಕೃಷ್ಣ ಉಪಸ್ಥಿತರಿದ್ದರು. ಸಂಪತ್ ಕುಮಾರ್ ಡಿ.ಎಸ್, ದೇವಿಪ್ರಸಾದ್, ಸುಪ್ರಿಯಾ ಮಧುಸೂದನ್‌ಕಾರ್ಯಕ್ರಮನಿರೂಪಿಸಿದರು. ವಿದ್ಯಾ ಕೆ.ಟಿ.ಪೂಜಾರಿ ಪ್ರಾರ್ಥಿಸಿದರು. ಸದಸ್ಯರು ಹಾಗು ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಪೋಟೋ—–

ಬೆಂಗಳೂರು ಬಿಲ್ಲವ ಅಸೋಸಿಯೇಶನ್ 45ನೇ ವಾರ್ಷಿಕೋತ್ಸವ ಮತ್ತು ಬಿಲ್ಲವ ಯುವ ಹಬ್ಬವನ್ನು ಭಾನುವಾರ ವಿಧಾನ ಪರಿಷತ್ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಉದ್ಘಾಟಿಸಿದರು. ವೈದ್ಯ ಡಾ.ಸ್ನೇಹಲ್ ಸುಧಾಕರ್ ಬಿ., ಅಸೋಸಿಯೇಶನ್ ಅಧ್ಯಕ್ಷಎಂ.ವೇದಕುಮಾರ್, ೌರವಾಧ್ಯಕ್ಷ ಭಾಸ್ಕರ ಸಿ.ಅಮೀನ್, ಹಿರಿಯ ಉಪಾಧ್ಯಕ್ಷ ಕೇಶವ ಪೂಜಾರಿ, ಉಪಾಧ್ಯಕ್ಷಬಿ.ಎಂ.ಉದಯಕುಮಾರ್, ಪ್ರಧಾನ ಕಾರ್ಯದರ್ಶಿ ಭಾಸ್ಕರ ಪೂಜಾರಿ, ಜಂಟಿ ಕಾರ್ಯದರ್ಶಿ ರಾಜೇಶ್ ಕುಮಾರ್ಮೊದಲಾದವರಿದ್ದರು.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »