TOP STORIES:

ಭಟ್ಕಳ : ನಾಮಧಾರಿಯ ಹೆಮ್ಮೆಯ ಕುವರಿ ಉತ್ತರಕನ್ನಡ ಜಿಲ್ಲೆಯ ಸುಪುತ್ರಿಯಾದ ಶ್ರೀಮತಿ ರೂಪ ಶಿವಪ್ಪ ನಾಯ್ಕ


ಭಟ್ಕಳ : ನಾಮಧಾರಿಯ ಹೆಮ್ಮೆಯ ಕುವರಿ ಉತ್ತರಕನ್ನಡ ಜಿಲ್ಲೆಯ ಸುಪುತ್ರಿಯಾದ ಶ್ರೀಮತಿ ರೂಪ ಶಿವಪ್ಪ ನಾಯ್ಕ

ಇವರು ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಪ್ರಾಸ್ತಾವಿಕ
ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಮೂಲತಹ ಅಂಕೋಲದ ಪುರಲಕ್ಕಿ ಬೇಣದ ನಿವಾಸಿಯಾದ ಇವರು ಸದ್ಯ ಗದಗ ಜಿಲ್ಲೆಯ ಕೌಟುಂಬಿಕ ನ್ಯಾಯಾಲಯದ ಪ್ರಧಾನ ಜಿಲ್ಲಾ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದು ಕರ್ನಾಟಕದಿಂದ ಆಯ್ಕೆಯಾದ ಪ್ರಥಮ ಜಿಲ್ಲಾ ನ್ಯಾಯಾಧೀಶರಾಗಿದ್ದಾರೆ.
ಮಾನವ ಹಕ್ಕು ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದ ಇವರು ರಾಷ್ಟ್ರಮಟ್ಟದದಲ್ಲಿ 40 ಐ.ಎ.ಎಸ್ ,ಐಪಿ.ಎಸ್ ಅಭ್ಯರ್ಥಿಗಳ ಎದುರು ಪೈಪೋಟಿ ನೀಡಿ ಸ್ವರ್ಧಾತ್ಮಕ ಪರೀಕ್ಷೆ ಯಲ್ಲಿ ಮೊದಲ ಶ್ರೇಣೆಯಲ್ಲಿ ಉತ್ತೀರ್ಣಗೊಂಡು ರಾಜ್ಯದಲ್ಲಿಯೇ ಯಾರೂ ಮಾಡದ ಸಾಧನೆ ಮಾಡಿ ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಪ್ರಾಸ್ತವಿಕ ಅಧಿಕಾರಿಗಾಗಿ ಅಯ್ಕೆಯಾಗುವುದರ ಮೂಲಕ ನಮ್ಮ ಜಿಲ್ಲೆಗೆ ಹಾಗೂ ಕರ್ನಾಟಕ ರಾಜ್ಯಕ್ಕೆ ಕೀರ್ತಿಯನ್ನು ತಂದಿರುತ್ತಾರೆ.
ಇವರು ಅಂಕೋಲಾದ ದಿವಂಗತ ಶಿವಪ್ಪ ನಾರಯಣ ಹಾಗೂ ದಿ. ರಮಾಬಾಯಿ ದಂಪತಿಗಳ ಪುತ್ರಿಯಾಗಿದ್ದು ಇವರ ಪ್ರಾಥಮಿಕ ಶಿಕ್ಷಣ ಕಾರವಾರದ ಹಿಂದೂ ಹೈಸ್ಕೂಲಿನಲ್ಲಿ ಪಡೆದು ಪ್ರೌಢ ಶಿಕ್ಷಣವನ್ನು ಅಂಕೋಲಾದ ವಿ.ಕೆ.ಗಲ್ರ್ಸ್ ಹೈಸ್ಕೂಲಿನಲ್ಲಿ ಹಾಗೂ ಪದವಿಯನ್ನು ಅಂಕೋಲಾದ ಬಿ.ಸಿ. ಕಾಲೇಜಿನಲ್ಲಿ ಪಡೆದಿರುತ್ತಾರೆ. ಸಿರಸಿಯ ಎಂ.ಇ.ಎಸ್. ಕಾಲೇಜಿನಲ್ಲಿ ಎಲ್.ಎಲ್.ಬಿ. ಪದವಿಯನ್ನು ಪಡೆದು ಸಿರಸಿ ನ್ಯಾಯಾಲಯದಲ್ಲಿ ತಮ್ಮ ವಕೀಲಿ ವೃತ್ತಿಯನ್ನು ಆರಂಬಿಸಿ ನಂತರ ಧಾರವಾಡದಲ್ಲಿ ವಕೀಲ ವೃತ್ತಿಯನ್ನು ಮುಂದುವರಿಸಿ
ತನ್ನ ಸಂಸಾರಿಕ ಜೀವನದಲ್ಲಿ ಸತತ ಪರಿಶ್ರಮದಿಂದ ಸುಮಾರು 25 ವರ್ಷಗಳ ಹಿಂದೆ ನ್ಯಾಯಾದೀಶೆಯಾಗಿ ಆಯ್ಕೆಯಾಗಿದ್ದು ಹೆಮ್ಮೆಯ ಸಂಗತಿ. ಇವರ ಪತಿ ಜಿ.ಜಿ.ನಾಯ್ಕ ಮೂಲತಹ ಕುಮಟಾದ ಹೆಗಡೆಯವರಾಗಿದ್ದು ಸಿರಸಿಯ ಲ್ಲಿ ಸಹಾಯಕ ಸಂರಕ್ಷಣಾಧಿಕಾರಿಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಪುತ್ರಿಯರಾದ ಎಚ್.ಜೆ.ಶಿಲ್ಪಾ ಸಿವಿಲ್ ನ್ಯಾಯಾದೀಶೆಯಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದು
ಇನೋರ್ವ ಪುತ್ರಿ ಎಚ್.ಜಿ. ಶ್ರೇಯಾ ಬೆಂಗಳೂರಿನಲ್ಲಿ ವಕೀಲ ವೃತ್ತಿ ನಡೆಸುತ್ತಿದ್ದಾರೆ. ಇವರ ಅಯ್ಕೆಗೆ ಜಿಲ್ಲೆಯ ಹಾಗೂ ರಾಜ್ಯದ ನಾಮಧಾರಿ ಬಂದುಗಳು , ಹಲವು ಸಂಘ ಸಂಸ್ಥೆಗಳು ಹಾಗೂ ಬಂಧು ಬಳಗದವರು ಹರ್ಷ ವ್ಯಕ್ತಪಡಿಸಿದ್ದಾರೆ.


Related Posts

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »

ನಿರೂಪಣಾ ಕ್ಷೇತ್ರದಲ್ಲಿ ಮಿಂಚುತ್ತಿರುವ ಉದಯೋನ್ಮುಖ ಪ್ರತಿಭೆ – ಕೃತಿ ಪೂಜಾರಿ ಮೂಡುಬೆಟ್ಟು


Share           ಸಾಧನೆಯೆಂಬುದು ಯಾರೊಬ್ಬನ ಸೊತ್ತೂ ಅಲ್ಲ, ಅದು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಮುನ್ನಡೆಯುವ ಮನಸು ಮತ್ತು ವ್ಯಕ್ತಿಗಳ ಪಾಲಿನ ವರದಾನ. ಸಾಧನೆಯ ಮನಸ್ಸೆಂಬ ಸಸಿಗೆ ಸತತ ನೀರೆರೆದು ಪೋಷಿಸಿ, ಶ್ರಮವನ್ನು


Read More »