TOP STORIES:

ಬಿಲ್ಲವ ಸಂಘಟನೆಯ ವಿರುದ್ದ ಶರಣ್‌ ಪಂಪ್ವೆಲ್‌ ಆರೋಪ ಖಂಡನೀಯ – ಅಕ್ಷಿತ್‌ ಸುವರ್ಣ


ಮಂಗಳೂರು: ಎರಡು ಸಂಘಟನೆಗಳ ಮಧ್ಯದ ಮನಸ್ತಾಪದ ವಿಚಾರದಲ್ಲಿ ಬಜರಂಗದಳ ನಾಯಕರಾದ ಶರಣ್‌ ಪಂಪ್ವೆಲ್‌ ಅವರು ಸದಾ ಒಂದೇ ಜಾತಿ ಒಂದೆ ಮತ ಎಂಬ ಧ್ಯೇಯದೊಂದಿಗೆ ಕಾರ್ಯಾಚರಿಸುತ್ತಿರುವ ಬಿಲ್ಲವ ಸಂಘಟನೆಯ ಹೆಸರನ್ನು ಎಳೆದು ತಂದಿರುವುದು ಖಂಡನೀಯವಾಗಿದೆ ಎಂದು ದಕ ಜಿಲ್ಲಾ ಯುವ ಜೆಡಿಎಸ್‌ ಅಧ್ಯಕ್ಷ ಅಕ್ಷಿತ್‌ ಸುವರ್ಣ ಹೇಳಿದ್ದಾರೆ.ನಾರಾಯಣ ಗುರುಗಳ ತತ್ವದಡಿಯಲ್ಲಿ ಎಲ್ಲರೂ ಕೂಡ ಒಂದೇ ಜಾತಿ ಒಂದೇ ಧರ್ಮ ಎಂಬ ಧ್ಯೇಯದೊಂದಿಗೆ ಜಿಲ್ಲೆಯಲ್ಲಿ ಬಿಲ್ಲವ ಸಂಘಟನೆ ಕಾರ್ಯಾಚರಿಸುತ್ತಿದ್ದು ಯಾವುದೇ ರೀತಿಯ ಘರ್ಷಣೆ ಕಲಹಕ್ಕೆ ಅವಕಾಶ ಮಾಡಿಕೊಡದೆ ತನ್ನ ಪಾಡಿಗೆ ಸಮಾಜದ ಉದ್ದಾರಕ್ಕಾಗಿ ಕೆಲಸ ಮಾಡಿಕೊಂಡು ಬರುತ್ತಿದೆ. ಇತ್ತೀಚೆಗೆ ಬಜರಂಗದಳದ ನಾಯಕರಾಗಿರುವ ಶರಣ್‌ ಪಂಪ್ವೆಲ್‌ ಅವರು ಇನ್ನೊಂದು ಸಂಘಟನೆಯೊಂದಿಗೆ ನಡೆದಿರುವ ಮಾತಿನ ಕಲಹದ ವೇಳೆ ವಿನಾಕಾರಣ ಬಿಲ್ಲವ ಸಂಘಟನೆಯನ್ನು ಎಳೆದು ತಂದಿರುವುದು ಮಾಧ್ಯಮಗಳಿಂದ ತಿಳಿದುಬಂದಿದೆ. ಬಿಲ್ಲವ ಸಂಘಟನೆ ಎಂದೂ ಕೂಡ ಯಾವುದೇ ಜಾತಿ ಧರ್ಮದ ವಿಚಾರದಲ್ಲಿ ಮೂಗು ತೂರಿಸದೇ ತನ್ನ ಸಮುದಾಯದ ಉದ್ದಾರಕ್ಕೆ ಶ್ರಮಿಸುತ್ತಿರುವಾಗ ತಮ್ಮ ವೈಯುಕ್ತಿಕ ದ್ವೇಷಕ್ಕೆ ಬಿಲ್ಲವ ಸಂಘಟನೆಯ ಹೆಸರನ್ನು ಬಳಸಿಕೊಂಡಿರುವುದು ಸರಿಯಲ್ಲ. ಸಾಮಾಜಿಕ ನ್ಯಾಯದ ಅಡಿಯಲ್ಲಿ ಕೆಲಸ ಮಾಡಿಕೊಂಡು ಬಂದಿರುವಾಗ ಅನಾವಶ್ಯಕವಾಗಿ ಸಂಘಟನೆಗಳ ಹೆಸರನ್ನು ಬಳಸಿಕೊಂಡು ಸಮಾಜದಲ್ಲಿ ಘರ್ಷಣೆಗೆ ಕಾರಣವಾಗುವ ಪರಿಸ್ಥಿತಿ ಉಂಟಾಗುತ್ತದೆ ಎನ್ನುವುದನ್ನು ನಾಯಕರಾದವರು ಅರಿಯಬೇಕಾಗಿದೆ. ಇನ್ನಾದರೂ ಅನಾವಶ್ಯಕವಾಗಿ ಬಿಲ್ಲವ ಸಂಘಟನೆಯ ಹೆಸರನ್ನು ಇಲ್ಲ ಸಲ್ಲದ ವಿಚಾರಕ್ಕೆ ಎಳೆದು ತರುವುದನ್ನು ನಿಲ್ಲಿಸುವಂತೆ ಅವರು ಆಗ್ರಹಿಸಿದ್ದಾರೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »