TOP STORIES:

ಬೇಗ ತೂಕ ಇಳಿಸಲು ಈ ಐದು ಹಣ್ಣುಗಳನ್ನು ಸೇವಿಸಿ


ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿರುವವರು ಅತ್ಯಂತ ಬೇಗನೆ ತೂಕ ಕಳೆದೊಳ್ಳಬೇಕು ಎಂದುಕೊಂಡಿದ್ರೆ ಫ್ರೂಟ್‌ ಡಯಟ್‌ ಆಯ್ಕೆ ಮಾಡಿಕೊಳ್ಳೋದು ಉತ್ತಮ. ದೇಹಕ್ಕೆ ಬೇಕಾದ ಫೈಬರ್‌ ಅಂಶವನ್ನು ಇದು ಪೂರೈಸುತ್ತದೆ. ಆದ್ರೆ ಡಯಟ್‌ ಗೆ ಯಾವ ಹಣ್ಣು ಸೂಕ್ತ ಎಂಬುದನ್ನು ತಿಳಿದುಕೊಳ್ಳಬೇಕು.

ಬಾಳೆಹಣ್ಣು : ಅತ್ಯಧಿಕ ಪೋಷಕಾಂಶಗಳುಳ್ಳ ಬಾಳೆಹಣ್ಣು ಡಯಟ್‌ ಗೆ ಸೂಕ್ತ. ಮ್ಯಾಂಗನೀಸ್‌ ಹಾಗೂ ಪೊಟ್ಯಾಶಿಯಂ ಅಂಶಗಳು ಇದರಲ್ಲಿವೆ. ಇದು ದೇಹದಲ್ಲಿರುವ ಕೊಲೆಸ್ಟ್ರಾಲ್‌ ಅನ್ನು ನಿಯಂತ್ರಣದಲ್ಲಿಡುತ್ತದೆ. ಬಾಳೆಹಣ್ಣನ್ನು ಓಟ್‌ ಮೀಲ್‌ ಬೌಲ್‌ ಜೊತೆಗೆ ಸೇವಿಸಿ. ಅಥವಾ ಬನಾನಾ ಶೇಕ್‌ ಮಾಡಿಕೊಳ್ಳಿ, ಇಲ್ಲವಾದಲ್ಲಿ ಸಲಾಡ್‌ ನೊಟ್ಟಿಗೂ ತಿನ್ನಬಹುದು.

ಸೇಬು : ಕಡಿಮೆ ಕ್ಯಾಲೋರಿ ಹಾಗೂ ಅತ್ಯಧಿಕ ಫೈಬರ್‌ ಹೊಂದಿರೋ ಹಣ್ಣು ಇದು. ಆಗಾಗ ಏನಾದ್ರೂ ಕುರುಕಲು ತಿನ್ನಬೇಕೆಂಬ ಚಪಲ ತಡೆದು, ತೂಕ ಇಳಿಸಲು ಇದು ಸಹಾಯ ಮಾಡುತ್ತದೆ. ದಿನವಿಡೀ ಚಟುವಟಿಕೆಯಿಂದಿರಲು ಕೂಡ ಸೇಬು ಸಹಕರಿಸುತ್ತದೆ.

ಅವಕಾಡೊ : ನಿಮ್ಮ ಹಸಿವನ್ನು ಇಂಗಿಸಿ, ಬಾಯಿ ಚಪಲ ಕಡಿಮೆ ಮಾಡುತ್ತದೆ ಈ ಹಣ್ಣು. ಅವಕಾಡೊ ತಿನ್ನುವುದರಿಂದ ತೂಕ ಹೆಚ್ಚಬಹುದೆಂಬ ಭಯವಿಲ್ಲ. ಯಾಕಂದ್ರೆ ಇದರಲ್ಲಿ ನಿಮ್ಮ ದೇಹಕ್ಕೆ ಅಗತ್ಯವಾದ ಗುಡ್‌ ಫ್ಯಾಟ್‌ ಇದೆ.

ದ್ರಾಕ್ಷಿ : ಪೆಂಡಮಿಕ್‌ ನಿಂದಾಗಿ ಎಲ್ಲರೂ ಇಮ್ಯೂನಿಟಿ ಹೆಚ್ಚಿಸಿಕೊಳ್ಳುವತ್ತ ಗಮನಹರಿಸ್ತಿದ್ದಾರೆ. ದ್ರಾಕ್ಷಿ ಹಣ್ಣಿನಲ್ಲಿ ವಿಟಮಿನ್‌ ಸಿ ಹೇರಳವಾಗಿದ್ದು, ನಿಮ್ಮ ಇಮ್ಯೂನಿಟಿ ಬೂಸ್ಟರ್‌ ಆಗಿ ಇದು ಕೆಲಸ ಮಾಡುತ್ತದೆ. ನಿಮ್ಮ ರಕ್ತದೊತ್ತಡವನ್ನು ನಿಯಂತ್ರಣದಲ್ಲಿರಲು ಸಹಕರಿಸುತ್ತದೆ.

ಬೆರ್ರಿ : ರಾಸ್ ಬೆರ್ರಿ, ಬ್ಲೂ ಬೆರ್ರಿ, ಸ್ಟ್ರಾಬೆರ್ರಿ ಹಣ್ಣುಗಳು ತಿನ್ನಲು ಬಹಳ ರುಚಿಕರ, ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು. ಇವುಗಳಲ್ಲಿ ಆಂಟಿಒಕ್ಸಿಡೆಂಟ್ಸ್‌ ಹೇರಳವಾಗಿದೆ. ವಿಟಮಿನ್‌, ಮಿನರಲ್ಸ್‌ ಕೂಡ ಇದೆ. ಹಾಗಾಗಿ ನಿಮ್ಮ ಡಯಟ್‌ ನಲ್ಲಿ ಸೇರಿಸಿಕೊಳ್ಳಿ.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »