TOP STORIES:

ಬ್ರಹ್ಮಶ್ರೀ ನಾರಾಯಣ ಗುರು ಸ್ತಬ್ದಚಿತ್ರಕ್ಕೆ ಅವಕಾಶ ನಿರಾಕರಣೆ – ಪ್ರತಿಭಟನೆಗೆ ಪುತ್ತೂರು ಬಿಲ್ಲವ ಸಂಘ ನಿರ್ಧಾರ


ಪುತ್ತೂರು ಜನವರಿ 18: ದೆಹಲಿಯಲ್ಲಿ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವದ ಪೆರೇಡ್‌ನಲ್ಲಿ ಕೇರಳ ಸರಕಾರವು ಪ್ರದರ್ಶಿಸಲು ಮುಂದಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು ತಿರಸ್ಕರಿಸಿರುವ ಕೇಂದ್ರ ಸರಕಾರದ ಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಸಂಘ (ರಿ) ಪುತ್ತೂರು ತೀವ್ರವಾಗಿ ಖಂಡಿಸಿದೆ.

ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕಡಿಂಜೆ ತಿಳಿಸಿದರು. ಬ್ರಹ್ಮಶ್ರೀ ನಾರಾಯಣ ಗುರುಗಳು ಪ್ರಾತಃ ಸ್ಮರಣೀಯರು ಹಾಗೂ ಪೂಜನೀಯರು. ಭಾರತ ದೇಶ ಕಂಡ ಅತ್ಯಂತ ಶ್ರೇಷ್ಠ ದಾರ್ಶನಿಕರಲ್ಲಿ ಒಬ್ಬರು. ಕೇರಳದ ಚಿತ್ರಣವನ್ನೆ ಬದಲಾಯಿಸಿದ ಸಾಮಾಜಿಕ ಹರಿಕಾರರು, ಮೇಲು-ಕೀಳು, ಸ್ಪರ್ಶ-ಅಸ್ಪರ್ಶ ಎನ್ನುವ ಜಾತಿ ಬೇಧ ತುಂಬಿದ ಸಾಮಾಜಿಕ ವ್ಯವಸ್ಥೆಯಲ್ಲಿ ಹಿಂದೂ ಧರ್ಮದ ಉಪನಿಷತ್ತುಗಳನ್ನು ಹೇಳಿದ ಸಮಾನತೆಯ ನೈಜ ಹಿಂದೂ ಧರ್ಮದ ಜ್ಞಾನದ ಬೆಳಕಾಗಿದ್ದವರು.ಬ್ರಹ್ಮಶಿ ನಾರಾಯಣ ಗುರುಗಳು “ಒಂದೇ ಜಾತಿ, ಒಂದೇ ಮತ ಒಂದೇ ದೇವರು” ಎನ್ನು ಸಾರ್ವಕಾಲಕ ಸತ್ಯ ಸಂದೇಶವನ್ನು ಜಗಕ್ಕೆ ಸಾರಿದ ಪರಮ ಗುರುಗಳಾಗಿದ್ದು, ಇಂಥ ಸಂತನ ಸ್ತಬ್ದಚಿತ್ರವನ್ನು ಕೇಂದ್ರ ತಿರಸ್ಕರಿಸಿರುವುದು ನಾರಾಯಣ ಗುರುವಿಗೆ ಮಾಡಿದ ಅವಮಾನ ಎಂದರು. ತಕ್ಷಣವೇ ಕೇಂದ್ರ ಮಧ್ಯಪ್ರವೇಶಿಸಿ ಗುರುಗಳ ಸ್ತಬ್ದಚಿತ್ರಕ್ಕೆ ಅವಕಾಶ ನೀಡಬೇಕು.ಇಲ್ಲದೇ ಹೋದಲ್ಲಿ ಜನವರಿ 26 ರ ಬಳಿಕ ಪುತ್ತೂರಿನಲ್ಲಿ ಎಲ್ಲಾ ಸಮಾಜದವರನ್ನು ಸೇರಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಎಚ್ಚರಿಸಿದರು.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »