TOP STORIES:

ಬಿಲ್ಲವ ಸಮುದಾಯವನ್ನು ಸರ್ಕಾರ ಈ ರೀತಿ ವಂಚಿಸುತ್ತಿರುವುದು ನ್ಯಾಯೋಚಿತವಲ್ಲ


ಕರ್ನಾಟಕ ಸರ್ಕಾರ ಬೇರೆ ಬೇರೆ ಜಾತಿ ಸಮುದಾಯಗಳ ನಿಗಮ,ಪ್ರಾಧಿಕಾರದ ಬೇಡಿಕೆಯನ್ನು ಈಡೇರಿಸಿದ್ದು ಸಮರ್ಥನೀಯ.ಆದರೆ ನಮ್ಮ ಬಿಲ್ಲವ ಸಮುದಾಯವನ್ನು ನಡೆಸಿಕೊಳ್ಳುತ್ತಿರುವ ರೀತಿ ಖಂಡಿತಾ ಒಳ್ಳೆಯ ಬೆಳವಣಿಗೆಯಲ್ಲ‌.

ಉಪಪಂಗಡಗಳನ್ನೊಳಗೊಂಡಂತೆ ಸಂಖ್ಯಾಪ್ರಾಬಲ್ಯವಿರುವ ಬಿಲ್ಲವ ಸಮುದಾಯ ಈವರೆಗೆ ಹಲವಾರು ಬೇಡಿಕೆಗಳ ಕುರಿತು ಮನವಿ ಸಲ್ಲಿಸಿದ್ದಾಗ್ಯೂ ಸರ್ಕಾರ ತಾತ್ಸಾರ ತೋರುತ್ತಿದೆ.ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಯ ನೇತೃತ್ವದಲ್ಲಿ 50,000 ಸಮಾಜಬಾಂಧವರನ್ನು ಒಗ್ಗೂಡಿಸಿ ಬೃಹತ್ ಬಿಲ್ಲವ ಸಮಾವೇಶ ದ ಮುಖಾಂತರ “ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ” ಸ್ಥಾಪಿಸಬೇಕೆಂಬ ಪ್ರಮುಖ ಬೇಡಿಕೆಯನ್ನು ನೀಡಲಾಗಿತ್ತು.ಇದರೊಂದಿಗೆ ಇತರ ಬೇಡಿಕೆಗಳ ಕುರಿತು ಪದೇ ಪದೇ ಕರಾವಳಿಯ ಜನಪ್ರತಿನಿಧಿಗಳಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾಗ್ಯಾ ನಕಾರಾತ್ಮಕ ಪ್ರತಿಕ್ರಿಯೆಯಿದೆ.ಕೇವಲ ಚುನಾವಣೆ ಸಂದರ್ಭ ಮಾತ್ರ ಬಿಲ್ಲವ ಸಮಾಜವನ್ನು ಬಳಸಿಕೊಳ್ಳುತ್ತಿರುವ ಹುನ್ನಾರದ ಕುರಿತು ಸಮಾಜ ಜಾಗೃತಗೊಳ್ಳುತ್ತಿದೆ.ಕರಾವಳಿಯ ಶಾಸಕರು,ಸಂಸದರು ಮತ್ತು ಎಲ್ಲಾ ಸ್ತರದ ಜನಪ್ರತಿನಿಧಿಗಳು ಕೇವಲ ಸಭಾವೇದಿಕೆಯ ಭಾಷಣಕ್ಕೆ ಮಾತ್ರ ಬಿಲ್ಲವ ಸಮಾಜದ ಒಲೈಕೆ ಮಾಡುತ್ತಾ ಯಾವುದೇ ಅನುಕೂಲ ಮಾಡದಿರುವ ಕುರಿತು ಭವಿಷ್ಯದಲ್ಲಿ ಸಮಾಜಬಾಂಧವರು ಇಂತವರ ವಿರುದ್ದ ಸೂಕ್ತ ನಿರ್ಧಾರ ಕೈಗೊಳ್ಳಲು ಪ್ರೇರಣೆ ನೀಡಿದೆ.
ಇತರ ಸಮುದಾಯಕ್ಕೆ ಮಂಜೂರಾಗುತ್ತಿರುವ ಎಲ್ಲಾ ಅನುಕೂಲತೆಗಳಲ್ಲಿ ಬಿಲ್ಲವ ಸಮುದಾಯವನ್ನು ವಂಚಿಸುತ್ತಿರುವುದು ನ್ಯಾಯೋಚಿತವಲ್ಲ.

-ಪ್ರವೀಣ್ ಎಂ ಪೂಜಾರಿ
ಅಧ್ಯಕ್ಷರು
ಹಾಗೂ ಸರ್ವಸದಸ್ಯರು.
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ).


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »