TOP STORIES:

FOLLOW US

ಬೆನ್ನು ನೋವು ಇದೆಯಾ ಹಾಗದರೆ ಈ ಸ್ಟೋರಿ ಓದಿ


ಇತ್ತೀಚೆಗಿನ ನಮ್ಮ ದೈನಂದಿನ ಚಟುವಟಿಕೆಗಳು ದೇಹವನ್ನು ನಾನಾ ರೀತಿಯಲ್ಲಿ ಕಾಡುತ್ತದೆ. ಅದರಲ್ಲಿ ಬೆನ್ನು ನೋವು ಕೂಡ ಒಂದಾಗಿದೆ. ಈ ಬೆನ್ನು ನೋವಿನಿಂದ ರಿಲ್ಯಾಕ್ಸ್ ಆಗಲು ನಾವು ಬಹಳಷ್ಟು ಸಲ ಹೆಣಗಾಡಬೇಕಾಗುತ್ತದೆ.

ಹೆಚ್ಚಿನವರು ಬೆನ್ನು ನೋವು ಕಾಡುವಾಗಲೆಲ್ಲ ನೋವು ನಿವಾರಕ ಮಾತ್ರೆ ಸೇವಿಸಿ ತಕ್ಷಣಕ್ಕೆ ಶಮನಗೊಳಿಸುವ ಪ್ರಯತ್ನ ಮಾಡುತ್ತಾರೆ. ಆದರೆ ಇದನ್ನೇ ಮುಂದುವರೆಸುವುದು ಆರೋಗ್ಯದ ದೃಷ್ಠಿಯಿಂದ ಮಾರಕ ಎಂಬುದನ್ನು ಮರೆಯಬಾರದು. ಹಾಗಾದರೆ ಬೆನ್ನು ನೋವು ಕಡಿಮೆ ಮಾಡಲು ಏನು ಮಾಡಬಹುದು ಎಂಬುದನ್ನು ನೋಡುವುದಾದರೆ ವ್ಯಾಯಾಮ ಬೆನ್ನು ನೋವು ತಡೆಗೆ ಸಹಕಾರಿ ಎನ್ನಲಾಗುತ್ತದೆ.

ಸಾಮಾನ್ಯವಾಗಿ ಬೆನ್ನು ನೋವು ಕುಳಿತು, ಬಗ್ಗಿ ಕೆಲಸ ಮಾಡುವವರಲ್ಲಿ, ದೈಹಿಕ ಶ್ರಮದ ಕೆಲಸ ಮಾಡದವರಲ್ಲಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ರಾತ್ರಿ ಮಲಗುವಾಗ ಇಲ್ಲದ ಬೆನ್ನುನೋವು ಬೆಳಿಗ್ಗೆ ಹಾಸಿಗೆಯಿಂದ ಏಳುವಾಗ ಕಾಣಿಸಿಕೊಳ್ಳಬಹುದು. ಬಹಳಷ್ಟು ಜನ ಏನೂ ಕೆಲಸ ಮಾಡದೆ ಮನೆಯಲ್ಲಿ ಕುಳಿತು ಸಮಯ ಕಳೆಯುವವರು ಕೆಲವೊಮ್ಮೆ ಬೆನ್ನು ನೋವಿನ ತೊಂದರೆ ಅನುಭವಿಸಬಹುದು.

ಬೆನ್ನು ನೋವನ್ನು ಶಮನಗೊಳಿಸಲು ಫಿಜಿಯೋಥೆರಪಿ ಸೇರಿದಂತೆ ಹಲವು ವೈದ್ಯಕೀಯ ಚಿಕಿತ್ಸೆಗಳನ್ನು ನೀಡಲಾಗುತ್ತದೆ. ಬೆನ್ನು ನೋವು ಬಂದ ಬಳಿಕ ಚಿಕಿತ್ಸೆ ಪಡೆಯುವ ಬದಲು ಬಾರದಂತೆ ನೋಡಿಕೊಳ್ಳುವುದು ಮುಖ್ಯವಾಗಿರುತ್ತದೆ. ಆದ್ದರಿಂದ ಬೆನ್ನು ನೋವು ತಡೆಗೆ ಅನುಕೂಲವಾಗುವಂತೆ ಕೆಲವು ವ್ಯಾಯಾಮಗಳನ್ನು ಮಾಡುವುದು ಒಳ್ಳೆಯ ಅಭ್ಯಾಸವಾಗಿದೆ.

ಬೆನ್ನಿನ ಸ್ನಾಯು ದುರ್ಬಲವಾದರೆ ಬೆನ್ನು ನೋವು ಕಾಣಿಸುತ್ತದೆ. ಹೀಗಾಗಿ ಸ್ನಾಯುಗಳನ್ನು ಬಲಪಡಿಸುವ ಕೆಲಸವನ್ನು ವ್ಯಾಯಾಮದ ಮೂಲಕ ಮಾಡುವುದು ಅತಿ ಮುಖ್ಯವಾಗಿದೆ. ವೈದ್ಯರು ಶಿಫಾರಸ್ಸು ಮಾಡಿದ ಮೂರು ವ್ಯಾಯಾಮಗಳು ಮತ್ತು ಒಂದಷ್ಟು ಸಲಹೆಗಳು ಬಹುಶಃ ಬೆನ್ನು ನೋವಿನಿಂದ ಬಳಲುವವರಿಗೆ ಅಥವಾ ಬೆನ್ನು ನೋವು ಬಾರದಂತೆ ತಡೆಯುವವರಿಗೆ ಅನುಕೂಲವಾಗಲಿದೆ.

ವ್ಯಾಯಾಮ ಮಾಡುವವರು ಕಾಲುಗಳನ್ನು ನೇರವಾಗಿಸಿ ಅಂಗಾತ ಮಲಗಬೇಕು. ಕೈಗಳನ್ನು ಪಕ್ಕದಲ್ಲಿಟ್ಟುಕೊಳ್ಳಬೇಕು. ಆ ನಂತರ ಮಂಡಿಯನ್ನು ಮೇಲೆತ್ತುತ್ತಾ ನಿಧಾನವಾಗಿ ಎದೆಯ ಕಡೆಗೆ ತರಬೇಕು. ಹೀಗೆ ಹತ್ತು ಬಾರಿ ಮಾಡಬೇಕು.

ಎರಡನೆಯದರಲ್ಲಿ ಮಂಡಿಗಳನ್ನು ಮಡಚಿ, ಪಾದಗಳನ್ನು ನೆಲಕ್ಕೂರಬೇಕು ಆ ನಂತರ ಮಡಚಿದ ಟವೆಲ್ ಮೇಲೆ ತಲೆಯನ್ನಿಟ್ಟು ಅಂಗಾತವಾಗಿ ಮಲಗಿ ನಿಧಾನವಾಗಿ ಕೆಳಭಾಗವನ್ನು ಮೇಲಕ್ಕೆತ್ತಿ ಇಳಿಸಬೇಕು. ಹೀಗೆ ಕನಿಷ್ಟ ಹತ್ತು ಬಾರಿ ಮಾಡಬೇಕು.

ಮೂರನೆಯ ವ್ಯಾಯಾಮದಲ್ಲಿ ಕೈಗಳು ಪಕ್ಕಗಳಲ್ಲಿ ಸಡಿಲವಾಗಿ ನೇತಾಡುವಂತೆ ನೇರವಾಗಿ ನಿಂತುಕೊಳ್ಳಬೇಕು. ಆ ನಂತರ ಭುಜಗಳನ್ನು ಹಿಂದಕ್ಕೆ ಹಿಡಿಯಬೇಕು. ಬಳಿಕ ಸೊಂಟದಿಂದ ನಿಧಾನವಾಗಿ ಮುಂದೆ ಬಾಗುತ್ತಾ ತಲೆ ಮತ್ತು ಕೈಗಳು ಮುಂದಕ್ಕೆ ಬೀಳುವಂತೆ ಮಾಡುತ್ತಾ ಕಾಲುಬೆರಳುಗಳನ್ನು ಸ್ಪರ್ಶಿಸಬೇಕು. ಹೀಗೆ ಮಾಡುವಾಗ ಮಂಡಿಗಳು ಬಾಗದಂತೆ ನೋಡಿಕೊಳ್ಳಬೇಕು. ಇದನ್ನು ಕೂಡ ಹತ್ತು ಬಾರಿ ಮಾಡಬೇಕು.

ಈ ವ್ಯಾಯಾಮಗಳನ್ನು ಒಮ್ಮೆಗೆ ಮಾಡಲು ಕಷ್ಟವಾಗುತ್ತದೆ. ಆದ್ದರಿಂದ ಪ್ರತಿದಿನವೂ ಒಂದೊಂದೇ ಹೆಚ್ಚಿಸುತ್ತಾ ಹತ್ತಕ್ಕೆ ಬಂದು ನಿಲ್ಲಿಸಬಹುದು. ಬಳಿಕ ಪ್ರತಿದಿನವೂ ಒಂದೊಂದನ್ನು ಹತ್ತತ್ತು ಬಾರಿ ಮಾಡಿದರೆ ಆರೋಗ್ಯಕ್ಕೆ ಒಳ್ಳೆಯದಾಗುತ್ತದೆ.

ಇವತ್ತಿನ ಪರಿಸ್ಥಿತಿಯಲ್ಲಿ ಹೆಚ್ಚಿನವರು ಹಗುರವಾದ ಕೆಲಸಗಳನ್ನೇ ಮಾಡುತ್ತಿರುತ್ತಾರೆ. ಅಂತಹವರು ಕೆಲವೊಮ್ಮೆ ಅನಿವಾರ್ಯ ಪರಿಸ್ಥಿತಿಯಲ್ಲಿ ಕಠಿಣ ಕೆಲಸಗಳನ್ನು ಮಾಡಿದಾಗ ಹಲವು ತೊಂದರೆಗಳನ್ನು ಎದುರಿಸುವುದು ಸಾಮಾನ್ಯ. ಆದ್ದರಿಂದ ಪ್ರತಿದಿನವೂ ಒಂದಲ್ಲ ಒಂದು ರೀತಿಯ ವ್ಯಾಯಾಮಗಳನ್ನು ಮಾಡುವ ಮೂಲಕ ದೇಹವನ್ನು ದಂಡಿಸಬೇಕು. ಒಂದಷ್ಟು ದೂರ ವಾಕಿಂಗ್ ಮಾಡುವುದು, ಯೋಗ, ವ್ಯಾಯಾಮಗಳನ್ನು ರೂಢಿಸಿಕೊಳ್ಳಬೇಕು ಇಲ್ಲದೆ ಹೋದರೆ ಕಾಯಿಲೆಗಳು ನಮ್ಮನ್ನು ಒಂದಲ್ಲ ಒಂದು ರೀತಿಯಲ್ಲಿ ಅಟ್ಟಿಸಿಕೊಂಡು ಬರುವುದರಲ್ಲಿ ಸಂದೇಹವಿಲ್ಲ.


Share:

More Posts

Category

Send Us A Message

Related Posts

ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಸಂಘದ ನೂತನ ಅಧ್ಯಕ್ಷರಾದ ಶ್ರೀಮತಿ ಅಪರ್ಣ ಶರತ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 26.02.2025 ರಂದು ಕತಾರ್ ನ ಐ. ಸಿ. ಸಿ. ಮುಂಬೈ ಹಾಲ್ ನಲ್ಲಿ  ಶ್ರೀ


Read More »

ಸೌದಿ ಬಿಲ್ಲವಾಸ್ ದಮ್ಮಾಮ್ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ದಮ್ಮಾಮ್: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್ 1ರಿಂದ ಮಾರ್ಚ್ 5 ರವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಸೌದಿ ಬಿಲ್ಲವಾಸ್ ದಮ್ಮಾಮ್ ವತಿಯಿಂದ ಸೌದಿಯ


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಹಾ ಶಿವರಾತ್ರಿ ಮಹೋತ್ಸವಕ್ಕೆ ಚಾಲನೆ


Share       ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಫೆ.21ರಿಂದ 28ರವರೆಗೆ ಜರುಗುವ ವಾರ್ಷಿಕ ಮಹೋತ್ಸವ ಮತ್ತು ಮಹಾ ಶಿವರಾತ್ರಿ ಮಹೋತ್ಸವಕ್ಕೆ ಶುಕ್ರವಾರ ಧ್ವಜಾರೋಹಣ ನೆರವೇರುವ ಮೂಲಕ ಚಾಲನೆ ನೀಡಲಾಯಿತು. ಶುಕ್ರವಾರ ಗುರು ಪ್ರಾರ್ಥನೆ, ಪುಣ್ಯಾಹ ಹೋಮ,


Read More »

ಬಿಲ್ಲವ ಸಮಾಜ ಸೇವಾ ಸಂಘ ಪುಣೆ  ಆಶ್ರಯದಲ್ಲಿ ಏಪ್ರಿಲ್ ತಿಂಗಳಲ್ಲಿ ನಡೆಯಲಿದೆ “ವಿಶ್ವ ಬಿಲ್ಲವ ಕ್ರಿಕೆಟ್” ಪಂದ್ಯಾಟದ


Share       ಪುಣೆ : ಫೆ.19,ಬಿಲ್ಲವ ಸಮಾಜ ಸೇವಾ ಸಂಘ (ರಿ) ಪುಣೆ ಇದರ  ಆಶ್ರಯದಲ್ಲಿ ಮುಂಬರುವ ಎಪ್ರಿಲ್ ತಿಂಗಳಲ್ಲಿ ನಡೆಯಲಿರುವವಿಶ್ವ ಬಿಲ್ಲವ ಕ್ರಿಕೆಟ್ಪಂದ್ಯಾಟದ  ತಯಾರಿಯ ಬಗ್ಗೆ  ಎರಡನೇ ಪೂರ್ವಭಾವಿ ಸಭೆಯು ಇಂದು ಫೆ. 19ನೇ


Read More »

ಬಿಲ್ಲವಾಸ್ ಕತಾರ್ ನ ಅಧ್ಯಕ್ಷ ಶ್ರೀ ಸಂದೀಪ್ ಸಾಲಿಯಾನ್ ರವರಿಗೆ ವಿನಯಪೂರ್ವಕ ಬೀಳ್ಕೊಡುಗೆ


Share       ಬಿಲ್ಲವಾಸ್ ಕತಾರ್ ನ ನೇತೃತ್ವದಲ್ಲಿ ದಿನಾಂಕ ೮.೨.೨೦೨೫ ರಂದು ಎಂ. ಆರ್. ಎ, ಸಲ್ವ ರೋಡ್, ಕತಾರ್, ಔತಣಕೂಟ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಬಿಲ್ಲವಾಸ್ ಕತಾರ್ ನ ಅಧ್ಯಕ್ಷರಾದ ಶ್ರೀ ಸಂದೀಪ್


Read More »

ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ


Share       ಮಂಗಳೂರು: ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ. MRPL ಸಂಸ್ಥೆಯ ಉದ್ಯೋಗಿ ಆಗಿರುವ ಪ್ರಮೀಳ ದೀಪಕ್ ಪೆರ್ಮುದೆ ಇವರಿಗೆ ಸಾರ್ವಜನಿಕ ವಲಯದಲ್ಲಿ ಮಹಿಳೆಯರು ಪರಿಕಲ್ಪನೆಯಡಿ “ Woman


Read More »