TOP STORIES:

ಭಟ್ಕಳ : ನಾಮಧಾರಿಯ ಹೆಮ್ಮೆಯ ಕುವರಿ ಉತ್ತರಕನ್ನಡ ಜಿಲ್ಲೆಯ ಸುಪುತ್ರಿಯಾದ ಶ್ರೀಮತಿ ರೂಪ ಶಿವಪ್ಪ ನಾಯ್ಕ


ಭಟ್ಕಳ : ನಾಮಧಾರಿಯ ಹೆಮ್ಮೆಯ ಕುವರಿ ಉತ್ತರಕನ್ನಡ ಜಿಲ್ಲೆಯ ಸುಪುತ್ರಿಯಾದ ಶ್ರೀಮತಿ ರೂಪ ಶಿವಪ್ಪ ನಾಯ್ಕ

ಇವರು ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಪ್ರಾಸ್ತಾವಿಕ
ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಮೂಲತಹ ಅಂಕೋಲದ ಪುರಲಕ್ಕಿ ಬೇಣದ ನಿವಾಸಿಯಾದ ಇವರು ಸದ್ಯ ಗದಗ ಜಿಲ್ಲೆಯ ಕೌಟುಂಬಿಕ ನ್ಯಾಯಾಲಯದ ಪ್ರಧಾನ ಜಿಲ್ಲಾ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದು ಕರ್ನಾಟಕದಿಂದ ಆಯ್ಕೆಯಾದ ಪ್ರಥಮ ಜಿಲ್ಲಾ ನ್ಯಾಯಾಧೀಶರಾಗಿದ್ದಾರೆ.
ಮಾನವ ಹಕ್ಕು ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದ ಇವರು ರಾಷ್ಟ್ರಮಟ್ಟದದಲ್ಲಿ 40 ಐ.ಎ.ಎಸ್ ,ಐಪಿ.ಎಸ್ ಅಭ್ಯರ್ಥಿಗಳ ಎದುರು ಪೈಪೋಟಿ ನೀಡಿ ಸ್ವರ್ಧಾತ್ಮಕ ಪರೀಕ್ಷೆ ಯಲ್ಲಿ ಮೊದಲ ಶ್ರೇಣೆಯಲ್ಲಿ ಉತ್ತೀರ್ಣಗೊಂಡು ರಾಜ್ಯದಲ್ಲಿಯೇ ಯಾರೂ ಮಾಡದ ಸಾಧನೆ ಮಾಡಿ ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಪ್ರಾಸ್ತವಿಕ ಅಧಿಕಾರಿಗಾಗಿ ಅಯ್ಕೆಯಾಗುವುದರ ಮೂಲಕ ನಮ್ಮ ಜಿಲ್ಲೆಗೆ ಹಾಗೂ ಕರ್ನಾಟಕ ರಾಜ್ಯಕ್ಕೆ ಕೀರ್ತಿಯನ್ನು ತಂದಿರುತ್ತಾರೆ.
ಇವರು ಅಂಕೋಲಾದ ದಿವಂಗತ ಶಿವಪ್ಪ ನಾರಯಣ ಹಾಗೂ ದಿ. ರಮಾಬಾಯಿ ದಂಪತಿಗಳ ಪುತ್ರಿಯಾಗಿದ್ದು ಇವರ ಪ್ರಾಥಮಿಕ ಶಿಕ್ಷಣ ಕಾರವಾರದ ಹಿಂದೂ ಹೈಸ್ಕೂಲಿನಲ್ಲಿ ಪಡೆದು ಪ್ರೌಢ ಶಿಕ್ಷಣವನ್ನು ಅಂಕೋಲಾದ ವಿ.ಕೆ.ಗಲ್ರ್ಸ್ ಹೈಸ್ಕೂಲಿನಲ್ಲಿ ಹಾಗೂ ಪದವಿಯನ್ನು ಅಂಕೋಲಾದ ಬಿ.ಸಿ. ಕಾಲೇಜಿನಲ್ಲಿ ಪಡೆದಿರುತ್ತಾರೆ. ಸಿರಸಿಯ ಎಂ.ಇ.ಎಸ್. ಕಾಲೇಜಿನಲ್ಲಿ ಎಲ್.ಎಲ್.ಬಿ. ಪದವಿಯನ್ನು ಪಡೆದು ಸಿರಸಿ ನ್ಯಾಯಾಲಯದಲ್ಲಿ ತಮ್ಮ ವಕೀಲಿ ವೃತ್ತಿಯನ್ನು ಆರಂಬಿಸಿ ನಂತರ ಧಾರವಾಡದಲ್ಲಿ ವಕೀಲ ವೃತ್ತಿಯನ್ನು ಮುಂದುವರಿಸಿ
ತನ್ನ ಸಂಸಾರಿಕ ಜೀವನದಲ್ಲಿ ಸತತ ಪರಿಶ್ರಮದಿಂದ ಸುಮಾರು 25 ವರ್ಷಗಳ ಹಿಂದೆ ನ್ಯಾಯಾದೀಶೆಯಾಗಿ ಆಯ್ಕೆಯಾಗಿದ್ದು ಹೆಮ್ಮೆಯ ಸಂಗತಿ. ಇವರ ಪತಿ ಜಿ.ಜಿ.ನಾಯ್ಕ ಮೂಲತಹ ಕುಮಟಾದ ಹೆಗಡೆಯವರಾಗಿದ್ದು ಸಿರಸಿಯ ಲ್ಲಿ ಸಹಾಯಕ ಸಂರಕ್ಷಣಾಧಿಕಾರಿಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಪುತ್ರಿಯರಾದ ಎಚ್.ಜೆ.ಶಿಲ್ಪಾ ಸಿವಿಲ್ ನ್ಯಾಯಾದೀಶೆಯಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದು
ಇನೋರ್ವ ಪುತ್ರಿ ಎಚ್.ಜಿ. ಶ್ರೇಯಾ ಬೆಂಗಳೂರಿನಲ್ಲಿ ವಕೀಲ ವೃತ್ತಿ ನಡೆಸುತ್ತಿದ್ದಾರೆ. ಇವರ ಅಯ್ಕೆಗೆ ಜಿಲ್ಲೆಯ ಹಾಗೂ ರಾಜ್ಯದ ನಾಮಧಾರಿ ಬಂದುಗಳು , ಹಲವು ಸಂಘ ಸಂಸ್ಥೆಗಳು ಹಾಗೂ ಬಂಧು ಬಳಗದವರು ಹರ್ಷ ವ್ಯಕ್ತಪಡಿಸಿದ್ದಾರೆ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »