TOP STORIES:

ಬ್ರಹ್ಮ ಶ್ರೀ ನಾರಾಯಣ ಗುರುಗಳ ಮಹಾಸಮಾಧಿ ದಿನ ಸೆಪ್ಟೆಂಬರ್21 ಇಂದು


ಮ. ವ.1104 ರ ಕನ್ನಿ 5ನೇ ದಿನ ಬೆಳಗಿನಿಂದಲೇ ಆಕಾಶವು ತೆಳುವಾದ ಮೊಡದಿಂದ ಕೂಡಿತ್ತು. ಮಧ್ಯಾಹ್ನವಾಗುತ್ತಿದ್ದಂತೆ ತುಂತುರು ಹನಿಗಳು ಬೀಳಲಾರಂಭಿಸಿದವು. ಗುರುಗಳು ಮಹಾನಿರ್ವಾಣಕ್ಕೆ ಪ್ರಾಪ್ತಿಯಾಗುವುದನ್ನು ಪ್ರಕೃತಿ ಸೂಚಿಸುವಂತೆ ತೋರುತ್ತಿತ್ತು. ಗುರುಗಳು ಪ್ರಸನ್ನರಾಗಿಯೇ ಇದ್ದರು. ಗುರುದೇವರು ಮೊದಲೇ ಸೂಚಿಸಿದ್ದಂತೆ ಆಶ್ರಮದಲ್ಲಿದ್ದ ಎಲ್ಲರಿಗೂ ಊಟವನ್ನು ಬಡಿಸಿದರು. ಪ್ರತಿಯೊಬ್ಬರ ಊಟವೂ ಆಯಿತು. ಕೆಲವು ದಿನಗಳಿಂದ ಹೆಚ್ಚಾಗಿ ಮೌನದಲ್ಲಿದ ಅವರು ಮಧ್ಯಾಹ್ನ ಶಿಷ್ಯರೊಂದಿಗೆ ಸ್ವಲ್ಪ ಮಾತನಾಡಿದರು. 3 ಗಂಟೆಯ ಸಮಯ ಆಗುತ್ತಿದ್ದಂತೆ ಶಿಷ್ಯರೊಂದಿಗೆ ತನಗೆ ಸಂಪೂರ್ಣ ಶಾಂತಿಯ ಅನುಭವ ವಾಗುತ್ತಿದೆ ಎಂದರು. ಅನೇಕ ಶಿಷ್ಯರು ಮಂತ್ರ ಪಠಣ ಮತ್ತು ಪ್ರಾರ್ಥನೆಗಳಲ್ಲಿ ನಿರತರಾಗಿದ್ದರು. 3.15 ಕ್ಕೆ ಗುರುಗಳು ಕುಳಿತುಕೊಳ್ಳಲು ಪ್ರಯತ್ನಿಸುತ್ತಿದ್ದಂತೆಯೆ ಬಳಿಯಲಿದ್ದವರ ಸಹಾಯದಿಂದ ಪದ್ಮಾಸನದಲ್ಲಿ ಕುಳಿತರು. ಶಿಷ್ಯರೆಲ್ಲರಿಗೂ ದೈವದಶಕವನ್ನು ಹಾಡಲು ಹೇಳಿದರು ದೈವದಶಕವನ್ನು ಹಾಡುತ್ತಿದ್ದಂತೆಯೇ ಹಾಗೆಯೇ ಧ್ಯಾನಸ್ಥರಾಗಿ ಕಣ್ಣುಗಳನ್ನು ನಿಧಾನವಾಗಿ ಮುಚ್ಚಿದರು. ಪದ್ಮಾಸನದಲ್ಲಿ ಧ್ಯಾನಸ್ಥರಾಗಿ ಯೋಗದಲ್ಲಿದ್ದ ಗುರುದೇವರು ಶಾಂತ ಚಿತ್ತದಿಂದ ಮಹಾಸಮಾಧಿಗೆ ಪ್ರಾಪ್ತರಾದರು.

ಮಹಾ ಸಮಾಧಿಯ ಈ ದಿನ ಕೇರಳದಲ್ಲಿ ಸಾರ್ವತ್ರಿಕ ರಜಾದಿನ. ವಿಶ್ವಾದ್ಯಂತ ಇಂದು ಸಾತ್ವಿಕ ಆಹಾರವನ್ನು ಸೇವಿಸಿ ಪೂಜೆ ಪ್ರಾರ್ಥನೆಯ ಮೂಲಕ ಗುರುಸ್ಮರಣೆ ಮಾಡುತ್ತಾರೆ ನಾವೂ ಕೂಡ ಈ ಪುಣ್ಯ ಕಾರ್ಯವನ್ನು ಮಾಡುವ.

ಥಿಯೋಸೊಫಿಕಲ್ ಸೊಸೈಟಿಯ ಎನ್ನಿಬೆಸಂಟ್ ತಮ್ಮ ಅಧಿಕೃತ ವರ್ತಮಾನ ಪತ್ರಿಕೆಯಾದ ಸನಾತನ ಧರ್ಮದಲ್ಲಿ ನಾರಾಯಣ ಗುರುಗಳು ಸಮಾಧಿಯಾದಾಗ ಹೀಗೆ ಬರೆಯುತ್ತಾರೆ. ” ಅವರೊಬ್ಬರು ಪ್ರಕಾಶಮಯ ಪೂರ್ಣ ಸೂರ್ಯನೇ ಆಗಿದ್ದರೆ… ಅವರು ಯೋಗದಲ್ಲಿ ಪತಂಜಲಿ. ಜ್ಞಾನದಲ್ಲಿ ಶಂಕರ, ತ್ಯಾಗದಲ್ಲಿ ಬುದ್ಧ, ಸ್ಥಿರತೆಯಲ್ಲಿ ನಭಿ, ಮಾನವ ಸೇವೆಯಲ್ಲಿ ಜೀಸಸ್,… ಅವರು ದೇವರು. ಮನುಷ್ಯ ರೂಪಧಾರಣೆ ಮಾಡಿದ ಅವತಾರ ಪುರುಷರಾದ ಅವರು ಮಹಿಮಾಯುಕ್ತ ತೇಜಸ್ಸಿನ ತನ್ನ ಜೀವನೊದ್ಧೇಶಗಳನ್ನು ಪೂರೈಸಿ, ಎಲ್ಲಿಂದ ಬಂದಿದ್ದರೋ ಅಲ್ಲಿಗೆ ತೆರಳಿದರು. ….ನಿಜವಾಗಿಯೂ ಅವರೊಬ್ಬ ಅವತಾರಿ. ಮನುಷ್ಯರಲ್ಲಿ ದೇವರು. ಭವಿಷತ್ತಿನ ಭಾರತ ಅವರನ್ನು ದೇವರಾಗಿ ಪೂಜಿಸುವುದು.”

(ಆಧಾರ ಶ್ರೀ ನಾರಾಯಣ ಗುರು ವಿಜಯ ದರ್ಶನ: ಬಾಬು ಶಿವಪೂಜಾರಿ)

✍ ರಾಜೇಂದ್ರ ಚಿಲಿಂಬಿ


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »