TOP STORIES:

FOLLOW US

ಮಂಗಳೂರಿನ ಅದ್ಭುತ ಕಲೆಗಾರ ಬಿ.ಎಸ್.ಎನ್.ಎಲ್ ಕಛೇರಿ ಕಾವಲುಗಾರ – ದಯಾನಂದ ಪಿ. ಅಂಚನ್


ಪ್ರತಿಭೆಗೆ ವಯಸ್ಸಿನ ಮೀತಿಯಾಗಲಿ ಮಾಡುವ ಕೆಲಸವಾಗಲಿ ಅಡ್ಡಿಯಾಗುವುದಿಲ್ಲ. ಆಸಕ್ತಿ ಇದ್ದರೆ ಸಾಕು ಸಮಯ ವ್ಯರ್ಥ ಮಾಡದೆಸಿಕ್ಕ ಬಿಡುವಿನ ಸಮಯದಲ್ಲಿ ಪ್ರತಿಭೆಯ ಅನಾವರಣ ಮಾಡಬಹುದು ಎಂಬುದಕ್ಕೆ ಉತ್ತಮ ಉದಾಹರಣೆ ನಮ್ಮ ನಡುವೆಮಂಗಳೂರಿನ ಬಿ.ಎಸ್.ಎನ್. ಎಲ್ ಕಛೇರಿಯಲ್ಲಿ ಕಾವಲುಗಾರರಾಗಿ ಬಿಡುವಿನ ವೇಳೆಯಲ್ಲಿ ಅಲ್ಲೇ ಮೂಲೆಯಲ್ಲಿ ಖುರ್ಚಿಯಲ್ಲಿಕುಳಿತು ಬಿಳಿ ಹಾಳೆಯಲ್ಲಿ ಚಿತ್ರ ಬಿಡಿಸುತ್ತ, ಗೋಡೆಯಲ್ಲಿ ತಮ್ಮ ಮೊಬೈಲ್ ಮೂಲಕ ಶೇಡೋ ಪ್ಲೇ ಮಾಡುವ ವಿಶಿಷ್ಟ ಕಲಾವಿದಹಾಗೇ ಎಲ್ಲಾರಲ್ಲೂ ಪ್ರೀತಿಯಿಂದ ಮಾತನಾಡುವ ಅಪರೂಪದ ವ್ಯಕ್ತಿ ದಯಾನಂದ ಪಿ. ಅಂಚನ್. ಚಿಕ್ಕದಿರುವಾಗ ತಮ್ಮ ಮನೆಯ ಸಮೀಪದಲ್ಲಿದ್ದ ಗೋವಿಂದ ಪೈ ಅನ್ನುವವರು ಶೇಡೋ ಪ್ಲೇ ಮೂಲಕ ಗೋಡೆಯಲ್ಲಿ ಕೈಚಲನೆ ಬಳಸಿಬೆಳಕಿನ ನೆರಳಿನಲ್ಲಿ ಮೂಡಿಸುತ್ತಿದ್ದ ಹಕ್ಕಿಗಳು,ಪ್ರಾಣಿಗಳ, ಮನುಷ್ಯನನ್ನು ನೋಡುತ್ತಾ ನೋಡುತ್ತಾ ತಾವು ನಿಧಾನವಾಗಿಆಸಕ್ತಿಯಿಂದ ಸತತ ಪ್ರಯತ್ನ ಪಟ್ಟು ಶೇಡೋ ಪ್ಲೇ ಮೂಲಕ ಗಿಳಿ, ಬಾತುಕೋಳಿ, ಕೊಕ್ಕರೆ, ಮನುಷ್ಯ,ಸಿಂಹ ಹೀಗೆ ಕಲಿತರು ಹಾಗೂಮನಸ್ಸಿದ್ದರೆ ಹೇಗೆದರೂ ಕಲಿಯಬಹುದು ತಾವು ಮೊದಲು ಕೆಲಸ ಮಾಡುತ್ತಿದ್ದ ರೈಸ್ ಮಿಲ್ ನಲ್ಲಿ ಬರುತ್ತಿದ್ದ ಧೂಳಿನಲ್ಲೇ ಚಿತ್ರಬಿಡಿಸುತ್ತಾ ನಂತರ ಕಾಗದದ ಮೇಲೆ ಚಿತ್ರಗಳನ್ನು ಬಿಡಿಸಲು ಪ್ರಾರಂಭಿಸಿದರು. ಅನೇಕ ವ್ಯಕ್ತಿಗಳ ಮುಖದ ಚಿತ್ರಗಳನ್ನು ಬಿಡಿಸಿದ್ದಾರೆ.

ಮಾಡುವ ಕಾಯಕದೊಂದಿಗೆ ಹವ್ಯಾಸವನ್ನು ಬಿಡದೆ ಅನೇಕ ವರ್ಷಗಳಿಂದ ಮುಂದುವರಿಸಿಕೊಂಡು ಹೋಗುತ್ತಿರುವ ದಯಾನಂದಪಿ.ಅಂಚನ್.ವೃತ್ತಿಯಲ್ಲಿ ತಾವು ಮಂಗಳೂರಿನಲ್ಲಿರುವ ಬಿ.ಎಸ್.ಎನ್.ಎಲ್ ಕಛೇರಿಯಲ್ಲಿ ಬೆಳಗ್ಗೆ ಕಾವಲುಗಾರರು ಆದರೆಹವ್ಯಾಸವಾಗಿ ಅಧ್ಬುತವಾಗಿ ಚಿತ್ರಗಳನ್ನು ಬಿಡಿಸುವ ಕಲಾ ಆರಾಧಕರು.ಯಾರು ಆಶ್ಚರ್ಯವೆಂದರೆ ಚಿತ್ರಕಲೆ,ಶೇಡೋ ಪ್ಲೇಯಾರಲ್ಲೂ ಕಲಿಯದೆ ತಾವೇ ಸ್ವತಃ ಆಸಕ್ತಿಯಿಂದ ಅನೇಕ ವರ್ಷಗಳ ಪರಿಶ್ರಮದಿಂದ ಕಲಿತುಕೊಂಡು ತಮ್ಮ ಹವ್ಯಾಸವನ್ನುಉದ್ಯೋಗದ ಜೊತೆಗೆ ಬೆಳೆಸುತ್ತಾ ಅಧ್ಬುತವಾಗಿ ವಿವಿಧ ವ್ಯಕ್ತಿಗಳ,ಹಲವು ಸಾಧಕರ ಮುಖಗಳ ಚಿತ್ರಗಳನ್ನು ಬಿಡಿಸುತ್ತಾ, ಮೊಬೈಲ್ಬೆಳಕಿನಲ್ಲೇ ಗೋಡೆಗಳ ಮೇಲೆ ಹಕ್ಕಿ,ಹುಲಿ, ಮನುಷ್ಯ ಮಾತಾನಾಡುವುದು ರೀತಿ ಶೇಡೋ ಪ್ಲೇ ಮಾಡಿ ತೋರಿಸುವ ಸರಳ ವ್ಯಕ್ತಿದಯಾನಂದ ಪಿ. ಅಂಚನ್

ಯಾರೇ ಅವರನ್ನು ಮಾತನಾಡಿಸಿ ಅವರ ಕಲೆಯ ಬಗ್ಗೆ ಕೇಳಿದಾಗ ಪ್ರೀತಿಯಿಂದ ಬಿಡಿಸಿದ ಚಿತ್ರಗಳನ್ನು ,ಶೇಡೋ ಪ್ಲೇ ತೋರಿಸಿಅಚ್ಚರಿ ಪಡಿಸುತ್ತಾರೆ. ಸಾಧಿಸಲು ಛಲ ಹಾಗೂ ಶ್ರದ್ಧೆ ಇದ್ದರೆ ಸಾಕು. ಸ್ವಂತ ತಾವೇ ಆಸಕ್ತಿಯಿಂದ ಕಲಿತು ಇಂದಿಗೂ ಉಳಿಸಿಕೊಂಡುಬಂದಿರುವ ಅವರ ಕಲೆಯ ಮೇಲಿನ ಪ್ರೀತಿ ನಿಜಕ್ಕೂ ಪ್ರೇರಣೆ ನೀಡುವಂತದ್ದು ಹಾಗೂ ಇಂತಹ ಎಲೆಮರೆಯ ಕಾಯಿಯಂತಿರುವಅನೇಕರನ್ನು ಗುರುತಿಸಿ ಅವರಿಗೆ ಇನ್ನಷ್ಟು ಪ್ರೋತ್ಸಾಹಿಸೋಣ. ಯಾವಾಗಲಾದರೂ ಬಿ.ಎಸ್.ಎನ್.ಎಲ್ ಮಂಗಳೂರಿನ ಕಛೇರಿಗೆಹೋದಾಗ ಅಲ್ಲೇ ಹೊರಗೆ ಕುಳಿತು ಸಮಯ ಸಿಕ್ಕಾಗ ಎಳೆಎಳೆಯಾಗಿ ಚಿತ್ರವನ್ನು ಬಿಡಿಸುತ್ತಾ ಅದರಲ್ಲೇ ಖುಷಿ ಪಡುವ ದಯಾನಂದಪಿ. ಅಂಚನ್ ಅವರನ್ನು ಮಾತನಾಡಿಸಲು ಮರೆಯದಿರಿ.


Share:

More Posts

Category

Send Us A Message

Related Posts

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »

“ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ” ಪ್ರತಿಭಾ ಕುಳಾಯಿ ಆಯ್ಕೆ 


Share       ಮಂಗಳೂರು: ಸಮಾಜ ಸೇವೆಗಾಗಿ ಕುಳಾಯಿ ಫೌಂಡೇಶನ್ ರಚಿಸಿ ೫೦೦ಕ್ಕೂ ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಬದುಕು ಕಟ್ಟಿಕೊಡುತ್ತಿರುವ, ಯುವ ರಾಜಕಾರಣಿ ಪ್ರತಿಭಾ ಕುಳಾಯಿ, ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ಸ್ ಗೆ ಆಯ್ಕೆಯಾಗಿದ್ದಾರೆ. ರಷ್ಯಾದ


Read More »

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ


Share       ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ. ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ


Read More »

ಬಿಲ್ಲವ ಸಮಾಜಕ್ಕಾಗಿ ಪಂದ್ಯಾಟದ ಜೊತೆಗೆ ಆರ್ಥಿಕ ಯೋಜನೆಯನ್ನು ರೂಪಿಸಿದ ರುವಾರಿ ವಿಶ್ವನಾಥ ಪೂಜಾರಿ ಕಡ್ತಲ


Share       ಆದರಣೀಯ ಕ್ಷಣಗಳನ್ನು ‌ಮತ್ತೊಮ್ಮೆ ಮರಳಿಸಿ ವಿದೇಶದ  ಮಣ್ಣಲ್ಲೂ ಬಿಲ್ಲವರನ್ನು ಒಗ್ಗೂಡಿಸಿಕೊಂಡು ಒಂದು ಪಂದ್ಯಾಟ ನಡೆಸುವುದು ಕಷ್ಟ ಎಂಬ ಸನ್ನಿವೇಶದಲ್ಲಿ ಮಾಡಿಯೇ ಸಿದ್ಧ ಎಂಬ ಸ್ಪಷ್ಟ ನಿಲುವಿನೊಂದಿಗೆ ಎಲ್ಲರಿಗೂ ಇಷ್ಟವಾಗಿಸಿದ ಕ್ರಿಕೆಟ್ ಪಂದ್ಯಾಟ ಮಾಡಿ


Read More »