TOP STORIES:

ಬಿಲ್ಲವ ಸೇವಾ ಮಾಣಿಕ್ಯದಾತರ ಸಮಾಗಮ ಬಿಲ್ಲವ ಗಾನ ತರಂಗ ಸೀಸನ್ 1 : ಬಹುಮಾನ ವಿತರಣಾ ಸಮಾರಂಭ


ಬಿಲ್ಲವ ಸೇವಾ ಮಾಣಿಕ್ಯದಾತರ ಸಮಾಗಮ ತಂಡವು ಸಾಮಾಜಿಕ ಜಾಲತಾಣದ ಮೂಲಕ ತೆರೆಮರೆಯ ಪ್ರತಿಭೆಗಳನ್ನು ಪರಿಚಯಿಸಿ ಆ ಮೂಲಕ ಅವರ ಬೆಳವಣಿಗೆಗೆ ಕಾರ್ಯೋನ್ಮುಖ ವಾಗಿರುವುದು ಸಂತಸದ ವಿಷಯ. ಕೊರೋನಾ ಸಮಯದಲ್ಲಿ ಒಳ್ಳೆಯ ಚಿಂತನೆಯ ಮೂಲಕ ಸಮಯವನ್ನು ಸದುಪಯೋಗಪಡಿಸಿ ಕೊಳ್ಳಬೇಕಾಗಿದೆ. ಎಂದು ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಆರ್. ಪದ್ಮರಾಜ್ ಹೇಳಿದರು.

ಕುದ್ರೋಳಿ ದೇವಳದಲ್ಲಿ ನಡೆದ ಬಿಲ್ಲವ ಸೇವಾ ಮಾಣಿಕ್ಯದಾತರ ಸಮಾಗಮದ ಬಿಲ್ಲವ ಗಾನ ತರಂಗ ಸೀಸನ್-1 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಅತಿಥಿಯಾಗಿ ಆಗಮಿಸಿದ ರಂಗಕರ್ಮಿ, ಸಾಹಿತಿ ಪರಮಾನಂದ ಸಾಲ್ಯಾನ್ ಮಾತನಾಡಿ ವ್ಯವಸ್ಥೆಯನ್ನು ಸಮರ್ಪಕವಾಗಿ ಉಪಯೋಗಿಸುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣವನ್ನು ಪ್ರತಿಭೆಗಳಿಗೆ ತಮ್ಮ ಒತ್ತು ನೀಡಿ ಅವರನ್ನು ಬೆಳಕಿಗೆ ಬರುವ ಕೆಲಸ ಸಾರ್ಥಕವಾಗಿದೆ. 94 ಸ್ಪರ್ಧಿಗಳಲ್ಲಿ ಅಂತಿಮ ಆಯ್ಕೆ ಕಷ್ಟದ ಕೆಲಸ. ವಿಶ್ವವ್ಯಾಪಿ ಈ ಎಲ್ಲಾ ಸ್ಪರ್ಧಿಗಳನ್ನು ಪರಿಚಯಿಸಿದ ಕಾರ್ಯ ಶ್ಲಾಘನೀಯ ಎಂದರು.ರೇಡಿಯೋ ಜಾಕಿ ಮತ್ತು ಸಮಾಜಸೇವಕಿ ರಶ್ಮಿ ಉಳ್ಳಾಲ್ ಮಾತನಾಡಿ ಕಲಿಕೆ ನಿರಂತರ. ಧನಾತ್ಮಕ ಚಿಂತನೆಯನ್ನು ಯುವ ಮನಸ್ಸುಗಳು ತುಂಬಿ ಕೊಳ್ಳಬೇಕಾಗಿದೆ. ಸಿಕ್ಕ ಅವಕಾಶಗಳನ್ನು ಉಪಯೋಗಿಸುವ ಮೂಲಕ ನಾವು ಬೆಳೆಯ ಬೇಕಾಗಿದೆ ಎಂದರು. ಮಂಗಳೂರು ವಿಶ್ವವಿದ್ಯಾ ನಿಲಯದ ನಾರಾಯಣ ಗುರು ಅಧ್ಯಯನಪೀಠದ ಸಲಹಾ ಸಮಿತಿಯ ಸದಸ್ಯರಾದ ನಮಿತಾ ಶ್ಯಾಮ್ ಮಾತನಾಡಿ ಸಾಮಾಜಿಕ ಜಾಲತಾಣದ ಮೂಲಕ ಇನ್ನಷ್ಟು ಸ್ಪರ್ಧೆಗಳಿಗೆ ನಮ್ಮ ಸಹಕಾರವಿದೆ. ಬಿಲ್ಲವ ಸೇವಾ ಮಾಣಿಕ್ಯದಾರ ಸಮಾಗಮ ಮಾಡುತ್ತಿರುವ ಕಾರ್ಯಗಳು ಅಭಿನಂದನೀಯ ಎಂದರು.
ವೇದಿಕೆಯಲ್ಲಿ ಬಿರುವೆರ್ ಕುಡ್ಲ ಮೂಡಬಿದ್ರೆ ಘಟಕದ ರಾಜ್ ಪವಿ ಬಿಲ್ಲವ ಉಪಸ್ಥಿತರಿದ್ದರು.
ಸನ್ಮಾನ: ಕಾರ್ಯಕ್ರಮದಲ್ಲಿ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ. 98.5 ಪಡೆದ ನಿರೀಕ್ಷಾ ಪೂಜಾರಿಯನ್ನು ಸನ್ಮಾನಿಸಲಾಯಿತು.

ಇದೇ ಸಂದರ್ಭ ಬಿಲ್ಲವ ಸೇವಾ ಮಾಣಿಕ್ಯದಾತರ ಸಮಾಗಮ ನಿರ್ಮಾಣದ ಗೆಜ್ಜೆಗಿರಿತ ಮಾಣಿಕ್ಯ ಅಪ್ಪೆ ದೇಯಿಬೈದೆದಿ ಸುಗಿಪು ಧ್ವನಿಸುರುಳಿಯಲ್ಲಿ ಹಾಡಿದ ವಾತ್ಸಲ್ಯ ಪೂಜಾರಿಯನ್ನು ಗೌರವಿಸ ಲಾಯಿತು.ಬಿಲ್ಲವ ಗಾನ ತರಂಗ ವಿಜೇತರು: ಪ್ರಥಮ-ಲಹರಿ ಕೋಟ್ಯಾನ್, ದ್ವಿತೀಯ ರಂಜಿತ್ ಪೂಜಾರಿ ಮೊಗರು, ತೃತೀಯ ಅನುರಾಧ ಚಂದ್ರೇಶ್. ಸಮಾಧಾನಕರ ಬಹುಮಾನ: ಸಚಿನ್ ಪೂಜಾರಿ, ನಿಶ್ಮಿತಾ, ಸಂತೋಷ್ ಪೂಜಾರಿ,ಸಹನಾ ಕರ್ಕೇರ. ಬೆಸ್ಟ್ ರಾಕ್ ಮೆಲೋಡಿ -ಆದಿತ್ಯ ಕರ್ಕೇರ ಪಡೆದುಕೊಂಡಿರುತ್ತಾರೆ.

ಸಮಾರಂಭದಲ್ಲಿ ಬಿಲ್ಲವ ಸೇವಾ ಮಾಣಿಕ್ಯದಾತರ ಸಮಾಗಮದ ಪದಾಧಿಕಾರಿಗಳಾದ ದಿನೇಶ್ ಸುವರ್ಣ ರಾಯಿ, ಶಿವಕುಮಾರ್ ಮರಕ್ಕೂರು, ಶ್ರೇಯಸ್, ಅನುಪ್ ಉಪಸ್ಥಿತರಿದ್ದರು.
ರೇಣುಕ ಕಣಿಯೂರು ಸ್ವಾಗತಿಸಿ, ಅಜಿತ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಚ್ಚೇಂದ್ರ ಅಂಬಾಗಿಲು ನಿರೂಪಿಸಿ, ದೀಪಕ್ ಬೀರ ವಂದಿಸಿದರು.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »