TOP STORIES:

ಮಂಗಳೂರು ದಕ್ಷಿಣ: ಕಾಂಗ್ರೆಸ್ ನಿಂದ ಈ ಬಾರಿ ಹೊಸ ಮುಖ?; ಕೇಂದ್ರ ಯುವ ನ್ಯಾಯವಾದಿ ಪದ್ಮರಾಜ್ ಆರ್. ಅಭ್ಯರ್ಥಿ?


ಮಂಗಳೂರು(reporterkarnataka.com): ಮುಂಬರುವ ವಿಧಾನ ಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮೊದಲ ಪಟ್ಟಿಈಗಾಗಲೇ ಬಿಡುಗಡೆಯಾಗಿದೆ. ಇದೀಗ ಎರಡನೇ ಪಟ್ಟಿಗೆ ಟಿಕೆಟ್ ಆಕಾಂಕ್ಷಿಗಳು ಚಾತಕಪಕ್ಷಿಯಂತೆ ಕಾಯುತ್ತಿದ್ದಾರೆ. ಮಂಗಳೂರುಉತ್ತರ, ಮಂಗಳೂರು ದಕ್ಷಿಣ ಹಾಗೂ ಪುತ್ತೂರು ಕ್ಷೇತ್ರದಲ್ಲಿ ಟಿಕೆಟ್ ಯಾರಿಗೆ ಎನ್ನುವ ಕುತೂಹಲ ಎಲ್ಲೆಡೆ ಮೂಡಿದೆ.
ಹಲವು ಚುನಾವಣೆಗಳಲ್ಲಿ ಸೋತ ಕಾಂಗ್ರೆಸ್ ಕೂಡ ಬಾರಿ ತನ್ನ ಸ್ಟಾಟಜಿಯನ್ನು ಸ್ವಲ್ಪ ಬದಲಾಯಿಸಿದೆ. ಬೆಳ್ತಂಗಡಿ ಕ್ಷೇತ್ರದಲ್ಲಿವಸಂತ ಬಂಗೇರ ಬದಲಿಗೆ ಹೊಸ ಮುಖಕ್ಕೆ ಟಿಕೆಟ್ ನೀಡಿದೆ. ರಕ್ಷಿತ್ ಶಿವರಾಂ ಬಾರಿ ಬೆಳ್ತಂಗಡಿಯಿಂದ ಅಖಾಡಕ್ಕಿಳಿದಿದ್ದಾರೆ. ಹಾಗೆ ಮಂಗಳೂರು ಉತ್ತರ ಮತ್ತು ಮಂಗಳೂರು ದಕ್ಷಿಣದಲ್ಲಿ ಕೂಡ ಕಾಂಗ್ರೆಸ್ ಹೊಸ ಮುಖಕ್ಕೆ ಅವಕಾಶ ನೀಡಲಿದೆ. ಕಾಂಗ್ರೆಸ್ಹೈಕಮಾಂಡಿನ ಸೂಚನೆ ಮೇರೆಗೆ ಕೆಪಿಸಿಸಿ ತನ್ನ ಸ್ಟಾಟಜಿ ಬದಲಾಯಿಸಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಮಂಗಳೂರು ಉತ್ತರ ಕ್ಷೇತ್ರದಲ್ಲಿ ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ಬದಲಿಗೆ ಕೆಪಿಸಿಸಿ ಕಾರ್ಯದರ್ಶಿ ಇನಾಯತ್ ಆಲಿಅವರನ್ನು ಕಣಕ್ಕಿಸುವ ಬಗ್ಗೆ ಕೆಪಿಸಿಸಿ ಚಿಂತನೆ ನಡೆಸಿದೆ. ಅದೇ ರೀತಿ ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿಯೂ ಬಾರಿಬದಲಾವಣೆಯಾಗಲಿದೆ ಎಂಬ ಮಾತು ಕೇಳಿ ಬರುತ್ತಿದೆ. ಮಂಗಳೂರು ಉತ್ತರವನ್ನು ಅಲ್ಪಸಂಖ್ಯಾತ ಅಭ್ಯರ್ಥಿ ಗೆಬಿಟ್ಟುಕೊಡುವುದರಿಂದ ಮಂಗಳೂರು ದಕ್ಷಿಣದಲ್ಲಿ ಬೇರೆ ಸಮುದಾಯದ ಅಭ್ಯರ್ಥಿ ಗೆ ಅವಕಾಶ ಕಲ್ಪಿಸುವ ಬಗ್ಗೆ ಪಕ್ಷದಹೈಕಮಾಂಡಿನಿಂದ ಸೂಚನೆ ಬಂದಿದೆ ಎನ್ನಲಾಗಿದೆ. ಕಾಂಗ್ರೆಸ್ ಬದಲಾದ ಸ್ಟಾಟಜಿ ಪ್ರಕಾರ ದಕ್ಷಿಣದಿಂದ ಯುವ ನ್ಯಾಯವಾದಿಪದ್ಮರಾಜ್ ಆರ್. ಅವರಿಗೆ ಟಿಕೆಟ್ ದೊರೆಯುವುದು ಬಹುತೇಕ ಖಚಿತವಾಗಿದೆ.

ಯಾರು ಪದ್ಮರಾಜ್?: ಮಂಗಳೂರಿನಲ್ಲಿ ವಕೀಲರಾಗಿ ಸೇವೆ ಸಲ್ಲಿಸುತ್ತಿರುವ ಪದ್ಮರಾಜ್ ಅವರದ್ದು ಬಹುದೊಡ್ಡ ಹೆಸರು. ಕುದ್ರೋಳಿ ಗೋಕರ್ಣನಾಥ ದೇಗುಲದ ಟ್ರಸ್ಟಿಯಾಗಿ ಅವರು ನಾಡಿನುದ್ಧಗಲಕ್ಕೂ ಚಿರಪರಿಚಿತರು. ಸಾಮಾಜಿಕ ಹಾಗೂ ಧಾರ್ಮಿಕಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಪದ್ಮರಾಜ್ ಅವರು ಕೇಂದ್ರ ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿ ಅವರ ಕಟ್ಟರ್ಅನುಯಾಯಿ. ಹಾಗೆ ಪೂಜಾರಿಯವರ ಆಪ್ತ ಬಳಗದವರಲ್ಲಿ ಒಬ್ಬರು. ಗುರು ಬೆಳದಿಂಗಳು ಟ್ರಸ್ಟ್ ಮೂಲಕ ಸಮಾಜ ಸೇವೆಯಲ್ಲಿಅವರು ತೊಡಗಿಸಿಕೊಂಡಿದ್ದಾರೆ. ಮಂಗಳೂರಿನ ನಾಗೂರಿ ಬಳಿ ಇತ್ತೀಚೆಗೆ ನಡೆದ ಕುಕ್ಕರ್ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಆಟೋ ಚಾಲಕನ ಕುಟುಂಬದ ಹಳೆಯ ಮನೆಯನ್ನು 6 ಲಕ್ಷ ರೂ. ವೆಚ್ಚದಲ್ಲಿ ಕೇವಲ 4 ತಿಂಗಳ ಅವಧಿಯಲ್ಲಿ ಪದ್ಮರಾಜ್ ಅವರನೇತೃತ್ವದ ಟ್ರಸ್ಡ್ ಮೂಲಕ ನವೀಕರಣ ಮಾಡಲಾಗಿದೆ. ಮೊನ್ನೆ ಯುಗಾದಿಯ ದಿನ ಮನೆಯ ಉದ್ಘಾಟನೆ ಕೂಡ ನಡೆದಿದೆ. ಇದುಪದ್ಮರಾಜ್ ಅವರ ಸಮಾಜ ಸೇವೆ ಬಗ್ಗೆ ಒಂದು ಸಣ್ಣ ಸ್ಯಾಂಪಲ್ ಅಷ್ಟೇ. ಬಿಲ್ಲವ ಸಮುದಾಯಕ್ಕೆ ಸೇರಿದ ಯುವ ನಾಯಕಪದ್ಮರಾಜ್ ಅವರ ಮೂಲಕ ಬಿಜೆಪಿಗೆ ಪ್ರಬಲ ಪೈಪೋಟಿ ನೀಡಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »