TOP STORIES:

ಬೆಟ್ಟದಲ್ಲಿ ಪತ್ತೆಯಾದ ಅಪರಿಚಿತ ಶವ , ಮೃತದೇಹಕ್ಕೆ ಹೆಗಲುಕೊಟ್ಟ ಪಿಎಸೈ ಪುತ್ತೂರಿನ ಪ್ರದೀಪ್ ಪೂಜಾರಿ


ಪುತ್ತೂರು : ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಆವಲಗುರ್ಕಿ ಬಳಿಯ ಈಶಾ ಆದಿಯೋಗಿ ಸನ್ನಿಧಾನದಬಳಿಯ ಶ್ರೀ ಜಾಲಾರಿ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದ ಬೆಟ್ಟದಲ್ಲಿ ಪತ್ತೆಯಾದ ಅಪರಿಚಿತ ವ್ಯಕ್ತಿಯ ಮೃತದೇಹಕ್ಕೆ ಹೆಗಲುಕೊಟ್ಟು ಬೆಟ್ಟದಲ್ಲಿ ಇಳಿಸುವ ಮೂಲಕ ಪಿಎಸೈ ಪ್ರದೀಪ್ ಪೂಜಾರಿ ಹಾಗೂ ಸಿಬಂದಿಗಳು ,ಸೈನಿಕರು ಮಾನವೀಯತೆ ಮೆರೆದಿದ್ದಾರೆ.

ಜಾಲಾರಿ ದೇವಾಲಯದ ಬೆಟ್ಟದ ಬಳಿ ಸೈನಿಕರು ಕ್ಯಾಂಪ್ ಹಾಕಿ ಕೂಂಬಿಂಗ್ ನಡೆಸುತ್ತಿದ್ದಾಗ ಬೆಟ್ಟದಲ್ಲಿ ಸೈನಿಕರ ಕಣ್ಣಿಗೆ ಶವಕಾಣಿಸಿದೆ. ವಿಷಯವನ್ನು ಚಿಕ್ಕಬಳ್ಳಾಪುರ ಎಸ್‌ಪಿಯವರ ಗಮನಕ್ಕೆ ಸೈನಿಕರು ತಂದಿದ್ದಾರೆ.

ಸ್ಥಳಕ್ಕೆ ತೆರಳಿದ್ದ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸೈ ಹಾಗೂ ಸಿಬ್ಬಂದಿಗಳು,ಸೈನಿಕರು ಮೃತದೇಹ ಹೊತ್ತುಕೆಳಗೆ ತರಲು ಸಾಕಷ್ಟು ಹರಸಾಹಸ ಪಟ್ಟಿದ್ದಾರೆ.

ಚಿಕ್ಕಬಳ್ಳಾಪುರ ಗ್ರಾಮಾಂತರ ಪಿಎಸ್‌ಐ ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಕೆಂಗುಡೇಲು ನಿವಾಸಿ ಪ್ರದೀಪ್ ಪೂಜಾರಿಹಾಗೂ ಅವರ ಸಿಬ್ಬಂದಿ ಸೇರಿದಂತೆಸೈನಿಕರು ಚಟ್ಟದ ಮಾದರಿ ತಯಾರು ಮಾಡಿ 5-6 ಕಿಲೋಮೀಟರ್ ದುರ್ಗಮ ಹಾದಿಯಲ್ಲಿಸಾಕಷ್ಟು ಹರಸಾಹಸ ಪಟ್ಟು ಮೃತದೇಹವನ್ನು ಕೆಳಗೆ ಹೊತ್ತು ತಂದಿದ್ದಾರೆ. ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆವ್ಯಕ್ತವಾಗಿದೆ.

ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕೃತ ಪ್ರದೀಪ್ ಪೂಜಾರಿ

ಪೊಲೀಸ್ ಠಾಣೆಯಲ್ಲಿ ಸಬ್‌ಇನ್ಸ್‌ಪೆಕ್ಟರ್ ಆಗಿರುವ ಕೆಯ್ಯೂರಿನ ಪ್ರದೀಪ್ ಪೂಜಾರಿಯವರು 2022ನೇ ಸಾಲಿನ ಮುಖ್ಯಮಂತ್ರಿಚಿನ್ನದ ಪದಕಕ್ಕೆ ಭಾಜನರಾಗಿದ್ದರು.

2010ನೇ ಸಾಲಿನಲ್ಲಿ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ ಆಗಿ ಆಯ್ಕೆಗೊಂಡಿದ್ದು, ನಿವೃತ್ತ ಸರ್ವೆ ಸೂಪರ್ ವೈಸರ್ ಬಾಲಕೃಷ್ಣ ಪೂಜಾರಿಕೆಂಗುಡೇಲು ಮತ್ತು ಗುಣವತಿ ದಂಪತಿ ಪುತ್ರ.

ಪ್ರದೀಪ್ ಪೂಜಾರಿ ಅವರು ರಾಜಾನುಕುಂಟೆ, ಅವಲಹಳ್ಳಿ, ಕಮರ್ಷಿಯಲ್ ಸ್ಟ್ರೀಟ್, ಶಿಡ್ಲಘಟ್ಟ ಗ್ರಾಮಾಂತರ, ವಿಶ್ವನಾಥಪುರಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪಿ.ಎಸ್‌. ಆಗಿ ಕರ್ತವ್ಯನಿರ್ವಹಿಸುತ್ತಿದ್ದಾರೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »