TOP STORIES:

FOLLOW US

*ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಲು ತುಳುನಾಡಿನ ಎಲ್ಲಾ ಗರೋಡಿಗಳು ಮತ್ತು ಸಂಘಸಂಸ್ಥೆಗಳು ಆಗ್ರಹ ಪೂರ್ವಕ ಮನವಿಯನ್ನು ಸಲ್ಲಿಸುವಂತೆ ಉಡುಪಿ ಜಿಲ್ಲಾ ಬಿಲ್ಲವ ಯುವವೇದಿಕೆ ( ರಿ) ವಿನಂತಿ.


ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ಸತ್ಯಪುರುಷರಾದ ಕೋಟಿ ಚೆನ್ನಯರ ಹೆಸರಿಡಲು ತುಳುನಾಡಿನ ಎಲ್ಲಾ ಗರೋಡಿಗಳು ಮತ್ತು ಸಂಘಸಂಸ್ಥೆಗಳು ಆಗ್ರಹ ಪೂರ್ವಕ ಮನವಿಯನ್ನು ಸಲ್ಲಿಸುವಂತೆ ಉಡುಪಿ ಜಿಲ್ಲಾ ಬಿಲ್ಲವ ಯುವವೇದಿಕೆ ( ರಿ) ವಿನಂತಿ.

ಪಂಚವರ್ಣದ ಪುಣ್ಯಮಣ್ಣಿನಲ್ಲಿ ಸತ್ಯ,ಧರ್ಮ, ನ್ಯಾಯ, ನೀತಿಗೆ ಬದ್ದರಾಗಿ ಸತ್ಕಾರ್ಯದ ಸೇವೆಗಳನ್ನು ನಿರ್ವಹಿಸಿ ಅಮರೈಕ್ಯರಾದ ಕೋಟಿಚೆನ್ನಯರು ಸಮಸ್ತ ಜನಮಾನಸದಲ್ಲಿ ಪ್ರಾತಃಸ್ಮರಣೀಯರಾಗಿ ನೆಲೆಗೊಂಡಿದ್ದಾರೆ.ಅವಳಿ ಜಿಲ್ಲೆಯ ಸಮಗ್ರ ಉದ್ದಾರದಲ್ಲಿ ಜೋಡು ನಂದಾದೀಪವಾಗಿ ದಾರಿತೋರುತ್ತಿರುವ ಕೋಟಿಚೆನ್ನಯರ ಹೆಸರನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ಇಡಬೇಕೆನ್ನುವುದು ಬಹು ಸಮಯದ ಸರ್ವಸಮ್ಮತ ಬೇಡಿಕೆಯಾಗಿದೆ.ಅರಾಧನಾ ಅಂಶವಾಗಿ ಕೋಟಿಚೆನ್ನಯರು ಜಾತ್ಯಾತೀತವಾಗಿ ಸ್ವೀಕೃತಗೊಂಡಿದ್ದಾರೆ.ಅಧಿಕಾರಸ್ಥರು ಇಚ್ಛಾಶಕ್ತಿಯಿಂದ ಮಾಡಬೇಕಿದ್ದ ಕಾರ್ಯವೊಂದು ಇನ್ನಿಲ್ಲದ ನೆಪಗಳ ನಡುವೆ ಪ್ರಸ್ತುತ ಪದೇ ಪದೇ ಸುದ್ದಿಗ್ರಾಸವಾಗುತ್ತಿರುವುದು ವಿಷಾದನೀಯ. ಕೋಟಿಚೆನ್ನಯರ ಹೆಸರಿಡುವುದಕ್ಕೆ ಪ್ರಶ್ನಾತೀತವಾದ ಅಂಶಗಳಿದೆ ಮತ್ತು ಸೂಕ್ತವೂ, ಸಮರ್ಥನೀಯವೂ ಆಗಿದೆ.
ಈ ಕುರಿತಂತೆ ನಾವು ಜಾಗೃತಿಗೊಳ್ಳುವ ಸಮಯ ಬಂದಿದ್ದು ಸಮಸ್ತ ತುಳುನಾಡಿನಾದ್ಯಂತ ಕೋಟಿಚೆನ್ನಯರ ಪವಿತ್ರ ಆರಾಧ್ಯ ತಾಣಗಳಾದ *ಗರೋಡಿ ಸ್ಥಾನದವರು* ಒಮ್ಮತದಿಂದ ಈ ಅಭಿಯಾನದ ಕುರಿತು ಮನವಿಯನ್ನು ನೀಡುವಂತಹ ನಿರ್ಣಯವನ್ನು ತಕ್ಷಣವೇ ಕೈಗೊಳ್ಳಬೇಕೆಂದು ಉಡುಪಿ ಜಿಲ್ಲಾ ಬಿಲ್ಲವ ಯುವವೇದಿಕೆಯು ವಿನಮ್ರವಾಗಿ ವಿನಂತಿಸಿಕೊಳ್ಳುತ್ತದೆ. ಎಲ್ಲಾ ಗರೋಡಿಗಳಲ್ಲಿ ಜಾತ್ಯಾತೀತ ನೆಲೆಯಲ್ಲಿ ಸತ್ಯನಿಷ್ಠವಾಗಿ ನಿಮ್ಮ ಪ್ರಯತ್ನ ಜರಗಲಿ.ಮತ್ತು ಈ ಅಗತ್ಯ ಕಾರ್ಯದ ಕುರಿತು ಯಾವುದೇ ರಾಜಕೀಯವನ್ನು ಮತ್ತು ಪ್ರತಿಷ್ಠೆಯನ್ನು ಹೊರತು ಪಡಿಸಿ ಪಕ್ಷಾತೀತವಾಗಿ ನಾವೆಲ್ಲರೂ ಸಂಘಟಿತರಾಗಿ ಮುನ್ನಡೆಯಲು ನಿರ್ಧರಿಸೋಣ..ಸಹಕಾರವಿರಲಿ.

 

ಪ್ರವೀಣ್ ಎಂ ಪೂಜಾರಿ
ಅಧ್ಯಕ್ಷರು
ಹಾಗೂ ಸರ್ವಸದಸ್ಯರು,
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ),


Share:

More Posts

Category

Send Us A Message

Related Posts

ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಸಂಘದ ನೂತನ ಅಧ್ಯಕ್ಷರಾದ ಶ್ರೀಮತಿ ಅಪರ್ಣ ಶರತ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 26.02.2025 ರಂದು ಕತಾರ್ ನ ಐ. ಸಿ. ಸಿ. ಮುಂಬೈ ಹಾಲ್ ನಲ್ಲಿ  ಶ್ರೀ


Read More »

ಸೌದಿ ಬಿಲ್ಲವಾಸ್ ದಮ್ಮಾಮ್ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ದಮ್ಮಾಮ್: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್ 1ರಿಂದ ಮಾರ್ಚ್ 5 ರವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಸೌದಿ ಬಿಲ್ಲವಾಸ್ ದಮ್ಮಾಮ್ ವತಿಯಿಂದ ಸೌದಿಯ


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಹಾ ಶಿವರಾತ್ರಿ ಮಹೋತ್ಸವಕ್ಕೆ ಚಾಲನೆ


Share       ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಫೆ.21ರಿಂದ 28ರವರೆಗೆ ಜರುಗುವ ವಾರ್ಷಿಕ ಮಹೋತ್ಸವ ಮತ್ತು ಮಹಾ ಶಿವರಾತ್ರಿ ಮಹೋತ್ಸವಕ್ಕೆ ಶುಕ್ರವಾರ ಧ್ವಜಾರೋಹಣ ನೆರವೇರುವ ಮೂಲಕ ಚಾಲನೆ ನೀಡಲಾಯಿತು. ಶುಕ್ರವಾರ ಗುರು ಪ್ರಾರ್ಥನೆ, ಪುಣ್ಯಾಹ ಹೋಮ,


Read More »

ಬಿಲ್ಲವ ಸಮಾಜ ಸೇವಾ ಸಂಘ ಪುಣೆ  ಆಶ್ರಯದಲ್ಲಿ ಏಪ್ರಿಲ್ ತಿಂಗಳಲ್ಲಿ ನಡೆಯಲಿದೆ “ವಿಶ್ವ ಬಿಲ್ಲವ ಕ್ರಿಕೆಟ್” ಪಂದ್ಯಾಟದ


Share       ಪುಣೆ : ಫೆ.19,ಬಿಲ್ಲವ ಸಮಾಜ ಸೇವಾ ಸಂಘ (ರಿ) ಪುಣೆ ಇದರ  ಆಶ್ರಯದಲ್ಲಿ ಮುಂಬರುವ ಎಪ್ರಿಲ್ ತಿಂಗಳಲ್ಲಿ ನಡೆಯಲಿರುವವಿಶ್ವ ಬಿಲ್ಲವ ಕ್ರಿಕೆಟ್ಪಂದ್ಯಾಟದ  ತಯಾರಿಯ ಬಗ್ಗೆ  ಎರಡನೇ ಪೂರ್ವಭಾವಿ ಸಭೆಯು ಇಂದು ಫೆ. 19ನೇ


Read More »

ಬಿಲ್ಲವಾಸ್ ಕತಾರ್ ನ ಅಧ್ಯಕ್ಷ ಶ್ರೀ ಸಂದೀಪ್ ಸಾಲಿಯಾನ್ ರವರಿಗೆ ವಿನಯಪೂರ್ವಕ ಬೀಳ್ಕೊಡುಗೆ


Share       ಬಿಲ್ಲವಾಸ್ ಕತಾರ್ ನ ನೇತೃತ್ವದಲ್ಲಿ ದಿನಾಂಕ ೮.೨.೨೦೨೫ ರಂದು ಎಂ. ಆರ್. ಎ, ಸಲ್ವ ರೋಡ್, ಕತಾರ್, ಔತಣಕೂಟ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಬಿಲ್ಲವಾಸ್ ಕತಾರ್ ನ ಅಧ್ಯಕ್ಷರಾದ ಶ್ರೀ ಸಂದೀಪ್


Read More »

ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ


Share       ಮಂಗಳೂರು: ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ. MRPL ಸಂಸ್ಥೆಯ ಉದ್ಯೋಗಿ ಆಗಿರುವ ಪ್ರಮೀಳ ದೀಪಕ್ ಪೆರ್ಮುದೆ ಇವರಿಗೆ ಸಾರ್ವಜನಿಕ ವಲಯದಲ್ಲಿ ಮಹಿಳೆಯರು ಪರಿಕಲ್ಪನೆಯಡಿ “ Woman


Read More »