TOP STORIES:

ಬೈಂದೂರು: 4000ಕ್ಕೂ ಅಧಿಕ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿದ ಯುವ ಉದ್ಯಮಿ


ಬೈಂದೂರು: ಕೊರೊನಾ 2ನೇ ಅಲೆ ಅದೆಷ್ಟೋ ಬಡ ಕುಟುಂಬಗಳ ನೆಮ್ಮದಿಯನ್ನೆ ಕಸಿದುಕೊಂಡಿದೆ. ಕಳೆದ 45 ದಿನಗಳ ಪೂರ್ಣ ಲಾಕ್ ಡೌನ್ ಸಮಯದಲ್ಲಿ ಸಾವಿರಾರು ಕುಟುಂಬಗಳಿಗೆ ದಿನದ ತುತ್ತಿಗಾಗಿ ಪರದಾಡಿದ ಉದಾಹರಣೆಗಳಿವೆ. ಅಂದಿನ ಸಂಪಾದನೆಯಿಂದ ಆ ದಿನದ ನಿರ್ವಹಣೆ ಮಾಡುತ್ತಿದ್ದ ಕುಟುಂಬಗಳಿಗೆ ಲಾಕ್ ಡೌನ್‍ನಿಂದ ಕೂಲಿ ಕೆಲಸ ಸಿಗದೆ ಅತಂತ್ರರಾಗಿರಬೇಕಾದ ಸ್ಥಿತಿ ನಿರ್ಮಾಣವಾಯಿತು. ಸರ್ಕಾರವೇನು ಪಡಿತರ ನೀಡಿತ್ತಾದರೂ ಅದಕ್ಕೆ ದಿನಸಿ ಸಾಮಾಗ್ರಿಗಳನ್ನು ಖರೀದಿಸಲು ಹಣವಿಲ್ಲದೆ ಅಸಹಾಯಕವಾದ ಕುಟುಂಬಗಳು ಹಲವು. ಈ ಸಂದರ್ಭದಲ್ಲಿ ಬಡ ಜನರಿಗೆ ತನ್ನಿಂದಾದ ಸಹಾಯ ನೀಡಲು ಮುಂದಾದರು ಉದ್ಯಮಿ ಗೋವಿಂದ ಬಾಬು ಪೂಜಾರಿಯವರು.

ಬೈಂದೂರು ಬಿಜೂರಿನವರಾದ ಗೋವಿಂದ ಬಾಬು ಪೂಜಾರಿ ಅವರು ನಿಜಾರ್ಥದಲ್ಲಿ ಬಡವರ ಬಂಧು. ಸದಾ ಬಡವರ, ದೀನ ದುರ್ಬಲರು, ನಿರ್ಗತಿಕರು, ಅಸಾಹಯಕರ ಕಂಡರೆ ಅದೇನೋ ಕನಿಕರ. ಹೃದಯ ಶ್ರೀಮಂತಿಕೆ ಮೂರ್ತಿವೆತ್ತ ಗೋವಿಂದ ಬಾಬು ಪೂಜಾರಿಯವರು ಬೆಂಗಳೂರಿನಲ್ಲಿ ಉದ್ಯಮಿಯಾಗಿದ್ದರೂ ಕೂಡಾ ತನ್ನೂರಿನ ಜನರ ಕಣ್ಣೀರು ಒರೆಸುವುದರಲ್ಲಿ ಸದಾ ಮುಂದೆ. ಕೊರೊನಾ 2ನೇ ಅಲೆಯ ಸಂದರ್ಭದಲ್ಲಿ ಬೈಂದೂರು ಕ್ಷೇತ್ರ ವ್ಯಾಪ್ತಿಯ ಜನರ ನೆರವಿಗೆ ನಿಂತ ಇವರು ಕಳೆದ ಒಂದು ವಾರದಿಂದ ಶ್ರೀ ವರಮಹಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸುಮಾರು 4000ಕ್ಕೂ ಹೆಚ್ಚಿನ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿದ್ದಾರೆ.

ಬೈಂದೂರು ಕ್ಷೇತ್ರ ವ್ಯಾಪ್ತಿಯ ಹಳ್ಳಿ ಹಳ್ಳಿಯ ಗ್ರಾಮೀಣ ಪ್ರದೇಶಗಳಿಗೆ ತಾನೇ ಖುದ್ದಾಗಿ ಭೇಟಿ ನೀಡಿ ತನ್ನ ಕೈಯಾರೆ ಕಿಟ್ ವಿತರಿಸಿದ್ದಾರೆ. ಪ್ರತಿ ಗ್ರಾಮದಲ್ಲಿಯೂ ಈಗ ಜಿ.ಬಿ.ಪಿ (ಗೋವಿಂದ ಬಾಬು ಪೂಜಾರಿ ಜನಸೇವಾ ಸಂಘ) ವಿದ್ದು ಆ ಸಂಘದ ಮೂಲಕ ಸ್ಥಳೀಯ ಪ್ರದೇಶದಲ್ಲಿ ಆರ್ಹ ಕುಟುಂಬಗಳನ್ನು ಗುರುತಿಸಿ ಆ ಕುಟುಂಬಗಳಿಗೆ ಅಗತ್ಯ ಆಹಾರ ಪದಾರ್ಥಗಳ ಕಿಟ್ ನೀಡಿದ್ದಾರೆ. ಈಗಾಗಲೇ ಬೈಂದೂರು ಕ್ಷೇತ್ರ ವ್ಯಾಪ್ತಿಯ 66 ಗ್ರಾಮಗಳ 4 ಸಾವಿರ ಅಧಿಕ ಮಂದಿಗೆ ಕಿಟ್ ವಿತರಿಸಿದ್ದಾರೆ.

ಇಷ್ಟಕ್ಕೆ ಇವರ ಸೇವಾಧರ್ಮ ನಿಂತಿಲ್ಲ. ಬೇಸಿಗೆಯಲ್ಲಿ ಉಪ್ಪುಂದ, ತಾರಾಪತಿ ಸೇರಿದಂತೆ 470 ಮನೆಗಳಿಗೆ ಕುಡಿಯುವ ನೀರು ಸರಬರಾಜು ಮಾಡಿದ್ದಾರೆ. ತೀರ ಬಡ ಕುಟುಂಬಗಳು ಸೂರು ಹೊಂದಲು ಕಷ್ಟ ವ್ಯಕ್ತ ಪಡಿಸಿದಾಗ ಸ್ಪಂದಿಸಿದ ಇವರು ತಾನೇ ಮನೆ ನಿರ್ಮಾಣ ಮಾಡಿಕೊಡುವ ಆಶ್ವಾಸನೆವಿತ್ತು. ಈಗಾಗಲೇ ಶ್ರೀ ವರಮಹಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ 3 ಮನೆಗಳ ನಿರ್ಮಾಣ ಮಾಡಿದ್ದಾರೆ. ಶೀಘ್ರ ಅದರ ಪ್ರವೇಶೋತ್ಸವವೂ ನಡೆಯಲಿದೆ.

ಇವರ ಉದ್ಯಮ ಕ್ಷೇತ್ರವಿರುವುದು ಬೆಂಗಳೂರಿನಲ್ಲಿ. ಅಲ್ಲಿಯೂ ಕೂಡಾ ಕೊರೊನಾ 2ನೇ ಅಲೆಯಿಂದ ಸಮಸ್ಯೆಗಿಡಾದವರಿಗೆ ಸ್ಪಂದಿಸಿದ್ದಾರೆ. ಆಶಾ ಕಾರ್ಯಕರ್ತೆಯರು, ಬಿಬಿಎಂಒಪಿಯ ಪೌರ ಕಾರ್ಮಿಕರಿಗೆ ಆಹಾರ ಸಾಮಾಗ್ರಿಯ ಕಿಟ್ ವಿತರಿಸಿದ್ದಾರೆ.

ಕಳೆದ ವರ್ಷ ತನ್ನೂರಿನ ಬಡ ಕುಟುಂಬವೊಂದಕ್ಕೆ ಮನೆ ನಿರ್ಮಿಸಿ ಹಸ್ತಾಂತರಿಸಿದ್ದರು. 300 ಅಧಿಕ ಮನೆಗಳಿಗೆ 2 ತಿಂಗಳು ಶುದ್ದ ಕುಡಿಯುವ ನೀರು ಸರಬರಾಜು ಮಾಡಿದ್ದರು. ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿಯೂ ಕೂಡಾ ಕೊರೊನಾ ವಾರಿಯರ್ಸ್ ಹಾಗೂ ಬಡ ಕುಟುಂಬಗಳಿಗೆ ನೆರವು ನೀಡಿದ್ದರು.

ಶೆಫ್ಟಾಕ್ ಫುಡ್ ಹಾಗೂ ಹಾಸ್ಪಿಟಾಲಿಟಿ ಸರ್ವಿಸಸ್ ಪ್ರೈವೆಟ್ ಲಿಮಿಟೆಡ್ ಸಂಸ್ಥಾಪಕರು ಮತ್ತು ಆಡಳಿತ ನಿರ್ದೇಶಕರಾಗಿರುವ ಇವರು, ಶೆಫ್ಟಾಕ್ ನ್ಯೂಟ್ರಿಫುಡ್ ಪ್ರೈ.ನ ಆಡಳಿತ ನಿರ್ದೇಶಕರು, ಪ್ರಗ್ನ್ಯಾ ಸಾಗರ್ ಹೋಟೆಲ್ಸ್ ಹಾಗೂ ರೆಸಾರ್ಟ್ ಪ್ರೈ. ಲಿ. ಮತ್ತು ಮತ್ಯ ಬಂಧನ ಪ್ರೈ. ಲಿ.ನ ಆಡಳಿತ ನಿರ್ದೇಶಕರು. ಶೆಫ್ಟಾಕ್ ಕ್ಯಾಟರಿಂಗ್ ಸರ್ವಿಸಸ್‍ನ ಮಾಲಕರು ಆಗಿರುವ ಇವರು ಹಲವಾರು ಸಂಸ್ಥೆಗಳ ಪ್ರಮುಖ ಜವಾಬ್ದಾರಿಯುತ ಹುದ್ದೆಗಳನ್ನು ನಿರ್ವಹಿಸುತ್ತಿದ್ದಾರೆ.

 


Related Posts

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »