TOP STORIES:

ಬಿ. ಯಶವಂತ ಸುವರ್ಣ ಅವರ ದಿವ್ಯ ಚೇತನಕ್ಕೆ ಚಿರಶಾಂತಿ ದೊರೆಯಲಿ


ಭಾವಪೂರ್ಣ ಶ್ರದ್ಧಾಂಜಲಿ

ಓರ್ವ ವ್ಯಕ್ತಿ  ಜೀವಿತಾವಧಿಯಲ್ಲಿ ಎಲ್ಲರ ಜೊತೆ ಒಳ್ಳೆಯವರಾಗಿದ್ದು, ಒಳ್ಳೆಯ ಕೆಲಸಗಳನ್ನೇ ನೆಚ್ಚಿಕೊಂಡು ಬದುಕಿದರೆ ಮಾತ್ರಅವರು ಗತಿಸಿದ ಮೇಲೂ ಆಪ್ತೇಷ್ಟರ ಮನಸ್ಸಿನಲ್ಲಿ ಚಿರಕಾಲ ಉಳಿಯಬಲ್ಲರು ಎಂಬುದಕ್ಕೆ ಬಿ. ಯಶವಂತ ಸುವರ್ಣರು ಸಾಕ್ಷಿಯಾಗುತ್ತಾರೆ. ಅವರ ಅಗಲಿಕೆ ಮುಂಬೈಯ  ತುಳು ಕನ್ನಡಿಗರಿಗೆ ಅತೀವ ನೋವು ತಂದಿದೆ.

ಹಿತಮಿತವಾದ ಮಾತು, ಮಾತಿನಲ್ಲಿ ಅದಮ್ಯವಾದ ಪ್ರೀತಿ, ಸೌಮ್ಯತೆ, ಮಂದಹಾಸ ತುಂಬಿದ ಮುಖಭಾವದಲ್ಲಿ ಸ್ನೇಹ ಸಹಕಾರದಮನೋಭಾವ, ಸಮಾಜಪರ ಕಾಳಜಿ, ನಿಸ್ವಾರ್ಥವಾದ ಸಮಾಜ ಸೇವೆ ಹೀಗೆ ಎಲ್ಲರಿಗೂ ಬೇಕಾದವರಾಗಿ, ಬಹುಜನಪ್ರಿಯರಾಗಿಬಾಳಿದವರು ನಮ್ಮ ಯಶವಂತ ಸುವರ್ಣರು

ಹಿಂದೆ ಎರಡು ಮೂರು ಬಾರಿ ಡೊಂಬಿವಲಿ ಬಿಲ್ಲವರ ಸ್ಥಳೀಯ ಕಛೇರಿಯಲ್ಲಿ ಭೇಟಿಯಾದಾಗ ಅವರು ನನ್ನ ಜೊತೆ  ಪ್ರೀತಿಯಿಂದಆಡಿದ ಪ್ರೋತ್ಸಾಹದ ನುಡಿಗಳು, ನನ್ನನ್ನು ಆದರಿಸಿದ ರೀತಿ ಇಂದಿಗೂ ನನ್ನ ಮನಸ್ಸಿನಲ್ಲಿ ಮಾಸದೆ ಉಳಿದಿದೆ.

ಡೊoಬಿವಿಲಿ ಕರ್ನಾಟಕ ಸಂಘದ ವಿವಿಧ ಹುದ್ದೆಗಳಲ್ಲಿದ್ದು, ಸಂಘದ ಏಳಿಗೆಗೆ ಸದಾ ದುಡಿಯುತ್ತಿದ್ದ ಸಜ್ಜನ ಬಂಧುವಾಗಿ, ಬಿಲ್ಲವಸಮಾಜದ ನಾಯಕರಾಗಿ, ಸಮಾಜ ಸೇವಕರಾಗಿದ್ದ ನಮ್ಮೆಲ್ಲರ ಅಚ್ಚುಮೆಚ್ಚಿನ ಹಿರಿಯ ಚೇತನ  ಬಿ. ಯಶವಂತ ಸುವರ್ಣರವರು  ಇಂದು ದೇವರ ಪಾದ ಸೇರಿದರು. ಅವರ ದಿವ್ಯ ಚೇತನಕ್ಕೆ ಚಿರಶಾಂತಿ ದೊರೆಯಲಿ

✍ ಅನಿತಾ ಪಿ.ತಾಕೊಡೆ


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »