TOP STORIES:

ಬಿಲ್ಲವ ಸಭೆ-ಸಮಾರಂಭಗಳಿಗೆ ಜಗದೀಶ್ ಅಧಿಕಾರಿಗೆ ಆಹ್ವಾನವಿಲ್ಲ: ಮೂಲ್ಕಿ ಬಿಲ್ಲವ ಸಂಘ ನಿರ್ಧಾರ…!


ಮೂಲ್ಕಿ:
ಬಿಲ್ಲವ ಆರಾಧ್ಯ ಶಕ್ತಿಗಳಾದ ಕೋಟಿ ಚೆನ್ನಯ್ಯ ಹಾಗೂ ಬಿಲ್ಲವ ಸಮುದಾಯದ ನಾಯಕರುಗಳ ಬಗ್ಗೆ ತುಚ್ಚವಾಗಿ ನಿಂದಿಸಿರುವ ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಗದೀಶ್ ಅಧಿಕಾರಿಯನ್ನು ಪ್ರತಿಯೊಬ್ಬ ಬಿಲ್ಲವ ಸಮುದಾಯದವರು ಹಾಗೂ ಬಿಲ್ಲವ ಸಂಘಟನೆಗಳು ಯಾವುದೇ ವೈಯಕ್ತಿಕ ಹಾಗೂ ಸಾರ್ವಜನಿಕ ಸಭೆ-ಸಮಾರಂಭಗಳಿಗೆ ಇನ್ನು ಮುಂದೆ ಆಹ್ವಾನ ನೀಡದಿರಲು ನಿರ್ಧರಿಸಿ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘ ಮಹತ್ವದ ನಿರ್ಣಯವನ್ನು ಕೈಗೊಂಡಿದೆ.

ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಭಾನುವಾರ ಸಂಘದ ಅಧ್ಯಕ್ಷರಾದ ರಮೇಶ್ ಅಮೀನ್ ಕೊಕ್ಕರ್‌ಕಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ತುರ್ತು ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಂಡಿದೆ.
ಬಿಲ್ಲವ ಸಮುದಾಯ ಸಹಿತ ತುಳುನಾಡಿನ ಸರ್ವಧರ್ಮದವರು ಸಹ ಆರಾಧ್ಯ ದೈವ-ದೇವರುಗಳಾಗಿ ನಂಬಿಕೊಂಡು ಬಂದಿರುವ ಕೋಟಿ ಚೆನ್ನಯ್ಯ ಅವಳಿ ವೀರರಿಗೆ ಸಮಸ್ತ ಜನರು ಗರಡಿಯ ಇನ್ನಿತರ ದೈವ ಸಾನ್ನಿಧ್ಯದ ಮೂಲಕ ವಿಶೇಷ ಸ್ಥಾನಮಾನವನ್ನು ನೀಡಿರುವುದನ್ನು ತನ್ನ ಹೀನ ಬುದ್ದಿಯಿಂದ ಜಗದೀಶ್ ಅಧಿಕಾರಿ ಸಾರ್ವಜನಿಕವಾಗಿ ಹೇಳಿರುವುದರ ಬಗ್ಗೆ ಸಭೆಯಲ್ಲಿ ತೀವ್ರವಾಗಿ ಖಂಡಿಸಲಾಯಿತು. ಅವರ ಮನಸ್ಥಿತಿಯನ್ನು ಅರಿತು ಅವರು ಕೇಳಿರುವ ಕ್ಷಮೆಯು ಆಧಾರ ರಹಿತವಾಗಿ ಕೇವಲ ಕಾಲ್ಪನಿಕವಾಗಿದೆ. ಮನಸ್ಸಿನಲ್ಲಿ ದುಷ್ಟ ಬುದ್ದಿಯನ್ನಿಟ್ಟುಕೊಂಡು ಯಾರದೋ ಒತ್ತಡಕ್ಕೆ ಮಣಿದು ಕ್ಷಮೆ ಕೇಳಿದ್ದರೂ ಸಹ ಬಿಲ್ಲವ ಸಮಾಜ ಅವರನ್ನು ಕ್ಷಮಿಸೋಲ್ಲ ಎಂದು ನಿರ್ಧರಿಸಲಾಗಿದೆ.

ಸಭೆಯಲ್ಲಿ ನಿರ್ಧರಿಸಿದಂತೆ ಜಗದೀಶ್ ಅಧಿಕಾರಿಯನ್ನು ಮೂಲ್ಕಿಯ ಬಿಲ್ಲವ ಸಮಾಜದವರು ತಮ್ಮ ವೈಯಕ್ತಿಕ ಯಾವುದೇ ಕಾರ್ಯಕ್ರಮಕ್ಕೆ ಆಹ್ವಾನಿಸಬಾರದು ಎಂಬ ನಿರ್ಣಯಕ್ಕೆ ಗೌರವ ನೀಡಬೇಕು, ಇಂತಹ ಸಮಾಜ ವಿಘಟನೆ ಮಾಡುವ ವ್ಯಕ್ತಿಗಳಾಗಲಿ, ಶಕ್ತಿಗಳು ಬಿಲ್ಲವ ಸಮಾಜವನ್ನು ಒಡೆದು ಆಳುವ ನೀತಿಯ ವಿರುದ್ಧವಾಗಿ ಈ ಮಹತ್ವದ ನಿರ್ಧಾರವಾಗಿದೆ. ವಿಶ್ವದಲ್ಲಿರುವ ಎಲ್ಲಾ ಬಿಲ್ಲವ ಸಂಘಟನೆಗಳು ಸಹ ಜಗದೀಶ್ ಅಧಿಕಾರಿಯನ್ನು ಸಾರ್ವಜನಿಕ ಕಾರ್ಯಕ್ರಮದಲ್ಲಿ ಆಹ್ವಾನಿಸದೇ ತಿರಸ್ಕರಿಸಬೇಕು ಎಂದು ಬಿಲ್ಲವ ಸಂಘಗಳ ಒಕ್ಕೂಟವಾದ ರಾಷ್ಟ್ರೀಯ ಬಿಲ್ಲವರ ಮಹಾಮಂಡಲಕ್ಕೆ ಮನವಿ ಮಾಡುವುದು ಎಂದು ನಿರ್ಣಯಿಸಿಕೊಂಡು,
ರಾಜಕೀಯವಾಗಿ ಇಂತಹ ವ್ಯಕ್ತಿಗಳು ಸಮಾಜದಲ್ಲಿ ತಪ್ಪು ಸಂದೇಶವನ್ನು ನೀಡುವ ಹಾಗೂ ತನ್ನ ಬೇಜವಬ್ದಾರಿಯ ಉದ್ಧಟತನ ತೋರಿರುವುದರಿಂದ ಇವರನ್ನು ಕೂಡಲೆ ರಾಜಕೀಯ ಪಕ್ಷದಿಂದ ಶಾಶ್ವತವಾಗಿ ನಿವೃತ್ತಿಗೊಳಿಸಬೇಕು ಎಂದು ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲು ಹಾಗೂ ದ.ಕ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಅವರಲ್ಲಿ ಮನವಿ ಮಾಡಿ ಹಕ್ಕೊತ್ತಾಯ ನಡೆಸುವುದೆಂದು ತೀರ್ಮಾನಿಸಲಾಯಿತು.

ಸಭೆಯಲ್ಲಿ ಬಿಲ್ಲವ ಸಮಾಜ ಸೇವಾ ಸಂಘದ ಮಾಜಿ ಅಧ್ಯಕ್ಷರುಗಳಾದ ರಾಘು ಸುವರ್ಣ ಕೊಳಚಿಕಂಬಳ, ಯದೀಶ್ ಅಮೀನ್ ಕೊಕ್ಕರ್‌ಕಲ್, ಡಾ.ಹರಿಶ್ಚಂದ್ರ ಪಿ. ಸಾಲಿಯಾನ್, ಮೂಲ್ಕಿ ನಗರ ಪಂಚಾಯತ್‌ನ ಉಪಾಧ್ಯಕ್ಷ ಸತೀಶ್ ಅಂಚನ್ ಬಾಳೆಹಿತ್ಲು, ಬಿರುವೆರ್ ಕುಡ್ಲದ ಮೂಲ್ಕಿ ಘಟಕದ ಅಧ್ಯಕ್ಷ ಕಿಶೋರ್ ಸಾಲ್ಯಾನ್, ಶ್ರೀ ನಾರಾಯಣಗುರು ಸೇವಾದಳದ ಪರವಾಗಿ ಉಮೇಶ್ ಮಾನಂಪಾಡಿ, ಶ್ರೀ ನಾರಾಯಣಗುರು ಮಹಿಳಾ ಮಂಡಳಿಯ ಗೌರವಾಧ್ಯಕ್ಷೆ ಸರೋಜಿನಿ ಸುವರ್ಣ, ಸಾಮಾಜಿಕ ಚಿಂತಕ ದಿನೇಶ್ ಬಪ್ಪನಾಡು ಮತ್ತಿತರ ಸಂಘದ ಸದಸ್ಯರು ಮಾತನಾಡಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಕಮಲಾಕ್ಷ ಬಡುಗುಹಿತ್ಲು ನಿರ್ಣಯವನ್ನು ಮಂಡಿಸಿ, ಕಾರ್ಯಕ್ರಮ ನಿರೂಪಿಸಿದರು.

“ಇಂತಹ ನಿರ್ಣಯ ಪ್ರತೀ ಬಿಲ್ಲವ ಸಂಘದಲ್ಲಿ ನಡೆಯಲಿ ಎಂಬ ಆಶಯ ನಮ್ಮದು…. ಇದು ಬಿಲ್ಲವರ ಸ್ವಾಭಿಮಾನದ ಪ್ರಶ್ನೆ” ….-ರಮೇಶ್ ಅಮೀನ್
ಅಧ್ಯಕ್ಷರು
ಬಿಲ್ಲವ ಸಮಾಜ ಸೇವಾ ಸಂಘ ( ರಿ) ಮೂಲ್ಕಿ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »