TOP STORIES:

ಬೈಂದೂರು: 4000ಕ್ಕೂ ಅಧಿಕ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿದ ಯುವ ಉದ್ಯಮಿ


ಬೈಂದೂರು: ಕೊರೊನಾ 2ನೇ ಅಲೆ ಅದೆಷ್ಟೋ ಬಡ ಕುಟುಂಬಗಳ ನೆಮ್ಮದಿಯನ್ನೆ ಕಸಿದುಕೊಂಡಿದೆ. ಕಳೆದ 45 ದಿನಗಳ ಪೂರ್ಣ ಲಾಕ್ ಡೌನ್ ಸಮಯದಲ್ಲಿ ಸಾವಿರಾರು ಕುಟುಂಬಗಳಿಗೆ ದಿನದ ತುತ್ತಿಗಾಗಿ ಪರದಾಡಿದ ಉದಾಹರಣೆಗಳಿವೆ. ಅಂದಿನ ಸಂಪಾದನೆಯಿಂದ ಆ ದಿನದ ನಿರ್ವಹಣೆ ಮಾಡುತ್ತಿದ್ದ ಕುಟುಂಬಗಳಿಗೆ ಲಾಕ್ ಡೌನ್‍ನಿಂದ ಕೂಲಿ ಕೆಲಸ ಸಿಗದೆ ಅತಂತ್ರರಾಗಿರಬೇಕಾದ ಸ್ಥಿತಿ ನಿರ್ಮಾಣವಾಯಿತು. ಸರ್ಕಾರವೇನು ಪಡಿತರ ನೀಡಿತ್ತಾದರೂ ಅದಕ್ಕೆ ದಿನಸಿ ಸಾಮಾಗ್ರಿಗಳನ್ನು ಖರೀದಿಸಲು ಹಣವಿಲ್ಲದೆ ಅಸಹಾಯಕವಾದ ಕುಟುಂಬಗಳು ಹಲವು. ಈ ಸಂದರ್ಭದಲ್ಲಿ ಬಡ ಜನರಿಗೆ ತನ್ನಿಂದಾದ ಸಹಾಯ ನೀಡಲು ಮುಂದಾದರು ಉದ್ಯಮಿ ಗೋವಿಂದ ಬಾಬು ಪೂಜಾರಿಯವರು.

ಬೈಂದೂರು ಬಿಜೂರಿನವರಾದ ಗೋವಿಂದ ಬಾಬು ಪೂಜಾರಿ ಅವರು ನಿಜಾರ್ಥದಲ್ಲಿ ಬಡವರ ಬಂಧು. ಸದಾ ಬಡವರ, ದೀನ ದುರ್ಬಲರು, ನಿರ್ಗತಿಕರು, ಅಸಾಹಯಕರ ಕಂಡರೆ ಅದೇನೋ ಕನಿಕರ. ಹೃದಯ ಶ್ರೀಮಂತಿಕೆ ಮೂರ್ತಿವೆತ್ತ ಗೋವಿಂದ ಬಾಬು ಪೂಜಾರಿಯವರು ಬೆಂಗಳೂರಿನಲ್ಲಿ ಉದ್ಯಮಿಯಾಗಿದ್ದರೂ ಕೂಡಾ ತನ್ನೂರಿನ ಜನರ ಕಣ್ಣೀರು ಒರೆಸುವುದರಲ್ಲಿ ಸದಾ ಮುಂದೆ. ಕೊರೊನಾ 2ನೇ ಅಲೆಯ ಸಂದರ್ಭದಲ್ಲಿ ಬೈಂದೂರು ಕ್ಷೇತ್ರ ವ್ಯಾಪ್ತಿಯ ಜನರ ನೆರವಿಗೆ ನಿಂತ ಇವರು ಕಳೆದ ಒಂದು ವಾರದಿಂದ ಶ್ರೀ ವರಮಹಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸುಮಾರು 4000ಕ್ಕೂ ಹೆಚ್ಚಿನ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿದ್ದಾರೆ.

ಬೈಂದೂರು ಕ್ಷೇತ್ರ ವ್ಯಾಪ್ತಿಯ ಹಳ್ಳಿ ಹಳ್ಳಿಯ ಗ್ರಾಮೀಣ ಪ್ರದೇಶಗಳಿಗೆ ತಾನೇ ಖುದ್ದಾಗಿ ಭೇಟಿ ನೀಡಿ ತನ್ನ ಕೈಯಾರೆ ಕಿಟ್ ವಿತರಿಸಿದ್ದಾರೆ. ಪ್ರತಿ ಗ್ರಾಮದಲ್ಲಿಯೂ ಈಗ ಜಿ.ಬಿ.ಪಿ (ಗೋವಿಂದ ಬಾಬು ಪೂಜಾರಿ ಜನಸೇವಾ ಸಂಘ) ವಿದ್ದು ಆ ಸಂಘದ ಮೂಲಕ ಸ್ಥಳೀಯ ಪ್ರದೇಶದಲ್ಲಿ ಆರ್ಹ ಕುಟುಂಬಗಳನ್ನು ಗುರುತಿಸಿ ಆ ಕುಟುಂಬಗಳಿಗೆ ಅಗತ್ಯ ಆಹಾರ ಪದಾರ್ಥಗಳ ಕಿಟ್ ನೀಡಿದ್ದಾರೆ. ಈಗಾಗಲೇ ಬೈಂದೂರು ಕ್ಷೇತ್ರ ವ್ಯಾಪ್ತಿಯ 66 ಗ್ರಾಮಗಳ 4 ಸಾವಿರ ಅಧಿಕ ಮಂದಿಗೆ ಕಿಟ್ ವಿತರಿಸಿದ್ದಾರೆ.

ಇಷ್ಟಕ್ಕೆ ಇವರ ಸೇವಾಧರ್ಮ ನಿಂತಿಲ್ಲ. ಬೇಸಿಗೆಯಲ್ಲಿ ಉಪ್ಪುಂದ, ತಾರಾಪತಿ ಸೇರಿದಂತೆ 470 ಮನೆಗಳಿಗೆ ಕುಡಿಯುವ ನೀರು ಸರಬರಾಜು ಮಾಡಿದ್ದಾರೆ. ತೀರ ಬಡ ಕುಟುಂಬಗಳು ಸೂರು ಹೊಂದಲು ಕಷ್ಟ ವ್ಯಕ್ತ ಪಡಿಸಿದಾಗ ಸ್ಪಂದಿಸಿದ ಇವರು ತಾನೇ ಮನೆ ನಿರ್ಮಾಣ ಮಾಡಿಕೊಡುವ ಆಶ್ವಾಸನೆವಿತ್ತು. ಈಗಾಗಲೇ ಶ್ರೀ ವರಮಹಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ 3 ಮನೆಗಳ ನಿರ್ಮಾಣ ಮಾಡಿದ್ದಾರೆ. ಶೀಘ್ರ ಅದರ ಪ್ರವೇಶೋತ್ಸವವೂ ನಡೆಯಲಿದೆ.

ಇವರ ಉದ್ಯಮ ಕ್ಷೇತ್ರವಿರುವುದು ಬೆಂಗಳೂರಿನಲ್ಲಿ. ಅಲ್ಲಿಯೂ ಕೂಡಾ ಕೊರೊನಾ 2ನೇ ಅಲೆಯಿಂದ ಸಮಸ್ಯೆಗಿಡಾದವರಿಗೆ ಸ್ಪಂದಿಸಿದ್ದಾರೆ. ಆಶಾ ಕಾರ್ಯಕರ್ತೆಯರು, ಬಿಬಿಎಂಒಪಿಯ ಪೌರ ಕಾರ್ಮಿಕರಿಗೆ ಆಹಾರ ಸಾಮಾಗ್ರಿಯ ಕಿಟ್ ವಿತರಿಸಿದ್ದಾರೆ.

ಕಳೆದ ವರ್ಷ ತನ್ನೂರಿನ ಬಡ ಕುಟುಂಬವೊಂದಕ್ಕೆ ಮನೆ ನಿರ್ಮಿಸಿ ಹಸ್ತಾಂತರಿಸಿದ್ದರು. 300 ಅಧಿಕ ಮನೆಗಳಿಗೆ 2 ತಿಂಗಳು ಶುದ್ದ ಕುಡಿಯುವ ನೀರು ಸರಬರಾಜು ಮಾಡಿದ್ದರು. ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿಯೂ ಕೂಡಾ ಕೊರೊನಾ ವಾರಿಯರ್ಸ್ ಹಾಗೂ ಬಡ ಕುಟುಂಬಗಳಿಗೆ ನೆರವು ನೀಡಿದ್ದರು.

ಶೆಫ್ಟಾಕ್ ಫುಡ್ ಹಾಗೂ ಹಾಸ್ಪಿಟಾಲಿಟಿ ಸರ್ವಿಸಸ್ ಪ್ರೈವೆಟ್ ಲಿಮಿಟೆಡ್ ಸಂಸ್ಥಾಪಕರು ಮತ್ತು ಆಡಳಿತ ನಿರ್ದೇಶಕರಾಗಿರುವ ಇವರು, ಶೆಫ್ಟಾಕ್ ನ್ಯೂಟ್ರಿಫುಡ್ ಪ್ರೈ.ನ ಆಡಳಿತ ನಿರ್ದೇಶಕರು, ಪ್ರಗ್ನ್ಯಾ ಸಾಗರ್ ಹೋಟೆಲ್ಸ್ ಹಾಗೂ ರೆಸಾರ್ಟ್ ಪ್ರೈ. ಲಿ. ಮತ್ತು ಮತ್ಯ ಬಂಧನ ಪ್ರೈ. ಲಿ.ನ ಆಡಳಿತ ನಿರ್ದೇಶಕರು. ಶೆಫ್ಟಾಕ್ ಕ್ಯಾಟರಿಂಗ್ ಸರ್ವಿಸಸ್‍ನ ಮಾಲಕರು ಆಗಿರುವ ಇವರು ಹಲವಾರು ಸಂಸ್ಥೆಗಳ ಪ್ರಮುಖ ಜವಾಬ್ದಾರಿಯುತ ಹುದ್ದೆಗಳನ್ನು ನಿರ್ವಹಿಸುತ್ತಿದ್ದಾರೆ.

 


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »