TOP STORIES:

FOLLOW US

ಬೈಂದೂರು: 4000ಕ್ಕೂ ಅಧಿಕ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿದ ಯುವ ಉದ್ಯಮಿ


ಬೈಂದೂರು: ಕೊರೊನಾ 2ನೇ ಅಲೆ ಅದೆಷ್ಟೋ ಬಡ ಕುಟುಂಬಗಳ ನೆಮ್ಮದಿಯನ್ನೆ ಕಸಿದುಕೊಂಡಿದೆ. ಕಳೆದ 45 ದಿನಗಳ ಪೂರ್ಣ ಲಾಕ್ ಡೌನ್ ಸಮಯದಲ್ಲಿ ಸಾವಿರಾರು ಕುಟುಂಬಗಳಿಗೆ ದಿನದ ತುತ್ತಿಗಾಗಿ ಪರದಾಡಿದ ಉದಾಹರಣೆಗಳಿವೆ. ಅಂದಿನ ಸಂಪಾದನೆಯಿಂದ ಆ ದಿನದ ನಿರ್ವಹಣೆ ಮಾಡುತ್ತಿದ್ದ ಕುಟುಂಬಗಳಿಗೆ ಲಾಕ್ ಡೌನ್‍ನಿಂದ ಕೂಲಿ ಕೆಲಸ ಸಿಗದೆ ಅತಂತ್ರರಾಗಿರಬೇಕಾದ ಸ್ಥಿತಿ ನಿರ್ಮಾಣವಾಯಿತು. ಸರ್ಕಾರವೇನು ಪಡಿತರ ನೀಡಿತ್ತಾದರೂ ಅದಕ್ಕೆ ದಿನಸಿ ಸಾಮಾಗ್ರಿಗಳನ್ನು ಖರೀದಿಸಲು ಹಣವಿಲ್ಲದೆ ಅಸಹಾಯಕವಾದ ಕುಟುಂಬಗಳು ಹಲವು. ಈ ಸಂದರ್ಭದಲ್ಲಿ ಬಡ ಜನರಿಗೆ ತನ್ನಿಂದಾದ ಸಹಾಯ ನೀಡಲು ಮುಂದಾದರು ಉದ್ಯಮಿ ಗೋವಿಂದ ಬಾಬು ಪೂಜಾರಿಯವರು.

ಬೈಂದೂರು ಬಿಜೂರಿನವರಾದ ಗೋವಿಂದ ಬಾಬು ಪೂಜಾರಿ ಅವರು ನಿಜಾರ್ಥದಲ್ಲಿ ಬಡವರ ಬಂಧು. ಸದಾ ಬಡವರ, ದೀನ ದುರ್ಬಲರು, ನಿರ್ಗತಿಕರು, ಅಸಾಹಯಕರ ಕಂಡರೆ ಅದೇನೋ ಕನಿಕರ. ಹೃದಯ ಶ್ರೀಮಂತಿಕೆ ಮೂರ್ತಿವೆತ್ತ ಗೋವಿಂದ ಬಾಬು ಪೂಜಾರಿಯವರು ಬೆಂಗಳೂರಿನಲ್ಲಿ ಉದ್ಯಮಿಯಾಗಿದ್ದರೂ ಕೂಡಾ ತನ್ನೂರಿನ ಜನರ ಕಣ್ಣೀರು ಒರೆಸುವುದರಲ್ಲಿ ಸದಾ ಮುಂದೆ. ಕೊರೊನಾ 2ನೇ ಅಲೆಯ ಸಂದರ್ಭದಲ್ಲಿ ಬೈಂದೂರು ಕ್ಷೇತ್ರ ವ್ಯಾಪ್ತಿಯ ಜನರ ನೆರವಿಗೆ ನಿಂತ ಇವರು ಕಳೆದ ಒಂದು ವಾರದಿಂದ ಶ್ರೀ ವರಮಹಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸುಮಾರು 4000ಕ್ಕೂ ಹೆಚ್ಚಿನ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿದ್ದಾರೆ.

ಬೈಂದೂರು ಕ್ಷೇತ್ರ ವ್ಯಾಪ್ತಿಯ ಹಳ್ಳಿ ಹಳ್ಳಿಯ ಗ್ರಾಮೀಣ ಪ್ರದೇಶಗಳಿಗೆ ತಾನೇ ಖುದ್ದಾಗಿ ಭೇಟಿ ನೀಡಿ ತನ್ನ ಕೈಯಾರೆ ಕಿಟ್ ವಿತರಿಸಿದ್ದಾರೆ. ಪ್ರತಿ ಗ್ರಾಮದಲ್ಲಿಯೂ ಈಗ ಜಿ.ಬಿ.ಪಿ (ಗೋವಿಂದ ಬಾಬು ಪೂಜಾರಿ ಜನಸೇವಾ ಸಂಘ) ವಿದ್ದು ಆ ಸಂಘದ ಮೂಲಕ ಸ್ಥಳೀಯ ಪ್ರದೇಶದಲ್ಲಿ ಆರ್ಹ ಕುಟುಂಬಗಳನ್ನು ಗುರುತಿಸಿ ಆ ಕುಟುಂಬಗಳಿಗೆ ಅಗತ್ಯ ಆಹಾರ ಪದಾರ್ಥಗಳ ಕಿಟ್ ನೀಡಿದ್ದಾರೆ. ಈಗಾಗಲೇ ಬೈಂದೂರು ಕ್ಷೇತ್ರ ವ್ಯಾಪ್ತಿಯ 66 ಗ್ರಾಮಗಳ 4 ಸಾವಿರ ಅಧಿಕ ಮಂದಿಗೆ ಕಿಟ್ ವಿತರಿಸಿದ್ದಾರೆ.

ಇಷ್ಟಕ್ಕೆ ಇವರ ಸೇವಾಧರ್ಮ ನಿಂತಿಲ್ಲ. ಬೇಸಿಗೆಯಲ್ಲಿ ಉಪ್ಪುಂದ, ತಾರಾಪತಿ ಸೇರಿದಂತೆ 470 ಮನೆಗಳಿಗೆ ಕುಡಿಯುವ ನೀರು ಸರಬರಾಜು ಮಾಡಿದ್ದಾರೆ. ತೀರ ಬಡ ಕುಟುಂಬಗಳು ಸೂರು ಹೊಂದಲು ಕಷ್ಟ ವ್ಯಕ್ತ ಪಡಿಸಿದಾಗ ಸ್ಪಂದಿಸಿದ ಇವರು ತಾನೇ ಮನೆ ನಿರ್ಮಾಣ ಮಾಡಿಕೊಡುವ ಆಶ್ವಾಸನೆವಿತ್ತು. ಈಗಾಗಲೇ ಶ್ರೀ ವರಮಹಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ 3 ಮನೆಗಳ ನಿರ್ಮಾಣ ಮಾಡಿದ್ದಾರೆ. ಶೀಘ್ರ ಅದರ ಪ್ರವೇಶೋತ್ಸವವೂ ನಡೆಯಲಿದೆ.

ಇವರ ಉದ್ಯಮ ಕ್ಷೇತ್ರವಿರುವುದು ಬೆಂಗಳೂರಿನಲ್ಲಿ. ಅಲ್ಲಿಯೂ ಕೂಡಾ ಕೊರೊನಾ 2ನೇ ಅಲೆಯಿಂದ ಸಮಸ್ಯೆಗಿಡಾದವರಿಗೆ ಸ್ಪಂದಿಸಿದ್ದಾರೆ. ಆಶಾ ಕಾರ್ಯಕರ್ತೆಯರು, ಬಿಬಿಎಂಒಪಿಯ ಪೌರ ಕಾರ್ಮಿಕರಿಗೆ ಆಹಾರ ಸಾಮಾಗ್ರಿಯ ಕಿಟ್ ವಿತರಿಸಿದ್ದಾರೆ.

ಕಳೆದ ವರ್ಷ ತನ್ನೂರಿನ ಬಡ ಕುಟುಂಬವೊಂದಕ್ಕೆ ಮನೆ ನಿರ್ಮಿಸಿ ಹಸ್ತಾಂತರಿಸಿದ್ದರು. 300 ಅಧಿಕ ಮನೆಗಳಿಗೆ 2 ತಿಂಗಳು ಶುದ್ದ ಕುಡಿಯುವ ನೀರು ಸರಬರಾಜು ಮಾಡಿದ್ದರು. ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿಯೂ ಕೂಡಾ ಕೊರೊನಾ ವಾರಿಯರ್ಸ್ ಹಾಗೂ ಬಡ ಕುಟುಂಬಗಳಿಗೆ ನೆರವು ನೀಡಿದ್ದರು.

ಶೆಫ್ಟಾಕ್ ಫುಡ್ ಹಾಗೂ ಹಾಸ್ಪಿಟಾಲಿಟಿ ಸರ್ವಿಸಸ್ ಪ್ರೈವೆಟ್ ಲಿಮಿಟೆಡ್ ಸಂಸ್ಥಾಪಕರು ಮತ್ತು ಆಡಳಿತ ನಿರ್ದೇಶಕರಾಗಿರುವ ಇವರು, ಶೆಫ್ಟಾಕ್ ನ್ಯೂಟ್ರಿಫುಡ್ ಪ್ರೈ.ನ ಆಡಳಿತ ನಿರ್ದೇಶಕರು, ಪ್ರಗ್ನ್ಯಾ ಸಾಗರ್ ಹೋಟೆಲ್ಸ್ ಹಾಗೂ ರೆಸಾರ್ಟ್ ಪ್ರೈ. ಲಿ. ಮತ್ತು ಮತ್ಯ ಬಂಧನ ಪ್ರೈ. ಲಿ.ನ ಆಡಳಿತ ನಿರ್ದೇಶಕರು. ಶೆಫ್ಟಾಕ್ ಕ್ಯಾಟರಿಂಗ್ ಸರ್ವಿಸಸ್‍ನ ಮಾಲಕರು ಆಗಿರುವ ಇವರು ಹಲವಾರು ಸಂಸ್ಥೆಗಳ ಪ್ರಮುಖ ಜವಾಬ್ದಾರಿಯುತ ಹುದ್ದೆಗಳನ್ನು ನಿರ್ವಹಿಸುತ್ತಿದ್ದಾರೆ.

 


Share:

More Posts

Category

Send Us A Message

Related Posts

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share       ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »